Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...