Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...