Homeರಾಜಕೀಯಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

ಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

- Advertisement -
- Advertisement -

ಸಿಕ್ಕಾಪಟ್ಟೆ ಸರ್ಕಸ್ ತರುವಾಯ ಸಮ್ಮಿಶ್ರ ಸರ್ಕಾರದ ಅರೆಬೆಂದ ಸಚಿವ ಸಂಪುಟ ಅಣಿಯಾಗಿದೆ. ಸಚಿವಗಿರಿ ಸಿಗದೆ ಬಂಡಾಯದ ಬಾವುಟ ಹಾರಾಡಿಸಿಕೊಂಡು ದಿಲ್ಲಿಗೂ, ಬೆಂಗ್ಳೂರಿಗೂ ಅಲೆದಾಡಿದ ಪುಣ್ಯಾತ್ಮರೂ ದಿನದಿಂದ ದಿನಕ್ಕೆ ತಣ್ಣಗಾಗುತ್ತಿದ್ದಾರೆ. ಇನ್ನು ಸಿಕ್ಕ ಖಾತೆಗಳ ಬಗ್ಗೆ ಕ್ಯಾತೆ ತೆಗೆದವರೂ, ಪಾಲಿಗೆ ಬಂದ ಪಂಚಾಮೃತದ ಮುಂದೆ ಚಕ್ಕಮಕ್ಕಳ ಹಾಕಿ ಕೂತು, ಕೈ-ಬಾಯಿ ಅಣಿಯಾಗಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಕುಮಾರಣ್ಣನ ಸಂಪುಟದ ರೈಲು ನಿಧಾನಕ್ಕೆ ಹಳಿಗಳಿಗೆ ಕುದುರಿಕೊಳ್ಳಲು ಶುರುವಾಗಿದೆ. ಒಂದು ಸರ್ಕಾರ ಅಂತ ರಚನೆಯಾದಾಗ, ಅದರಲ್ಲೂ ಬಣ್ಣಬಣ್ಣದ ಕೌದಿಯಂತಹ ಸಮ್ಮಿಶ್ರ ಸರ್ಕಾರ ಅಂದಮೇಲೆ ಇಂತದ್ದೆಲ್ಲ ಮಾಮೂಲಿ. ಈ ಸಲದ ಸಂಪುಟ ಕಸರತ್ತಿನಲ್ಲಿ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬಸವರಾಜ್ ಹೊರಟ್ಟಿಯಂತಹ ಘಟಾನುಘಟಿಗಳಿಗೆ ಮಂತ್ರಿಗಿರಿ ಮಿಸ್ ಆಗಿರೋದು ಎಷ್ಟು ಶಾಕ್‍ನ ಸಂಗತಿಯೋ, ಗಿರಿಕನ್ಯೆ ಜಯಮಾಲಾ ಮೇಡಂಗೆ ಮಂತ್ರಿಗಿರಿ ಸಿಕ್ಕಿರೋದೂ ಅಷ್ಟೇ ದಿಗ್ಬ್ರಾಂತಿಯ ವಿಷಯವಾಗಿದೆ. ಯಾಕೆಂದರೆ ಯಾರೊಬ್ಬರೂ ಜಯಮಾಲಾ ಮಿನಿಸ್ಟರ್ ಆಗಲಿದ್ದಾರೆ ಅಂತ ಎಣಿಸಿರಲಿಲ್ಲ. ಮಹಿಳಾ ಕೋಟಾದ ಪ್ರಶ್ನೆ ಬಂದಾಗಲೂ ಡಿಕೇಶಿ ಬಳಗದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮರಾಠಾ ಬ್ರ್ಯಾಂಡಿನ ಖಾನಾಪುರದ ಅಂಜಲಿ ನಿಂಬಾಳ್ಕರ್ ನಡುವೆಯೇ ಹಗ್ಗಜಗ್ಗಾಟ ನಡೆದಿತ್ತು. ಪಾಪದ ಮೋಟಮ್ಮ ನನ್ನನ್ನ ಮಂತ್ರಿ ಮಾಡಿ ಅಂತ ಕೇಳಿದಾಗಲೂ `ಏಯ್ ಸುಮ್ನೇ ಇರಮ್ಮ, ಗೆದ್ದ ಶಾಸಕರನ್ನೇ ಬಿಜೆಪಿಯವರ ಬಕಾಸುರ ಬಾಯಿಂದ ಕಾಪಾಡಿಕೊಳ್ಳಲು ಹೆಣಗಾಡ್ತಿದೀವಿ. ಹಾಗಾಗಿ ಅವ್ರನ್ನ ತೃಪ್ತಿ ಪಡಿಸ್ಲಿಕ್ಕೇ ಸಾಕುಸಾಕಾಗಿ ಹೋಗ್ತಿದೆ. ಅದಕ್ಕೋಸ್ಕರ ಈ ಸಲ ಎಂಎಲ್‍ಸಿಗಳಿಗೆ ಮಂತ್ರಿ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ. ನಂತ್ರ ನೋಡೋಣ’ ಅನ್ನೋ ಉತ್ತರ ಬಿಸಾಕಿದ ದಿಲ್ಲಿ ದಲ್ಲಾಳಿಗಳು ಆಯಮ್ಮನನ್ನು ಗದರಿಕೊಂಡಿದ್ದರಂತೆ.
ಆದರೆ ಕೊನೇ ಘಳಿಗೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನು ಹಿಂದಿಕ್ಕಿದ್ದಲ್ಲದೇ, ಎಂಎಲ್‍ಸಿಗಳಿಗೆ ಮಂತ್ರಿಭಾಗ್ಯ ಇಲ್ಲ ಎಂಬ ಅಡ್ಡಗೋಡೆಯನ್ನೂ ಜಿಗಿದುಬಂದ ಜಯಮಾಲ ಮೇಡಂ ಮಂತ್ರಿಣಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಮಂತ್ರಿಗಿರಿ ಮಿಸ್ ಮಾಡಿಕೊಂಡ `ಪುಣ್ಯಾತ್ಮ’ರು ಅಂಟಿಸುವ `ನಿಷ್ಠಾವಂತರಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡದೆ, ಬಕೇಟು ಹಿಡಿದ ಲಾಬಿ ಗಿರಾಕಿಗಳನ್ನು ಮಂತ್ರಿ ಮಾಡಿದ್ದಾರೆ. ನನ್ನ ಬೆಂಬಲಿಗರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರ್ತೀನಿ’ ಅನ್ನೋ ಠುಸ್ ಪಟಾಕಿಗೆ ಪ್ರತಿಯಾಗಿ ಮಂತ್ರಿಗಿರಿ ಸಿಕ್ಕ `ಮಹಾತ್ಮ’ರು `ನನ್ನ ನಿಷ್ಠೆ ನೋಡಿ ಪಕ್ಷ ಈ ಸ್ಥಾನ ನೀಡಿದೆ. ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿದವನೇ/ಳೇ ಅಲ್ಲ. ನನ್ನ ಗೆಲ್ಲಿಸಿದ ಜನರ ಸೇವೆಗೆ ಇದನ್ನು ಸದುಪಯೋಗ ಮಾಡಿಕೊಳ್ತೀನಿ’ ಅನ್ನೋ ಢಂಢಂ ಪಟಾಕಿ ಅಂಟಿಸೋದು ಸಹಜ. ಜಮಯಾಲ ಮೇಡಂ ಕೂಡಾ ಅಂತದ್ದೇ ಒಂದು ಢಂಢಂ ಪಟಾಕಿ ಅಂಟಿಸಿದ್ದಾರಾದರು ಅವರ ಮಂತ್ರಿಗಿರಿಯ ಹಿಂದೆ ಒಂದು ಪೊಲಿಟಿಕಲ್ ಲಾಬಿ ಇದ್ದೇ ಇದೆ ಅನ್ನೋದು ಮಾತ್ರ ಸುಳ್ಳಲ್ಲ.
ಬಣ್ಣದ ಲೋಕದಿಂದ ಬಂದ ಬೇರೆಬೇರೆ ಪಾರ್ಟ್‍ಟೈಂ ರಾಜಕಾರಣಿಗಳಿಗೆ ಹೋಲಿಸಿದರೆ ಜಯಮಾಲ ಮೇಡಮ್ಮು ಹೆಚ್ಚು ದಕ್ಷ, ದಿಟ್ಟ ರಾಜಕಾರಣಿ ಅನ್ನೋದ್ರಲ್ಲಿ ಸಂಶಯವಿಲ್ಲ. ಆದರೆ, ಇರೋ ಒಂದು ರೊಟ್ಟಿಯನ್ನೇ ಹರಿದು, ಹಸಿವಿನಿಂದ ರಂಪಾಟ ಮಾಡುತ್ತಿರುವ ತನ್ನ ಸಂತಾನ ಸೈನ್ಯಕ್ಕೆ ಹಂಚಬೇಕಾದ ನಿಕೃಷ್ಟ ಬರಗಾಲಕ್ಕೆ ಸಿಲುಕಿರುವ ಕಾಂಗ್ರೆಸ್ ಅನ್ನೋ ಶತಮಾನದ ಪಾರ್ಟಿ ಯಾವ ಲಾಬಿಯೂ ಇಲ್ಲದೆ, ದಕ್ಷತೆಯ ಮೈಲೇಜಿನ ಮೇಲೆ ಜಯಮಾಲರನ್ನು ಮಂತ್ರಿ ಮಾಡುತ್ತೆ ಅನ್ನೋದನ್ನು ನಂಬಲು ಕಷ್ಟ; ಅದೂ, ಮ್ಯಾನ್ ಆಫ್ ದಿ ಮ್ಯಾಚ್ ಡಿಕೇಶಿ ಬೆಟಾಲಿಯನ್ನಿನ ವಿಕೆಟನ್ನೇ ರನ್‍ಔಟ್ ಮಾಡಿಸಿ! ಜಯಮಾಲರನ್ನು ಮಂತ್ರಿ ಮಾಡಲೇಬೇಕು ಅಂತ ಪಟ್ಟು ಹಿಡಿದು, ಲಾಬಿ ಮಾಡಿದ್ದು ಮಾಜಿ ಸಿಎಂ ಸಿದ್ರಾಮಯ್ಯನವರು ಅನ್ನೋ ಮಾತುಗಳು ಕಾಂಗ್ರೆಸ್ ಪಡಸಾಲೆಯಿಂದಲೇ ಕೇಳಿಬರುತ್ತಿವೆ. ಜಯಮಾಲ ಮೊದಲಿನಿಂದಲೂ ಸಿದ್ರಾಮಯ್ಯನವರ ಅತ್ಯಾಪ್ತ ವಲಯದ ರಾಜಕೀಯ ಪಟು. ಸಿದ್ದು ಸಿಎಂ ಆಗಿದ್ದಾಗ, ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲು 16 ಜನರ ಒಂದು ಸಮಿತಿ ರಚಿಸಿದ್ದರು. ಆ ಸಮಿತಿಗೆ ಅಧ್ಯಕ್ಷೆಯನ್ನಾಗಿ ಸಿದ್ದು ಆಯ್ಕೆ ಮಾಡಿದ್ದು ಇದೇ ಜಯಮಾಲ ಮೇಡಂರನ್ನು. ಇನ್ನು ಮೊನ್ನೆಯ ಎಲೆಕ್ಷನ್ ವೇಳೆ, ಸಿದ್ದುವಿಗೆ ಚಾಮುಂಡೇಶ್ವರಿಯಲ್ಲಿ ಕಂಟಕವಿರುವ ಮುನ್ಸೂಚನೆ ಸಿಕ್ಕಾಗ ಜಯಮಾಲ ಮೇಡಂ, ಒಂದು ಕಾಲದ ಬಿಜೆಪಿ ಒಡನಾಡಿ ಮುಖ್ಯಮಂತ್ರಿ ಚಂದ್ರುರಂತಹ ಸಹೋದ್ಯೋಗಿಯನ್ನೇ ಕರಕೊಂಡು ಬಂದು ಸಿದ್ದು ಪರ ಅದ್ದೂರಿ ಪ್ರಚಾರ ಮಾಡಿದ್ದರು. ಅಷ್ಟರಮಟ್ಟಿಗೆ ಅವರಿಬ್ಬರ ನಡುವೆ ಆಪ್ತತೆ ಇದೆ, ಅಭಿಮಾನವಿದೆ. ಸಿದ್ದು, ಜಯಮಾಲರ ಮೇಲಿಟ್ಟಿರುವ ಆ ಅಭಿಮಾನವೇ ಇವತ್ತು ಅವರನ್ನು ಮಂತ್ರಿ ಮಾಡಿದೆ. ಅಂದಹಾಗೆ, ಸಿದ್ದು ಬಗ್ಗೆ ಜಯಮಾಲ ಮೇಡಂಗೆ ಅಭಿಮಾನ ತುಂಬಿ ಬಂದು, ಅಂತರಾಳದಿಂದ ಹೆಮ್ಮೆ ಎನಿಸಿದಾಗ ಏನಂತ ಹೊಗಳ್ತಾರೆ ಗೊತ್ತುಂಟಾ, `ನಂ ಸಿದ್ರಾಮಯ್ಯನೋರು ಗಂಡು ಹುಲಿ ಕಣ್ರೀ!’.
ಸಂಪುಟ ರಚನೆಯಲ್ಲಿ ಸಿದ್ರಾಮಯ್ಯರನ್ನು ಹೈಕಮಾಂಡ್ ಮೂಲೆಗುಂಪು ಮಾಡಿದೆ, ಅವರ ಆಪ್ತರಿಗೆ ಸಚಿವಗಿರಿ ತಪ್ಪಿಸಲಾಗಿದೆ ಅಂತ ಬೊಬ್ಬಿಡುವ ಖಾಲಿ ಡಬ್ಬಗಳಿಗೆ ಜಯಮಾಲ ಆಯ್ಕೆಯೇ ಒಂದು ದೊಡ್ಡ ಉತ್ತರ. ಕಾಂಗ್ರೆಸ್‍ನೊಳಗೆ ಸಿದ್ದು ಈಗಲೂ ಡಿಗ್ನಿಫೈಡ್ ರೋಲ್ ನಿಭಾಯಿಸುತ್ತಿದ್ದಾರೆ ಅನ್ನೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನ ಓವರ್‍ಟೇಕ್ ಮಾಡಿ ಜಯಮಾಲ ಮಂತ್ರಿಯಾಗಿರೋದು ಸಾಕ್ಷಿ. ಇದೆಲ್ಲ ಆಯ್ಕೆ ಹಿಂದಿನ ಕಸರತ್ತಾಯ್ತು. ಇನ್ನು ದಕ್ಷತೆ ವಿಚಾರಕ್ಕೆ ಬಂದರೆ, ಈ ಸಮ್ಮಿಶ್ರ ಸಂಪುಟದಲ್ಲಿರುವ ಕೆಲವೇ ಕೆಲವು ಅರ್ಹ ಮಂತ್ರಿಗಳಲ್ಲಿ ಜಯಮಾಲ ಕೂಡಾ ಒಬ್ಬರು ಅನ್ನೋದ್ರಲ್ಲಿ ತಪ್ಪಿಲ್ಲ. ಸಿದ್ದು ಲಾಬಿಯಿಂದ ಸಿಕ್ಕಿದೆಯೋ, ಬಿಲ್ಲವ ಕೋಟಾದಡಿ ದಕ್ಕಿದೆಯೋ, ಒಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಬ್ಬ ಸಮರ್ಥ ಸಾರಥಿಯೇ ಸಿಕ್ಕಂತಾಗಿದೆ. ಯಾಕೆಂದರೆ ಜಯಮಾಲ ಗ್ರಾಮೀಣ ಮಹಿಳೆಯರ ಪುನರ್ವಸತಿ ವಿಷಯದ ಮೇಲೆ ಅಧ್ಯಯನ ಮಾಡಿಯೇ ಡಾಕ್ಟರೇಟ್ ಪದವಿ ಪಡೆದುಕೊಂಡಂತವರು. ಮೊದಲೇ ಹೇಳಿದಂತೆ ಕಳೆದ ಸರ್ಕಾರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದ ಸಮಿತಿಯ ಅಧ್ಯಕ್ಷೆಯಾಗಿಯೂ ಮಹಿಳಾ ಸವಾಲುಗಳನ್ನು ಕಂಡ ಅನುಭವವಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗಿ ಕನ್ನಡ ಸಿನಿರಂಗದ ಬಿಕ್ಕಟ್ಟುಗಳನ್ನು ಬಗೆಹರಿಸಿದ ಗಟ್ಟಿತನವಿರುವ ಜಯಮಾಲರಿಗೆ ಮಂತ್ರಿಯಾಗುವ ಸಾಮಥ್ರ್ಯ ಉಳಿದ ಬಣ್ಣದ ಮಂದಿಗಿಂತ ಹೆಚ್ಚಿದೆ ಅನ್ನೋದ್ರಲ್ಲಿ ತಪ್ಪಿಲ್ಲ. ಅಂದಹಾಗೆ, 1993ರಲ್ಲಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಘಳಿಗೆಯಿಂದ ಇಲ್ಲಿಯವರೆಗು ಕಾಂಗ್ರೆಸ್‍ನಲ್ಲೇ ಗುರುತಿಸಿಕೊಂಡು ಬಂದಿದ್ದಾರೆ. ಇತರರಂತೆ ಪಕ್ಷಾಂತರ ಮಾಡಿದವರಲ್ಲ.
ತನ್ನ 13ನೇ ವಯಸ್ಸಿಗೇ ಬಣ್ಣ ಹಚ್ಚಿ, 16ನೇ ವಯಸ್ಸಿಗೆ ಡಾ.ರಾಜ್ ಎದುರು ಪ್ರೇಮದ ಕಾಣಿಕೆಯಲ್ಲಿ ನಾಯಕಿಯಾಗಿ ಮಿಂಚಿದ ಈ ಗಿರಿಕನ್ಯೆ ತನ್ನ ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಏಳುಬೀಳು ಕಂಡುಬಂದಂತವರು. ಪ್ರತಿಭಾವಂತ ನಟನಾಗಿದ್ದರೂ, ತನ್ನ ಚಟಗಳಿಗೆ ಮಿತಿ ಹೇರಿಕೊಳ್ಳದೆ ಮರೆಯಾಗಿ ಹೋದ ಟೈಗರ್ ಪ್ರಭಾಕರ್ ಜೊತೆ ಜಯಮಾಲ ಇಟ್ಟ ಮೊದಲ ದಾಂಪತ್ಯ ದೀರ್ಘಕಾಲ ಉಳಿಯಲಿಲ್ಲ. ಯಾವ ಮುಲಾಜುಗಳಿಗೂ ಕಟ್ಟುಬೀಳದೆ ಡೈವೋರ್ಸ್ ಪಡೆದು ಆ ದಾಂಪತ್ಯದಿಂದ ಹೊರಬಂದ ಅವರು ನಂತರ ಛಾಯಾಗ್ರಾಹಕ ರಾಮಚಂದ್ರರವರನ್ನು ಮದುವೆಯಾಗಿ ಮತ್ತೊಮ್ಮೆ ದಿಟ್ಟತೆ ತೋರಿದ್ದರು. ಮಹಿಳೆಯರಿಗೆ ಪ್ರವೇಶವಿಲ್ಲದ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ವಿವಾದ ಭುಗಿಲೆದ್ದಾಗಲೂ ಜಯಮಾಲ ಬಲು ದಿಟ್ಟತೆಯಿಂದಲೇ ಎದುರಿಸಿದ್ದರು. ಕಮರ್ಷಿಯಲ್ ಚಿತ್ರಗಳಲ್ಲಿ ಹೀರೋಯಿನ್ ಆಗಿ ಮಿಂಚುತ್ತಲೇ `ತಾಯಿ ಸಾಹೇಬ’ದಂತಹ ರಾಷ್ಟ್ರಪ್ರಶಸ್ತಿ ವಿಜೇತ ಕಲಾತ್ಮಕ ಚಿತ್ರವನ್ನೂ ನಿರ್ಮಿಸಿ ಸೈ ಅನ್ನಿಸಿಕೊಂಡಿದ್ದ ಅವರು ಮಹಿಳಾ ಕಲ್ಯಾಣ ಹಾಗೂ ಕನ್ನಡ, ಸಂಸ್ಕøತಿ ಇಲಾಖೆಗಳಿಗೆ ನ್ಯಾಯ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ. ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...