Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...