Homeಸಾಮಾಜಿಕಜೀ ಕನ್ನಡದ ಟಿಆರ್‌ಪಿ ಬಲೆಯಲ್ಲಿ ಸಿಕ್ಕಿಬಿತ್ತೇ ಹಳ್ಳಿ ಹಕ್ಕಿ?

ಜೀ ಕನ್ನಡದ ಟಿಆರ್‌ಪಿ ಬಲೆಯಲ್ಲಿ ಸಿಕ್ಕಿಬಿತ್ತೇ ಹಳ್ಳಿ ಹಕ್ಕಿ?

- Advertisement -
- Advertisement -

ಸರೋವರ್ ಬೆಂಕಿಕೆರೆ |

ಸೆಲೆಬ್ರಿಟಿಗಳಿಗೆ ಮೀಸಲಾದ ಬಿಗ್‌ಬಾಸ್ ಅನ್ನು ಹೊರತುಪಡಿಸಿದರೆ ಕನ್ನಡದ ಬಹುತೇಕ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ ಹಳ್ಳಿಗಾಡಿನ ಪ್ರತಿಭೆಗಳು ಜನಪ್ರಿಯರಾಗಿ ಕನ್ನಡಿಗರ ಮನೆಮಾತಾಗಿರುವುದು ನಿಜಕ್ಕೂ ವಿಶೇಷ ಮತ್ತು ಅಭಿನಂದನಾರ್ಹ. ಇದೀಗ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ 15ನೇ ಅವತರಣಿಕೆಯಲ್ಲಿ ಹಾವೇರಿ ಜಿಲ್ಲೆಯ ಕುರಿ ಕಾಯುವ ಯುವಕ ಹನುಮಂತು ಮನೆಮಾತಾಗಿದ್ದಾನೆ.

ಭಾರತದಂಥ ದೇಶದಲ್ಲಿ ಕೆಲವೇ ಕೆಲವು ಸಮುದಾಯಕ್ಕೆ ಸೀಮಿತವಾಗಿದ್ದ ಕಲೆಗಳನ್ನು ಶ್ರೇಷ್ಠವೆಂಬಂತೆ ಬಿಂಬಿಸಿದ್ದು ಅಲ್ಲದೆ ಅಂತಹ ಕಲೆಗಳಿಗೆ ವೇದಿಕೆಗಳ ಮೂಲಕ ಪ್ರಚಾರಗಳು ದೊರೆಯುತ್ತಾ ಬಂದಿದೆ. ಚಮ್ಮಾರಿಕೆ, ಕುಲುಮೆ, ಕುಂಬಾರಿಕೆ, ಬೇಟೆ ಇತ್ಯಾದಿ ತಳ ಸಮುದಾಯದ ಕಲೆಗಳ ಸ್ಪರ್ಧೆಯನ್ನು ಇವತ್ತಿನ ಟಿವಿ ಶೋಗಳಲ್ಲಿ ನಾವು ನೋಡಲು ಸಾಧ್ಯವಿಲ್ಲ. ಸಂಗೀತದ ವಿಚಾರಕ್ಕೆ ಬಂದರೆ ತಳಸಮುದಾಯದ ಕಲೆಗಳಾದ ಚರ್ಮದ ತಮಟೆ, ಉರ್ಮೆ, ಸೋಬಾನ, ಜೋಗತಿ ಜೋಗಪ್ಪರ ಹಾಡು, ಇದೇ ಹನುಮಂತನ ಲಂಬಾಣಿ ಸಮುದಾಯದ ಅತ್ತುಕೊಂಡು ಹಾಡುವ ಡಾವ್ಳೋ, ಮೇರಗಳು, ದೇವಸ್ಥಾನದ ಹೊರಗೇ ನಿಂತು ಒಂದಿಡೀ ದಿನ ಹಾಡುವ ಅಸಾದಿಗಳ ಹಾಡು…. ಇವೆಲ್ಲವಕ್ಕೆ ರಿಯಾಲಿಟಿ ಶೋಗಳಲ್ಲಿ ಸ್ಪರ್ಧೆ ನಡೆಸುವುದು ಹಾಗಿರಲಿ ಕಲ್ಪನೆ ಮಾಡಿಕೊಳ್ಳುವುದೂ ಅಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿಯೂ ಯಾವುದೇ ಸಾಂಪ್ರದಾಯಿಕ ತರಬೇತಿ ಪಡೆಯದ, ಹಳ್ಳಿಗಾಡು ಬಡ ಕುರಿಗಾಯಿ ಕುಟುಂಬದ ಹನುಮಂತು ಇಂದು ಸರಿಗಮಪ-15 ರಲ್ಲಿ ಫೈನಲ್‌ಗೆ ಆಯ್ಕೆ ಆದದ್ದು ನಿಜಕ್ಕೂ ದೊಡ್ಡ ಸಾಧನೆಯೇ ಎನ್ನಬಹುದು.

ಆದರೆ ಟಿವಿ ನಿರೂಪಕರು-ಚಾನೆಲ್‌ಗಳ ಜನರ ಮುಗ್ಧತೆಗಳನ್ನು ಬಂಡವಾಳವಾಗಿಸಿಕೊಂಡು ತಮ್ಮ ಟಿಆರ್‌ಪಿ ದಾಹವನ್ನು ತೀರಿಸಿಕೊಳ್ಳುವುದರಲ್ಲಿ ವಿಕೃತವಾಗಿ ಪಳಗಿದ್ದಾರೆ. ಹಳ್ಳಿ ಹೈದಾ ಪ್ಯಾಟೇಗ್ ಬಂದ ಖ್ಯಾತಿಯ ರಾಜೇಶ್ ಅನ್ನುವ ಸಿದ್ಧಿ ಜನಾಂಗದ ಕಾಡು ಹುಡುಗನ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡ ಇದೇ ಟಿವಿ ಸಿನೆಮಾ ರಂಗದವರು ಅವನನ್ನು ಆತ್ಮಹತ್ಯೆ ಎಂಬ ಕೂಪಕ್ಕೆ ತಳ್ಳಿ ಕೊಲೆ ಮಾಡಿದ್ದನ್ನು ಈ ಸಂದರ್ಭದಲ್ಲಿ ನೆನೆಯಬಹುದು.

ಇತ್ತೀಚೆಗೆ ಪ್ರಸಾರವಾದ ಸರಿಗಮಪ ಸೆಮಿಫೈನಲ್‌ನ ಸಂಚಿಕೆಯಲ್ಲಿ ಹನುಮಂತು ಹಾಡಿದ ನಂತರ ನಿರೂಪಕಿ ಬಂದು ತುಂಬಾ ಚೆನ್ನಾಗಿ ಹಾಡಿದೆ ಮತ್ತೊಮ್ಮೆ ನಮಗಾಗಿ ಹಾಡು ಎನ್ನುತ್ತಾಳೆ. ಅವನು ಹಾಡು ಶುರು ಮಾಡಿದ ಸ್ವಲ್ಪ ಹೊತ್ತಿಗೆ ಹನುಮಂತನ ತಾಯಿ ವೇದಿಕೆ ಮೇಲೆ ಬರುತ್ತಾರೆ. ಆತನಿಗೆ ಆಶ್ಚರ್ಯವಾಗಿ ಹಾಡು ನಿಲ್ಲಿಸುತ್ತಾನೆ. ಈಗ ನಿರೂಪಕಿ ತಾಯಿಗೆ ಸಂಬಂಧಿಸಿದ ಹಾಡು ಹಾಡುತ್ತಿದ್ದೀಯ ಅದನ್ನು ನಿನ್ನ ತಾಯಿಯ ಮುಖವನ್ನು ನೋಡುತ್ತಾ ಹಾಡು ಎನ್ನುತ್ತಾಳೆ. ಹನುಮಂತು ತಾಯಿಯ ಮುಖ ನೋಡುತ್ತಾ ಹಾಡಲು ಶುರು ಮಾಡಿದಾಗ, ಪಾಪ ಆ ತಾಯಿಗೆ ಏನು ನಡೀತಿದೆ ಎನ್ನುವುದು ತಿಳಿಯದೆ ಮಗನ ಕಡೆ ನೋಡದೆ ಪ್ರೇಕ್ಷಕರ ಕಡೆ ನೋಡುತ್ತಾ ನಿಲ್ಲುತ್ತಾಳೆ. ಕ್ಯಾಮೆರಾ ತಾಯಿಯ ಕಣ್ಣಿಗೆ ಫೋಕಸ್ ಆಗುತ್ತದೆ. ಆಕೆ ಅಷ್ಟೇನು ಭಾವುಕಳಾಗದಂತೆ ಇದ್ದದ್ದು ಗಮನಿಸಿದಳೇನೋ ನಿರೂಪಕಿ, ತಾಯಿಗೆ ಮತ್ತೆ ಪ್ರಶ್ನೆ ಮಾಡುತ್ತಾಳೆ, ಮಗನ ನೆನಪು ಆಗುತ್ತಿತ್ತಾ? ನೆನಪಾದಾಗ ಏನು ಮಾಡುತ್ತಿದ್ರಿ? ಎಂದು.

ತಾಯಿ ಭಾವುಕರಾಗದೆ ಉತ್ತರ ನೀಡಿದ್ದು ನಿರೂಪಕಿಗೆ ಸಮಾಧಾನವಾಗಲಿಲ್ಲ ಅನಿಸುತ್ತೆ. ಆ ಹೊತ್ತಿಗೆ ವೇದಿಕೆಗೆ ಬಂದಿದ್ದ ಹನುಮಂತನ ತಂದೆಗೂ ಇದೇ ರೀತಿಯ ಬಗೆಬಗೆಯ ಪ್ರಶ್ನೆ. ಮತ್ತು ಎಲ್ಲರಿಗೂ ಹನುಮಂತನ ತಂದೆಗಾಗಿ ’ಅಪ್ಪ ಐ ಲವ್ಯೂ ಅಪ್ಪ ಹಾಡು ಹೇಳುವಂತೆ ಕೇಳುತ್ತಾಳೆ. ಒಟ್ಟಾರೆಯಲ್ಲಿ ಏನೆಲ್ಲಾ ಮಾಡಿ ಅಲ್ಲಿ ಭಾವನಾತ್ಮಕ ವಾತಾವರಣ ಸೃಷ್ಟಿ ಮಾಡಬಹುದೋ ಅದನ್ನು ಮಾಡುವ ಪ್ರಯತ್ನ ಮಾಡುತ್ತಿದ್ದಳು. ಹಾಡು ಮುಗಿಯುವ ಹೊತ್ತಿಗೆ ತನ್ನ ತಂದೆಯನ್ನು ನೆನೆದು ತೀರ್ಪುಗಾರ ರಾಜೇಶ್ ಕೃಷ್ಣನ್ ಅವರನ್ನು ಒಳಗೊಂಡಂತೆ ಒಂದಷ್ಟು ಜನ ಅಳುವವರನ್ನು ಕ್ಯಾಮರಾ ಕಣ್ಣಿಗೆ ಕಾಣಿಸುವುದರಲ್ಲಿ ಸಫಲರಾಗುತ್ತಾರೆ. ಈ ಹೊತ್ತಿಗೆ ಅಲ್ಲೇನು ನಡೆಯುತ್ತಿದೆ ಎನ್ನುವ ಅರಿವು ಇಲ್ಲದ ರೀತಿಯಲ್ಲಿ ಹನುಮಂತನ ಕುಟುಂಬ ವೇದಿಕೆ ಮೇಲೆ ಸುಮ್ಮನೆ ನಿಂತಿದ್ದರು.

ಈ ಕಾರ್ಯಕ್ರಮ ನೋಡುತ್ತಿದ್ದ ಸೂಕ್ಷ್ಮ ವೀಕ್ಷಕರಿಗೆ ಇದೆಲ್ಲವೂ ಟಿಆರ್‌ಪಿ ಗೇಮ್ ಎನ್ನುವುದು ಅರ್ಥವಾಗುತ್ತಿತ್ತು. ಸೆಮಿ ಫೈನಲ್ ಪ್ರಸಾರ ಆಗುವ ಮೊದಲೇ ದಿನಪತ್ರಿಕೆಗಳಲ್ಲಿ ಸೆಮಿಫೈನಲ್ ಕಾರ್ಯಕ್ರಮದಲ್ಲಿ ಭಾವನಾತ್ಮಕ ಸನ್ನಿವೇಶಗಳು ಇರಲಿವೆ ಎಂದು ಸುದ್ಧಿ ಮಾಡಿಸಿದ್ದನ್ನು ಗಮನಿಸಿದರೆ ರಿಯಾಲಿಟಿ ಶೋಗಳಲ್ಲಿ ನಡೆಯುವ ಭಾವನಾತ್ಮಕ ಸನ್ನಿವೇಶಗಳು ಟಿಆರ್‌ಪಿಗಾಗಿ ಜನರನ್ನು ಹಿಡಿದಿಡಲು ಮಾಡುವ ಪೂರ್ವನಿಯೋಜಿತ ಪ್ಲಾನ್‌ಗಳು ಎಂಬ ಅನುಮಾನ ಹುಟ್ಟುತ್ತದೆ. ಹಲವು ಬಾರಿ ನೂರಕ್ಕೆ ನೂರು ಅಂಕ ಪಡೆದಿರುವ ಹನುಮಂತನಿಗಿಂತ ಇತರರು ಚೆನ್ನಾಗಿ ಹಾಡುತ್ತಾರೆ ಎಂದು ವಾದಿಸುವವರೂ ಇದ್ದಾರೆ. ಕಾರ್ಯಕ್ರಮದ ಕೊನೆಯವರೆಗೂ ಜನರನ್ನು ಹಿಡಿದಿಡಲು ಮುಗ್ಧತೆಯನ್ನು ಅತಿಯಾಗಿ ವೈಭವೀಕರಿಸುವ ಅಥವಾ ತಮಾಷೆ ಮಾಡುವುದನ್ನು ನಡೆಸಿಕೊಂಡೇ ಅವರನ್ನು ಫೈನಲ್‌ವರೆಗೂ ತರುತ್ತಾರೆ ಎನ್ನುವ ಆಪಾದನೆ ಸಹ ಹೊಸದೇನಲ್ಲ.

ಇದೆಲ್ಲದರ ನಡುವೆಯೂ ಹೆಚ್ಚು ಹೆಗಡೆ, ಹೊಳ್ಳ, ರಾವ್, ಶರ್ಮ, ಭಟ್‌ಗಳೇ ತುಂಬಿರುವ ಇಂತಹ ಸಂಗೀತ ವೇದಿಕೆಗಳ ನಡುವೆ ಯಾವುದೋ ಮೂಲೆಯ ಹಳ್ಳಿಯೊಂದರ ಪ್ರತಿಭೆಗೆ ಅವಕಾಶ ಸಿಗುತ್ತಿದೆ ಅನ್ನುವುದು ನಿಜವೇ ಆದರೂ, ಇದು ಟಿವಿ ಚಾನಲ್ ಅವರ ಆಟ ಮತ್ತು ಅವರದ್ದೇ ಮೈದಾನ ಅನ್ನುವುದು ವಾಸ್ತವ. ಇಂತಹ ಯಾವುದೇ ವೈಭವೀಕರಣ ಮಾಡದೇ ಭಾವಾವೇಶಕ್ಕೆ ಒಳಗಾಗದೇ ವಸ್ತುನಿಷ್ಠವಾಗಿ ನಡೆದುಕೊಳ್ಳುತ್ತಿದ್ದವರು ಹಂಸಲೇಖ ಅವರು. ಆದರೆ ಟೀವಿ ಚಾನೆಲ್‌ಗಳ ಟಿಆರ್‌ಪಿ ದಾಹದಿಂದ ಸೃಷ್ಟಿಗೊಳ್ಳುವ ಅನಿವಾರ್ಯ ಸಂದರ್ಭಗಳ ಮುಂದೆ ಅವರು ಕೂಡಾ ಸೋತು ರಾಜಿಯಾಗುವ ಮರ್ಜಿಗೆ ಸಿಲುಕಿದರಾ ಎನ್ನುವ ಪ್ರಶ್ನೆ ನಿಜಕ್ಕೂ ಅವರ ದೇಸಿ ಸಂಗೀತ ಪ್ರೀತಿಯನ್ನು ಅಪಾರವಾಗಿ ಅಭಿಮಾನಿಸುತ್ತಿದ್ದ ಸೂಕ್ಷ್ಮಸಂವೇದನೆಯ ಅಭಿಮಾನಿಗಳನ್ನು ಕಾಡುತ್ತಿದೆ.

ಹಳ್ಳಿಗಾಡಿನ ಯುವತಿ ಯುವಕರು ತಮ್ಮದೇ ಆದ ಜೀವನಶೈಲಿಯಲ್ಲಿ ಬದುಕುತ್ತಿರುತ್ತಾರೆ. ಅವರಿಗೆ ಅವರದ್ದೇ ಸಂಸ್ಕೃತಿ ಇರುತ್ತೆ. ಜೀವಪ್ರೀತಿಯೇ ಆ ಸಂಸ್ಕೃತಿಯ ಜೀವಾಳ. ಮುಗ್ಧತೆ ಅಲ್ಲಿ ಸಲೀಸಾಗಿ ಕಾಣಸಿಗುವ ಗುಣಲಕ್ಷಣ. ‘ಪ್ರತಿಭೆಗೆ ಅವಕಾಶ’ ಎಂಬ ಹೆಸರಲ್ಲಿ ಅವರನ್ನು ಸರಕಾಗಿಸಿಕೊಳ್ಳುವುದು ನಿಜಕ್ಕೂ ಕ್ರೂರ ಜಗತ್ತಿನ ಹೇಯ ಕೃತ್ಯ. ಹನುಮಂತಣ್ಣ ಮೊದಲ ಬಾರಿ ಶರೀಫಜ್ಜನ ಹಾಡು ಹಾಡಿ ಈ ರಿಯಾಲಿಟಿ ಶೋಗೆ ಆಯ್ಕೆಯಾದಾಗಲೇ ನ್ಯಾಯಪಥ ಪತ್ರಿಕೆ ಎಚ್ಚರಿಕೆಯ ಬರಹ ಪ್ರಕಟಿಸಿತ್ತು. ಅವನ ಪ್ರತಿಭೆ ಬೆಳಗಲಿ, ಆದರೆ ಮುಗ್ಧತೆ ಸರಕಾಗದಿರಲಿ ಎಂದು ಆಶಿಸಿತ್ತು. ಇದೀಗ ಹನುಮಂತುಗಿಂತ ಚೆನ್ನಾದ ಹಾಡುಗಾರಿಕೆ ಇದ್ದವರನ್ನೂ ಹಿಮ್ಮೆಟ್ಟಿಸಿ ಆತನಿಗೆ ಫೈನಲ್‌ನಲ್ಲಿ ಜಾಗ ಕೊಟ್ಟಿರೋದನ್ನು ನೋಡಿದರೆ ನಿಜಕ್ಕೂ ಅದು ಅವನ ಪ್ರತಿಭೆಗೆ ಸಂದ ಗೌರವಕ್ಕಿಂತ ಹೆಚ್ಚಾಗಿ ಅವನನ್ನು ಫೈನಲ್‌ಗೆ ಟಿಆರ್‌ಪಿ ಸರಕಾಗಿ ಬಳಸಿಕೊಳ್ಳುವ ಟೀವಿಯವರ ಹುನ್ನಾರವಾಗಿ ಕಾಣಿಸುತ್ತೆ.

ಎಷ್ಟೇ ಆಗಲಿ ಅದು ಸಂಗೀತ ಸ್ಪರ್ಧೆ. ಅಲ್ಲಿ ಸಂಗೀತವೇ ಮುಖ್ಯವಾಗಬೇಕೆ ವಿನಃ ಬೇರೆಯ ಕಾರಣಗಳಲ್ಲ. ಹನುಮಂತನ ಆಯ್ಕೆಯಲ್ಲಿ ಈ ಬೇರೆ ಕಾರಣಗಳೇ ಎದ್ದು ಕಾಣುತ್ತಿರೋದು ವಿಪರ್ಯಾಸ. ಒಂದೊಮ್ಮೆ ಅಂತಹ ಯಾವ ಲೆಕ್ಕಾಚಾರಗಳೂ ಇಲ್ಲದೆ ತನ್ನ ಹಾಡಿನ ಪ್ರತಿಭೆಯಿಂದಲೇ ಹನುಮಂತು ಈ ಸ್ಥಾನಕ್ಕೇರಿದ್ದರೆ ಪತ್ರಿಕೆ ಆತನಿಗೆ ನಿಜವಾಗಲೂ ಶುಭ ಹಾರೈಸುತ್ತದೆ. ಯಾಕೆಂದರೆ, ಕೆಲ ಪ್ರಬಲ ಸಮುದಾಯಗಳಿಗಷ್ಟೇ ಸೀಮಿತವಾಗಿದ್ದ ಇಂಥಾ Sophisticated ಕಲೆಗಳ ಚಾರಿತ್ರಿಕ trait ಅನ್ನು ಮೀರಿ ಆತ ಬೆಳೆದಿರೋದು ನಿಜಕ್ಕೂ ಹೆಮ್ಮೆಯ ವಿಷಯ. ಆದಾಗ್ಯೂ ಈ ಫ್ಯಾಂಟಸಿ ಟೀವಿ ಜಗತ್ತಿನ ವ್ಯಾಮೋಹಗಳ ಒಳಗೆ, ನಿಭಾಯಿಸಲಾಗದ ‘ಯಶಸ್ಸಿನ’ ಉಸುಕುನೆಲದೊಳಗೆ ಇಂಥಾ ಪ್ರತಿಭೆಗಳು ಹೂತು ಹೋಗದಿರಲಿ ಎಂಬುದಷ್ಟೇ ನಮ್ಮ ಕಾಳಜಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...