Homeಅಂಕಣಗಳುದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು.

- Advertisement -
- Advertisement -

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು. ಕುಟುಂಬದ ವೈರಿಗಳು ನಿರ್ನಾಮವಾಗಬೇಕು. ಊರು ಅಭಿವೃದ್ಧಿಯಾಗಬೇಕು. ಇತ್ಯಾದಿ ಆಶಯಗಳೊಂದಿಗೆ ನಡೆದುಹೋದ ಬಲವಂತದ ಮದುವೆ. ಆದರೂ ಏಗಬೇಕಿದೆ. ಒಂದುವೇಳೆ ವಿಚ್ಛೇದನವಾದರೆ, ಅದನ್ನೆ ಕಾಯುತ್ತ ಕುಳಿತ ವೈರಿಪಡೆ, ಬೇಕಾದಷ್ಟು ಧನಕನಕ ವಸ್ತುಗಳನ್ನು ಕೊಟ್ಟು ಹುಡುಗಿ ಹೇಗಾದರೂ ಇರಲಿ ಆರಿಸಿಕೊಂಡು ಹೋಗಿ ಮದುವೆ ಮಾಡಿಕೊಳ್ಳಲು ತುದಿಗಾಲ ಮೇಲೆ ನಿಂತಿದೆ. ಇಂತಹ ಅಪಾಯದ ಸನ್ನಿವೇಶವರಿತ ವಧುವಿನ ತಂದೆಯ ಪಾಡು ಹೇಳತೀರದು. ಇಂತದೊಂದು ಕುಟುಂಬದ ಸ್ಥಿತಿ ಕರ್ನಾಟಕದ ರಾಜಕಾರಣವನ್ನೇ ಹೋಲುತ್ತಿದೆಯಂತಲ್ಲಾ. ಈ ನಡುವೆ ವಧುವಿನ ಕಡೆಯ ಕುರುಬರ ಪೈಕಿಯ ಯಜಮಾನನೊಬ್ಬ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವ ತೀರ್ಮಾನ ಕೇಳಿ ಫೋನ್ ಮಾಡಬೇಕೆನಿಸಿತಲ್ಲಾ. ತಡ ಮಾಡದೆ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: … ನಿನಗ್ಯಾರಿದ್ದರೇನು ಸುಖವಿಲ್ಲಾ ಪ್ರಭುವೆ. ದಾರಿ ಸುಖವಿಲ್ಲ… ಬಾಯಾರಿತು ಎಂದು ದಳದ ಬಾವಿಗೆ ಪೋದೆ.
“ಹಲೋ ಯಾರೂ”
“ನಾನೂ ಸರ್ ಯಾಹೂ”
“ಏನಪ್ಪ ಯಾಹೂ”
“ಚೆನ್ನಾಗಿದ್ದೀರಾ ಸರ್”
“ಏನೋ ಹಿಂಗಿದೀನಿ”
“ದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರಂತಲ್ಲ ಸಾರ್”
“ಜವಾಬ್ದಾರಿ ಸಾಕು ಅನ್ನುಸ್ತು ಕೊಟ್ಟೆ”
“ಜವಾಬ್ದಾರಿ ಏನಿತ್ತು ಸಾರ್ ಅಲ್ಲಿ”
“ಒಂದು ಪಾರ್ಟಿ ಅಧ್ಯಕ್ಷ ಅಂದಮೇಲೆ ಜವಾಬ್ದಾರಿ ಇರಲ್ವೆ”

“ನಾನು ತಿಳಕಂಡಂಗೆ ಸಾರ್, ಜನತಾದಳದ ಜವಾಬ್ದಾರಿ ಅಂದ್ರೆ, ಬೆಳಿಗ್ಗೆ ತಿಂಡಿ ತಿನ್ನುವಾಗ ದೇವೇಗೌಡ್ರು ಕುಮಾರಣ್ಣ ರೇವಣ್ಣ ಆಡಿದ ಮಾತುಗಳು ನಿಮಗೆ ತಲುಪ್ತವೆ, ಅವನ್ನ ಕೇಳಿಸಿಗಂಡು ಸುಮ್ಮನಾಗದು ಅಲವೆ ಸಾರ್”
“ಅದು ನಿಮ್ಮ ಊಹೆ”

“ಆಮೇಲೆ ಅಡುಗೆ ಮನೆಯಿಂದ ಚೆನ್ನಮ್ಮ ಅದೇನೇನೊ ಹೇಳ್ತಾರೆ. ಮತ್ತೆ ಭವಾನಿ ಹೇಳಿದ್ದ ರೇವಣ್ಣ ತಂದಿರತನೆ. ಈ ತರ ಮಾತು ಕತೆ ಪಾರ್ಟಿ ಅಧ್ಯಕ್ಷನಿಗೆ ತಲುಪಬಹುದು ಅಥವಾ ತಲುಪದೆಯೂ ಇರಬಹುದು. ಇಂತಹ ಪಾರ್ಟಿಯ ಅಧ್ಯಕ್ಷನಾದವನು ಅಸಾಮಾನ್ಯ ತಾಳ್ಮೆ, ಮುಜುಗರ ಸಹಿಸಿಕೊಳೊ ಶಕ್ತಿ ಪಡೆದಿರಬೇಕು ಅಲ್ವ ಸಾರ್”
“ನೀವು ಹೇಳ್ತಕಂತ ಯಾವುದೇ ಸನ್ನಿವೇಶನ ನಾನು ಎದುರಿಸಿಲ್ಲ”

“ಪಂಚಾಯ್ತಿ ಚುನಾವಣೇಲಿ ಸ್ವಜಾತಿಗೊಂದು ಟಿಕೆಟ್ ಕೊಡಲಿಕ್ಕಾಗದ ಪಾರ್ಟಿ ಅಧ್ಯಕ್ಷಗಿರಿ ಇನ್ನೆಂತದಿರಬೇಕು ಸಾರ್”
“ನನ್ನ ರಾಜೀನಾಮೆ ಅವನ್ನೆಲ್ಲಾ ಒಳಗೊಂಡಿದೆ”

“ಒಳ್ಳೆ ಕೆಲಸ ಮಾಡಿದ್ರಿ. ಸಾಮಾನ್ಯವಾಗಿ ದೇವೇಗೌಡ್ರು ಪಾರ್ಟಿ ಅಧ್ಯಕ್ಷನ್ನ ಅವನ ಅನುಪಸ್ಥಿತೀಲಿ ಬದ್ಲಾಯಿಸ್ತಾರೆ. ಆದ್ರೆ ನೀವೇ ರಾಜೀನಾಮೆ ಕೊಟ್ಟಿದ್ದು ಒಳ್ಳೆದು. ಸಾರ್”
“ನೋಡಿ ಯಾಹೂ, ಕಾಲಕ್ಕೆ ನಾವು ಅಂಟಿಕೊಂಡು ಕೂತ್ಗಬಾರ್ದು. ಕಾಲ ಬದಲಾವಣೆ ಬಯಸಿದಾಗ ನಾವು ಬದಲಾಗಬೇಕು”

“ನಿಜ ಸಾರ್, ಆ ಸಿದ್ದರಾಮಯ್ಯನ್ನ ಹಿಡಕಂಡೋಗಿ ಕಾಂಗೈ ಸೇರಿಸಿದ್ರಿ. ನೀವು ಬಂದು ದಳದ ಅಧ್ಯಕ್ಷರಾದ್ರಿ. ಏನಾಶ್ಚರ್ಯ ಅಲವಾ”
‘‘ಅದಕ್ಕೆ ರಾಜಕಾರಣ ಅನ್ನದು”

“ಅಂದ್ರೆ ರಾಜಕಾರಣದಲ್ಲಿ ಏನಾದ್ರು ಆಗಬವುದ?”
“ನೀವೇ ನೋಡಿದ್ರಲ್ಲ, ನಿಮ್ಮಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅಂತ ಬೆಳಿಗ್ಗೆ ಕುಮಾರಸ್ವಾಮಿಗೆ ಹೇಳಿದ ಸಿದ್ದರಾಮಯ್ಯ, ಮಧ್ಯಾಹ್ನ ಒಂದು ಗಂಟೆಗೆ ಬಂದು ನಿಮ್ಮಪ್ಪನಾಣೆ ನೀನೆ ಮುಖ್ಯಮಂತ್ರಿ ಆಗು ಬಾ ಅಂದಿರೋದು. ಇಂತದ್ದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿರಲಿಲ್ಲ”

“ಇದನ್ನ ಅವಮಾನಕರ ನಡವಳಿಕೆ ಅಂತೀರಾ”
“ಇಲ್ಲ ಹಾಗನ್ನಲ್ಲ. ಮತೀಯ ಶಕ್ತಿಗೆ ಅವಕಾಶ ಕೊಡಬಾರ್ದು ಅನ್ನೊ ತೀರ್ಮಾನಕ್ಕೆ ತಲೆಬಾಗಿದ್ದು ಅಂತ ಭಾವುಸ್ತೀನಿ. ಆದ್ರೆ ಅಹಂಕಾರದ ಮಾತು ಯಾರಿಗೂ ಒಳ್ಳೆದಲ್ಲ”

“ಸಿದ್ದರಾಮಯ್ಯನಿಗೆ ಅಹಂಕಾರ ಇದೆ ಅಂತೀರಾ?”
“ಅಹಂಕಾರದ ಮೂರ್ತಿರೂಪ ಆತ”

“ಅದು ಅಹಂಕಾರದ ತರದ ವ್ಯಕ್ತಿರೂಪವಂತಲ್ಲಾ”
“ಹಾಗೇನೂ ಇಲ್ಲ. ಉಪಕಾರ ಸ್ಮರಣೆ ಇಲ್ಲದ ಧಿಮಾಕಿನ ಮನ್ಸ ಆತ. ಮನುಷ್ಯನಿಗೆ ತಪ್ಪು ತಿದ್ದಿಕಳೊ ಒಳನೋಟ, ಅಹಂಕಾರಕ್ಕೆ ಅವಕಾಶ ಕೊಡದ ವ್ಯಕ್ತಿತ್ವ ಇರಬೇಕು”

“ನೀವು ಒಂದು ಕಾಲದ ಸಿದ್ದು ಅಭಿಮಾನಿ. ಅವರಿಗಾದ ಅವಮಾನಾನ ನೀವು ಸಹಿಸುತಿರಲಿಲ್ಲ. ಸಿದ್ದುನ ಯಾರಾದ್ರು ಟೀಕೆ ಮಾಡಿದ್ರೆ ನೀವು ಪ್ರತಿಕ್ರಿಯಿಸ್ತಿದ್ರಿ. ಇದು ನಿಮ್ಮ ತಪ್ಪೊ ಸಿದ್ದರಾಮಯ್ಯರ್ ತಪ್ಪೊ ಹೇಳಿ”
“ನನ್ನದೇ ತಪ್ಪು”

“ಈ ತಪ್ಪಿನಲ್ಲಿ ಮತೀಯ ಅಂಶ ಇದೆ ಅಲ್ವ”
“ಇರಬವುದು”

“ಇರಬವುದೇನು, ಇದೆ ಸಾರ್. ನಮ್ಮ ಜನಾಂಗದ ಲೀಡ್ರು, ಅವನನ್ನ ಯಾರೂ ಟೀಕೆ ಮಾಡಬಾರ್ದು ಬೈಯ್ಯಬಾರ್ದು ಅಂತ ಭಾವಿಸಿದ್ದ ಮನಸ್ಸಿನ ಕಣ್ಣು ತೆರಿಸಿದಾನಲ್ಲ ಸಿದ್ದರಾಮಯ್ಯ”
“ಇರಬವುದು”

“ಅವುರಂಗೆ ಮಾಡಿದ್ರಿಂದ ನೀವು ದಳಕ್ಕೆ ಬಂದು ಲೀಡರಾದ್ರಿ, ಶಾಸಕರಾದ್ರಿ, ಅಧ್ಯಕ್ಷರಾದ್ರಿ”
“ನಿಜ ನನ್ನ ರಾಜಕೀಯದ ಅಂತ್ಯ, ನಿರಾಶೆಗೊಳ್ಳೊತರ ಇಲ್ಲ. ಮಾಜೀ ಪ್ರಧಾನಿಯ ಪಾರ್ಟಿಗೆ ಅಧ್ಯಕ್ಷನಾದದ್ದು ಸಾಮಾನ್ಯ ಸಂಗತಿಯಲ್ಲ”

“ಈಗಲಾದ್ರು ದೇವೇಗೌಡ್ರಿಗೆ ಕುರುಬರನ್ನ ಕಂಡ್ರೆ ಅವ್ಯಕ್ತ ಅಕ್ಕರೆ ಇದೆ ಅನ್ನದನ್ನ ಒಪ್ಪಿಗತಿರಾ”
“ನೋಡಿ ಯಾಹು, ದೇವೇಗೌಡ್ರಿಗೆ ಯಾವ ಜನಾಂಗ ಕಂಡ್ರೂ ದ್ವೇಷ ಇಲ್ಲ. ರಾಜಕಾರಣದ ಕಾರಣಕ್ಕೆ ಅಂತ ಆಪಾದನೆಗಳಿಗೆ ಗುರಿಯಾಗ್ತಾರೆ”

“ಹೌದ ಸಾರ್”
“ನೋಡಿ, ಅವುರು ಬ್ರಾಹ್ಮಣ ವಿರೋಧಿ ಅಂತಾರೆ, ಅದೂ ಕೂಡ ಸುಳ್ಳು. ಲಿಂಗಾಯತರ ಬೊಮ್ಮಾಯಿ ಅಂದ್ರೆ ಅವರಿಗೆ ಪಂಚಪ್ರಾಣ. ದಲಿತರ ಡಾ.ತಿಪ್ಪೇಸ್ವಾಮಿನ ಪಾರ್ಟಿ ಪ್ರೆಸಿಡೆಂಟ್ ಮಾಡಿದ್ರು. ಲಿಂಗಾಯಿತರ ತಿಪ್ಪಣ್ಣನ್ನ ಅಧ್ಯಕ್ಷನ್ನ ಮಾಡಿದ್ರು. ಆ ನಂತರ ಕುರುಬರ ಸಿದ್ದರಾಮಯ್ಯನ್ನ ಅಧ್ಯಕ್ಷನನ್ನಾಗಿ ಮಾಡಿ ಫೈನಾನ್ಸ್ ಮಿನಿಷ್ಟ್ರು ಮಾಡಿದ್ರು. ಈಗ ನನ್ನ ಮಾಡಿದಾರೆ”

“ಅದೇ ಸಾರ್ ನಾನೇಳಿದ್ದೂ, ಕುರುಬರನ್ನ ಮುಂದೆ ತಂದಂಗೆ ಒಕ್ಕಲಿಗರನ್ನ ತರಲಿಲ್ಲ. ಒಕ್ಕಲಿಗರನ್ನೆಲ್ಲಾ ಮುಗಿಸಿ ಅಲ್ಲಿಗೆ ತಮ್ಮ ಕುಟುಂಬವನ್ನ ನಾಟಿ ಮಾಡ್ತಾ ಬಂದ್ರು. ಇದನ್ನ ಒಪ್ಪಿಗಳ್ತಿರಾ”
“ಒಕ್ಕಲಿಗ ನಾಯಕರನ್ನ ತುಳುದ್ರು ಪರ್ಯಾಯವಾಗಿ ಒಕ್ಕಲಿಗ ಲೀಡರನ್ನ ಬೆಳಸಿದಾರೆ”

“ಅದೆಲ್ಲಾ ಅಂಗಿರ್ಲಿ. ಲೋಕಸಭಾ ಚುನಾವಣೇಲಿ ಜನ ಸಮ್ಮಿಶ್ರ ಸರ್ಕಾರದ ವಿರುದ್ಧ ಓಟು ಕೊಟ್ಟಿರೋದನ್ನ ಒಪ್ಪಿಗಳ್ತೀರಾ”

“ಮೋದಿ ಅಲೆ”
“ಮೋದಿದೂ ಇಲ್ಲ ಯಂತದೂ ಇಲ್ಲ. ಒಂದೊರ್ಸದಿಂದ ದಳದೋರು ಕಾಂಗ್ರೆಸ್‍ನೋರು ಆಡ್ತಾಯಿರೊ ಜಗಳ ನಿಲ್ಸಕ್ಕೆ ಸೋಲ್ಸಿದ್ರು”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...