Homeಅಂಕಣಗಳುಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

ಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

- Advertisement -
- Advertisement -

ಮಿಥ್ಯ: ‘ಅದು ಹಕ್ಕಿ…ಅದು ವಿಮಾನ…ವೀಕ್ಷಿಸಿ, ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ನಿರ್ಮಿಸಿರುವ ಭಾರತದ ಮೊದಲ ಅರೆ-ವೇಗವಾಹಿನಿ (ಸೆಮಿ-ಸ್ಪೀಡ್) ರೈಲು ವಂದೇ ಮಾತರಂ ಎಕ್ಸಪ್ರೆಸ್ ಅನ್ನು. ಇದು ಬೆಳಕಿನ ವೇಗದಲ್ಲಿ ಓಡುತ್ತದೆ…’

ರೈಲ್ವೆ ಸಚಿವ ಗೋಯಲ್ ಪೋಸ್ಟ್.

ಫೆಬ್ರುವರಿ 9ರಂದು ಈ ಮೇಲಿನ ಪೋಸ್ಟ್ ಹಾಕಿರುವ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಇದರ ಜೊತೆಗೆ ಒಂದು ಚಲಿಸುವ ರೈಲಿನ ವಿಡಿಯೋವನ್ನೂ ಹಾಕಿದ್ದಾರೆ. ಗೋಯಲ್ ಅವರ ಅಧಿಕೃತ ಟ್ವಿಟರ್ ಮತ್ತು ಫೇಸ್‌ಬುಕ್ ಪೇಜ್‌ನಲ್ಲೂ ಇದನ್ನು ಹಾಕಲಾಗಿದೆ. ಇದನ್ನೇ ನಂಬಿದ ‘ಭಕ್ತರು’ ಈ ವಿಷಯವನ್ನು ಜಾಲತಾಣದಲ್ಲಿ ಹರಡಿದ್ದೇ ಹರಡಿದ್ದು.
ಸಚಿವರು ಹಾಕಿದ ವಿಡಿಯೋ ಲಿಂಕ್: https://twitter.com/PiyushGoyal/status/1094496373410615296
ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ವಿಡಿಯೋವನ್ನು ರಿಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಇಂತಹ ವಿಷಯಗಳನ್ನು ಬೆಳಕಿನ ವೇಗದಲ್ಲಿ ಕ್ಯಾಚ್ ಮಾಡುವ ‘ರಿಪಬ್ಲಿಕ್’ ಟಿವಿಯವರು ತಮ್ಮ ವೆಬ್‌ಸೈಟಿನಲ್ಲಿ ಈ ವಿಡಿಯೋ ಒಗೆದು, ‘ವಾವ್, ಮೇಕ್ ಇನ್ ಇಂಡಿಯಾ’ ಎಂದಿದ್ದಾರೆ!

ಸತ್ಯ: ರೈಲು ಸಚಿವ ರೀಲು ಬಿಟ್ಟಿದ್ದು ಅವರು ಪೋಸ್ಟ್ ಹಾಕಿದ ಸ್ವಲ್ಪ ಹೊತ್ತಿನಲ್ಲೇ ಬಯಲಾಗಿತ್ತು. ಅವರ ಫೇಸ್‌ಬುಕ್ ಪೇಜ್‌ನಲ್ಲಿ ಕಮೆಂಟ್ ಮಾಡಿದ ಹಲವರು ಇದು ಒರಿಜಿನಲ್ ವಿಡಿಯೋ ಅಲ್ಲ ಎಂದು ಟೀಕಿಸಿದ್ದರು. ‘ಆರ್‌ಎಫ್ ಎಜೆ’ ಹೆಸರಿನ ಒಬ್ಬರು, ಇದು ನನ್ನ ವಿಡಿಯೋ. ಗೋಯಲ್ ಇದರ ವೇಗವನ್ನು (ವಿಡಿಯೋದಲ್ಲಿ) ದುಪ್ಪಟ್ಟು ಮಾಡಿ ಸುಳ್ಳು ಹರಡುತ್ತಿದ್ದಾರೆ ಎಂದು ಕಮೇಂಟ್ ಮಾಡಿದ್ದಲ್ಲದೇ, ಒರಿಜಿನಲ್ ವಿಡಿಯೊದ ಯು-ಟ್ಯೂಬ್ ವಿಳಾಸವನ್ನೂ ನೀಡಿದ್ದರು.

ಓರಿಜಿನಿಲ್ ವಿಡಿಯೋ ಮಾಡಿದವರ ಕಮೆಂಟ್

ಯು-ಟ್ಯೂಬ್ ಪರೀಕ್ಷಿಸಿದಾಗ ‘ರೈಲ್ ಮೇಲ್’ ಎಂಬ ಚಾನೆಲ್ ಒಂದಿದ್ದು, ಇದರ ಸದಸ್ಯರು ರೈಲು, ರೈಲು ಪ್ರಯಾಣ ಕುರಿತು ಆಸಕ್ತಿ ಇರುವ ಜನರಾಗಿದ್ದಾರೆ. ‘ಆರ್‌ಎಫ್ ಎಜೆ’ ಅವರೇ ಅಡ್ಮಿನ್ ಆಗಿರುವ ‘ರೈಲ್‌ಮೇಲ್’ ಹೆಸರಿನ ಫೇಸ್‌ಬುಕ್ ಪೇಜ್ ಕೂಡ ಇದೆ.
ಮೂಲ ವಿಡಿಯೋದಲ್ಲಿನ ರೈಲಿನ ವೇಗವನ್ನು ವಿಡಿಯೋದಲ್ಲಿ ಡಬಲ್ ಮಾಡಿರುವ (ಮಾಡಿಸಿರುವ!) ರೈಲು ಸಚಿವರು, ಮೇಕ್ ಇನ್ ಇಂಡಿಯಾ ಅಂತೆಲ್ಲ ರೈಲು ಬಿಟ್ಟಿದ್ದು, ರೀಲು ಸುತ್ತಿದ್ದು ಪಕ್ಕಾ ಆಗಿತು. ಇವೆರಡೂ ವಿಡಿಯೋಗಳನ್ನು ಪಕ್ಕಕ್ಕಿಟ್ಟು ಪರೀಕ್ಷಿಸಿದಾಗ ಸತ್ಯ ಇನ್ನಷ್ಟು ನಿಚ್ಚಳವಾಯಿತು. ಮೂಲ ವಿಡಿಯೋವನ್ನು ಹರಿಯಾಣದ ಅಸೌಟಿ ರೈಲು ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದ್ದು, ಆ ವಿಡಿಯೋ ಮೇಲೆ ವಾಟರ್ ಟ್ರೇಡ್‌ಮಾರ್ಕ್ ಕೂಡ ಇದೆ.

ಪಿಯುಷ್ ಗೋಯಲ್

ಎರಡೂ ವಿಡಿಯೋ ಪರೀಕ್ಷಿಸಿದ ಲಿಂಕ್:
https://vimeo.com/316395038
ಇದೇನೂ ಮೊದಲ ಬಾರಿ ಅಲ್ಲ, ಹಲವಾರು ಸಲ ರೈಲ್ವೆ ಸಚಿವ ಕೇಂದ್ರ ಸರ್ಕಾರವನ್ನು ಹೊಗಳಿಕೊಳ್ಳಲು ಸುಳ್ಳು ಟ್ವೀಟ್, ಸುಳ್ಳು ಪೋಸ್ಟ್ಗಳನ್ನು ಹಾಕುತ್ತಲೇ ಬಂದಿದ್ದಾರೆ.
ರೈಲು ಬಿಡೋ ಮಾರಾಯ ಅಂದರೆ ರೀಲು ಸುತ್ತುತ್ತ ಕುಳಿತಿದ್ದಾರೆ ಪಿಯುಷ್ ಗೋಯಲ್.

( ಕೃಪೆ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...