Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...