Homeಸಿನಿಮಾಸಿನಿ ಸುದ್ದಿಚೆಗುವೆರಾ ಛಾಯೆಯಲ್ಲಿ ಚೇತನ್!

ಚೆಗುವೆರಾ ಛಾಯೆಯಲ್ಲಿ ಚೇತನ್!

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

`ಆ ದಿನಗಳು’ ಖ್ಯಾತಿಯ ನಟ ಚೇತನ್ ಈ ದಿನಗಳಲ್ಲೂ ಸದ್ದು ಮಾಡುತ್ತಿರೋದು ಕರ್ನಾಟಕದ ಆ್ಯಕ್ಟಿವಿಸ್ಟ್ ವಲಯಕ್ಕೆ ಹೊಸ ವಿಚಾರವೇನೂ ಅಲ್ಲ. ಸಿಲ್ವರ್ ಸ್ಕ್ರೀನ್ ಮೇಲೆ ಉದ್ದುದ್ದ ಡೈಲಾಗ್ ಉದುರಿಸಿ, ಮೇಕಪ್ಪು ತೆಗೆಯುತ್ತಿದ್ದಂತೆಯೇ ತನಗೂ ಈ ಸಮಾಜಕ್ಕೂ ಸಂಬಂಧವೇ ಇಲ್ಲ; ಹಣ-ಖ್ಯಾತಿ ಬಂದರೆ ಸಾಕು ಅನ್ನೋ ನಟರುಗಳ ಪರಂಪರೆಯ ನಡುವೆ ಚೇತನ್ ಪ್ರಾಮಿಸಿಂಗ್ ಹೀರೊ ಅನ್ನಿಸೋದು ಅವರ ಜನಪರ ಹೋರಾಟಗಳು ಮತ್ತು ನಿರ್ಭೀತ ನಡವಳಿಕೆಯ ಮೂಲಕ. ಇದೀಗ ತಮ್ಮ ವ್ಯಕ್ತಿತ್ವಕ್ಕೆ ಹೆಚ್ಚು ಹೋಲಿಕೆಯಾಗುವಂತಹ ಪಾತ್ರದಲ್ಲೇ ಅವರು ನಟಿಸುತ್ತಿದ್ದಾರೆ ಅನ್ನೋದು ಲೇಟೆಸ್ಟ್ ಸುದ್ದಿ. ಅದು ಕನಕಪುರ ಶ್ರೀನಿವಾಸ್ ನಿರ್ಮಿಸುತ್ತಿರುವ ರಣಂ ಸಿನಿಮಾ. ಅದರಲ್ಲಿ ಚೇತನ್ ಮಾಡುತ್ತಿರುವ ಪಾತ್ರ, ಕ್ರಾಂತಿಕಾರಿ ಚೆಗುವೇರಾರನ್ನು ಹೋಲುತ್ತದಂತೆ. ಕ್ಯೂಬಾ ಅನ್ನೋ ಪುಟ್ಟ ದೇಶದ ಕ್ರಾಂತಿಗಾಥೆ ಗೊತ್ತಿರುವ ಎಂತವರಿಗೇ ಆದರೂ ಚೆಗುವೆರಾ ಹೆಸರು ಚಿರಪರಿಚಿತ. ಫಿಡೆಲ್ ಕ್ಯಾಸ್ಟ್ರೋ, ರೌಲ್‍ರಂತಹ ಲೀಡರುಗಳ ಜೊತೆಗೂಡಿ ತಮ್ಮ ಕ್ರಾಂತಿಕಾರಿ ಹೋರಾಟದ ಮೂಲಕ ಅಮೆರಿಕಾದಂತ ಅಮೆರಿಕವನ್ನೇ ಬೆಚ್ಚಿಬೀಳಿಸಿದ್ದ ಚೆಗುವೆರಾ ಇವತ್ತಿಗೂ ಕ್ರಾಂತಿಯ ಇತಿಹಾಸದಲ್ಲಿ ನವತಾರೆಯಂತೆ ಮಿನುಗುತ್ತಿದ್ದಾರೆ. ಸ್ವತಃ ನಟ ಚೇತನ್, ಚೆಗುವೇರಾ ಅಭಿಮಾನಿಯಾಗಿರೋದ್ರಿಂದ ತುಂಬಾ ಇಷ್ಟಪಟ್ಟು ಈ ಸಿನಿಮಾವನ್ನು ಒಪ್ಪಿಕೊಂಡಿರೋದಾಗಿ ಚೇತನ್ ಹೇಳಿ ಕೊಂಡಿದ್ದಾರೆ. ರೈತರ ಪರವಾಗಿ ನಿಂತು, ಅನ್ಯಾಯ-ಅಕ್ರಮಗಳ ವಿರುದ್ಧ ಹೋರಾಡುವ ಕಥಾಹಂದರವಿರುವ ಈ ಸಿನಿಮಾಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ವಿ.ಸಮುದ್ರ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಏಕಕಾಲದಲ್ಲಿ ಕನ್ನಡ ಮತ್ತು ತೆಲುಗು ಎರಡು ಭಾಷೆಗಳಲ್ಲಿ ಇದು ತಯಾರಾಗಲಿದೆ. ಕನ್ನಡದಲ್ಲಿ ಚೇತನ್ ಮಾಡುತ್ತಿರುವ ಪಾತ್ರಕ್ಕೆ ತೆಲುಗಿನಲ್ಲಿ ಇನ್ನೂ ಯಾವ ನಟ ಅನ್ನೋದು ಫೈನಲ್ ಆಗಿಲ್ಲ. ಅಂದಹಾಗೆ, ಈ ಸಿನಿಮಾದ ಕನ್ನಡ ವರ್ಷನ್‍ನಲ್ಲಿ ದರ್ಶನ್ ಮತ್ತು ಉಪೇಂದ್ರ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ. ಅದಿನ್ನೂ ನಿಕ್ಕಿಯಾಗಿಲ್ಲ. ರಾಯಲಸೀಮೆಯ ಅಬ್ಬರ, ಆರ್ಭಟಗಳಿಂದ ಹೊರಬಂದು ತೆಲುಗಿನ ನಿರ್ದೇಶಕ ಸಮುದ್ರ ಈ ಸಿನಿಮಾ ಮಾಡಿದರೆ ನಿಜಕ್ಕೂ ಒಂದು ಅದ್ಭುತ ಚಿತ್ರ ಇದಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...