Homeಮುಖಪುಟಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

- Advertisement -
- Advertisement -

ಚುನಾವಣಾ ಆಯೋಗದ ಬಗ್ಗೆ ಬಿಜೆಪಿಗೆ ನಿಜಕ್ಕೂ ಗೌರವ ಇದೆಯಾ? ಮೋದಿಯವರ ಈ ಐದು ವರ್ಷದ ಆಳ್ವಿಕೆಯಲ್ಲಿ ಚುನಾವಣಾ ಆಯೋಗ ತನ್ನ ಸ್ವಾಯತ್ತೆಯನ್ನು ಉಳಿಸಿಕೊಂಡಿದೆಯಾ? ಮುಂಬರುವ ಲೋಕಸಭಾ ಚುನಾವಣೆಯನ್ನು ಆಯೋಗ ಪಾರದರ್ಶಕವಾಗಿ ನಡೆಸುತ್ತಾ?………

ಇಷ್ಟೆಲ್ಲ ಪ್ರಶ್ನೆಗಳು ಹುಟ್ಟಲು ಕಾರಣವಾಗಿರೋದು ಒಂದು ಸಿನಿಮಾ! ಅದು ಸಾಮಾನ್ಯ ಸಿನಿಮಾವಲ್ಲ ಪ್ರಧಾನಿ ಮೋದಿಯವರ ಜೀವನಚರಿತ್ರೆ ಆಧರಿಸಿದ ಸಿನಿಮಾ ‘ಪಿಎಂ ನರೇಂದ್ರ ಮೋದಿ’. ಈ ಸಿನಿಮಾವನ್ನು ಏಪ್ರಿಲ್ 12ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇತ್ತೀಚೆಗೆ ಘೋಷಿಸಿದ ನಂತರ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ.

ಯಾಕೆಂದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಸದರಿ ಚುನಾವಣೆಯ ಪ್ರಮುಖ ರಾಜಕಾರಣಿಯೊಬ್ಬರ ಸಿನಿಮಾವನ್ನು ಬಿಡುಗಡೆ ಮಾಡುವುದು ಎಷ್ಟು ಸರಿ? ಇದಕ್ಕೆ ಆಯೋಗ ಸಮ್ಮತಿ ನೀಡುತ್ತದೆಯಾ? ಮೊದಲ ಹಂತದ ಮತದಾನ ಚುನಾವಣೆ ಮುಕ್ತಾಯಗೊಂಡ ಮಾರನೇ ದಿನವೆ, ಇನ್ನೂ ಆರು ಹಂತಗಳ ಮತದಾನ ಬಾಕಿ ಇರುವಾಗಲೇ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸುತ್ತದೆಯೆಂದರೆ, ಆಯೋಗದ ಭಯ ಆ ತಂಡಕ್ಕಿಲ್ಲವೇ? ಅಥವಾ ಆ ಭಯವನ್ನೂ ಮೀರುವ ಅಭಯ ಆ ತಂಡಕ್ಕೆ ಲಭಿಸಿದೆಯೇ? ಈ ಎಲ್ಲಾ ಪ್ರಶ್ನೆಗಳು ಈಗ ದೊಡ್ಡ ಚರ್ಚೆಯಾಗಿ ಬೆಳೆಯುತ್ತಿವೆ.

ಪ್ರಜಾತಂತ್ರವನ್ನು ಗೌರವಿಸುವವರ ವಾದ ಇದಾದರೆ, ವ್ಯಕ್ತಿ ಪೂಜೆಯ ಮೋಹಕ್ಕೆ ಸಿಕ್ಕಿರುವ ಕೆಲವರು ಆ ಸಿನಿಮಾಕ್ಕೂ ಬಿಜೆಪಿ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ, ಅಲ್ಲದೇ ಪ್ರಧಾನಿ ಮೋದಿಯವರೇನು ಅದರಲ್ಲಿ ನಟಿಸಿದ್ದಾರಾ? ಹಾಗಾಗಿ ಅದು ಬಿಡುಗಡೆಯಾಗುವುದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂಬ ವಾದ ಮುಂದಿಡುತ್ತಿದ್ದಾರೆ.

ನಿಜಕ್ಕೂ ಬಿಜೆಪಿ ಪಕ್ಷಕ್ಕೂ ಆ ಸಿನಿಮಾಗೂ ಯಾವ ನಂಟೂ ಇಲ್ಲವೇ? ಬನ್ನಿ ಒಂದೊಂದಾಗಿ ನೋಡೋಣ…..

ಮಹಾರಾಷ್ಟ್ರ ಸಿಎಂ ಫಡ್ನವೀಸ್ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು

ನಿರ್ಮಾಣದಿಂದಲೇ ಶುರು ಮಾಡೋಣ. ಆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾದದ್ದು ಇದೇ ವರ್ಷದ ಜನವರಿ 7 ರಂದು, ಮುಂಬೈನಲ್ಲಿ. ಬಿಡುಗಡೆ ಮಾಡಿದ್ದು ಮಹಾರಾಷ್ಟ್ರದ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್! ಬಿಜೆಪಿ ನಂಟೇ ಇರದಿದ್ದರೆ ಬಿಜೆಪಿ ರಾಜಕಾರಣಿ ಯಾಕೆ ಬಿಡುಗಡೆ ಮಾಡುತ್ತಿದ್ದರು?

ಇನ್ನು ಸಿನಿಮಾದ ಶೂಟಿಂಗ್ ಶುರುವಾದದ್ದು ಜನವರಿ 28ರಂದು. ಅದಾಗಿ ಸರಿಯಾಗಿ ನಲವತ್ತೆರಡು ದಿನಗಳಿಗೆ ಚಿತ್ರತಂಡ ರಿಲೀಸಿಂಗ್ ದಿನಾಂಕವನ್ನೇ ಪ್ರಕಟಿಸುತ್ತೆ. ಅದ್ಯಾವಾಗ ಏಪ್ರಿಲ್ 12ಕ್ಕೆ. ಅಂದರೆ ಶೂಟಿಂಗ್ ಶುರುವಾಗಿ ಕೇವಲ ಎರಡೂವರೆ ತಿಂಗಳಿಗೆ ಪ್ರಿ-ಪ್ರೊಡಕ್ಷನ್, ಪೋಸ್ಟ್-ಪ್ರೊಡಕ್ಷನ್ ಎಲ್ಲವನ್ನೂ ಮುಗಿಸಿ ಸಿನಿಮಾ ಸಿದ್ಧವಾಗಿಬಿಡುತ್ತೆ! ಬಿಜೆಪಿ ಎದುರಿಸ ಹೊರಟಿರುವ ಚುನಾವಣೆಯೇ ಈ ಸಿನಿಮಾದ ಆತುರದ ಪ್ರೊಡಕ್ಷನ್ ಕೆಲಸಕ್ಕೆ ಕಾರಣವಾ?

ಇನ್ನು ಸಿನಿಮಾ ರಿಲೀಸ್ ಆಗುತ್ತಿರೋದು ಹಿಂದಿ ಭಾಷೆಯಲ್ಲಿ ಮಾತ್ರ ಎಂದು ತಿಳಿದು ಬಂದಿದೆ. ಆದರೆ ಪೋಸ್ಟರ್ ರಿಲೀಸ್ ಆಗಿರೋದು 23 ಭಾರತೀಯ ಭಾಷೆಗಳಲ್ಲಿ. ಸಿನಿಮಾವೇ ತಯಾರಾಗದ ಭಾಷೆಯಲ್ಲೂ ಪೋಸ್ಟರ್‌ಗಳ ಅಗತ್ಯವೇನಿತ್ತು? ಇದು ಪ್ರಚಾರ ತಂತ್ರದ ಭಾಗ ಎನಿಸುವುದಿಲ್ಲವೇ, ಸಿನಿಮಾ ಪ್ರಚಾರವಲ್ಲ, ರಾಜಕೀಯ ಪ್ರಚಾರ!

ಇನ್ನು ಈ ಸಿನಿಮಾ ತಯಾರಕರ ವಿಚಾರಕ್ಕೆ ಬರೋಣ. ಮೊದಲು ನಟನಿಂದಲೇ ಶುರು ಮಾಡೋಣ. ಇದರಲ್ಲಿ ಮೋದಿಯವರ ಪಾತ್ರ ಮಾಡುತ್ತಿರೋದು ಬಾಲಿವುಡ್ ನಟ ವಿವೇಕ್ ಒಬೆರಾಯ್. ಈತ ಬಿಜೆಪಿಯ ಅಧಿಕೃತ ಸದಸ್ಯನಲ್ಲದೇ ಹೋದರು, ಬಿಜೆಪಿಯ ರೆಗ್ಯುಲರ್ ಸ್ಟಾರ್ ಪ್ರಚಾರಕ. 2014ರಲ್ಲಿ ಈತ ಮೋದಿಯವರ ಬಿಜೆಪಿ ಪರವಾಗಿ ಮಹಾರಾಷ್ಟ್ರದ ನಕ್ಸಲ್‌ಪೀಡಿತ ಜಿಲ್ಲೆಯಾದ ಗಡ್ಚರೋಲಿಯಲ್ಲಿ ಮತ್ತು ಉತ್ತರಪ್ರದೇಶದ ಘಜಿಯಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿದ್ದರು.

ಬಿಜೆಪಿ ಕಮಲ ಲಾಂಛನದೊಂದಿಗೆ ಪ್ರಮಾಣವಚನದಲ್ಲಿ

ಇನ್ನು ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೂ ಈತನಿಗೆ ಆತ್ಮೀಯ ಆಹ್ವಾನವಿತ್ತು. ಅವತ್ತಿನ ಸಮಾರಂಭದಲ್ಲಿ ವಿವೇಕ್ ಒಬೆರಾಯ್ ಅಲ್ಲದೆ ಬೇರೆ ಸಾಕಷ್ಟು ಸಿನಿಮಾ ನಟರು ಭಾಗವಹಿಸಿದ್ದರು ಎಂದು ತಳ್ಳಿಹಾಕಲಿಕ್ಕಾಗುವುದಿಲ್ಲ. ಯಾಕೆಂದರೆ ವಿವೇಕ್ ಅವತ್ತು ತನ್ನ ಎದೆಯ ಮೇಲೆ ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಧರಿಸಿ ಬಿಜೆಪಿ ಜೊತೆಗಿನ ತನ್ನ ನಿಕಟತೆಯನ್ನು ಪ್ರದರ್ಶಿಸಿದ್ದರು. ಅಂದಹಾಗೆ ವಿವೇಕ್ ಒಬೆರಾಯ್ 2013ರಲ್ಲೇ (ಅಂದರೆ ಮೋದಿಯವರು 2014ರ ಚುನಾವಣಾ ತಯಾರಿಯಲ್ಲಿದ್ದಾಗಲೇ) ಮೋದಿ ಕುರಿತ ಸಿನಿಮಾದಲ್ಲಿ ಮೋದಿ ಪಾತ್ರ ಮಾಡುತ್ತಿರುವುದಾಗಿ ಹೇಳಿದ್ದಾಗಿ ಔಟ್‌ಲುಕ್ ವರದಿ ಮಾಡಿತ್ತು. ಅಂದರೆ ವಿವೇಕ್‌ನ ಪ್ರಕಾರ ಮೋದಿ ಸಿನಿಮಾ ಚುನಾವಣಾ ಸಂದರ್ಭದಲ್ಲೇ ಕದಲಿಕೆ ಕಾಣುತ್ತದೆ ಎಂಬುದು ಇದರಿಂದ ಅರ್ಥವಾಗುತ್ತೆ.

ಈಗ ನಿರ್ಮಾಪಕರ ವಿಚಾರಕ್ಕೆ ಬಂದರೆ, ಈ ಸಿನಿಮಾದ ಇಬ್ಬರು ನಿರ್ಮಾಪಕರಲ್ಲಿ ಒಬ್ಬರು ಈ ವಿವೇಕ್‌ನ ತಂದೆ ಸುರೇಶ್ ಒಬೆರಾಯ್! ಈತ 2004ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಅಲ್ಲಿಂದ ಇಲ್ಲಿವರೆಗೂ ಸುರೇಶ್, ಬಿಜೆಪಿ ಸಕ್ರಿಯ ಸದಸ್ಯ ಮತ್ತು ಮಗನಂತೆ  ತಾನೂ ಬಿಜೆಪಿಯ ಸ್ಟಾರ್ ಪ್ರಚಾರಕ!

ಸುರೇಶ್ ಒಬೆರಾಯ್ 2004ರಲ್ಲಿ ಬಿಜೆಪಿ ಸೇರ್ಪಡೆ

ಇನ್ನು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರೋದು ಓಮಂಗ್ ಕುಮಾರ್ ಎಂಬ ಪ್ರತಿಭಾವಂತ ನಿರ್ದೇಶಕ. ಜೀವನಚರಿತ್ರೆಗಳನ್ನು ಚಿತ್ರವಾಗಿಸುವುದರಲ್ಲಿ ನಿಸ್ಸೀಮ. ಈ ಹಿಂದೆ ‘ಸರಬ್ಜಿತ್’ ಮತ್ತು ‘ಮೇರಿ ಕೋಮ್’ ಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದವರು. ಇವರು ನಟ, ನಿರ್ಮಾಪಕನಷ್ಟು ಬಿಜೆಪಿ ಸಖ್ಯ ಹೊಂದಿಲ್ಲವಾದರು ಇವರ ‘ಸರಬ್ಜಿತ್’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದು ಬಿಜೆಪಿಯ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ. ಅಷ್ಟಕ್ಕೇ ಆತನಿಗೆ ಬಿಜೆಪಿ ನಂಟು ಥಳುಕು ಹಾಕಲಾಗದು. ಆದರೂ ಮೋದಿಯವರ ಬಯೋಪಿಕ್ ತಯಾರಾದ ಸಂದರ್ಭ, ಧಾವಂತ, ರಾಜಕೀಯ ಲಿಂಕ್‌ಗಳನ್ನು ಗಮನಿಸಿದರೆ ಒಮಂಗ್‌ನ ಈ ಸಣ್ಣ ನಂಟನ್ನೂ ಅನುಮಾನದಿಂದಲೇ ನೋಡಬೇಕಾಗುತ್ತೆ. ಅಂದಹಾಗೆ, 2015ರಲ್ಲಿ ಈತನ ‘ಮೇರಿ ಕೋಮ್’ ಸಿನಿಮಾಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. ಇವೆಲ್ಲವೂ ಕಾಕತಾಳೀಯ ಎನ್ನುವಂತೆ ಕಂಡರೂ, ನಂಬಲು ಹರಸಾಹಸ ಪಡುವಂಥ ವಾತಾವರಣ ಈಗ ದೇಶದಲ್ಲಿ ನಿರ್ಮಾಣವಾಗಿದೆ.

ಒಮಂಗ್ ಕುಮಾರ್ ಅಮಿತ ಶಾ, ಗಡ್ಕರಿ ಜೊತೆ

ಆದರ್ಶ ರಾಜಕಾರಣ ಮಾಡುವುದೇ ನಿಜವಾದರೆ ಮೋದಿಯವರ ಮೇಲೆ ಈಗ ದೊಡ್ಡ ಹೊರೆ ಇದೆ. ಅದು ಅವರದೇ ಸಿನಿಮಾ ಆಗಿರೋದ್ರಿಂದ ಅವರ ಅನುಮತಿ ಅತ್ಯಮೂಲ್ಯ, ಕಥೆಗೂ ಮತ್ತು ಬಿಡುಗಡೆಗೂ. ಅವರು ಈ ಕೂಡಲೇ ಸಿನಿಮಾ ತಂಡಕ್ಕೆ ‘ಚುನಾವಣಾ ನೀತಿ ಸಂಹಿತೆ ಮುಗಿಯವವರೆಗೆ ರಿಲೀಸ್ ಮಾಡಬೇಡಿ’ ಎಂದು ಹೇಳಬೇಕಿದೆ. ಅದನ್ನು ಬಿಟ್ಟು, ಇದು ಸಿನಿಮಾ ತಂಡಕ್ಕೂ ಚುನಾವಣಾ ಆಯೋಗಕ್ಕು ಸಂಬಂಧಿಸಿದ ವಿಷಯ ನಾನೇಗೆ ಮಧ್ಯಪ್ರವೇಶಿಸಲಿ ಎಂಬ ಕುಂಟು ನೆಪ ಹೇಳಿದರೆ, ಆ ಸಿನಿಮಾದಿಂದ ಲಾಭ ಪಡೆಯಲು ಅವರು ಯೋಚಿಸಿದ್ದಾರೆ ಎಂದು ಸಂಶಯಕ್ಕೆ ಆಸ್ಪದವಿಲ್ಲದಂತೆ ಸಾಬೀತಾಗುತ್ತೆ.

ಯಾಕೆಂದರೆ, ಮಧ್ಯಪ್ರದೇಶ, ರಾಜಸ್ಥಾನ್ ಮತ್ತು ಉತ್ತರಾಖಂಡ್ ರಾಜ್ಯಗಳ ಚುನಾವಣಾ ಸೋಲುಗಳ ನಂತರ ತನ್ನ ವರ್ಚಸ್ಸು ವೃದ್ದಿಸಿಕೊಳ್ಳುವ ಯಾವ ಅವಕಾಶವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...