Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...