Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...