Homeಮುಖಪುಟಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

ಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

- Advertisement -
- Advertisement -

ಜೀವನ ಕಲೆಗಳು: ಅಂಕಣ-16

ಪರಸ್ಪರ ವೈಯ್ಯುಕ್ತಿಕ ವ್ಯಾಜ್ಯಗಳ ಪರಿಹಾರ

ಜನರು ಒಟ್ಟಾಗಿ ಕೆಲಸ ಮಾಡುತ್ತಿರುವಾಗ ಪರಸ್ಪರ ವೈಯ್ಯುಕ್ತಿಕ ಮತಭೇದ ಮತ್ತು ವ್ಯಾಜ್ಯಗಳು ಸ್ವಾಭಾವಿಕ, ಹಾಗೂ ಸರ್ವೇ ಸಾಮಾನ್ಯ. ಎಲ್ಲಾ ಸಂಬಂಧಗಳು ಈ ದಾರಿಯಿಂದಲೇ ಸಾಗಿ ಪರಿಪಕ್ವವಾಗಬೇಕು. ವ್ಯಾಜ್ಯಗಳ ಸಮರ್ಪಕ ನಿರ್ವಹಣೆಯಿಂದ ಆತಂಕಗಳು ಕಡಿಮೆಯಾಗಿ, ಬೆಳವಣಿಗೆಗೂ ಸಹಕಾರಿಯಾಗುತ್ತದೆ.

ವ್ಯಾಜ್ಯ ಎಂದ ಕೂಡಲೇ ಇದನ್ನು ಭೀಕರ ಕಾಳಗ, ಹೊಡೆದಾಟ, ಬಡಿದಾಟ ಎಂದೇ ಭಾವಿಸಬೇಕಿಲ್ಲ. ಇದು ಸಣ್ಣ ಮತಬೇಧದಿಂದ ಪ್ರಾರಂಭವಾಗಿ ಕೊನೆಗೆ ಹೊಡೆದಾಟ-ಬಡಿದಾಟಕ್ಕೂ ತಲುಪಬಹುದು. ಆದ್ದರಿಂದ ಇದನ್ನು ಸಣ್ಣದಾಗಿರುವಾಗಲೇ ಪರಿಹಾರ ಮಾಡುವುದು ಜಾಣತನದ ಕಲೆ. ತಂಡದಲ್ಲಿ ಜನರು ಕೆಲಸ ಮಾಡುತ್ತಿರುವಾಗ ಒಂದು ವ್ಯಕ್ತಿ ಅಥವಾ ಗುಂಪು ಒಟ್ಟಾಗಿ ಸೇರಿ, ಓರ್ವ ವ್ಯಕ್ತಿ ಅಥವಾ ಇನ್ನೊಂದು ಗುಂಪನ್ನು ಅದರ ಗುರಿ ತಲುಪದಂತೆ ಮಾಡಿದಾಗ ಉಂಟಾಗುವ ಸನ್ನಿವೇಶವನ್ನು ಸಂಸ್ಥೆಗಳ ಒಳವ್ಯಾಜ್ಯ ಎನ್ನಬಹುದು. ಈ ರೀತಿಯ ವ್ಯಾಜ್ಯಗಳಲ್ಲಿ ಮುಖ್ಯವಾಗಿ ಕಾಣುವುದು

· ವೈಯುಕ್ತಿಕ ಅಥವಾ ಸಂಬಂಧದ ತಿಕ್ಕಾಟ: ಇದರಲ್ಲಿ ಸ್ವ-ಪ್ರತಿಷ್ಠೆ, ನಿಷ್ಠೆ, ಅವಿಶ್ವಾಸ, ಅಗೌರವ ಮುಂತಾದ ಸಮಸ್ಯೆ ಇರುತ್ತದೆ.

· ವ್ಯವಸ್ಥೆಯ ತಿಕ್ಕಾಟ: ಇದರಲ್ಲಿ ಅವ್ಯವಸ್ಥೆ ಅಂದರೆ ಏಕ-ಕಾಲಕ್ಕೆ ಇಬ್ಬರು ಒಂದೇ ವಸ್ತುವಿನ ಉಪಯೋಗಕ್ಕೆ ಮುಂದಾಗುವುದು ಅಂದರೆ ವ್ಯವಸ್ಥೆಯಲ್ಲಿನ ಲೋಪ-ದೋಷಗಳಿಂದಾದ ವ್ಯಾಜ್ಯ.

· ಆಸಕ್ತಿಗಳ ಗುದ್ದಾಟ: ಇಬ್ಬರ ಅಥವಾ ಎರಡು ಗುಂಪಿನ ಆಸಕ್ತಿ, ಆದ್ಯತೆ ಇವುಗಳಲ್ಲಿ ಒಂದು ಪಕ್ಷಕ್ಕೆ ಲಾಭವಾಗುವ ಸಾಧ್ಯತೆಯಿಂದಾಗುವ ವ್ಯಾಜ್ಯ.

ಇಲ್ಲಿ “ಅಕ್ಕಿಯ ಮೇಲೆ ಆಸೆ, ನೆಂಟರ ಮೇಲೆ ಇಷ್ಟ” ಎಂಬ ಗಾದೆಯಂತೆ ಬರುವ ಐದು ಸನ್ನಿವೇಶಗಳು:

ಗೆಲುವು-ಸೋಲು: (Win-Lose) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ನಮ್ಮ ಪ್ರತಿಪಾದನೆಯೂ ಜಾಸ್ತಿಯಾದಾಗ ಮತ್ತು ಸಂಬಂಧಗಳಿಗೆ ಮಹತ್ವ ಕಡಿಮೆಯಾಗಿ ಸಹಕಾರವೂ ಇಲ್ಲದಾದಾಗ ಉಂಟಾಗುವ ಸನ್ನಿವೇಶವೇ ಪ್ರತಿಸ್ಪರ್ಧೆ. ಇದರಲ್ಲಿ ಹೇಗಾದರೂ ಎದುರಾಳಿಯನ್ನು ಸೋಲಿಸಬೇಕು ಮತ್ತು ನಾವು ಜಯಶಾಲಿಯಾಗಬೇಕು ಎನ್ನುವ ಹಂಬಲ. ಇದರಲ್ಲಿ ಒಂದು ಪಕ್ಷಕ್ಕೆ ಮಾತ್ರ ಜಯಕ್ಕೆ ಆಸ್ಪದವಿರುತ್ತದೆ.

ಸೋಲು-ಸೋಲು ಅಥವಾ ಹಿಂದೇಟು: (Lose – Lose) ಪದಾರ್ಥದ ಮೇಲೆ ನಮಗೆ ಆಸಕ್ತಿ ಇಲ್ಲವಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಮತ್ತು ಸಂಬಂಧಗಳಿಗೆ ಹೆಚ್ಚಿನ ಮಹತ್ವ ಇಲ್ಲದೆ, ಸಹಕಾರದ ಕೊರತೆಯೂ ಇದ್ದಾಗ, ಸ್ಪರ್ಧೆಯಿಂದ ಹಿಂದೇಟು ಹಾಕಿ, ಉಮೇದುವಾರಿಕೆ ಹಿಂಪಡೆಯುವ ಸನ್ನಿವೇಶ. ಇದರಲ್ಲಿ ಇಬ್ಬರಿಗೂ ಸೋಲುವ ಸಾಧ್ಯತೆ/ಭೀತಿ, ಹಾಗಾಗಿ ಹಿಂದೇಟು. ಯಾರಿಗೂ ಜಯವಿಲ್ಲ. ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ನಡೆಯಲಿಲ್ಲ ಎಂಬ ವಿಷಾದ.

ರಾಜಿ: (Compromise) ಪದಾರ್ಥದ ಮೇಲೆ ನಮಗೆ ಆಸಕ್ತಿ ಮಧ್ಯಮವಾಗಿದ್ದು, ಪ್ರತಿಪಾದನೆಯೂ ಮಧ್ಯಮವಾದಾಗ ಹಾಗೂ ಸಂಬಂಧಗಳಿಗೆ ಮಹತ್ವ ಮಧ್ಯಮವಾಗಿದ್ದು, ಸಹಕಾರದ ಅಪೇಕ್ಷೆಯೂ ಮಧ್ಯಮವಾಗಿದ್ದಾಗ ಉಂಟಾಗುವ ಸನ್ನಿವೇಶವೇ ಪರಸ್ಪರ ರಾಜಿ/ಅಂಗೀಕಾರ. ಇಲ್ಲಿ ಮಾತು-ಕತೆಗೆ ಅವಕಾಶ. ಯಾರಿಗೂ ಸೋಲಿಲ್ಲ, ಯಾರಿಗೂ ಗೆಲುವು ಇಲ್ಲ. ಒಂದು ರೀತಿಯ ಶೂನ್ಯದ ಡ್ರಾ.

ಸೋತು ಗೆಲ್ಲುವುದು: (Accommodate) ಪದಾರ್ಥದ ಮೇಲೆ ನಮ್ಮ ಆಸಕ್ತಿ ಕಡಿಮೆಯಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಹಾಗೂ ಸಂಬಂಧಗಳಿಗೆ ಅಧಿಕ ಬೆಲೆ ಇದ್ದು, ಸಹಕಾರದ ಸಾಧ್ಯತೆ ಹೆಚ್ಚಾದಾಗ ನಾವು ಸ್ಪರ್ಧೆಗೆ ಇಳಿಯದೆ, ಎದುರಾಳಿಗೆ ಆಟ ಬಿಟ್ಟುಕೊಡುವ ಮನಃಸ್ಥಿತಿಗೆ ಬರುತ್ತೇವೆ. ಇಲ್ಲಿಯೂ ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ಬಿಟ್ಟುಕೊಟ್ಟವರು ತಮ್ಮ ಅವಕಾಶಕ್ಕೆ ಕಾಯುತ್ತಿರುತ್ತಾರೆ.

ಇಬ್ಬರಿಗೂ ಜಯ: (Win –Win) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ಪ್ರತಿಪಾದನೆಯೂ ಹೆಚ್ಚಾಗಿದ್ದರೂ ಸಹ, ಸಂಬಂಧಗಳಿಗೂ ಬೆಲೆ ಅಧಿಕವಾಗಿದ್ದು ಸಹಕಾರದ ಸಾಧ್ಯತೆಯೂ ಹೆಚ್ಚಾಗಿದ್ದಾಗ ಇಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತೇವೆ. ಇದು ಅತ್ಯಂತ ಅಪೇಕ್ಷಣೀಯ ಪರಿಹಾರ. ಇದಕ್ಕೆ ಯಾವಾಗಲೂ ಪ್ರಯತ್ನಿಸಬೇಕು.

ವ್ಯಾಜ್ಯಗಳ ಪರಿಹಾರ ಹೇಗೆ
ವ್ಯಾಜ್ಯವನ್ನು ಪರಿಹಾರ ಮಾಡಲು ಬೇಕಾಗುವ ಕಲೆಗಳು:

·         ಸಂವಹನ ಕಲೆ

·         ಭಾವನೆಗಳ ಅಥವಾ ಆತಂಕ (ಸ್ಟ್ರೆಸ್ಸ್) ನಿರ್ವಹಣೆ ಮತ್ತು ಅನುಭೂತಿ

·         ಸಮಸ್ಯೆಗಳ ಪರಿಹಾರ / ನಿರ್ಧಾರ ತೆಗೆದುಕೊಳ್ಳುವ ಕಲೆ

·         ತಂಡದಲ್ಲಿ ಕೆಲಸ ಮಾಡುವ ಕಲೆ.

ಪರಿಹಾರದ ಹೆಜ್ಜೆಗಳು:

·         ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು.

·         ಎದುರಾಳಿಯ ಜೊತೆ ಮಾತು-ಕತೆ ನಡೆಸುವುದು.

·         ಮಧ್ಯಸ್ತಿಕೆಯೂ ಸೇರಿದಂತೆ, ಪರಿಹಾರಕ್ಕೆ ಮಾರ್ಗಗಳನ್ನು ಹುಡುಕುವುದು.

·         ಸರಿಯಾದ ಪರ್ಯಾಯದ ಆಯ್ಕೆ.

·         ಭಾವನೆಗಳನ್ನು ನಿರ್ವಹಿಸುವುದು.

ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ವ್ಯಾಜ್ಯಕ್ಕೆ ಮೂಲ ಕಾರಣ ಏನು ಎಂದು ತಿಳಿದು ಅದಕ್ಕೆ ಪರಿಹಾರ ಹುಡುಕಬೇಕು. ಇದಕ್ಕಾಗಿ ನಿಮ್ಮ ಮತ್ತು ಎದುರಾಳಿಯ ಇಬ್ಬರ ವಾದವೂ ಏನು ಎಂಬುದನ್ನು ಸ್ಪಷ್ಟವಾಗಿ ಇಡಬೇಕು. ಇಬ್ಬರ ಆಸಕ್ತಿ-ಆಸೆ-ಅಕಾಂಕ್ಷೆ-ಭೀತಿ ಏನು ಎಂಬುದನ್ನು ಅರಿಯಬೇಕು. ಇದನ್ನು ಅರಿಯಲು ಕೆಳಕಂಡ ಪ್ರಶ್ನೆಗಳು ಸಹಕಾರಿಯಾಗಬಹುದು:

ನಮ್ಮ ಆಸಕ್ತಿ ಏನು? ನಮ್ಮ ಮುಖ್ಯ ಅನುಮಾನ ಏನು? ಬೇಡಿಕೆ ಏನು? ಅವಶ್ಯಕತೆ ಏನು? ಆಕಾಂಕ್ಷೆ  ಮತ್ತು ಭೀತಿ ಏನು? ಇದೇ ರೀತಿ ಎದುರಾಳಿಯ ಮಾಹಿತಿಯನ್ನೂ ಪಡೆದು ಅದನ್ನೂ ಕೂಲಂಕಷವಾಗಿ ಅವಲೋಕಿಸಬೇಕು.

ಯಾವ ರೀತಿಯ ಸಂಧಾನಕ್ಕೆ ಬರಬಹುದು?

ಮೂರನೆಯ (ನಿಶ್ಪಕ್ಷ) ಪಕ್ಷವನ್ನು ಮಧ್ಯಸ್ಥಿಕೆ ವಹಿಸಲು ನೇಮಿಸಿದಲ್ಲಿ ನಮಗೆ ಸಂಧಾನಕ್ಕೆ ಬರಲು ಸಾಧ್ಯವೇ? ಇಬ್ಬರಿಗೂ ನ್ಯಾಯ ಸಿಕ್ಕಂತೆ ಆಗುತ್ತದೋ ಅಥವಾ ಇಬ್ಬರ ಜಗಳ ಮೂರನೆಯವರ ಲಾಭ ಆಗುತ್ತದೋ? ಯಾರು ಈ ಮೂರನೆಯ ಪಕ್ಷ? ಅವರು ಸಮಾಜದಲ್ಲಿ ಪ್ರತಿಷ್ಠಿತರೇ? ಸಂಧಾನ ಕಾನೂನಿನ ಚೌಕಟ್ಟಿನಲ್ಲಿರುತ್ತದೆಯೇ? ಅದನ್ನು ಯಾರು ಜಾರಿ ಮಾಡುವುದು ಮತ್ತು ನೋಡಿಕೊಳ್ಳುವುದು? ಖರ್ಚು ವೆಚ್ಚ ಯಾರು ಭರಿಸುವುದು? ಇಂತಹ ಪ್ರಶ್ನೆಗಳಿಗೂ ಸ್ಪಷ್ಟ ಉತ್ತರ ಸಿಗಬೇಕು.

ಕೆಲವೊಮ್ಮೆ ಇಬ್ಬರೂ ತಮ್ಮ ಪ್ರತಿಷ್ಠೆಯನ್ನೇ ದೊಡ್ಡದು ಮಾಡಿಕೊಂಡು, ನಿಜವಾಗಿ ಆಗುತ್ತಿರುವ ತಮ್ಮ ಆಸಕ್ತಿಯ ಹಾನಿಯನ್ನು ನಿರ್ಲಕ್ಷಿಸಿ, ತಮ್ಮ ಮುಖವನ್ನು ಉಳಿಸಿಕೊಳ್ಳುವ (ಸೇವಿಂಗ್ ದಿ ಫೇಸ್) ನಿಟ್ಟಿನಲ್ಲಿ,ನನಗೆ ಕನಿಷ್ಠ ಇಷ್ಟಾದರೂ ಸಿಗಬೇಕು ಎಂದು ಚೌಕಾಸಿ ಮಾಡಲು ಪ್ರಯತ್ನಿಸುತ್ತಾರೆ ಮತ್ತು ತಮ್ಮ ನಿಜವಾದ ಆಸಕ್ತಿ ಹಾನಿಯನ್ನು ಸಹಿಸಿಕೊಳ್ಳುತ್ತಾರೆ. ಆದ್ದರಿಂದ ಇಬ್ಬರ ಆಸಕ್ತಿ ಏನು ಎಂಬುದನ್ನು ತಿಳಿಯುವುದು ಬಹಳ ಮುಖ್ಯ.

ವ್ಯಾಜ್ಯ ಪರಿಹಾರ ಆಗುವ ತನಕ ಎರಡೂ ಪಕ್ಷಗಳು ತಮ್ಮ ಭಾವನಾತಿರೇಕಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗುತ್ತದೆ. ನೆನಪಿಡಿ, ಮಾತು ಬಲ್ಲವನಿಗೆ ಜಗಳವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...