Homeಕರ್ನಾಟಕಜಿಂದಾಲ್ ವಿರುದ್ಧ ಲೋಕಲ್ ಫೈಟ್ ಹತ್ತಿಕ್ಕಿದ ಸರ್ಕಾರದ ಆಡಳಿತ ವ್ಯವಸ್ಥೆ

ಜಿಂದಾಲ್ ವಿರುದ್ಧ ಲೋಕಲ್ ಫೈಟ್ ಹತ್ತಿಕ್ಕಿದ ಸರ್ಕಾರದ ಆಡಳಿತ ವ್ಯವಸ್ಥೆ

ಅತ್ಯಂತ ಬೆಲೆಬಾಳುವ ಭೂಮಿಯನ್ನು ತೀರಾ ಕಡಿಮೆ ರೊಕ್ಕಕ್ಕೆ ಮಾರಿದ ಬಡ ರೈತರು ಇವತ್ತಿಗೂ ಸರಿಯಾದ ಬದುಕು ಕಟ್ಟಿಗೊಂಡಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2016ರ ಸಂದರ್ಭದಲ್ಲಿ ಸ್ಥಳೀಯರು ಜಿಂದಾಲ್ ವಿರುದ್ಧ ಕಟ್ಟಿದ ಹೋರಾಟವನ್ನು ಪೊಲೀಸ್ ಶಕ್ತಿಯನ್ನು ಬಳಸಿ ಹತ್ತಿಕ್ಕಿದ್ದು ಆಡಳಿತ ವ್ಯವಸ್ಥೆಯೇ. ಆಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಇತರ ಯಾವ ಪಕ್ಷವೂ ಹೋರಾಟ ರೂಪಿಸಿದ ಜನರ ನೆರವಿಗೆ ನಿಲ್ಲಲಿಲ್ಲ. ಇಲ್ಲಿ ಎಲ್ಲ ಪಕ್ಷಗಳನ್ನು, ಅಧಿಕಾರಿಗಳನ್ನು ಜಿಂದಾಲ್ ‘ಒಳ ಹಾಕಿಕೊಂಡಿದೆ’ ಎಂಬುದು ಸ್ಥಳೀಯರ ಆರೋಪ,,,,

‘ಎಲ್ಲ ಪಾರ್ಟಿದವರೂ ಅವ್ರ ಜೊತೆಗಿನ ಅದಾರ್ರಿ. ಈಗ 3,600 ಎಕರೆ ಭೂಮೀನಾ ಜುಜಬಿ ರೇಟಿಗೆ ಸರ್ಕಾರ ಮಾರಾಕ ಹೊಂಟೈತಿ. ಈಗ್ಲೂ ನಾವು ಜನರನ್ನ ಸೇರಿಸೋಕ್ ಟ್ರೈ ಮಾಡ್ತಿದ್ದೀವಿ, ಆದ್ರ 2016ರೊಳಗ ಪ್ರತಿಭಟನೆ ಮಾಡಿದಾಗ, ಪೊಲೀಸರು ಮಂದಿಗೆ ಬಾಳ ಕಾಟ ಕೊಟ್ರು. 42 ಜನರ ಮ್ಯಾಲ ಕೇಸು ಹಾಕಿ ಕೋರ್ಟು ಕಚೇರಿ ಅಡ್ಡಾಡಿಸಿ ಸುಸ್ತು ಮಾಡಿದ್ರು. ಈಗ ಹೋರಾಟಕ್ಕ ಕರೆದ್ರ ಜನ ಯಾಕ್ ಬೇಕಪ್ಪ, ಎಲ್ಲ ಅವ್ರ ಕಡಿಗೆ ಅದಾರ’ ಎನ್ನುವ ಪರಿಸ್ಥಿತಿಯಿದೆ.

2016ರಲ್ಲಿ ಜಿಂದಾಲ್‍ನ ಡಾಂಬರು ಪ್ಲಾಂಟ್ (ECPL ಘಟಕ) ವಿರೋಧಿಸಿ ತೋರಣಗಲ್ಲಿನಲ್ಲಿ ಬೃಹತ್ ಪ್ತತಿಭಟನೆ ಮತ್ತು ಸಭೆ ನಡೆಸಿದ್ದ ಮುಂದಾಳುಗಳ ಪೈಕಿ ಒಬ್ಬರಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಶರಣಪ್ಪ ಕೋಟಿಗನಾಳ 2016ರಲ್ಲಿ ನಡೆದ ಸರ್ಕಾರದ ದೌರ್ಜನ್ಯವನ್ನು ನೆನಪಿಸಿದರು.

‘ಆಗ ಜಿಂದಾಲ್ ಸಪೋರ್ಟು ಮಾಡಿದ್ದ ನಮ್ ಸರ್ಕಾರದ ವಿರುದ್ಧವೂ ನಾವು ನಿಂತಿದ್ದೀವಿ’ ಎನ್ನುತ್ತಾರೆ ಕಾಂಗ್ರೆಸ್‍ನಿಂದ ಆ ಭಾಗದಲ್ಲಿ 2011-15ರ ಅವಧಿಯಲ್ಲಿ ಜಿಪಂ ಸದಸ್ಯರಾಗಿದ್ದ ಶರಣಪ್ಪ. ‘ಜನರ ಬದುಕು, ಇಲ್ಲಿನ ಅಗ್ರಿಕಲ್ಚರ್ ಎಲ್ಲ ಎಕ್ಕುಟ್ಟಿ ಹೋಗುವಾಗ ಪಾರ್ಟಿ-ಗೀರ್ಟಿ ನೋಡಬಾರ್ದಲ್ಲರಿ?’ ಎನ್ನುತ್ತಾರೆ.

ಇನ್ಸುರನ್ಸ್ ಉದ್ಯೋಗಿಯಾಗಿದ್ದು ಆ ಹೋರಾಟದಲ್ಲಿ ಭಾಗವಹಿಸಿದ್ದ ಚನ್ನಬಸಯ್ಯ, ‘ಇವತ್ತು ಅದಾ ಪ್ರಾಬ್ಲಂ ಆಗೈತಿ. ಯಾವುದೋ ಪಕ್ಷದ ಸದಸ್ಯರು ಅಂತಾ ತಮಗ ತಾವ ಅನಕೊಂಡಿರುವ ಜನ್ರು ಕೂಡ ಪ್ರತಿಭಟನೆ ಅಂದ್ರ ಹಿಂದಕ್ಕ ಸರಿತಾರ…ಈ ಸಲ ನಾವು ಪ್ರೆಸ್‍ಗೆಲ್ಲ ಮಾಹಿತಿ ಕೊಟ್ಟೀವಿ…ಹೋರಾಟನೂ ಶುರು ಮಾಡ್ತೀವಿ…’ ಎಂದರು.

ಜಿಂದಾಲಿನ ಹೆಡ್ ಆಫೀಸ್ ಇರುವ ತೋರಣಗಲ್ಲಿನ ಈ ಇಬ್ಬರು ನಮ್ಮ ಪೋರ್ಟಲ್ ಮುಂದೆ ತೆರೆದಿಟ್ಟ ಜಿಂದಾಲಿನ ಕತೆ ಮತ್ತು ಜನರ ವ್ಯಥೆ ಇಲ್ಲಿದೆ. ಇಡೀ ರಾಜಕೀಯ ವ್ಯವಸ್ಥೆಯೇ ಹೇಗೆ ಜಿಂದಾಲ್ ಪರ ಎನ್ನುವುದರ ಒಳಸುಳಿಗಲೂ ಇವೆ:

“ತೋರಣಗಲ್ ಮತ್ತು ಸುತ್ತಮುತ್ತಲಿನ ಹಳ್ಳಿಗಳೆಲ್ಲ ಇವತ್ತು ಸ್ಲಮ್ ತರಹ ಆಗಿವೆ. ಜನರ ಆರೋಗ್ಯ ಮತ್ತು ಹಳ್ಳಿಗಳ ಬದುಕಿನ ಸ್ವಾಸ್ಥ್ಯವನ್ನೇ ಹಾಳು ಮಾಡುವ ಡಾಂಬರು ಪ್ಲಾಂಟು ಇಲ್ಲಿ ಬೇಡ. ಇಲ್ಲಿನ ಪರಿಸರಕ್ಕೆ ಇದು ಮಾರಕ. ಪ್ಲಾಂಟಿನ ಕಲ್ಮಷ ಅಂತರ್ಜಲಕ್ಕೆ ಸೇರಿದರೆ ದೊಡ್ಡ ಅಪಾಯ ಎಂದು ಹೋರಾಟ ಕಟ್ಟಿದ್ದೆವು. ತೋರಣಗಲ್, ಹಂಸಾಪುರ, ಕುಡತಿನಿ ಜನರೆಲ್ಲ ನಮಗೆ ಸಪೋರ್ಟು ಮಾಡಿದ್ದರು. ಆದರೆ ಈ ಪ್ರತಿಭಟನೆ ನೋಡಿ ದಂಗಾದ ಜಿಂದಾಲ್ ಜಿಲ್ಲೆಯ ಆಡಳಿತ ವ್ಯವಸ್ಥೆಯ ನೆರವು ಪಡೆದು ಜನರಲ್ಲಿ ಭೀತಿ ಉಂಟು ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕಿತು. ಎಲ್ಲ ಪಕ್ಷಗಳ ಪ್ರಮುಖರೂ ಜಿಂದಾಲಿನ ಫಲಾನುಭವಿಗಳೇ ಆಗಿರುವುದರಿಂದ ಹೊರಗಿನ ಸಂಘಟನೆಗಳ ನೆರವನ್ನೂ ಪಡೆದು ಮತ್ತೆ ಹೋರಾಟ ಕಟ್ಟಬೇಕಿದೆ….

1971ರಲ್ಲಿ ಇಲ್ಲಿ ಸರ್ಕಾರಿ ಸ್ವಾಮ್ಯದ ಉಕ್ಕಿನ ಘಟಕ ಸ್ಥಾಪಿಸಲು ನಿರ್ಧರಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು 1972ರಲ್ಲಿ ನೋಟಿಫಿಕೆಷನ್ ಹೊರಡಿಸಿದರು. 1972ರಲ್ಲಿ ಇಲ್ಲಿ ಪ್ರತಿ ಎಕರೆಗೆ ಕೇವಲ 800ರಿಂದ 1,200 ರೂಗೆ ನೀಡಿ ಭೂಸ್ವಾಧಿನ ಮಾಡಿಕೊಳ್ಳಲಾಗಿತ್ತು. 1991-92ರಲ್ಲಿ ಮನಮೋಹನಸಿಂಗ್ ಸರ್ಕಾರದಲ್ಲಿ ಉಕ್ಕು ಖಾತೆಯ ಸಚಿವರಾಗಿದ್ದ ಇಲ್ಲಿನ ಸಂಸದ ಬಸವರಾಜ ಪಾಟೀಲ ಅನ್ವರಿಯವರು ದೆಹಲಿಯಲ್ಲಿ ಒಂದು ಪ್ರೆಸ್ ಮೀಟ್ ಮಾಡಿ, ನಷ್ಟದಲ್ಲಿರುವ ಸರ್ಕಾರಿ ಉಕ್ಕು ಉದ್ಯಮಗಳನ್ನು ಖಾಸಗಿಯವರಿಗೆ ಕೊಡುವ ನಿರ್ಧಾರ ಪ್ರಕಟಿಸಿದರು. ಅವರ ಮೂಲ ಉದ್ದೇಶವೇ ವಿಜಯನಗರ ಸ್ಟೀಲ್ಸ್ ಅನ್ನು ಜಿಂದಾಲ್ಗೆ ನೀಡೋದೇ ಆಗಿತ್ತು….ಕಾರ್ಮಿಕ ಸಂಘಟನೆಗಳ ಹೋರಾಟಗಳನ್ನೆಲ್ಲ ಮುರಿಯಲಾಗಿತು.

1994ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಜಿಂದಾಲ್‍ನ ಭೂಮಿಪೂಜೆ ನಡೆದೇ ಹೋಯ್ತು. ವಿಜಯನಗರ ಸ್ಟೀಲ್ಸ್‍ನ ಭೂಮಿಯೆಲ್ಲ ಜಿಂದಾಲ್ ಪಾಲಾಯಿತು. ಆಗ ರೈತರಿಗೆ ಎಕ್ಸಗ್ರೇಸಿಯಾ ಅಂತ 5 ಸಾವಿರ ಕೊಟ್ಟು ಮರಳು ಮಾಡಿದರು. ಲೀಸ್‍ನಲ್ಲಿರುವ ಈ ಭೂಮಿಯನ್ನು ಹತ್ತು ವರ್ಷಕ್ಕೊಮ್ಮೆ ರಿನೀವಲ್ ಮಾಡಬೇಕು. 2006ರಲ್ಲಿ ರಿನೀವಲ್ ಮಾಡುವಾಗ ಮತ್ತೆ ಭೂಮಿ ಕಳೆದುಕೊಂಡ ರೈತರಿಗೆ 5 ಸಾವಿರ ಎಕ್ಸ್‍ಗ್ರೇಸಿಯಾ ಕೊಟ್ಟು ಹಿಂದಕ್ಕೆ ತಳ್ಳಿದರು. ಫಲವತ್ತಾದ ಭೂಮಿ, ನೀರಿನ ಅನುಕೂಲವನ್ನು ಪಡೆದ ಭೂಮಿಯೂ ಉಕ್ಕಿಗಾಗಿ ನೆಗೆದು ಬಿದ್ದಂತಾಯಿತು…

ವ್ಯಾಪಾರದಲ್ಲಿ ಎಷ್ಟ ಕಿತ್ತಾಟ ಇರ್ಲಿ, ಅದಿರುಗಳ್ಳರೆಲ್ಲ ಇಂತಹಾ ವಿಷ್ಯದೊಳಗ ಒಂದಾಗ್ತಾರ..ಯಡಿಯೂರಪ್ಪ ಇದ್ದಾಗ ಇವರದೇ ಸಾಮ್ರಾಜ್ಯ ಮಾಡಿಕೊಂಡಿದ್ದರಲ್ಲ? ಅಕ್ರಮವಾಗಿ ಅದಿರು ಮಾರಿಕೊಂಡ ಆರೋಪವೂ ಜಿಂದಾಲ್ ಮ್ಯಾಲ ಇದೆ. ಸರ್ಕಾರ ವಶಪಡಿಸಿಕೊಂಡ ಅಕ್ರಮ ಅದಿರನ್ನು ಹರಾಜಿಗೆ ಹಾಕುವಾಗಲೂ ಇಲ್ಲಿ ದಂಧೆ ನಡೆತಾ ಇದೆ. ಉತ್ತಮ ದರ್ಜೇಯ ಅದಿರನ್ನು ಕಡಿಮೆ ದರ್ಜೆಯ ಅದಿರು ಎಂದು ನಮೂದಿಸುವ ಅಧಿಕಾರಿಗಳು ಜುಜುಬಿ ರೇಟಿಗೆ ಜಿಂದಾಲ್‍ನಂತಹ ಕಂಪನಿಗಳಿಗೆ ಮಾರಿ ತಾವೂ ದುಂಡಗಾಗ್ತಾರ…ಎಲ್ಲ ಪಾರ್ಟಿಗಳಿಗೂ ಇದೆಲ್ಲ ಗೊತ್ತು….

ಅತ್ಯಂತ ಬೆಲೆಬಾಳುವ ಭೂಮಿಯನ್ನು ತೀರಾ ಕಡಿಮೆ ರೊಕ್ಕಕ್ಕೆ ಮಾರಿದ ಬಡ ರೈತರು ಇವತ್ತಿಗೂ ಸರಿಯಾದ ಬದುಕು ಕಟ್ಟಿಗೊಂಡಿಲ್ಲ. ಈಗ ಮತ್ತೆ ಲೀಸ್ ಭೂಮಿಯನ್ನು ತೀರಾ ಕಡಿಮೆ ದರಕ್ಕೆ ಕ್ರಯಪತ್ರ ಮಾಡಾಕ್ ಹೊರಟ ಸರ್ಕಾರದ ವಿರುದ್ಧ ರಾಜ್ಯದ ತುಂಬ ದೊಡ್ಡ ದನಿ ಎತ್ತಬೇಕು. ರಾಜಕೀಯ ಪಕ್ಷಗಳನ್ನು ಈ ಹೋರಾಟದ ಸನಿಹಕ್ಕೂ ಬಿಡಬಾರದು. ಅವೂ ಬರೋದೂ ಇಲ್ಲ ಬಿಡ್ರಿ…

ಆಗೀಗ ಕೊಟ್ಟ ಭೂಮಿ ಲೆಕ್ಕ ಹಾಕಿದ್ರ ಜಿಂದಾಲ್ ಹತ್ರ ಈಗ ಸಾವಿರ ಎಕರೆ ಭೂಮಿನ ಇರಬಹುದು. ಡಾಂಬರು. ಪೇಂಟ್ಸ್ ಅಂತಾ ಕೆಮಿಕಲ್ ವ್ಯಹಾರಕ್ಕ ಅವ್ರು ಬ್ಯಾರೆದಾರ ಜತಿ ಒಪ್ಪಂದ ಮಾಡಿಕೊಂತ ಹೊಂಟಾರ,,,ಇದೂ ಒಂದ ತರಹ ರಿಯಲ್ ಎಸ್ಟೇಟ್ ದಂಧೇನಾ…ಸಿಎಸ್‍ಆರ್ ಯೋಜನೆ ಅಡಿ ಇಲ್ಲಿಯ ಹಳ್ಳಿಗಳ ಶಾಲೆಗಳನ್ನಾದರೂ ದತ್ತು ತಗೋಬಹುದಿತ್ತು.. ಆದರೆ ಪ್ರವಾಸಿಗರು ಬರುವ ಹೊಸಪೇಟೆ ಬಸ್‍ಸ್ಟ್ಯಾಂಡ್ ಸೌಂದರ್ಯೀಕರಣ ಮಾಡ್ಯಾರ…ಇಲ್ಲಿವರೆಗೆ ಇಪ್ಪಂದದಂತೆ ಜಿಂದಾಲ್ ನಡೆದುಕೊಂಡಿದೆಯಾ, ಸ್ಥಳಿಯರಿಗೆ ಎಷ್ಟು ಕೆಲಸ ನೀಡಿದೆ ಇವೆಲ್ಲವನ್ನೂ ಸಾರ್ವಜನಿಕರ ಮುಂದೆ ಇಡುವ ಕೆಲಸವನ್ನು ಸರ್ಕಾರ ಮೊದಲು ಮಾಡ್ಲಿ… ಆಮ್ಯಾಲ ಹ್ಯಂಗ ಭೂಮಿ ಕೊಡ್ತಾರ ನೋಡೋಣಂತ….”

ಇವು ಹೋರಾಟದ ಮುಂಚೂಣಿ ವಹಿಸಿದ್ದ ಹತ್ತಾರು ಮುಂದಾಳುಗಳಲ್ಲಿದ್ದ ಶರಣಪ್ಪ ಮತ್ತು ಚನ್ನಬಸಯ್ಯರ ಮಾತುಗಳು. ಬಳ್ಳಾರಿ ಜಿಲ್ಲೆಯ ಪ್ರಗತಿಪರ ಸಂಘಟನೆಗಳೆಲ್ಲ ಸೇರಿ ಒಂದು ದೊಡ್ಡ ಆಂದೋಲನ ಕಟ್ಟುತ್ತಿವೆ ಎಂಬ ಮಾತು ಕೇಳಿ ಬಂದಿವೆ. ಅದೂ ಆದಷ್ಟು ಬೇಗ ಶುರುವಾಗಲಿ… ಗಟ್ಟಿಗೊಳ್ಳಲಿ ಎಂಬುದು ನಮ್ಮ ಆಶಯ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...