Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....