Homeಅಂಕಣಗಳುಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

ಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

- Advertisement -
- Advertisement -

ಮಿಥ್ಯ: ‘ಅದು ಹಕ್ಕಿ…ಅದು ವಿಮಾನ…ವೀಕ್ಷಿಸಿ, ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ನಿರ್ಮಿಸಿರುವ ಭಾರತದ ಮೊದಲ ಅರೆ-ವೇಗವಾಹಿನಿ (ಸೆಮಿ-ಸ್ಪೀಡ್) ರೈಲು ವಂದೇ ಮಾತರಂ ಎಕ್ಸಪ್ರೆಸ್ ಅನ್ನು. ಇದು ಬೆಳಕಿನ ವೇಗದಲ್ಲಿ ಓಡುತ್ತದೆ…’

ರೈಲ್ವೆ ಸಚಿವ ಗೋಯಲ್ ಪೋಸ್ಟ್.

ಫೆಬ್ರುವರಿ 9ರಂದು ಈ ಮೇಲಿನ ಪೋಸ್ಟ್ ಹಾಕಿರುವ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಇದರ ಜೊತೆಗೆ ಒಂದು ಚಲಿಸುವ ರೈಲಿನ ವಿಡಿಯೋವನ್ನೂ ಹಾಕಿದ್ದಾರೆ. ಗೋಯಲ್ ಅವರ ಅಧಿಕೃತ ಟ್ವಿಟರ್ ಮತ್ತು ಫೇಸ್‌ಬುಕ್ ಪೇಜ್‌ನಲ್ಲೂ ಇದನ್ನು ಹಾಕಲಾಗಿದೆ. ಇದನ್ನೇ ನಂಬಿದ ‘ಭಕ್ತರು’ ಈ ವಿಷಯವನ್ನು ಜಾಲತಾಣದಲ್ಲಿ ಹರಡಿದ್ದೇ ಹರಡಿದ್ದು.
ಸಚಿವರು ಹಾಕಿದ ವಿಡಿಯೋ ಲಿಂಕ್: https://twitter.com/PiyushGoyal/status/1094496373410615296
ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ವಿಡಿಯೋವನ್ನು ರಿಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಇಂತಹ ವಿಷಯಗಳನ್ನು ಬೆಳಕಿನ ವೇಗದಲ್ಲಿ ಕ್ಯಾಚ್ ಮಾಡುವ ‘ರಿಪಬ್ಲಿಕ್’ ಟಿವಿಯವರು ತಮ್ಮ ವೆಬ್‌ಸೈಟಿನಲ್ಲಿ ಈ ವಿಡಿಯೋ ಒಗೆದು, ‘ವಾವ್, ಮೇಕ್ ಇನ್ ಇಂಡಿಯಾ’ ಎಂದಿದ್ದಾರೆ!

ಸತ್ಯ: ರೈಲು ಸಚಿವ ರೀಲು ಬಿಟ್ಟಿದ್ದು ಅವರು ಪೋಸ್ಟ್ ಹಾಕಿದ ಸ್ವಲ್ಪ ಹೊತ್ತಿನಲ್ಲೇ ಬಯಲಾಗಿತ್ತು. ಅವರ ಫೇಸ್‌ಬುಕ್ ಪೇಜ್‌ನಲ್ಲಿ ಕಮೆಂಟ್ ಮಾಡಿದ ಹಲವರು ಇದು ಒರಿಜಿನಲ್ ವಿಡಿಯೋ ಅಲ್ಲ ಎಂದು ಟೀಕಿಸಿದ್ದರು. ‘ಆರ್‌ಎಫ್ ಎಜೆ’ ಹೆಸರಿನ ಒಬ್ಬರು, ಇದು ನನ್ನ ವಿಡಿಯೋ. ಗೋಯಲ್ ಇದರ ವೇಗವನ್ನು (ವಿಡಿಯೋದಲ್ಲಿ) ದುಪ್ಪಟ್ಟು ಮಾಡಿ ಸುಳ್ಳು ಹರಡುತ್ತಿದ್ದಾರೆ ಎಂದು ಕಮೇಂಟ್ ಮಾಡಿದ್ದಲ್ಲದೇ, ಒರಿಜಿನಲ್ ವಿಡಿಯೊದ ಯು-ಟ್ಯೂಬ್ ವಿಳಾಸವನ್ನೂ ನೀಡಿದ್ದರು.

ಓರಿಜಿನಿಲ್ ವಿಡಿಯೋ ಮಾಡಿದವರ ಕಮೆಂಟ್

ಯು-ಟ್ಯೂಬ್ ಪರೀಕ್ಷಿಸಿದಾಗ ‘ರೈಲ್ ಮೇಲ್’ ಎಂಬ ಚಾನೆಲ್ ಒಂದಿದ್ದು, ಇದರ ಸದಸ್ಯರು ರೈಲು, ರೈಲು ಪ್ರಯಾಣ ಕುರಿತು ಆಸಕ್ತಿ ಇರುವ ಜನರಾಗಿದ್ದಾರೆ. ‘ಆರ್‌ಎಫ್ ಎಜೆ’ ಅವರೇ ಅಡ್ಮಿನ್ ಆಗಿರುವ ‘ರೈಲ್‌ಮೇಲ್’ ಹೆಸರಿನ ಫೇಸ್‌ಬುಕ್ ಪೇಜ್ ಕೂಡ ಇದೆ.
ಮೂಲ ವಿಡಿಯೋದಲ್ಲಿನ ರೈಲಿನ ವೇಗವನ್ನು ವಿಡಿಯೋದಲ್ಲಿ ಡಬಲ್ ಮಾಡಿರುವ (ಮಾಡಿಸಿರುವ!) ರೈಲು ಸಚಿವರು, ಮೇಕ್ ಇನ್ ಇಂಡಿಯಾ ಅಂತೆಲ್ಲ ರೈಲು ಬಿಟ್ಟಿದ್ದು, ರೀಲು ಸುತ್ತಿದ್ದು ಪಕ್ಕಾ ಆಗಿತು. ಇವೆರಡೂ ವಿಡಿಯೋಗಳನ್ನು ಪಕ್ಕಕ್ಕಿಟ್ಟು ಪರೀಕ್ಷಿಸಿದಾಗ ಸತ್ಯ ಇನ್ನಷ್ಟು ನಿಚ್ಚಳವಾಯಿತು. ಮೂಲ ವಿಡಿಯೋವನ್ನು ಹರಿಯಾಣದ ಅಸೌಟಿ ರೈಲು ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದ್ದು, ಆ ವಿಡಿಯೋ ಮೇಲೆ ವಾಟರ್ ಟ್ರೇಡ್‌ಮಾರ್ಕ್ ಕೂಡ ಇದೆ.

ಪಿಯುಷ್ ಗೋಯಲ್

ಎರಡೂ ವಿಡಿಯೋ ಪರೀಕ್ಷಿಸಿದ ಲಿಂಕ್:
https://vimeo.com/316395038
ಇದೇನೂ ಮೊದಲ ಬಾರಿ ಅಲ್ಲ, ಹಲವಾರು ಸಲ ರೈಲ್ವೆ ಸಚಿವ ಕೇಂದ್ರ ಸರ್ಕಾರವನ್ನು ಹೊಗಳಿಕೊಳ್ಳಲು ಸುಳ್ಳು ಟ್ವೀಟ್, ಸುಳ್ಳು ಪೋಸ್ಟ್ಗಳನ್ನು ಹಾಕುತ್ತಲೇ ಬಂದಿದ್ದಾರೆ.
ರೈಲು ಬಿಡೋ ಮಾರಾಯ ಅಂದರೆ ರೀಲು ಸುತ್ತುತ್ತ ಕುಳಿತಿದ್ದಾರೆ ಪಿಯುಷ್ ಗೋಯಲ್.

( ಕೃಪೆ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...