Homeಮುಖಪುಟಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

ಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

- Advertisement -
- Advertisement -

ಜೀವನ ಕಲೆಗಳು: ಅಂಕಣ-16

ಪರಸ್ಪರ ವೈಯ್ಯುಕ್ತಿಕ ವ್ಯಾಜ್ಯಗಳ ಪರಿಹಾರ

ಜನರು ಒಟ್ಟಾಗಿ ಕೆಲಸ ಮಾಡುತ್ತಿರುವಾಗ ಪರಸ್ಪರ ವೈಯ್ಯುಕ್ತಿಕ ಮತಭೇದ ಮತ್ತು ವ್ಯಾಜ್ಯಗಳು ಸ್ವಾಭಾವಿಕ, ಹಾಗೂ ಸರ್ವೇ ಸಾಮಾನ್ಯ. ಎಲ್ಲಾ ಸಂಬಂಧಗಳು ಈ ದಾರಿಯಿಂದಲೇ ಸಾಗಿ ಪರಿಪಕ್ವವಾಗಬೇಕು. ವ್ಯಾಜ್ಯಗಳ ಸಮರ್ಪಕ ನಿರ್ವಹಣೆಯಿಂದ ಆತಂಕಗಳು ಕಡಿಮೆಯಾಗಿ, ಬೆಳವಣಿಗೆಗೂ ಸಹಕಾರಿಯಾಗುತ್ತದೆ.

ವ್ಯಾಜ್ಯ ಎಂದ ಕೂಡಲೇ ಇದನ್ನು ಭೀಕರ ಕಾಳಗ, ಹೊಡೆದಾಟ, ಬಡಿದಾಟ ಎಂದೇ ಭಾವಿಸಬೇಕಿಲ್ಲ. ಇದು ಸಣ್ಣ ಮತಬೇಧದಿಂದ ಪ್ರಾರಂಭವಾಗಿ ಕೊನೆಗೆ ಹೊಡೆದಾಟ-ಬಡಿದಾಟಕ್ಕೂ ತಲುಪಬಹುದು. ಆದ್ದರಿಂದ ಇದನ್ನು ಸಣ್ಣದಾಗಿರುವಾಗಲೇ ಪರಿಹಾರ ಮಾಡುವುದು ಜಾಣತನದ ಕಲೆ. ತಂಡದಲ್ಲಿ ಜನರು ಕೆಲಸ ಮಾಡುತ್ತಿರುವಾಗ ಒಂದು ವ್ಯಕ್ತಿ ಅಥವಾ ಗುಂಪು ಒಟ್ಟಾಗಿ ಸೇರಿ, ಓರ್ವ ವ್ಯಕ್ತಿ ಅಥವಾ ಇನ್ನೊಂದು ಗುಂಪನ್ನು ಅದರ ಗುರಿ ತಲುಪದಂತೆ ಮಾಡಿದಾಗ ಉಂಟಾಗುವ ಸನ್ನಿವೇಶವನ್ನು ಸಂಸ್ಥೆಗಳ ಒಳವ್ಯಾಜ್ಯ ಎನ್ನಬಹುದು. ಈ ರೀತಿಯ ವ್ಯಾಜ್ಯಗಳಲ್ಲಿ ಮುಖ್ಯವಾಗಿ ಕಾಣುವುದು

· ವೈಯುಕ್ತಿಕ ಅಥವಾ ಸಂಬಂಧದ ತಿಕ್ಕಾಟ: ಇದರಲ್ಲಿ ಸ್ವ-ಪ್ರತಿಷ್ಠೆ, ನಿಷ್ಠೆ, ಅವಿಶ್ವಾಸ, ಅಗೌರವ ಮುಂತಾದ ಸಮಸ್ಯೆ ಇರುತ್ತದೆ.

· ವ್ಯವಸ್ಥೆಯ ತಿಕ್ಕಾಟ: ಇದರಲ್ಲಿ ಅವ್ಯವಸ್ಥೆ ಅಂದರೆ ಏಕ-ಕಾಲಕ್ಕೆ ಇಬ್ಬರು ಒಂದೇ ವಸ್ತುವಿನ ಉಪಯೋಗಕ್ಕೆ ಮುಂದಾಗುವುದು ಅಂದರೆ ವ್ಯವಸ್ಥೆಯಲ್ಲಿನ ಲೋಪ-ದೋಷಗಳಿಂದಾದ ವ್ಯಾಜ್ಯ.

· ಆಸಕ್ತಿಗಳ ಗುದ್ದಾಟ: ಇಬ್ಬರ ಅಥವಾ ಎರಡು ಗುಂಪಿನ ಆಸಕ್ತಿ, ಆದ್ಯತೆ ಇವುಗಳಲ್ಲಿ ಒಂದು ಪಕ್ಷಕ್ಕೆ ಲಾಭವಾಗುವ ಸಾಧ್ಯತೆಯಿಂದಾಗುವ ವ್ಯಾಜ್ಯ.

ಇಲ್ಲಿ “ಅಕ್ಕಿಯ ಮೇಲೆ ಆಸೆ, ನೆಂಟರ ಮೇಲೆ ಇಷ್ಟ” ಎಂಬ ಗಾದೆಯಂತೆ ಬರುವ ಐದು ಸನ್ನಿವೇಶಗಳು:

ಗೆಲುವು-ಸೋಲು: (Win-Lose) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ನಮ್ಮ ಪ್ರತಿಪಾದನೆಯೂ ಜಾಸ್ತಿಯಾದಾಗ ಮತ್ತು ಸಂಬಂಧಗಳಿಗೆ ಮಹತ್ವ ಕಡಿಮೆಯಾಗಿ ಸಹಕಾರವೂ ಇಲ್ಲದಾದಾಗ ಉಂಟಾಗುವ ಸನ್ನಿವೇಶವೇ ಪ್ರತಿಸ್ಪರ್ಧೆ. ಇದರಲ್ಲಿ ಹೇಗಾದರೂ ಎದುರಾಳಿಯನ್ನು ಸೋಲಿಸಬೇಕು ಮತ್ತು ನಾವು ಜಯಶಾಲಿಯಾಗಬೇಕು ಎನ್ನುವ ಹಂಬಲ. ಇದರಲ್ಲಿ ಒಂದು ಪಕ್ಷಕ್ಕೆ ಮಾತ್ರ ಜಯಕ್ಕೆ ಆಸ್ಪದವಿರುತ್ತದೆ.

ಸೋಲು-ಸೋಲು ಅಥವಾ ಹಿಂದೇಟು: (Lose – Lose) ಪದಾರ್ಥದ ಮೇಲೆ ನಮಗೆ ಆಸಕ್ತಿ ಇಲ್ಲವಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಮತ್ತು ಸಂಬಂಧಗಳಿಗೆ ಹೆಚ್ಚಿನ ಮಹತ್ವ ಇಲ್ಲದೆ, ಸಹಕಾರದ ಕೊರತೆಯೂ ಇದ್ದಾಗ, ಸ್ಪರ್ಧೆಯಿಂದ ಹಿಂದೇಟು ಹಾಕಿ, ಉಮೇದುವಾರಿಕೆ ಹಿಂಪಡೆಯುವ ಸನ್ನಿವೇಶ. ಇದರಲ್ಲಿ ಇಬ್ಬರಿಗೂ ಸೋಲುವ ಸಾಧ್ಯತೆ/ಭೀತಿ, ಹಾಗಾಗಿ ಹಿಂದೇಟು. ಯಾರಿಗೂ ಜಯವಿಲ್ಲ. ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ನಡೆಯಲಿಲ್ಲ ಎಂಬ ವಿಷಾದ.

ರಾಜಿ: (Compromise) ಪದಾರ್ಥದ ಮೇಲೆ ನಮಗೆ ಆಸಕ್ತಿ ಮಧ್ಯಮವಾಗಿದ್ದು, ಪ್ರತಿಪಾದನೆಯೂ ಮಧ್ಯಮವಾದಾಗ ಹಾಗೂ ಸಂಬಂಧಗಳಿಗೆ ಮಹತ್ವ ಮಧ್ಯಮವಾಗಿದ್ದು, ಸಹಕಾರದ ಅಪೇಕ್ಷೆಯೂ ಮಧ್ಯಮವಾಗಿದ್ದಾಗ ಉಂಟಾಗುವ ಸನ್ನಿವೇಶವೇ ಪರಸ್ಪರ ರಾಜಿ/ಅಂಗೀಕಾರ. ಇಲ್ಲಿ ಮಾತು-ಕತೆಗೆ ಅವಕಾಶ. ಯಾರಿಗೂ ಸೋಲಿಲ್ಲ, ಯಾರಿಗೂ ಗೆಲುವು ಇಲ್ಲ. ಒಂದು ರೀತಿಯ ಶೂನ್ಯದ ಡ್ರಾ.

ಸೋತು ಗೆಲ್ಲುವುದು: (Accommodate) ಪದಾರ್ಥದ ಮೇಲೆ ನಮ್ಮ ಆಸಕ್ತಿ ಕಡಿಮೆಯಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಹಾಗೂ ಸಂಬಂಧಗಳಿಗೆ ಅಧಿಕ ಬೆಲೆ ಇದ್ದು, ಸಹಕಾರದ ಸಾಧ್ಯತೆ ಹೆಚ್ಚಾದಾಗ ನಾವು ಸ್ಪರ್ಧೆಗೆ ಇಳಿಯದೆ, ಎದುರಾಳಿಗೆ ಆಟ ಬಿಟ್ಟುಕೊಡುವ ಮನಃಸ್ಥಿತಿಗೆ ಬರುತ್ತೇವೆ. ಇಲ್ಲಿಯೂ ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ಬಿಟ್ಟುಕೊಟ್ಟವರು ತಮ್ಮ ಅವಕಾಶಕ್ಕೆ ಕಾಯುತ್ತಿರುತ್ತಾರೆ.

ಇಬ್ಬರಿಗೂ ಜಯ: (Win –Win) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ಪ್ರತಿಪಾದನೆಯೂ ಹೆಚ್ಚಾಗಿದ್ದರೂ ಸಹ, ಸಂಬಂಧಗಳಿಗೂ ಬೆಲೆ ಅಧಿಕವಾಗಿದ್ದು ಸಹಕಾರದ ಸಾಧ್ಯತೆಯೂ ಹೆಚ್ಚಾಗಿದ್ದಾಗ ಇಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತೇವೆ. ಇದು ಅತ್ಯಂತ ಅಪೇಕ್ಷಣೀಯ ಪರಿಹಾರ. ಇದಕ್ಕೆ ಯಾವಾಗಲೂ ಪ್ರಯತ್ನಿಸಬೇಕು.

ವ್ಯಾಜ್ಯಗಳ ಪರಿಹಾರ ಹೇಗೆ
ವ್ಯಾಜ್ಯವನ್ನು ಪರಿಹಾರ ಮಾಡಲು ಬೇಕಾಗುವ ಕಲೆಗಳು:

·         ಸಂವಹನ ಕಲೆ

·         ಭಾವನೆಗಳ ಅಥವಾ ಆತಂಕ (ಸ್ಟ್ರೆಸ್ಸ್) ನಿರ್ವಹಣೆ ಮತ್ತು ಅನುಭೂತಿ

·         ಸಮಸ್ಯೆಗಳ ಪರಿಹಾರ / ನಿರ್ಧಾರ ತೆಗೆದುಕೊಳ್ಳುವ ಕಲೆ

·         ತಂಡದಲ್ಲಿ ಕೆಲಸ ಮಾಡುವ ಕಲೆ.

ಪರಿಹಾರದ ಹೆಜ್ಜೆಗಳು:

·         ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು.

·         ಎದುರಾಳಿಯ ಜೊತೆ ಮಾತು-ಕತೆ ನಡೆಸುವುದು.

·         ಮಧ್ಯಸ್ತಿಕೆಯೂ ಸೇರಿದಂತೆ, ಪರಿಹಾರಕ್ಕೆ ಮಾರ್ಗಗಳನ್ನು ಹುಡುಕುವುದು.

·         ಸರಿಯಾದ ಪರ್ಯಾಯದ ಆಯ್ಕೆ.

·         ಭಾವನೆಗಳನ್ನು ನಿರ್ವಹಿಸುವುದು.

ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ವ್ಯಾಜ್ಯಕ್ಕೆ ಮೂಲ ಕಾರಣ ಏನು ಎಂದು ತಿಳಿದು ಅದಕ್ಕೆ ಪರಿಹಾರ ಹುಡುಕಬೇಕು. ಇದಕ್ಕಾಗಿ ನಿಮ್ಮ ಮತ್ತು ಎದುರಾಳಿಯ ಇಬ್ಬರ ವಾದವೂ ಏನು ಎಂಬುದನ್ನು ಸ್ಪಷ್ಟವಾಗಿ ಇಡಬೇಕು. ಇಬ್ಬರ ಆಸಕ್ತಿ-ಆಸೆ-ಅಕಾಂಕ್ಷೆ-ಭೀತಿ ಏನು ಎಂಬುದನ್ನು ಅರಿಯಬೇಕು. ಇದನ್ನು ಅರಿಯಲು ಕೆಳಕಂಡ ಪ್ರಶ್ನೆಗಳು ಸಹಕಾರಿಯಾಗಬಹುದು:

ನಮ್ಮ ಆಸಕ್ತಿ ಏನು? ನಮ್ಮ ಮುಖ್ಯ ಅನುಮಾನ ಏನು? ಬೇಡಿಕೆ ಏನು? ಅವಶ್ಯಕತೆ ಏನು? ಆಕಾಂಕ್ಷೆ  ಮತ್ತು ಭೀತಿ ಏನು? ಇದೇ ರೀತಿ ಎದುರಾಳಿಯ ಮಾಹಿತಿಯನ್ನೂ ಪಡೆದು ಅದನ್ನೂ ಕೂಲಂಕಷವಾಗಿ ಅವಲೋಕಿಸಬೇಕು.

ಯಾವ ರೀತಿಯ ಸಂಧಾನಕ್ಕೆ ಬರಬಹುದು?

ಮೂರನೆಯ (ನಿಶ್ಪಕ್ಷ) ಪಕ್ಷವನ್ನು ಮಧ್ಯಸ್ಥಿಕೆ ವಹಿಸಲು ನೇಮಿಸಿದಲ್ಲಿ ನಮಗೆ ಸಂಧಾನಕ್ಕೆ ಬರಲು ಸಾಧ್ಯವೇ? ಇಬ್ಬರಿಗೂ ನ್ಯಾಯ ಸಿಕ್ಕಂತೆ ಆಗುತ್ತದೋ ಅಥವಾ ಇಬ್ಬರ ಜಗಳ ಮೂರನೆಯವರ ಲಾಭ ಆಗುತ್ತದೋ? ಯಾರು ಈ ಮೂರನೆಯ ಪಕ್ಷ? ಅವರು ಸಮಾಜದಲ್ಲಿ ಪ್ರತಿಷ್ಠಿತರೇ? ಸಂಧಾನ ಕಾನೂನಿನ ಚೌಕಟ್ಟಿನಲ್ಲಿರುತ್ತದೆಯೇ? ಅದನ್ನು ಯಾರು ಜಾರಿ ಮಾಡುವುದು ಮತ್ತು ನೋಡಿಕೊಳ್ಳುವುದು? ಖರ್ಚು ವೆಚ್ಚ ಯಾರು ಭರಿಸುವುದು? ಇಂತಹ ಪ್ರಶ್ನೆಗಳಿಗೂ ಸ್ಪಷ್ಟ ಉತ್ತರ ಸಿಗಬೇಕು.

ಕೆಲವೊಮ್ಮೆ ಇಬ್ಬರೂ ತಮ್ಮ ಪ್ರತಿಷ್ಠೆಯನ್ನೇ ದೊಡ್ಡದು ಮಾಡಿಕೊಂಡು, ನಿಜವಾಗಿ ಆಗುತ್ತಿರುವ ತಮ್ಮ ಆಸಕ್ತಿಯ ಹಾನಿಯನ್ನು ನಿರ್ಲಕ್ಷಿಸಿ, ತಮ್ಮ ಮುಖವನ್ನು ಉಳಿಸಿಕೊಳ್ಳುವ (ಸೇವಿಂಗ್ ದಿ ಫೇಸ್) ನಿಟ್ಟಿನಲ್ಲಿ,ನನಗೆ ಕನಿಷ್ಠ ಇಷ್ಟಾದರೂ ಸಿಗಬೇಕು ಎಂದು ಚೌಕಾಸಿ ಮಾಡಲು ಪ್ರಯತ್ನಿಸುತ್ತಾರೆ ಮತ್ತು ತಮ್ಮ ನಿಜವಾದ ಆಸಕ್ತಿ ಹಾನಿಯನ್ನು ಸಹಿಸಿಕೊಳ್ಳುತ್ತಾರೆ. ಆದ್ದರಿಂದ ಇಬ್ಬರ ಆಸಕ್ತಿ ಏನು ಎಂಬುದನ್ನು ತಿಳಿಯುವುದು ಬಹಳ ಮುಖ್ಯ.

ವ್ಯಾಜ್ಯ ಪರಿಹಾರ ಆಗುವ ತನಕ ಎರಡೂ ಪಕ್ಷಗಳು ತಮ್ಮ ಭಾವನಾತಿರೇಕಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗುತ್ತದೆ. ನೆನಪಿಡಿ, ಮಾತು ಬಲ್ಲವನಿಗೆ ಜಗಳವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...