Homeಮುಖಪುಟಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

- Advertisement -
- Advertisement -

ಚುನಾವಣಾ ಆಯೋಗದ ಬಗ್ಗೆ ಬಿಜೆಪಿಗೆ ನಿಜಕ್ಕೂ ಗೌರವ ಇದೆಯಾ? ಮೋದಿಯವರ ಈ ಐದು ವರ್ಷದ ಆಳ್ವಿಕೆಯಲ್ಲಿ ಚುನಾವಣಾ ಆಯೋಗ ತನ್ನ ಸ್ವಾಯತ್ತೆಯನ್ನು ಉಳಿಸಿಕೊಂಡಿದೆಯಾ? ಮುಂಬರುವ ಲೋಕಸಭಾ ಚುನಾವಣೆಯನ್ನು ಆಯೋಗ ಪಾರದರ್ಶಕವಾಗಿ ನಡೆಸುತ್ತಾ?………

ಇಷ್ಟೆಲ್ಲ ಪ್ರಶ್ನೆಗಳು ಹುಟ್ಟಲು ಕಾರಣವಾಗಿರೋದು ಒಂದು ಸಿನಿಮಾ! ಅದು ಸಾಮಾನ್ಯ ಸಿನಿಮಾವಲ್ಲ ಪ್ರಧಾನಿ ಮೋದಿಯವರ ಜೀವನಚರಿತ್ರೆ ಆಧರಿಸಿದ ಸಿನಿಮಾ ‘ಪಿಎಂ ನರೇಂದ್ರ ಮೋದಿ’. ಈ ಸಿನಿಮಾವನ್ನು ಏಪ್ರಿಲ್ 12ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇತ್ತೀಚೆಗೆ ಘೋಷಿಸಿದ ನಂತರ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ.

ಯಾಕೆಂದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಸದರಿ ಚುನಾವಣೆಯ ಪ್ರಮುಖ ರಾಜಕಾರಣಿಯೊಬ್ಬರ ಸಿನಿಮಾವನ್ನು ಬಿಡುಗಡೆ ಮಾಡುವುದು ಎಷ್ಟು ಸರಿ? ಇದಕ್ಕೆ ಆಯೋಗ ಸಮ್ಮತಿ ನೀಡುತ್ತದೆಯಾ? ಮೊದಲ ಹಂತದ ಮತದಾನ ಚುನಾವಣೆ ಮುಕ್ತಾಯಗೊಂಡ ಮಾರನೇ ದಿನವೆ, ಇನ್ನೂ ಆರು ಹಂತಗಳ ಮತದಾನ ಬಾಕಿ ಇರುವಾಗಲೇ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸುತ್ತದೆಯೆಂದರೆ, ಆಯೋಗದ ಭಯ ಆ ತಂಡಕ್ಕಿಲ್ಲವೇ? ಅಥವಾ ಆ ಭಯವನ್ನೂ ಮೀರುವ ಅಭಯ ಆ ತಂಡಕ್ಕೆ ಲಭಿಸಿದೆಯೇ? ಈ ಎಲ್ಲಾ ಪ್ರಶ್ನೆಗಳು ಈಗ ದೊಡ್ಡ ಚರ್ಚೆಯಾಗಿ ಬೆಳೆಯುತ್ತಿವೆ.

ಪ್ರಜಾತಂತ್ರವನ್ನು ಗೌರವಿಸುವವರ ವಾದ ಇದಾದರೆ, ವ್ಯಕ್ತಿ ಪೂಜೆಯ ಮೋಹಕ್ಕೆ ಸಿಕ್ಕಿರುವ ಕೆಲವರು ಆ ಸಿನಿಮಾಕ್ಕೂ ಬಿಜೆಪಿ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ, ಅಲ್ಲದೇ ಪ್ರಧಾನಿ ಮೋದಿಯವರೇನು ಅದರಲ್ಲಿ ನಟಿಸಿದ್ದಾರಾ? ಹಾಗಾಗಿ ಅದು ಬಿಡುಗಡೆಯಾಗುವುದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂಬ ವಾದ ಮುಂದಿಡುತ್ತಿದ್ದಾರೆ.

ನಿಜಕ್ಕೂ ಬಿಜೆಪಿ ಪಕ್ಷಕ್ಕೂ ಆ ಸಿನಿಮಾಗೂ ಯಾವ ನಂಟೂ ಇಲ್ಲವೇ? ಬನ್ನಿ ಒಂದೊಂದಾಗಿ ನೋಡೋಣ…..

ಮಹಾರಾಷ್ಟ್ರ ಸಿಎಂ ಫಡ್ನವೀಸ್ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು

ನಿರ್ಮಾಣದಿಂದಲೇ ಶುರು ಮಾಡೋಣ. ಆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾದದ್ದು ಇದೇ ವರ್ಷದ ಜನವರಿ 7 ರಂದು, ಮುಂಬೈನಲ್ಲಿ. ಬಿಡುಗಡೆ ಮಾಡಿದ್ದು ಮಹಾರಾಷ್ಟ್ರದ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್! ಬಿಜೆಪಿ ನಂಟೇ ಇರದಿದ್ದರೆ ಬಿಜೆಪಿ ರಾಜಕಾರಣಿ ಯಾಕೆ ಬಿಡುಗಡೆ ಮಾಡುತ್ತಿದ್ದರು?

ಇನ್ನು ಸಿನಿಮಾದ ಶೂಟಿಂಗ್ ಶುರುವಾದದ್ದು ಜನವರಿ 28ರಂದು. ಅದಾಗಿ ಸರಿಯಾಗಿ ನಲವತ್ತೆರಡು ದಿನಗಳಿಗೆ ಚಿತ್ರತಂಡ ರಿಲೀಸಿಂಗ್ ದಿನಾಂಕವನ್ನೇ ಪ್ರಕಟಿಸುತ್ತೆ. ಅದ್ಯಾವಾಗ ಏಪ್ರಿಲ್ 12ಕ್ಕೆ. ಅಂದರೆ ಶೂಟಿಂಗ್ ಶುರುವಾಗಿ ಕೇವಲ ಎರಡೂವರೆ ತಿಂಗಳಿಗೆ ಪ್ರಿ-ಪ್ರೊಡಕ್ಷನ್, ಪೋಸ್ಟ್-ಪ್ರೊಡಕ್ಷನ್ ಎಲ್ಲವನ್ನೂ ಮುಗಿಸಿ ಸಿನಿಮಾ ಸಿದ್ಧವಾಗಿಬಿಡುತ್ತೆ! ಬಿಜೆಪಿ ಎದುರಿಸ ಹೊರಟಿರುವ ಚುನಾವಣೆಯೇ ಈ ಸಿನಿಮಾದ ಆತುರದ ಪ್ರೊಡಕ್ಷನ್ ಕೆಲಸಕ್ಕೆ ಕಾರಣವಾ?

ಇನ್ನು ಸಿನಿಮಾ ರಿಲೀಸ್ ಆಗುತ್ತಿರೋದು ಹಿಂದಿ ಭಾಷೆಯಲ್ಲಿ ಮಾತ್ರ ಎಂದು ತಿಳಿದು ಬಂದಿದೆ. ಆದರೆ ಪೋಸ್ಟರ್ ರಿಲೀಸ್ ಆಗಿರೋದು 23 ಭಾರತೀಯ ಭಾಷೆಗಳಲ್ಲಿ. ಸಿನಿಮಾವೇ ತಯಾರಾಗದ ಭಾಷೆಯಲ್ಲೂ ಪೋಸ್ಟರ್‌ಗಳ ಅಗತ್ಯವೇನಿತ್ತು? ಇದು ಪ್ರಚಾರ ತಂತ್ರದ ಭಾಗ ಎನಿಸುವುದಿಲ್ಲವೇ, ಸಿನಿಮಾ ಪ್ರಚಾರವಲ್ಲ, ರಾಜಕೀಯ ಪ್ರಚಾರ!

ಇನ್ನು ಈ ಸಿನಿಮಾ ತಯಾರಕರ ವಿಚಾರಕ್ಕೆ ಬರೋಣ. ಮೊದಲು ನಟನಿಂದಲೇ ಶುರು ಮಾಡೋಣ. ಇದರಲ್ಲಿ ಮೋದಿಯವರ ಪಾತ್ರ ಮಾಡುತ್ತಿರೋದು ಬಾಲಿವುಡ್ ನಟ ವಿವೇಕ್ ಒಬೆರಾಯ್. ಈತ ಬಿಜೆಪಿಯ ಅಧಿಕೃತ ಸದಸ್ಯನಲ್ಲದೇ ಹೋದರು, ಬಿಜೆಪಿಯ ರೆಗ್ಯುಲರ್ ಸ್ಟಾರ್ ಪ್ರಚಾರಕ. 2014ರಲ್ಲಿ ಈತ ಮೋದಿಯವರ ಬಿಜೆಪಿ ಪರವಾಗಿ ಮಹಾರಾಷ್ಟ್ರದ ನಕ್ಸಲ್‌ಪೀಡಿತ ಜಿಲ್ಲೆಯಾದ ಗಡ್ಚರೋಲಿಯಲ್ಲಿ ಮತ್ತು ಉತ್ತರಪ್ರದೇಶದ ಘಜಿಯಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿದ್ದರು.

ಬಿಜೆಪಿ ಕಮಲ ಲಾಂಛನದೊಂದಿಗೆ ಪ್ರಮಾಣವಚನದಲ್ಲಿ

ಇನ್ನು ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೂ ಈತನಿಗೆ ಆತ್ಮೀಯ ಆಹ್ವಾನವಿತ್ತು. ಅವತ್ತಿನ ಸಮಾರಂಭದಲ್ಲಿ ವಿವೇಕ್ ಒಬೆರಾಯ್ ಅಲ್ಲದೆ ಬೇರೆ ಸಾಕಷ್ಟು ಸಿನಿಮಾ ನಟರು ಭಾಗವಹಿಸಿದ್ದರು ಎಂದು ತಳ್ಳಿಹಾಕಲಿಕ್ಕಾಗುವುದಿಲ್ಲ. ಯಾಕೆಂದರೆ ವಿವೇಕ್ ಅವತ್ತು ತನ್ನ ಎದೆಯ ಮೇಲೆ ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಧರಿಸಿ ಬಿಜೆಪಿ ಜೊತೆಗಿನ ತನ್ನ ನಿಕಟತೆಯನ್ನು ಪ್ರದರ್ಶಿಸಿದ್ದರು. ಅಂದಹಾಗೆ ವಿವೇಕ್ ಒಬೆರಾಯ್ 2013ರಲ್ಲೇ (ಅಂದರೆ ಮೋದಿಯವರು 2014ರ ಚುನಾವಣಾ ತಯಾರಿಯಲ್ಲಿದ್ದಾಗಲೇ) ಮೋದಿ ಕುರಿತ ಸಿನಿಮಾದಲ್ಲಿ ಮೋದಿ ಪಾತ್ರ ಮಾಡುತ್ತಿರುವುದಾಗಿ ಹೇಳಿದ್ದಾಗಿ ಔಟ್‌ಲುಕ್ ವರದಿ ಮಾಡಿತ್ತು. ಅಂದರೆ ವಿವೇಕ್‌ನ ಪ್ರಕಾರ ಮೋದಿ ಸಿನಿಮಾ ಚುನಾವಣಾ ಸಂದರ್ಭದಲ್ಲೇ ಕದಲಿಕೆ ಕಾಣುತ್ತದೆ ಎಂಬುದು ಇದರಿಂದ ಅರ್ಥವಾಗುತ್ತೆ.

ಈಗ ನಿರ್ಮಾಪಕರ ವಿಚಾರಕ್ಕೆ ಬಂದರೆ, ಈ ಸಿನಿಮಾದ ಇಬ್ಬರು ನಿರ್ಮಾಪಕರಲ್ಲಿ ಒಬ್ಬರು ಈ ವಿವೇಕ್‌ನ ತಂದೆ ಸುರೇಶ್ ಒಬೆರಾಯ್! ಈತ 2004ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಅಲ್ಲಿಂದ ಇಲ್ಲಿವರೆಗೂ ಸುರೇಶ್, ಬಿಜೆಪಿ ಸಕ್ರಿಯ ಸದಸ್ಯ ಮತ್ತು ಮಗನಂತೆ  ತಾನೂ ಬಿಜೆಪಿಯ ಸ್ಟಾರ್ ಪ್ರಚಾರಕ!

ಸುರೇಶ್ ಒಬೆರಾಯ್ 2004ರಲ್ಲಿ ಬಿಜೆಪಿ ಸೇರ್ಪಡೆ

ಇನ್ನು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರೋದು ಓಮಂಗ್ ಕುಮಾರ್ ಎಂಬ ಪ್ರತಿಭಾವಂತ ನಿರ್ದೇಶಕ. ಜೀವನಚರಿತ್ರೆಗಳನ್ನು ಚಿತ್ರವಾಗಿಸುವುದರಲ್ಲಿ ನಿಸ್ಸೀಮ. ಈ ಹಿಂದೆ ‘ಸರಬ್ಜಿತ್’ ಮತ್ತು ‘ಮೇರಿ ಕೋಮ್’ ಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದವರು. ಇವರು ನಟ, ನಿರ್ಮಾಪಕನಷ್ಟು ಬಿಜೆಪಿ ಸಖ್ಯ ಹೊಂದಿಲ್ಲವಾದರು ಇವರ ‘ಸರಬ್ಜಿತ್’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದು ಬಿಜೆಪಿಯ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ. ಅಷ್ಟಕ್ಕೇ ಆತನಿಗೆ ಬಿಜೆಪಿ ನಂಟು ಥಳುಕು ಹಾಕಲಾಗದು. ಆದರೂ ಮೋದಿಯವರ ಬಯೋಪಿಕ್ ತಯಾರಾದ ಸಂದರ್ಭ, ಧಾವಂತ, ರಾಜಕೀಯ ಲಿಂಕ್‌ಗಳನ್ನು ಗಮನಿಸಿದರೆ ಒಮಂಗ್‌ನ ಈ ಸಣ್ಣ ನಂಟನ್ನೂ ಅನುಮಾನದಿಂದಲೇ ನೋಡಬೇಕಾಗುತ್ತೆ. ಅಂದಹಾಗೆ, 2015ರಲ್ಲಿ ಈತನ ‘ಮೇರಿ ಕೋಮ್’ ಸಿನಿಮಾಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. ಇವೆಲ್ಲವೂ ಕಾಕತಾಳೀಯ ಎನ್ನುವಂತೆ ಕಂಡರೂ, ನಂಬಲು ಹರಸಾಹಸ ಪಡುವಂಥ ವಾತಾವರಣ ಈಗ ದೇಶದಲ್ಲಿ ನಿರ್ಮಾಣವಾಗಿದೆ.

ಒಮಂಗ್ ಕುಮಾರ್ ಅಮಿತ ಶಾ, ಗಡ್ಕರಿ ಜೊತೆ

ಆದರ್ಶ ರಾಜಕಾರಣ ಮಾಡುವುದೇ ನಿಜವಾದರೆ ಮೋದಿಯವರ ಮೇಲೆ ಈಗ ದೊಡ್ಡ ಹೊರೆ ಇದೆ. ಅದು ಅವರದೇ ಸಿನಿಮಾ ಆಗಿರೋದ್ರಿಂದ ಅವರ ಅನುಮತಿ ಅತ್ಯಮೂಲ್ಯ, ಕಥೆಗೂ ಮತ್ತು ಬಿಡುಗಡೆಗೂ. ಅವರು ಈ ಕೂಡಲೇ ಸಿನಿಮಾ ತಂಡಕ್ಕೆ ‘ಚುನಾವಣಾ ನೀತಿ ಸಂಹಿತೆ ಮುಗಿಯವವರೆಗೆ ರಿಲೀಸ್ ಮಾಡಬೇಡಿ’ ಎಂದು ಹೇಳಬೇಕಿದೆ. ಅದನ್ನು ಬಿಟ್ಟು, ಇದು ಸಿನಿಮಾ ತಂಡಕ್ಕೂ ಚುನಾವಣಾ ಆಯೋಗಕ್ಕು ಸಂಬಂಧಿಸಿದ ವಿಷಯ ನಾನೇಗೆ ಮಧ್ಯಪ್ರವೇಶಿಸಲಿ ಎಂಬ ಕುಂಟು ನೆಪ ಹೇಳಿದರೆ, ಆ ಸಿನಿಮಾದಿಂದ ಲಾಭ ಪಡೆಯಲು ಅವರು ಯೋಚಿಸಿದ್ದಾರೆ ಎಂದು ಸಂಶಯಕ್ಕೆ ಆಸ್ಪದವಿಲ್ಲದಂತೆ ಸಾಬೀತಾಗುತ್ತೆ.

ಯಾಕೆಂದರೆ, ಮಧ್ಯಪ್ರದೇಶ, ರಾಜಸ್ಥಾನ್ ಮತ್ತು ಉತ್ತರಾಖಂಡ್ ರಾಜ್ಯಗಳ ಚುನಾವಣಾ ಸೋಲುಗಳ ನಂತರ ತನ್ನ ವರ್ಚಸ್ಸು ವೃದ್ದಿಸಿಕೊಳ್ಳುವ ಯಾವ ಅವಕಾಶವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...