Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...