Homeಮುಖಪುಟಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

- Advertisement -
- Advertisement -

ಚುನಾವಣಾ ಆಯೋಗದ ಬಗ್ಗೆ ಬಿಜೆಪಿಗೆ ನಿಜಕ್ಕೂ ಗೌರವ ಇದೆಯಾ? ಮೋದಿಯವರ ಈ ಐದು ವರ್ಷದ ಆಳ್ವಿಕೆಯಲ್ಲಿ ಚುನಾವಣಾ ಆಯೋಗ ತನ್ನ ಸ್ವಾಯತ್ತೆಯನ್ನು ಉಳಿಸಿಕೊಂಡಿದೆಯಾ? ಮುಂಬರುವ ಲೋಕಸಭಾ ಚುನಾವಣೆಯನ್ನು ಆಯೋಗ ಪಾರದರ್ಶಕವಾಗಿ ನಡೆಸುತ್ತಾ?………

ಇಷ್ಟೆಲ್ಲ ಪ್ರಶ್ನೆಗಳು ಹುಟ್ಟಲು ಕಾರಣವಾಗಿರೋದು ಒಂದು ಸಿನಿಮಾ! ಅದು ಸಾಮಾನ್ಯ ಸಿನಿಮಾವಲ್ಲ ಪ್ರಧಾನಿ ಮೋದಿಯವರ ಜೀವನಚರಿತ್ರೆ ಆಧರಿಸಿದ ಸಿನಿಮಾ ‘ಪಿಎಂ ನರೇಂದ್ರ ಮೋದಿ’. ಈ ಸಿನಿಮಾವನ್ನು ಏಪ್ರಿಲ್ 12ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇತ್ತೀಚೆಗೆ ಘೋಷಿಸಿದ ನಂತರ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ.

ಯಾಕೆಂದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಸದರಿ ಚುನಾವಣೆಯ ಪ್ರಮುಖ ರಾಜಕಾರಣಿಯೊಬ್ಬರ ಸಿನಿಮಾವನ್ನು ಬಿಡುಗಡೆ ಮಾಡುವುದು ಎಷ್ಟು ಸರಿ? ಇದಕ್ಕೆ ಆಯೋಗ ಸಮ್ಮತಿ ನೀಡುತ್ತದೆಯಾ? ಮೊದಲ ಹಂತದ ಮತದಾನ ಚುನಾವಣೆ ಮುಕ್ತಾಯಗೊಂಡ ಮಾರನೇ ದಿನವೆ, ಇನ್ನೂ ಆರು ಹಂತಗಳ ಮತದಾನ ಬಾಕಿ ಇರುವಾಗಲೇ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸುತ್ತದೆಯೆಂದರೆ, ಆಯೋಗದ ಭಯ ಆ ತಂಡಕ್ಕಿಲ್ಲವೇ? ಅಥವಾ ಆ ಭಯವನ್ನೂ ಮೀರುವ ಅಭಯ ಆ ತಂಡಕ್ಕೆ ಲಭಿಸಿದೆಯೇ? ಈ ಎಲ್ಲಾ ಪ್ರಶ್ನೆಗಳು ಈಗ ದೊಡ್ಡ ಚರ್ಚೆಯಾಗಿ ಬೆಳೆಯುತ್ತಿವೆ.

ಪ್ರಜಾತಂತ್ರವನ್ನು ಗೌರವಿಸುವವರ ವಾದ ಇದಾದರೆ, ವ್ಯಕ್ತಿ ಪೂಜೆಯ ಮೋಹಕ್ಕೆ ಸಿಕ್ಕಿರುವ ಕೆಲವರು ಆ ಸಿನಿಮಾಕ್ಕೂ ಬಿಜೆಪಿ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ, ಅಲ್ಲದೇ ಪ್ರಧಾನಿ ಮೋದಿಯವರೇನು ಅದರಲ್ಲಿ ನಟಿಸಿದ್ದಾರಾ? ಹಾಗಾಗಿ ಅದು ಬಿಡುಗಡೆಯಾಗುವುದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂಬ ವಾದ ಮುಂದಿಡುತ್ತಿದ್ದಾರೆ.

ನಿಜಕ್ಕೂ ಬಿಜೆಪಿ ಪಕ್ಷಕ್ಕೂ ಆ ಸಿನಿಮಾಗೂ ಯಾವ ನಂಟೂ ಇಲ್ಲವೇ? ಬನ್ನಿ ಒಂದೊಂದಾಗಿ ನೋಡೋಣ…..

ಮಹಾರಾಷ್ಟ್ರ ಸಿಎಂ ಫಡ್ನವೀಸ್ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು

ನಿರ್ಮಾಣದಿಂದಲೇ ಶುರು ಮಾಡೋಣ. ಆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾದದ್ದು ಇದೇ ವರ್ಷದ ಜನವರಿ 7 ರಂದು, ಮುಂಬೈನಲ್ಲಿ. ಬಿಡುಗಡೆ ಮಾಡಿದ್ದು ಮಹಾರಾಷ್ಟ್ರದ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್! ಬಿಜೆಪಿ ನಂಟೇ ಇರದಿದ್ದರೆ ಬಿಜೆಪಿ ರಾಜಕಾರಣಿ ಯಾಕೆ ಬಿಡುಗಡೆ ಮಾಡುತ್ತಿದ್ದರು?

ಇನ್ನು ಸಿನಿಮಾದ ಶೂಟಿಂಗ್ ಶುರುವಾದದ್ದು ಜನವರಿ 28ರಂದು. ಅದಾಗಿ ಸರಿಯಾಗಿ ನಲವತ್ತೆರಡು ದಿನಗಳಿಗೆ ಚಿತ್ರತಂಡ ರಿಲೀಸಿಂಗ್ ದಿನಾಂಕವನ್ನೇ ಪ್ರಕಟಿಸುತ್ತೆ. ಅದ್ಯಾವಾಗ ಏಪ್ರಿಲ್ 12ಕ್ಕೆ. ಅಂದರೆ ಶೂಟಿಂಗ್ ಶುರುವಾಗಿ ಕೇವಲ ಎರಡೂವರೆ ತಿಂಗಳಿಗೆ ಪ್ರಿ-ಪ್ರೊಡಕ್ಷನ್, ಪೋಸ್ಟ್-ಪ್ರೊಡಕ್ಷನ್ ಎಲ್ಲವನ್ನೂ ಮುಗಿಸಿ ಸಿನಿಮಾ ಸಿದ್ಧವಾಗಿಬಿಡುತ್ತೆ! ಬಿಜೆಪಿ ಎದುರಿಸ ಹೊರಟಿರುವ ಚುನಾವಣೆಯೇ ಈ ಸಿನಿಮಾದ ಆತುರದ ಪ್ರೊಡಕ್ಷನ್ ಕೆಲಸಕ್ಕೆ ಕಾರಣವಾ?

ಇನ್ನು ಸಿನಿಮಾ ರಿಲೀಸ್ ಆಗುತ್ತಿರೋದು ಹಿಂದಿ ಭಾಷೆಯಲ್ಲಿ ಮಾತ್ರ ಎಂದು ತಿಳಿದು ಬಂದಿದೆ. ಆದರೆ ಪೋಸ್ಟರ್ ರಿಲೀಸ್ ಆಗಿರೋದು 23 ಭಾರತೀಯ ಭಾಷೆಗಳಲ್ಲಿ. ಸಿನಿಮಾವೇ ತಯಾರಾಗದ ಭಾಷೆಯಲ್ಲೂ ಪೋಸ್ಟರ್‌ಗಳ ಅಗತ್ಯವೇನಿತ್ತು? ಇದು ಪ್ರಚಾರ ತಂತ್ರದ ಭಾಗ ಎನಿಸುವುದಿಲ್ಲವೇ, ಸಿನಿಮಾ ಪ್ರಚಾರವಲ್ಲ, ರಾಜಕೀಯ ಪ್ರಚಾರ!

ಇನ್ನು ಈ ಸಿನಿಮಾ ತಯಾರಕರ ವಿಚಾರಕ್ಕೆ ಬರೋಣ. ಮೊದಲು ನಟನಿಂದಲೇ ಶುರು ಮಾಡೋಣ. ಇದರಲ್ಲಿ ಮೋದಿಯವರ ಪಾತ್ರ ಮಾಡುತ್ತಿರೋದು ಬಾಲಿವುಡ್ ನಟ ವಿವೇಕ್ ಒಬೆರಾಯ್. ಈತ ಬಿಜೆಪಿಯ ಅಧಿಕೃತ ಸದಸ್ಯನಲ್ಲದೇ ಹೋದರು, ಬಿಜೆಪಿಯ ರೆಗ್ಯುಲರ್ ಸ್ಟಾರ್ ಪ್ರಚಾರಕ. 2014ರಲ್ಲಿ ಈತ ಮೋದಿಯವರ ಬಿಜೆಪಿ ಪರವಾಗಿ ಮಹಾರಾಷ್ಟ್ರದ ನಕ್ಸಲ್‌ಪೀಡಿತ ಜಿಲ್ಲೆಯಾದ ಗಡ್ಚರೋಲಿಯಲ್ಲಿ ಮತ್ತು ಉತ್ತರಪ್ರದೇಶದ ಘಜಿಯಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿದ್ದರು.

ಬಿಜೆಪಿ ಕಮಲ ಲಾಂಛನದೊಂದಿಗೆ ಪ್ರಮಾಣವಚನದಲ್ಲಿ

ಇನ್ನು ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೂ ಈತನಿಗೆ ಆತ್ಮೀಯ ಆಹ್ವಾನವಿತ್ತು. ಅವತ್ತಿನ ಸಮಾರಂಭದಲ್ಲಿ ವಿವೇಕ್ ಒಬೆರಾಯ್ ಅಲ್ಲದೆ ಬೇರೆ ಸಾಕಷ್ಟು ಸಿನಿಮಾ ನಟರು ಭಾಗವಹಿಸಿದ್ದರು ಎಂದು ತಳ್ಳಿಹಾಕಲಿಕ್ಕಾಗುವುದಿಲ್ಲ. ಯಾಕೆಂದರೆ ವಿವೇಕ್ ಅವತ್ತು ತನ್ನ ಎದೆಯ ಮೇಲೆ ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಧರಿಸಿ ಬಿಜೆಪಿ ಜೊತೆಗಿನ ತನ್ನ ನಿಕಟತೆಯನ್ನು ಪ್ರದರ್ಶಿಸಿದ್ದರು. ಅಂದಹಾಗೆ ವಿವೇಕ್ ಒಬೆರಾಯ್ 2013ರಲ್ಲೇ (ಅಂದರೆ ಮೋದಿಯವರು 2014ರ ಚುನಾವಣಾ ತಯಾರಿಯಲ್ಲಿದ್ದಾಗಲೇ) ಮೋದಿ ಕುರಿತ ಸಿನಿಮಾದಲ್ಲಿ ಮೋದಿ ಪಾತ್ರ ಮಾಡುತ್ತಿರುವುದಾಗಿ ಹೇಳಿದ್ದಾಗಿ ಔಟ್‌ಲುಕ್ ವರದಿ ಮಾಡಿತ್ತು. ಅಂದರೆ ವಿವೇಕ್‌ನ ಪ್ರಕಾರ ಮೋದಿ ಸಿನಿಮಾ ಚುನಾವಣಾ ಸಂದರ್ಭದಲ್ಲೇ ಕದಲಿಕೆ ಕಾಣುತ್ತದೆ ಎಂಬುದು ಇದರಿಂದ ಅರ್ಥವಾಗುತ್ತೆ.

ಈಗ ನಿರ್ಮಾಪಕರ ವಿಚಾರಕ್ಕೆ ಬಂದರೆ, ಈ ಸಿನಿಮಾದ ಇಬ್ಬರು ನಿರ್ಮಾಪಕರಲ್ಲಿ ಒಬ್ಬರು ಈ ವಿವೇಕ್‌ನ ತಂದೆ ಸುರೇಶ್ ಒಬೆರಾಯ್! ಈತ 2004ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಅಲ್ಲಿಂದ ಇಲ್ಲಿವರೆಗೂ ಸುರೇಶ್, ಬಿಜೆಪಿ ಸಕ್ರಿಯ ಸದಸ್ಯ ಮತ್ತು ಮಗನಂತೆ  ತಾನೂ ಬಿಜೆಪಿಯ ಸ್ಟಾರ್ ಪ್ರಚಾರಕ!

ಸುರೇಶ್ ಒಬೆರಾಯ್ 2004ರಲ್ಲಿ ಬಿಜೆಪಿ ಸೇರ್ಪಡೆ

ಇನ್ನು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರೋದು ಓಮಂಗ್ ಕುಮಾರ್ ಎಂಬ ಪ್ರತಿಭಾವಂತ ನಿರ್ದೇಶಕ. ಜೀವನಚರಿತ್ರೆಗಳನ್ನು ಚಿತ್ರವಾಗಿಸುವುದರಲ್ಲಿ ನಿಸ್ಸೀಮ. ಈ ಹಿಂದೆ ‘ಸರಬ್ಜಿತ್’ ಮತ್ತು ‘ಮೇರಿ ಕೋಮ್’ ಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದವರು. ಇವರು ನಟ, ನಿರ್ಮಾಪಕನಷ್ಟು ಬಿಜೆಪಿ ಸಖ್ಯ ಹೊಂದಿಲ್ಲವಾದರು ಇವರ ‘ಸರಬ್ಜಿತ್’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದು ಬಿಜೆಪಿಯ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ. ಅಷ್ಟಕ್ಕೇ ಆತನಿಗೆ ಬಿಜೆಪಿ ನಂಟು ಥಳುಕು ಹಾಕಲಾಗದು. ಆದರೂ ಮೋದಿಯವರ ಬಯೋಪಿಕ್ ತಯಾರಾದ ಸಂದರ್ಭ, ಧಾವಂತ, ರಾಜಕೀಯ ಲಿಂಕ್‌ಗಳನ್ನು ಗಮನಿಸಿದರೆ ಒಮಂಗ್‌ನ ಈ ಸಣ್ಣ ನಂಟನ್ನೂ ಅನುಮಾನದಿಂದಲೇ ನೋಡಬೇಕಾಗುತ್ತೆ. ಅಂದಹಾಗೆ, 2015ರಲ್ಲಿ ಈತನ ‘ಮೇರಿ ಕೋಮ್’ ಸಿನಿಮಾಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. ಇವೆಲ್ಲವೂ ಕಾಕತಾಳೀಯ ಎನ್ನುವಂತೆ ಕಂಡರೂ, ನಂಬಲು ಹರಸಾಹಸ ಪಡುವಂಥ ವಾತಾವರಣ ಈಗ ದೇಶದಲ್ಲಿ ನಿರ್ಮಾಣವಾಗಿದೆ.

ಒಮಂಗ್ ಕುಮಾರ್ ಅಮಿತ ಶಾ, ಗಡ್ಕರಿ ಜೊತೆ

ಆದರ್ಶ ರಾಜಕಾರಣ ಮಾಡುವುದೇ ನಿಜವಾದರೆ ಮೋದಿಯವರ ಮೇಲೆ ಈಗ ದೊಡ್ಡ ಹೊರೆ ಇದೆ. ಅದು ಅವರದೇ ಸಿನಿಮಾ ಆಗಿರೋದ್ರಿಂದ ಅವರ ಅನುಮತಿ ಅತ್ಯಮೂಲ್ಯ, ಕಥೆಗೂ ಮತ್ತು ಬಿಡುಗಡೆಗೂ. ಅವರು ಈ ಕೂಡಲೇ ಸಿನಿಮಾ ತಂಡಕ್ಕೆ ‘ಚುನಾವಣಾ ನೀತಿ ಸಂಹಿತೆ ಮುಗಿಯವವರೆಗೆ ರಿಲೀಸ್ ಮಾಡಬೇಡಿ’ ಎಂದು ಹೇಳಬೇಕಿದೆ. ಅದನ್ನು ಬಿಟ್ಟು, ಇದು ಸಿನಿಮಾ ತಂಡಕ್ಕೂ ಚುನಾವಣಾ ಆಯೋಗಕ್ಕು ಸಂಬಂಧಿಸಿದ ವಿಷಯ ನಾನೇಗೆ ಮಧ್ಯಪ್ರವೇಶಿಸಲಿ ಎಂಬ ಕುಂಟು ನೆಪ ಹೇಳಿದರೆ, ಆ ಸಿನಿಮಾದಿಂದ ಲಾಭ ಪಡೆಯಲು ಅವರು ಯೋಚಿಸಿದ್ದಾರೆ ಎಂದು ಸಂಶಯಕ್ಕೆ ಆಸ್ಪದವಿಲ್ಲದಂತೆ ಸಾಬೀತಾಗುತ್ತೆ.

ಯಾಕೆಂದರೆ, ಮಧ್ಯಪ್ರದೇಶ, ರಾಜಸ್ಥಾನ್ ಮತ್ತು ಉತ್ತರಾಖಂಡ್ ರಾಜ್ಯಗಳ ಚುನಾವಣಾ ಸೋಲುಗಳ ನಂತರ ತನ್ನ ವರ್ಚಸ್ಸು ವೃದ್ದಿಸಿಕೊಳ್ಳುವ ಯಾವ ಅವಕಾಶವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...