Homeಅಂಕಣಗಳುಚುನಾವಣೆಗಳು ಮತ್ತು ಸರ್ವೋದಯ: ದೊರೆಸ್ವಾಮಿಯವರ ನೂರರ ನೋಟ ಅಂಕಣ

ಚುನಾವಣೆಗಳು ಮತ್ತು ಸರ್ವೋದಯ: ದೊರೆಸ್ವಾಮಿಯವರ ನೂರರ ನೋಟ ಅಂಕಣ

ಚುನಾವಣೆಗೆ ಪ್ರತಿನಿಧಿಗಳನ್ನು ನಿಲ್ಲಿಸಬೇಕಾದರೆ ಅಭ್ಯರ್ಥಿಯ ಅರ್ಹತೆಗಳನ್ನೂ ಮಾನದಂಡವಾಗಿ ಬಳಸಲಾಗುತ್ತದೆ. ಅಭ್ಯರ್ಥಿ ವಿಚಾರವಂತನಾಗಿರಬೇಕು. ಜನಪರ ಸೇವೆಯನ್ನು ಮಾಡಿದವನಾಗಿರಬೇಕು.

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಸರ್ವೋದಯ ಸಮಾಜ ಚುನಾವಣೆಗಳಲ್ಲಿ ರೂಢಮೂಲ ಬದಲಾವಣೆಯನ್ನು ಬಯಸುತ್ತದೆ. ರಾಜಕೀಯ ಪಕ್ಷಗಳ ವಿಚಾರ ರಾಜ್ಯಾಂಗದಲ್ಲಿ ಎಲ್ಲೋ ಒಂದು ಕಡೆ ಪ್ರಸ್ತಾಪಿಸಲಾಗಿದೆ. ಆದರೆ ಇಂದು ರಾಜಕೀಯ ಪಕ್ಷಗಳು ರಾಜಕೀಯವನ್ನು ಕಬ್ಜಾ ಮಾಡಿವೆ. ಈಗ ಇರುವುದು ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರೀಯ ಕಾಂಗ್ರೆಸ್ ಅಲ್ಲ, ಅದು ಇಂದಿರಾ ಕಾಂಗ್ರೆಸ್. ಭಾರತೀಯ ಜನತಾಪಕ್ಷ ಜಾತೀಯ ಸಂಸ್ಥೆ. ಹಾಗೆಯೇ ಅಕಾಲಿದಳ ಸಿಖ್ಖರ ಸಂಸ್ಥೆ. ಅದೇ ರೀತಿ ಮುಸ್ಲಿಮರದೂ ಒಂದೆರಡು ರಾಜಕೀಯ ಪಕ್ಷಗಳಿವೆ. ಜಾತ್ಯತೀತ ಭಾರತದಲ್ಲಿ ಜಾತೀಯ ಸಂಸ್ಥೆಗಳಿಗೆ ಮತೀಯ ಸಂಸ್ಥೆಗಳಿಗೆ ಸ್ಥಾನ ಇರಬಾರದು. ದೇವೇಗೌಡರ ಜಾತ್ಯತೀತ ಜನತಾದಳ ಒಕ್ಕಲಿಗ ಸಂಸ್ಥೆ. ಜಾತ್ಯತೀತ ಎಂದು ಘೋಷಿಸಿಕೊಂಡು ಜಾತಿ ಸಂಸ್ಥೆ ನಡೆಸುವುದು ನ್ಯಾಯಬಾಹಿರ. ಕಮ್ಯುನಿಸ್ಟ್ ಪಕ್ಷ ನೆಲಕಚ್ಚಿದೆ. ಕೇರಳದಲ್ಲಿ ಬಿಟ್ಟು ಉಳಿದ ಕಡೆ ಕಮ್ಯುನಿಸ್ಟ್ ಪಕ್ಷವು ಇತರೇ ಪಕ್ಷಗಳನ್ನು ನಮಗೆ ಒಂದೆರಡು ಸೀಟು ಬಿಟ್ಟು ಕೊಡಿ ಎಂದು ಕೇಳುವ ದುರವಸ್ಥೆಯಲ್ಲಿದೆ.

ಸರ್ವೋದಯ ಸಮಾಜದ ರಚನೆಯಾದಾಗ ಜಾತಿ, ಮತ ಸಂಸ್ಥೆಗಳಿಗೆ ಭಾರತದಲ್ಲಿ ಎಲ್ಲೂ ಮಾನ್ಯತೆ ಇರುವುದಿಲ್ಲ. ಎರಡನೆಯದಾಗಿ ಈಗಿರುವ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿ, ಜನರ ಮತ ಕೇಳುತ್ತವೆ. ಮತೀಯ ರಾಜಕೀಯ ಪಕ್ಷಗಳಿಗೆ ಮತ ನೀಡಬೇಕಾದ ದುಸ್ಥಿತಿ ಭಾರತದ ಪ್ರಜೆಗಳದು.

ಇದು ಪ್ರಜಾಪ್ರಭುತ್ವ ಎನಿಸಿಕೊಳ್ಳುವುದಾದರೂ ಹೇಗೆ? ಪ್ರಜೆಯಿಂದ ಪ್ರಜೆಗಾಗಿ, ಪ್ರಜೆಗೋಸ್ಕರ ರಚಿಸಿಕೊಂಡಿರುವ ರಾಜ್ಯಾಂಗ ನಮ್ಮದು. ಅಂದರೆ ಪ್ರಜಾರಾಜ್ಯದಲ್ಲಿ ಪ್ರಜೆಯ ಪರ ಸೇವೆ ಸಲ್ಲಿಸುವ ಪ್ರತಿನಿಧಿ ಇರಬೇಕೇ ಹೊರತು ರಾಜಕೀಯ ಪಕ್ಷದ ಪ್ರತಿನಿಧಿಯಲ್ಲ. ಈಗ ಪ್ರಜೆ ತನ್ನ ಮತವನ್ನು ರಾಜಕೀಯ ಪಕ್ಷ ನಿಲ್ಲಿಸುವ ಉಮೇದುದಾರನಿಗೆ ನೀಡುತ್ತಿದ್ದಾನೆಯೇ ಹೊರತು ಪ್ರಜೆಗಲ್ಲ. ಹಾಗಾಗಿ ಈಗ ಆಯ್ಕೆಯಾಗಿ ಬರುವವರು ಪ್ರಜಾಪ್ರತಿನಿಧಿಗಳಲ್ಲ. ಪಕ್ಷಗಳ ಪ್ರತಿನಿಧಿಗಳು.

ಆದ್ದರಿಂದ ಸರ್ವೋದಯ ಸಮಾಜದಲ್ಲಿ ರಾಜಕೀಯ ಪಕ್ಷಗಳನ್ನು ರದ್ದು ಮಾಡಲಾಗುತ್ತದೆ. ನಿಜವಾದ ಪ್ರಜಾಪ್ರತಿನಿಧಿಯನ್ನು ಪ್ರಜೆಯೇ ಆಯ್ಕೆ ಮಾಡಿಕೊಳ್ಳುತ್ತಾನೆ. ಗ್ರಾಮದಿಂದ ಹಿಡಿದು ದೆಹಲಿಯವರೆಗೆ ಆಯ್ಕೆಯಾಗುವ ಎಲ್ಲರೂ ನಿಜವಾದ ಪ್ರಜಾಪ್ರತಿನಿಧಿಗಳಾಗುತ್ತಾರೆ. ಪಂಚಾಯ್ತಿಯಿಂದ ಹಿಡಿದು ಪಾರ್ಲಿಮೆಂಟ್‍ವರೆಗೆ ಎಲ್ಲಾ ಹಂತದಲ್ಲೂ ಮತದಾರರ ಸಂಘಗಳನ್ನು ರಚಿಸಲಾಗುವುದು. ಈ ಮತದಾರರ ಸಂಘ, ತನ್ನ ಪ್ರತಿನಿಧಿ ಯಾರು ಎಂಬುದನ್ನು ನಿರ್ಧರಿಸುತ್ತದೆ. ದೆಹಲಿಯಲ್ಲಿ ಕೂತು, ಬೆಂಗಳೂರಿನಲ್ಲಿ ಕೂತು ಈ ಮತದಾರರ ಸಂಘಗಳು ತಮ್ಮ ನಿಜ ಪ್ರತಿನಿಧಿಗಳನ್ನು ಗೊತ್ತು ಮಾಡುವುದಿಲ್ಲ. ಮತದಾರರನ್ನು ಕೇಳಿಯೇ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮತದಾರರ ಸಂಘ ಒಂದಕ್ಕಿಂತ ಹೆಚ್ಚು ಜನರ ಹೆಸರುಗಳನ್ನು ಸೂಚಿಸುವುದಾದರೆ, ಅವರೆಲ್ಲ ಚುನಾವಣೆಯ ಕಣದಲ್ಲಿರುತ್ತಾರೆ.

ಚುನಾವಣೆಗೆ ಪ್ರತಿನಿಧಿಗಳನ್ನು ನಿಲ್ಲಿಸಬೇಕಾದರೆ ಅಭ್ಯರ್ಥಿಯ ಅರ್ಹತೆಗಳನ್ನೂ ಮಾನದಂಡವಾಗಿ ಬಳಸಲಾಗುತ್ತದೆ. ಅಭ್ಯರ್ಥಿ ವಿಚಾರವಂತನಾಗಿರಬೇಕು. ಜನಪರ ಸೇವೆಯನ್ನು ಮಾಡಿದವನಾಗಿರಬೇಕು. ಯಾವುದೇ ಸಿವಿಲ್ ಅಥವಾ ಕ್ರಿಮಿನಲ್ ಅಪರಾಧಗಳನ್ನು ಮಾಡಿರಬಾರದು. ಅವನ ಮೇಲೆ ಚಾರ್ಜ್ ಶೀಟ್ ಹಾಕಿರಬಾರದು. ಆದಾಯ ಮೂಲಕ್ಕಿಂತ ಹೆಚ್ಚಿನ ಆಸ್ತಿ, ಹಣ ಅವನಲ್ಲಿರಬಾರದು. ಪ್ರತಿ ಚುನಾವಣೆ ಸಂದರ್ಭದಲ್ಲಿಯೂ ಅಭ್ಯರ್ಥಿ ಗಳಿಸಿರುವ ಆದಾಯದ ವಿವರ ನೀಡಬೇಕು. ಅದು ಕಳೆದ ಚುನಾವಣೆಯಲ್ಲಿ ಸಲ್ಲಿಸಿರುವ ಆದಾಯಕ್ಕಿಂತ ಹೆಚ್ಚಾಗಿದ್ದರೇ, ಕಡ್ಡಾಯವಾಗಿ ಅದನ್ನು ಚುನಾವಣಾಧಿಕಾರಿ ಪರಿಶೀಲಿಸಬೇಕು. ಅಕ್ರಮವಾಗಿ ಸಂಪಾದಿಸಿದ ಆಸ್ತಿ ಇದ್ದರೆ ಅವರ ಚುನಾವಣಾ ಅರ್ಜಿಯನ್ನು ಅಂಗೀಕರಿಸಬಾರದು.

ಚುನಾವಣಾ ಸಂದರ್ಭದಲ್ಲಿ ಕಳ್ಳತನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ನಾಶ ಮಾಡಲಾಗುತ್ತದೆ. ಹಿಡಿದ ಹಣವನ್ನು ಟ್ರೆಷರಿಗೆ ಕಳಿಸಲಾಗುತ್ತದೆ. ಆದರೆ ಹಿಡಿದು ಉಳಿದ ವಸ್ತುಗಳ ಬಗೆಗೆ ತನಿಖೆಯೂ ಆಗುತ್ತಿಲ್ಲ. ಶಿಕ್ಷೆಯೂ ಆಗುತ್ತಿಲ್ಲ. ಕಟ್ಟುನಿಟ್ಟಾಗಿ ತನಿಖೆ ನಡೆಸಿ ಮಾಲು ಸಾಗಿಸುವವನಿಗೆ, ದಾಸ್ತಾನು ಮಾಡಿದವನಿಗೆ ಆ ಮಾಲು ಯಾವ ಅಭ್ಯರ್ಥಿಯ ಪರವಾಗಿ ಸಾಗಿಸಲಾಗುತ್ತವೆ, ಹಂಚಿಕೆಯಾಗುತ್ತಿದೆ, ದಾಸ್ತಾನು ಮಾಡಲಾಗಿದೆ ಎಂಬುದನ್ನು ತನಿಖೆಮಾಡಿ ತಪ್ಪಿತಸ್ಥರ ಮೇಲೆ ಖಟ್ಳೆ ಹೂಡಬೇಕು. ಈಗ ಈ ಪ್ರಕ್ರಿಯೆ ನಡೆಯುತ್ತಿಲ್ಲ. ಅದರಿಂದಾಗಿ ವರ್ಷದಿಂದ ವರ್ಷಕ್ಕೆ ಚುನಾವಣೆಗಳಲ್ಲಿ ಅಕ್ರಮಗಳು ಹೆಚ್ಚುತ್ತಲೇ ಹೋಗುತ್ತವೆ.
ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಪ್ರಧಾನಿಯವರ ಅಥವಾ ಸರ್ಕಾರದ ಅಧೀನ ನೌಕರರಲ್ಲ. ಅವರು ನೇರವಾಗಿ ರಾಷ್ಟ್ರಪತಿಗಳ ಅಧೀನದಲ್ಲಿ ಕೆಲಸ ನಿರ್ವಹಿಸುತ್ತಾರೆ. ಶೇಷನ್ ಅವಧಿಯಲ್ಲಿ ಅವರನ್ನು ಕಟ್ಟಿಹಾಕಲು ಇನ್ನಿಬ್ಬರು ಆಯುಕ್ತರನ್ನು ಸರ್ಕಾರ ನೇಮಿಸಿತು. ಈ ಪದ್ಧತಿ ಈಗಲೂ ಮುಂದುವರೆಯುತ್ತಿದೆ. ಈ ಇಬ್ಬರೂ ಸರ್ಕಾರದಿಂದ ನೇಮಿಸಲ್ಪಟ್ಟವರಾಗಿದ್ದು ಇವರಿಗೆ ಮುಖ್ಯ ಆಯುಕ್ತರಿಗಿರುವ ಸ್ವಾತಂತ್ರ್ಯ ಇಲ್ಲ. ಯಾವುದೋ ಅಕ್ರಮವಾದಾಗ ಮುಖ್ಯ ಆಯುಕ್ತರು ಕ್ರಮ ಕೈಗೊಳ್ಳಲು ನಿರ್ಧರಿಸಿದರೆ ಉಳಿದಿಬ್ಬರು ಅದಕ್ಕೆ ನಮ್ಮ ಸಮ್ಮತಿ ಇಲ್ಲ ಎನ್ನುತ್ತಾರೆ. ಓಟಿಗೆ ಹಾಕಿ ಅನ್ನುತ್ತಾರೆ. ಮತ ಹಾಕಿದಾಗ ಮುಖ್ಯ ಆಯುಕ್ತರ ತೀರ್ಮಾನ ಬಹುಮತದಿಂದ ನೆಲಕಚ್ಚುತ್ತದೆ.

ಸರ್ವೋದಯ ಸಮಾಜದಲ್ಲಿ ಈ ಮೂವರು ಸದಸ್ಯರೂ ಸ್ವಾತಂತ್ರರು. ಸರ್ಕಾರದ ಮರ್ಜಿ ಅನುಸರಿಸಿ ನಡೆಯುವವರಲ್ಲ ಎಂದು ಘೋಷಿಸಲಾಗುತ್ತದೆ.

ಚುನಾವಣೆ ಸಂಬಂಧದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಸರಳಗೊಳಿಸಲು, ಭ್ರಷ್ಟಾಚಾರವನ್ನು ತೊಡೆದುಹಾಕಲು ಚುನಾವಣೆಯ ವೆಚ್ಚವನ್ನು ಕಡಿತಗೊಳಿಸಲು ಅಥವಾ ಚುನಾವಣೆಯ ವೆಚ್ಚವನ್ನು ಸರ್ಕಾರವೇ ವಹಿಸಲು ತಿಳಿದುಕೊಳ್ಳಬೇಕಾದ ಕ್ರಮಗಳನ್ನು ತಜ್ಞರÀ ಸಮಿತಿ ತೀರ್ಮಾನಿಸುತ್ತದೆ. ಈ ತಜ್ಞರ ಸಮಿತಿಯ ಸದಸ್ಯರು ಸರ್ವೋದಯ ತತ್ವಗಳನ್ನು ಅರಿತವರಾಗಿರಬೇಕು. ಮತ, ಜಾತಿ, ಪಂಥದಿಂದ ಮುಕ್ತರಾದವರಾಗಿರಬೇಕು. ಸಮಾನತೆ, ಭ್ರಾತೃತ್ವದ ತತ್ವಗಳನ್ನು ಮೈಗೂಡಿಸಿಕೊಂಡವರಾಗಿರಬೇಕು. ನಮ್ಮ ರಾಜ್ಯಾಂಗದ ಆಶಯಗಳನ್ನು ಕಾರ್ಯರೂಪಕ್ಕೆ ಇಳಿಸುವ ಸೃಜನಶೀಲತೆಯ ವ್ಯಕ್ತಿಗಳಾಗಿರಬೇಕು. ಎಲ್ಲಾ ಇಸಂಗಳನ್ನು ತೊರೆದು ಆ ಇಸಂಗಳಲ್ಲೆಲ್ಲ ಇರುವ Humanism ಅನ್ನು ಮಾತ್ರ ಸರ್ವೋದಯ ಅಂಗೀಕರಿಸುತ್ತದೆ.

ಗಣರಾಜ್ಯದಲ್ಲಿ ಪ್ರಜೆಯದೇ ಪರಮಾಧಿಕಾರ ಎಂದು ರಾಜ್ಯಾಂಗ ಹೇಳುತ್ತದೆ. ಆದರೆ ಪ್ರಜೆ ಜಡವಾಗಿದ್ದಾನೆ, ಗಾಢ ನಿದ್ರೆಯಲ್ಲಿದ್ದಾನೆ. ‘ಇಣeಡಿಟಿಚಿಟ ‘Eternal vigilance is the price of liberty’ ಎಂಬುದನ್ನು ಅರಿಯುವಂತಾಗಬೇಕು. ಅದಕ್ಕಾಗಿ ಪ್ರಜೆಗಳೆಲ್ಲರನ್ನೂ ಗಾಢನಿದ್ರೆಯಿಂದ ಎಬ್ಬಿಸುವ ಅವರಿಗೆ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವ ಪಾಠ ಮಾಡಬೇಕು. ಚುನಾವಣಾ ಪದ್ಧತಿಯನ್ನು ಶುದ್ಧೀಕರಿಸುವ ಪಾಠವನ್ನು ಎಲ್ಲ ಮತದಾರರಿಗೂ ಮಾಡಬೇಕು. ಬೌದ್ಧಿಕವಾಗಿ, ನೈತಿಕವಾಗಿ ಅವರಿಗೆ ಶಿಕ್ಷಣ ಸಿಗುವ ವ್ಯವಸ್ಥೆ ಆಗಬೇಕು.

ಈ ಮೂಲಭೂತ ಬದಲಾವಣೆಗಳನ್ನು ಸಮಾಜದಲ್ಲಿ ತರುವ ಮೂಲಕ ಹೊಸ ಅಹಿಂಸಕ ಸಮಾಜವನ್ನು ಕಟ್ಟುವ ಸಂಕಲ್ಪ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...