Homeರಾಜಕೀಯಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

ಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

- Advertisement -
- Advertisement -

ಸಿಕ್ಕಾಪಟ್ಟೆ ಸರ್ಕಸ್ ತರುವಾಯ ಸಮ್ಮಿಶ್ರ ಸರ್ಕಾರದ ಅರೆಬೆಂದ ಸಚಿವ ಸಂಪುಟ ಅಣಿಯಾಗಿದೆ. ಸಚಿವಗಿರಿ ಸಿಗದೆ ಬಂಡಾಯದ ಬಾವುಟ ಹಾರಾಡಿಸಿಕೊಂಡು ದಿಲ್ಲಿಗೂ, ಬೆಂಗ್ಳೂರಿಗೂ ಅಲೆದಾಡಿದ ಪುಣ್ಯಾತ್ಮರೂ ದಿನದಿಂದ ದಿನಕ್ಕೆ ತಣ್ಣಗಾಗುತ್ತಿದ್ದಾರೆ. ಇನ್ನು ಸಿಕ್ಕ ಖಾತೆಗಳ ಬಗ್ಗೆ ಕ್ಯಾತೆ ತೆಗೆದವರೂ, ಪಾಲಿಗೆ ಬಂದ ಪಂಚಾಮೃತದ ಮುಂದೆ ಚಕ್ಕಮಕ್ಕಳ ಹಾಕಿ ಕೂತು, ಕೈ-ಬಾಯಿ ಅಣಿಯಾಗಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಕುಮಾರಣ್ಣನ ಸಂಪುಟದ ರೈಲು ನಿಧಾನಕ್ಕೆ ಹಳಿಗಳಿಗೆ ಕುದುರಿಕೊಳ್ಳಲು ಶುರುವಾಗಿದೆ. ಒಂದು ಸರ್ಕಾರ ಅಂತ ರಚನೆಯಾದಾಗ, ಅದರಲ್ಲೂ ಬಣ್ಣಬಣ್ಣದ ಕೌದಿಯಂತಹ ಸಮ್ಮಿಶ್ರ ಸರ್ಕಾರ ಅಂದಮೇಲೆ ಇಂತದ್ದೆಲ್ಲ ಮಾಮೂಲಿ. ಈ ಸಲದ ಸಂಪುಟ ಕಸರತ್ತಿನಲ್ಲಿ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬಸವರಾಜ್ ಹೊರಟ್ಟಿಯಂತಹ ಘಟಾನುಘಟಿಗಳಿಗೆ ಮಂತ್ರಿಗಿರಿ ಮಿಸ್ ಆಗಿರೋದು ಎಷ್ಟು ಶಾಕ್‍ನ ಸಂಗತಿಯೋ, ಗಿರಿಕನ್ಯೆ ಜಯಮಾಲಾ ಮೇಡಂಗೆ ಮಂತ್ರಿಗಿರಿ ಸಿಕ್ಕಿರೋದೂ ಅಷ್ಟೇ ದಿಗ್ಬ್ರಾಂತಿಯ ವಿಷಯವಾಗಿದೆ. ಯಾಕೆಂದರೆ ಯಾರೊಬ್ಬರೂ ಜಯಮಾಲಾ ಮಿನಿಸ್ಟರ್ ಆಗಲಿದ್ದಾರೆ ಅಂತ ಎಣಿಸಿರಲಿಲ್ಲ. ಮಹಿಳಾ ಕೋಟಾದ ಪ್ರಶ್ನೆ ಬಂದಾಗಲೂ ಡಿಕೇಶಿ ಬಳಗದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮರಾಠಾ ಬ್ರ್ಯಾಂಡಿನ ಖಾನಾಪುರದ ಅಂಜಲಿ ನಿಂಬಾಳ್ಕರ್ ನಡುವೆಯೇ ಹಗ್ಗಜಗ್ಗಾಟ ನಡೆದಿತ್ತು. ಪಾಪದ ಮೋಟಮ್ಮ ನನ್ನನ್ನ ಮಂತ್ರಿ ಮಾಡಿ ಅಂತ ಕೇಳಿದಾಗಲೂ `ಏಯ್ ಸುಮ್ನೇ ಇರಮ್ಮ, ಗೆದ್ದ ಶಾಸಕರನ್ನೇ ಬಿಜೆಪಿಯವರ ಬಕಾಸುರ ಬಾಯಿಂದ ಕಾಪಾಡಿಕೊಳ್ಳಲು ಹೆಣಗಾಡ್ತಿದೀವಿ. ಹಾಗಾಗಿ ಅವ್ರನ್ನ ತೃಪ್ತಿ ಪಡಿಸ್ಲಿಕ್ಕೇ ಸಾಕುಸಾಕಾಗಿ ಹೋಗ್ತಿದೆ. ಅದಕ್ಕೋಸ್ಕರ ಈ ಸಲ ಎಂಎಲ್‍ಸಿಗಳಿಗೆ ಮಂತ್ರಿ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ. ನಂತ್ರ ನೋಡೋಣ’ ಅನ್ನೋ ಉತ್ತರ ಬಿಸಾಕಿದ ದಿಲ್ಲಿ ದಲ್ಲಾಳಿಗಳು ಆಯಮ್ಮನನ್ನು ಗದರಿಕೊಂಡಿದ್ದರಂತೆ.
ಆದರೆ ಕೊನೇ ಘಳಿಗೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನು ಹಿಂದಿಕ್ಕಿದ್ದಲ್ಲದೇ, ಎಂಎಲ್‍ಸಿಗಳಿಗೆ ಮಂತ್ರಿಭಾಗ್ಯ ಇಲ್ಲ ಎಂಬ ಅಡ್ಡಗೋಡೆಯನ್ನೂ ಜಿಗಿದುಬಂದ ಜಯಮಾಲ ಮೇಡಂ ಮಂತ್ರಿಣಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಮಂತ್ರಿಗಿರಿ ಮಿಸ್ ಮಾಡಿಕೊಂಡ `ಪುಣ್ಯಾತ್ಮ’ರು ಅಂಟಿಸುವ `ನಿಷ್ಠಾವಂತರಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡದೆ, ಬಕೇಟು ಹಿಡಿದ ಲಾಬಿ ಗಿರಾಕಿಗಳನ್ನು ಮಂತ್ರಿ ಮಾಡಿದ್ದಾರೆ. ನನ್ನ ಬೆಂಬಲಿಗರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರ್ತೀನಿ’ ಅನ್ನೋ ಠುಸ್ ಪಟಾಕಿಗೆ ಪ್ರತಿಯಾಗಿ ಮಂತ್ರಿಗಿರಿ ಸಿಕ್ಕ `ಮಹಾತ್ಮ’ರು `ನನ್ನ ನಿಷ್ಠೆ ನೋಡಿ ಪಕ್ಷ ಈ ಸ್ಥಾನ ನೀಡಿದೆ. ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿದವನೇ/ಳೇ ಅಲ್ಲ. ನನ್ನ ಗೆಲ್ಲಿಸಿದ ಜನರ ಸೇವೆಗೆ ಇದನ್ನು ಸದುಪಯೋಗ ಮಾಡಿಕೊಳ್ತೀನಿ’ ಅನ್ನೋ ಢಂಢಂ ಪಟಾಕಿ ಅಂಟಿಸೋದು ಸಹಜ. ಜಮಯಾಲ ಮೇಡಂ ಕೂಡಾ ಅಂತದ್ದೇ ಒಂದು ಢಂಢಂ ಪಟಾಕಿ ಅಂಟಿಸಿದ್ದಾರಾದರು ಅವರ ಮಂತ್ರಿಗಿರಿಯ ಹಿಂದೆ ಒಂದು ಪೊಲಿಟಿಕಲ್ ಲಾಬಿ ಇದ್ದೇ ಇದೆ ಅನ್ನೋದು ಮಾತ್ರ ಸುಳ್ಳಲ್ಲ.
ಬಣ್ಣದ ಲೋಕದಿಂದ ಬಂದ ಬೇರೆಬೇರೆ ಪಾರ್ಟ್‍ಟೈಂ ರಾಜಕಾರಣಿಗಳಿಗೆ ಹೋಲಿಸಿದರೆ ಜಯಮಾಲ ಮೇಡಮ್ಮು ಹೆಚ್ಚು ದಕ್ಷ, ದಿಟ್ಟ ರಾಜಕಾರಣಿ ಅನ್ನೋದ್ರಲ್ಲಿ ಸಂಶಯವಿಲ್ಲ. ಆದರೆ, ಇರೋ ಒಂದು ರೊಟ್ಟಿಯನ್ನೇ ಹರಿದು, ಹಸಿವಿನಿಂದ ರಂಪಾಟ ಮಾಡುತ್ತಿರುವ ತನ್ನ ಸಂತಾನ ಸೈನ್ಯಕ್ಕೆ ಹಂಚಬೇಕಾದ ನಿಕೃಷ್ಟ ಬರಗಾಲಕ್ಕೆ ಸಿಲುಕಿರುವ ಕಾಂಗ್ರೆಸ್ ಅನ್ನೋ ಶತಮಾನದ ಪಾರ್ಟಿ ಯಾವ ಲಾಬಿಯೂ ಇಲ್ಲದೆ, ದಕ್ಷತೆಯ ಮೈಲೇಜಿನ ಮೇಲೆ ಜಯಮಾಲರನ್ನು ಮಂತ್ರಿ ಮಾಡುತ್ತೆ ಅನ್ನೋದನ್ನು ನಂಬಲು ಕಷ್ಟ; ಅದೂ, ಮ್ಯಾನ್ ಆಫ್ ದಿ ಮ್ಯಾಚ್ ಡಿಕೇಶಿ ಬೆಟಾಲಿಯನ್ನಿನ ವಿಕೆಟನ್ನೇ ರನ್‍ಔಟ್ ಮಾಡಿಸಿ! ಜಯಮಾಲರನ್ನು ಮಂತ್ರಿ ಮಾಡಲೇಬೇಕು ಅಂತ ಪಟ್ಟು ಹಿಡಿದು, ಲಾಬಿ ಮಾಡಿದ್ದು ಮಾಜಿ ಸಿಎಂ ಸಿದ್ರಾಮಯ್ಯನವರು ಅನ್ನೋ ಮಾತುಗಳು ಕಾಂಗ್ರೆಸ್ ಪಡಸಾಲೆಯಿಂದಲೇ ಕೇಳಿಬರುತ್ತಿವೆ. ಜಯಮಾಲ ಮೊದಲಿನಿಂದಲೂ ಸಿದ್ರಾಮಯ್ಯನವರ ಅತ್ಯಾಪ್ತ ವಲಯದ ರಾಜಕೀಯ ಪಟು. ಸಿದ್ದು ಸಿಎಂ ಆಗಿದ್ದಾಗ, ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲು 16 ಜನರ ಒಂದು ಸಮಿತಿ ರಚಿಸಿದ್ದರು. ಆ ಸಮಿತಿಗೆ ಅಧ್ಯಕ್ಷೆಯನ್ನಾಗಿ ಸಿದ್ದು ಆಯ್ಕೆ ಮಾಡಿದ್ದು ಇದೇ ಜಯಮಾಲ ಮೇಡಂರನ್ನು. ಇನ್ನು ಮೊನ್ನೆಯ ಎಲೆಕ್ಷನ್ ವೇಳೆ, ಸಿದ್ದುವಿಗೆ ಚಾಮುಂಡೇಶ್ವರಿಯಲ್ಲಿ ಕಂಟಕವಿರುವ ಮುನ್ಸೂಚನೆ ಸಿಕ್ಕಾಗ ಜಯಮಾಲ ಮೇಡಂ, ಒಂದು ಕಾಲದ ಬಿಜೆಪಿ ಒಡನಾಡಿ ಮುಖ್ಯಮಂತ್ರಿ ಚಂದ್ರುರಂತಹ ಸಹೋದ್ಯೋಗಿಯನ್ನೇ ಕರಕೊಂಡು ಬಂದು ಸಿದ್ದು ಪರ ಅದ್ದೂರಿ ಪ್ರಚಾರ ಮಾಡಿದ್ದರು. ಅಷ್ಟರಮಟ್ಟಿಗೆ ಅವರಿಬ್ಬರ ನಡುವೆ ಆಪ್ತತೆ ಇದೆ, ಅಭಿಮಾನವಿದೆ. ಸಿದ್ದು, ಜಯಮಾಲರ ಮೇಲಿಟ್ಟಿರುವ ಆ ಅಭಿಮಾನವೇ ಇವತ್ತು ಅವರನ್ನು ಮಂತ್ರಿ ಮಾಡಿದೆ. ಅಂದಹಾಗೆ, ಸಿದ್ದು ಬಗ್ಗೆ ಜಯಮಾಲ ಮೇಡಂಗೆ ಅಭಿಮಾನ ತುಂಬಿ ಬಂದು, ಅಂತರಾಳದಿಂದ ಹೆಮ್ಮೆ ಎನಿಸಿದಾಗ ಏನಂತ ಹೊಗಳ್ತಾರೆ ಗೊತ್ತುಂಟಾ, `ನಂ ಸಿದ್ರಾಮಯ್ಯನೋರು ಗಂಡು ಹುಲಿ ಕಣ್ರೀ!’.
ಸಂಪುಟ ರಚನೆಯಲ್ಲಿ ಸಿದ್ರಾಮಯ್ಯರನ್ನು ಹೈಕಮಾಂಡ್ ಮೂಲೆಗುಂಪು ಮಾಡಿದೆ, ಅವರ ಆಪ್ತರಿಗೆ ಸಚಿವಗಿರಿ ತಪ್ಪಿಸಲಾಗಿದೆ ಅಂತ ಬೊಬ್ಬಿಡುವ ಖಾಲಿ ಡಬ್ಬಗಳಿಗೆ ಜಯಮಾಲ ಆಯ್ಕೆಯೇ ಒಂದು ದೊಡ್ಡ ಉತ್ತರ. ಕಾಂಗ್ರೆಸ್‍ನೊಳಗೆ ಸಿದ್ದು ಈಗಲೂ ಡಿಗ್ನಿಫೈಡ್ ರೋಲ್ ನಿಭಾಯಿಸುತ್ತಿದ್ದಾರೆ ಅನ್ನೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನ ಓವರ್‍ಟೇಕ್ ಮಾಡಿ ಜಯಮಾಲ ಮಂತ್ರಿಯಾಗಿರೋದು ಸಾಕ್ಷಿ. ಇದೆಲ್ಲ ಆಯ್ಕೆ ಹಿಂದಿನ ಕಸರತ್ತಾಯ್ತು. ಇನ್ನು ದಕ್ಷತೆ ವಿಚಾರಕ್ಕೆ ಬಂದರೆ, ಈ ಸಮ್ಮಿಶ್ರ ಸಂಪುಟದಲ್ಲಿರುವ ಕೆಲವೇ ಕೆಲವು ಅರ್ಹ ಮಂತ್ರಿಗಳಲ್ಲಿ ಜಯಮಾಲ ಕೂಡಾ ಒಬ್ಬರು ಅನ್ನೋದ್ರಲ್ಲಿ ತಪ್ಪಿಲ್ಲ. ಸಿದ್ದು ಲಾಬಿಯಿಂದ ಸಿಕ್ಕಿದೆಯೋ, ಬಿಲ್ಲವ ಕೋಟಾದಡಿ ದಕ್ಕಿದೆಯೋ, ಒಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಬ್ಬ ಸಮರ್ಥ ಸಾರಥಿಯೇ ಸಿಕ್ಕಂತಾಗಿದೆ. ಯಾಕೆಂದರೆ ಜಯಮಾಲ ಗ್ರಾಮೀಣ ಮಹಿಳೆಯರ ಪುನರ್ವಸತಿ ವಿಷಯದ ಮೇಲೆ ಅಧ್ಯಯನ ಮಾಡಿಯೇ ಡಾಕ್ಟರೇಟ್ ಪದವಿ ಪಡೆದುಕೊಂಡಂತವರು. ಮೊದಲೇ ಹೇಳಿದಂತೆ ಕಳೆದ ಸರ್ಕಾರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದ ಸಮಿತಿಯ ಅಧ್ಯಕ್ಷೆಯಾಗಿಯೂ ಮಹಿಳಾ ಸವಾಲುಗಳನ್ನು ಕಂಡ ಅನುಭವವಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗಿ ಕನ್ನಡ ಸಿನಿರಂಗದ ಬಿಕ್ಕಟ್ಟುಗಳನ್ನು ಬಗೆಹರಿಸಿದ ಗಟ್ಟಿತನವಿರುವ ಜಯಮಾಲರಿಗೆ ಮಂತ್ರಿಯಾಗುವ ಸಾಮಥ್ರ್ಯ ಉಳಿದ ಬಣ್ಣದ ಮಂದಿಗಿಂತ ಹೆಚ್ಚಿದೆ ಅನ್ನೋದ್ರಲ್ಲಿ ತಪ್ಪಿಲ್ಲ. ಅಂದಹಾಗೆ, 1993ರಲ್ಲಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಘಳಿಗೆಯಿಂದ ಇಲ್ಲಿಯವರೆಗು ಕಾಂಗ್ರೆಸ್‍ನಲ್ಲೇ ಗುರುತಿಸಿಕೊಂಡು ಬಂದಿದ್ದಾರೆ. ಇತರರಂತೆ ಪಕ್ಷಾಂತರ ಮಾಡಿದವರಲ್ಲ.
ತನ್ನ 13ನೇ ವಯಸ್ಸಿಗೇ ಬಣ್ಣ ಹಚ್ಚಿ, 16ನೇ ವಯಸ್ಸಿಗೆ ಡಾ.ರಾಜ್ ಎದುರು ಪ್ರೇಮದ ಕಾಣಿಕೆಯಲ್ಲಿ ನಾಯಕಿಯಾಗಿ ಮಿಂಚಿದ ಈ ಗಿರಿಕನ್ಯೆ ತನ್ನ ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಏಳುಬೀಳು ಕಂಡುಬಂದಂತವರು. ಪ್ರತಿಭಾವಂತ ನಟನಾಗಿದ್ದರೂ, ತನ್ನ ಚಟಗಳಿಗೆ ಮಿತಿ ಹೇರಿಕೊಳ್ಳದೆ ಮರೆಯಾಗಿ ಹೋದ ಟೈಗರ್ ಪ್ರಭಾಕರ್ ಜೊತೆ ಜಯಮಾಲ ಇಟ್ಟ ಮೊದಲ ದಾಂಪತ್ಯ ದೀರ್ಘಕಾಲ ಉಳಿಯಲಿಲ್ಲ. ಯಾವ ಮುಲಾಜುಗಳಿಗೂ ಕಟ್ಟುಬೀಳದೆ ಡೈವೋರ್ಸ್ ಪಡೆದು ಆ ದಾಂಪತ್ಯದಿಂದ ಹೊರಬಂದ ಅವರು ನಂತರ ಛಾಯಾಗ್ರಾಹಕ ರಾಮಚಂದ್ರರವರನ್ನು ಮದುವೆಯಾಗಿ ಮತ್ತೊಮ್ಮೆ ದಿಟ್ಟತೆ ತೋರಿದ್ದರು. ಮಹಿಳೆಯರಿಗೆ ಪ್ರವೇಶವಿಲ್ಲದ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ವಿವಾದ ಭುಗಿಲೆದ್ದಾಗಲೂ ಜಯಮಾಲ ಬಲು ದಿಟ್ಟತೆಯಿಂದಲೇ ಎದುರಿಸಿದ್ದರು. ಕಮರ್ಷಿಯಲ್ ಚಿತ್ರಗಳಲ್ಲಿ ಹೀರೋಯಿನ್ ಆಗಿ ಮಿಂಚುತ್ತಲೇ `ತಾಯಿ ಸಾಹೇಬ’ದಂತಹ ರಾಷ್ಟ್ರಪ್ರಶಸ್ತಿ ವಿಜೇತ ಕಲಾತ್ಮಕ ಚಿತ್ರವನ್ನೂ ನಿರ್ಮಿಸಿ ಸೈ ಅನ್ನಿಸಿಕೊಂಡಿದ್ದ ಅವರು ಮಹಿಳಾ ಕಲ್ಯಾಣ ಹಾಗೂ ಕನ್ನಡ, ಸಂಸ್ಕøತಿ ಇಲಾಖೆಗಳಿಗೆ ನ್ಯಾಯ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ. ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...