Homeಅಂಕಣಗಳುಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

ಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

- Advertisement -
- Advertisement -

ಮಿಥ್ಯ: ‘ಅದು ಹಕ್ಕಿ…ಅದು ವಿಮಾನ…ವೀಕ್ಷಿಸಿ, ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ನಿರ್ಮಿಸಿರುವ ಭಾರತದ ಮೊದಲ ಅರೆ-ವೇಗವಾಹಿನಿ (ಸೆಮಿ-ಸ್ಪೀಡ್) ರೈಲು ವಂದೇ ಮಾತರಂ ಎಕ್ಸಪ್ರೆಸ್ ಅನ್ನು. ಇದು ಬೆಳಕಿನ ವೇಗದಲ್ಲಿ ಓಡುತ್ತದೆ…’

ರೈಲ್ವೆ ಸಚಿವ ಗೋಯಲ್ ಪೋಸ್ಟ್.

ಫೆಬ್ರುವರಿ 9ರಂದು ಈ ಮೇಲಿನ ಪೋಸ್ಟ್ ಹಾಕಿರುವ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಇದರ ಜೊತೆಗೆ ಒಂದು ಚಲಿಸುವ ರೈಲಿನ ವಿಡಿಯೋವನ್ನೂ ಹಾಕಿದ್ದಾರೆ. ಗೋಯಲ್ ಅವರ ಅಧಿಕೃತ ಟ್ವಿಟರ್ ಮತ್ತು ಫೇಸ್‌ಬುಕ್ ಪೇಜ್‌ನಲ್ಲೂ ಇದನ್ನು ಹಾಕಲಾಗಿದೆ. ಇದನ್ನೇ ನಂಬಿದ ‘ಭಕ್ತರು’ ಈ ವಿಷಯವನ್ನು ಜಾಲತಾಣದಲ್ಲಿ ಹರಡಿದ್ದೇ ಹರಡಿದ್ದು.
ಸಚಿವರು ಹಾಕಿದ ವಿಡಿಯೋ ಲಿಂಕ್: https://twitter.com/PiyushGoyal/status/1094496373410615296
ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ವಿಡಿಯೋವನ್ನು ರಿಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಇಂತಹ ವಿಷಯಗಳನ್ನು ಬೆಳಕಿನ ವೇಗದಲ್ಲಿ ಕ್ಯಾಚ್ ಮಾಡುವ ‘ರಿಪಬ್ಲಿಕ್’ ಟಿವಿಯವರು ತಮ್ಮ ವೆಬ್‌ಸೈಟಿನಲ್ಲಿ ಈ ವಿಡಿಯೋ ಒಗೆದು, ‘ವಾವ್, ಮೇಕ್ ಇನ್ ಇಂಡಿಯಾ’ ಎಂದಿದ್ದಾರೆ!

ಸತ್ಯ: ರೈಲು ಸಚಿವ ರೀಲು ಬಿಟ್ಟಿದ್ದು ಅವರು ಪೋಸ್ಟ್ ಹಾಕಿದ ಸ್ವಲ್ಪ ಹೊತ್ತಿನಲ್ಲೇ ಬಯಲಾಗಿತ್ತು. ಅವರ ಫೇಸ್‌ಬುಕ್ ಪೇಜ್‌ನಲ್ಲಿ ಕಮೆಂಟ್ ಮಾಡಿದ ಹಲವರು ಇದು ಒರಿಜಿನಲ್ ವಿಡಿಯೋ ಅಲ್ಲ ಎಂದು ಟೀಕಿಸಿದ್ದರು. ‘ಆರ್‌ಎಫ್ ಎಜೆ’ ಹೆಸರಿನ ಒಬ್ಬರು, ಇದು ನನ್ನ ವಿಡಿಯೋ. ಗೋಯಲ್ ಇದರ ವೇಗವನ್ನು (ವಿಡಿಯೋದಲ್ಲಿ) ದುಪ್ಪಟ್ಟು ಮಾಡಿ ಸುಳ್ಳು ಹರಡುತ್ತಿದ್ದಾರೆ ಎಂದು ಕಮೇಂಟ್ ಮಾಡಿದ್ದಲ್ಲದೇ, ಒರಿಜಿನಲ್ ವಿಡಿಯೊದ ಯು-ಟ್ಯೂಬ್ ವಿಳಾಸವನ್ನೂ ನೀಡಿದ್ದರು.

ಓರಿಜಿನಿಲ್ ವಿಡಿಯೋ ಮಾಡಿದವರ ಕಮೆಂಟ್

ಯು-ಟ್ಯೂಬ್ ಪರೀಕ್ಷಿಸಿದಾಗ ‘ರೈಲ್ ಮೇಲ್’ ಎಂಬ ಚಾನೆಲ್ ಒಂದಿದ್ದು, ಇದರ ಸದಸ್ಯರು ರೈಲು, ರೈಲು ಪ್ರಯಾಣ ಕುರಿತು ಆಸಕ್ತಿ ಇರುವ ಜನರಾಗಿದ್ದಾರೆ. ‘ಆರ್‌ಎಫ್ ಎಜೆ’ ಅವರೇ ಅಡ್ಮಿನ್ ಆಗಿರುವ ‘ರೈಲ್‌ಮೇಲ್’ ಹೆಸರಿನ ಫೇಸ್‌ಬುಕ್ ಪೇಜ್ ಕೂಡ ಇದೆ.
ಮೂಲ ವಿಡಿಯೋದಲ್ಲಿನ ರೈಲಿನ ವೇಗವನ್ನು ವಿಡಿಯೋದಲ್ಲಿ ಡಬಲ್ ಮಾಡಿರುವ (ಮಾಡಿಸಿರುವ!) ರೈಲು ಸಚಿವರು, ಮೇಕ್ ಇನ್ ಇಂಡಿಯಾ ಅಂತೆಲ್ಲ ರೈಲು ಬಿಟ್ಟಿದ್ದು, ರೀಲು ಸುತ್ತಿದ್ದು ಪಕ್ಕಾ ಆಗಿತು. ಇವೆರಡೂ ವಿಡಿಯೋಗಳನ್ನು ಪಕ್ಕಕ್ಕಿಟ್ಟು ಪರೀಕ್ಷಿಸಿದಾಗ ಸತ್ಯ ಇನ್ನಷ್ಟು ನಿಚ್ಚಳವಾಯಿತು. ಮೂಲ ವಿಡಿಯೋವನ್ನು ಹರಿಯಾಣದ ಅಸೌಟಿ ರೈಲು ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದ್ದು, ಆ ವಿಡಿಯೋ ಮೇಲೆ ವಾಟರ್ ಟ್ರೇಡ್‌ಮಾರ್ಕ್ ಕೂಡ ಇದೆ.

ಪಿಯುಷ್ ಗೋಯಲ್

ಎರಡೂ ವಿಡಿಯೋ ಪರೀಕ್ಷಿಸಿದ ಲಿಂಕ್:
https://vimeo.com/316395038
ಇದೇನೂ ಮೊದಲ ಬಾರಿ ಅಲ್ಲ, ಹಲವಾರು ಸಲ ರೈಲ್ವೆ ಸಚಿವ ಕೇಂದ್ರ ಸರ್ಕಾರವನ್ನು ಹೊಗಳಿಕೊಳ್ಳಲು ಸುಳ್ಳು ಟ್ವೀಟ್, ಸುಳ್ಳು ಪೋಸ್ಟ್ಗಳನ್ನು ಹಾಕುತ್ತಲೇ ಬಂದಿದ್ದಾರೆ.
ರೈಲು ಬಿಡೋ ಮಾರಾಯ ಅಂದರೆ ರೀಲು ಸುತ್ತುತ್ತ ಕುಳಿತಿದ್ದಾರೆ ಪಿಯುಷ್ ಗೋಯಲ್.

( ಕೃಪೆ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...