Homeಸಿನಿಮಾಸಿನಿ ಸುದ್ದಿಚೆಗುವೆರಾ ಛಾಯೆಯಲ್ಲಿ ಚೇತನ್!

ಚೆಗುವೆರಾ ಛಾಯೆಯಲ್ಲಿ ಚೇತನ್!

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

`ಆ ದಿನಗಳು’ ಖ್ಯಾತಿಯ ನಟ ಚೇತನ್ ಈ ದಿನಗಳಲ್ಲೂ ಸದ್ದು ಮಾಡುತ್ತಿರೋದು ಕರ್ನಾಟಕದ ಆ್ಯಕ್ಟಿವಿಸ್ಟ್ ವಲಯಕ್ಕೆ ಹೊಸ ವಿಚಾರವೇನೂ ಅಲ್ಲ. ಸಿಲ್ವರ್ ಸ್ಕ್ರೀನ್ ಮೇಲೆ ಉದ್ದುದ್ದ ಡೈಲಾಗ್ ಉದುರಿಸಿ, ಮೇಕಪ್ಪು ತೆಗೆಯುತ್ತಿದ್ದಂತೆಯೇ ತನಗೂ ಈ ಸಮಾಜಕ್ಕೂ ಸಂಬಂಧವೇ ಇಲ್ಲ; ಹಣ-ಖ್ಯಾತಿ ಬಂದರೆ ಸಾಕು ಅನ್ನೋ ನಟರುಗಳ ಪರಂಪರೆಯ ನಡುವೆ ಚೇತನ್ ಪ್ರಾಮಿಸಿಂಗ್ ಹೀರೊ ಅನ್ನಿಸೋದು ಅವರ ಜನಪರ ಹೋರಾಟಗಳು ಮತ್ತು ನಿರ್ಭೀತ ನಡವಳಿಕೆಯ ಮೂಲಕ. ಇದೀಗ ತಮ್ಮ ವ್ಯಕ್ತಿತ್ವಕ್ಕೆ ಹೆಚ್ಚು ಹೋಲಿಕೆಯಾಗುವಂತಹ ಪಾತ್ರದಲ್ಲೇ ಅವರು ನಟಿಸುತ್ತಿದ್ದಾರೆ ಅನ್ನೋದು ಲೇಟೆಸ್ಟ್ ಸುದ್ದಿ. ಅದು ಕನಕಪುರ ಶ್ರೀನಿವಾಸ್ ನಿರ್ಮಿಸುತ್ತಿರುವ ರಣಂ ಸಿನಿಮಾ. ಅದರಲ್ಲಿ ಚೇತನ್ ಮಾಡುತ್ತಿರುವ ಪಾತ್ರ, ಕ್ರಾಂತಿಕಾರಿ ಚೆಗುವೇರಾರನ್ನು ಹೋಲುತ್ತದಂತೆ. ಕ್ಯೂಬಾ ಅನ್ನೋ ಪುಟ್ಟ ದೇಶದ ಕ್ರಾಂತಿಗಾಥೆ ಗೊತ್ತಿರುವ ಎಂತವರಿಗೇ ಆದರೂ ಚೆಗುವೆರಾ ಹೆಸರು ಚಿರಪರಿಚಿತ. ಫಿಡೆಲ್ ಕ್ಯಾಸ್ಟ್ರೋ, ರೌಲ್‍ರಂತಹ ಲೀಡರುಗಳ ಜೊತೆಗೂಡಿ ತಮ್ಮ ಕ್ರಾಂತಿಕಾರಿ ಹೋರಾಟದ ಮೂಲಕ ಅಮೆರಿಕಾದಂತ ಅಮೆರಿಕವನ್ನೇ ಬೆಚ್ಚಿಬೀಳಿಸಿದ್ದ ಚೆಗುವೆರಾ ಇವತ್ತಿಗೂ ಕ್ರಾಂತಿಯ ಇತಿಹಾಸದಲ್ಲಿ ನವತಾರೆಯಂತೆ ಮಿನುಗುತ್ತಿದ್ದಾರೆ. ಸ್ವತಃ ನಟ ಚೇತನ್, ಚೆಗುವೇರಾ ಅಭಿಮಾನಿಯಾಗಿರೋದ್ರಿಂದ ತುಂಬಾ ಇಷ್ಟಪಟ್ಟು ಈ ಸಿನಿಮಾವನ್ನು ಒಪ್ಪಿಕೊಂಡಿರೋದಾಗಿ ಚೇತನ್ ಹೇಳಿ ಕೊಂಡಿದ್ದಾರೆ. ರೈತರ ಪರವಾಗಿ ನಿಂತು, ಅನ್ಯಾಯ-ಅಕ್ರಮಗಳ ವಿರುದ್ಧ ಹೋರಾಡುವ ಕಥಾಹಂದರವಿರುವ ಈ ಸಿನಿಮಾಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ವಿ.ಸಮುದ್ರ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಏಕಕಾಲದಲ್ಲಿ ಕನ್ನಡ ಮತ್ತು ತೆಲುಗು ಎರಡು ಭಾಷೆಗಳಲ್ಲಿ ಇದು ತಯಾರಾಗಲಿದೆ. ಕನ್ನಡದಲ್ಲಿ ಚೇತನ್ ಮಾಡುತ್ತಿರುವ ಪಾತ್ರಕ್ಕೆ ತೆಲುಗಿನಲ್ಲಿ ಇನ್ನೂ ಯಾವ ನಟ ಅನ್ನೋದು ಫೈನಲ್ ಆಗಿಲ್ಲ. ಅಂದಹಾಗೆ, ಈ ಸಿನಿಮಾದ ಕನ್ನಡ ವರ್ಷನ್‍ನಲ್ಲಿ ದರ್ಶನ್ ಮತ್ತು ಉಪೇಂದ್ರ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ. ಅದಿನ್ನೂ ನಿಕ್ಕಿಯಾಗಿಲ್ಲ. ರಾಯಲಸೀಮೆಯ ಅಬ್ಬರ, ಆರ್ಭಟಗಳಿಂದ ಹೊರಬಂದು ತೆಲುಗಿನ ನಿರ್ದೇಶಕ ಸಮುದ್ರ ಈ ಸಿನಿಮಾ ಮಾಡಿದರೆ ನಿಜಕ್ಕೂ ಒಂದು ಅದ್ಭುತ ಚಿತ್ರ ಇದಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...