Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...