Homeಕರ್ನಾಟಕಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

ಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

- Advertisement -
- Advertisement -

| ಆಕಾಶ್ ಕೆರೆಕಟ್ಟೆ |

ಈ ಸರ್ಕಾರ ಇರುತ್ತಾ ಅಥವಾ ಉರುಳುತ್ತಾ? ರಾಜೀನಾಮೆಗಳು ಸ್ವೀಕಾರ ಆಗ್ತಾವಾ ಅಥವಾ ಶಾಸಕರೇ ಅನರ್ಹರಾಗ್ತಾರಾ? ಅನ್ನೋ ಹೈಡ್ರಾಮಾಗಳ ನಡುವೆ ಗಮನಿಸಲೇಬೇಕಾದ ಇನ್ನೊಂದು ರಾಜಕೀಯ ವಿದ್ಯಮಾನ ನಡೆದಿದೆ. ಅದು ಜೆಡಿಎಸ್‍ಗೆ ನೂತನ ರಾಜ್ಯಾಧ್ಯಕ್ಷರ ಆಯ್ಕೆ. ವಿಶೇಷ ಅಂದ್ರೆ ಜೆಡಿಎಸ್ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದೊಂದನ್ನು ಹೊರತುಪಡಿಸಿದರೆ ಈ ಆಯ್ಕೆಯಲ್ಲಿ ಇನ್ನ್ಯಾವ ವಿಶೇಷವೂ ಇಲ್ಲ. ಯಾಕೆಂದರೆ ದೇವೇಗೌಡರ ಕುಟುಂಬದ ಹೊರತಾಗಿ ಜೆಡಿಎಸ್‍ಗೆ ಯಾರೇ ಅಧ್ಯಕ್ಷರಾದರು ಅವರು ಡಮ್ಮಿಯಾಗಿರಬೇಕಾಗುತ್ತೆ ಅನ್ನೋದನ್ನು ನಿರ್ಗಮಿತ `ಬಾಂಬೆಹಕ್ಕಿ’ ಎಚ್.ವಿಶ್ವನಾಥ್ ಸಾಬೀತು ಮಾಡಿಹೋಗಿದ್ದಾರೆ.

ಸಿದ್ರಾಮಯ್ಯನವರ ಹೊರತಾಗಿ ಅಧ್ಯಕ್ಷರಾದ ಗೌಡರ ಕುಟುಂಬೇತರ ವ್ಯಕ್ತಿಗಳಾದ ತಿಪ್ಪಣ್ಣ, ಮಿರಾಜುದ್ದೀನ್ ಪಟೇಲ್, ಕೃಷ್ಣಪ್ಪ ಇವರೆಲ್ಲ ಹೆಸರಿಗಷ್ಟೇ ಅಧ್ಯಕ್ಷರಾಗಿದ್ದರೆ ವಿನಾಃ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಯಾವ ಸ್ವತಂತ್ರವೂ ಅವರಿಗಿರಲಿಲ್ಲ. ರಾಜೀನಾಮೆ ಗೀಚಿ ಬಾಂಬೆ ಹೊಟೇಲ್ ಸೇರಿಕೊಂಡಿರುವ ಎಚ್.ವಿಶ್ವನಾಥ್ ಕೆ.ಆರ್.ನಗರದ ಪುರಸಭೆ ಎಲೆಕ್ಷನ್‍ಗೆ ತನಗೆ ಬೇಕಾದವರಿಗೆ ಟಿಕೇಟು ಕೊಡಿಸುವುದಕ್ಕೂ ಸಾಧ್ಯವಾಗಿರಲಿಲ್ಲ ಅಂದಮೇಲೆ `ಜೆಡಿಎಸ್ ಅಧ್ಯಕ್ಷ’ ಹುದ್ದೆ ಅದಿನ್ನೆಷ್ಟು ಗಟ್ಟಿಯದ್ದಾಗಿರಬೇಡ!

ಅಂಥಾ ಸ್ಥಾನಕ್ಕೆ ಈಗ ಎಚ್.ಕೆ.ಕುಮಾರಸ್ವಾಮಿಯನ್ನು ತಂದು ಕೂರಿಸಲಾಗಿದೆ. ನೋ ಡೌಟ್, ಇಂದಿನ ನಿದರ್ಶನಗಳಂತೆ ಅವರೂ ಡಮ್ಮಿ ಅಧ್ಯಕ್ಷರಾಗೇ ಕಾಲ ತಳ್ಳಬೇಕಾಗುತ್ತೆ. ಯಾಕೆಂದರೆ ಬರೋಬ್ಬರಿ ಐದು ಬಾರಿ ಶಾಸಕರಾಗಿರುವ ಸದ್ರಿ ಕುಮಾರಸ್ವಾಮಿ ಈ ಮೈತ್ರಿ ಸರ್ಕಾರದಲ್ಲಿ ತನಗೊಂದು ಮಂತ್ರಿ ಸ್ಥಾನ ಕೊಡಿ ಎಂದು ಕೇಳಿ ಗಿಟ್ಟಿಸಿಕೊಳ್ಳಲಾಗದಷ್ಟು ಮೆತ್ತೆ ಮನುಷ್ಯ. ಇಂಥಾ ವ್ಯಕ್ತಿ ಜೆಡಿಎಸ್ ಅಧ್ಯಕ್ಷಗಿರಿಗಿರುವ ಹಳೇ ಸಂಪ್ರದಾಯ ಮುರಿಯುವ ಯಾವ ಸಾಧ್ಯತೆಯೂ ಇಲ್ಲ. ರಾಜ್ಯ ರಾಜಕಾರಣದ ಮಾತು ಒತ್ತಟ್ಟಿಗಿರಲಿ ತವರು ಜಿಲ್ಲೆ ಹಾಸನದಲ್ಲೇ ಅವರ ಮಾತು ನಡೆಯೋದಿಲ್ಲ ಅನ್ನೋದನ್ನು ಜೆಡಿಎಸ್ ಕಾರ್ಯಕರ್ತರೇ ಮಾತಾಡಿ ಕೊಳ್ಳುತ್ತಿದ್ದಾರೆ. ಯಾಕೆಂದರೆ ಹಾಸನದ ಇಡೀ ರಾಜಕಾರಣವನ್ನು ಮುಷ್ಠಿಯಲ್ಲಿ ಹಿಡಿದು ಕೂತಿರೋದು ಎಚ್.ಡಿ.ರೇವಣ್ಣ. ಅವರ ಮುಂದೆ ಎಚ್.ಕೆ.ಕುಮಾರಸ್ವಾಮಿ ಗಟ್ಟಿಯಾಗಿ ದನಿಬಿಚ್ಚುವ ಧೈರ್ಯ ತೋರುವುದೇ ಡೌಟು.

ಹಾಸನದಲ್ಲಿ ತನ್ನ ಬಿಟ್ಟರೆ ಮತ್ತ್ಯಾವ ಶಕ್ತಿಕೇಂದ್ರಗಳೂ ಸೃಷ್ಟಿ ಆಗಬಾರದೆನ್ನುವ ಕಾರಣಕ್ಕೇ ರೇವಣ್ಣ, ಎಚ್‍ಕೆ ಕುಮಾರಸ್ವಾಮಿ ಮಂತ್ರಿಯಾಗುವುದಕ್ಕೆ ಅಡ್ಡಗಾಲು ಹಾಕಿದ್ದು ಎನ್ನಲಾಗುತ್ತಿದೆ. ಆರಂಭದಲ್ಲಿ ಕುಮಾರಸ್ವಾಮಿ ಹೆಸರು ಮಂತ್ರಿಯಾಗುವವರ ಯಾದಿಯಲ್ಲಿ ಕೇಳಿಬಂದದ್ದು ಸುಳ್ಳಲ್ಲ. ದಲಿತ ವ್ಯಕ್ತಿಗೆ ಮಂತ್ರಿಯಾಗುವ ಅವಕಾಶ ತಪ್ಪಿಸಿ, ಈಗ ಅದೇ ವ್ಯಕ್ತಿಗೆ ಅಧ್ಯಕ್ಷ ಪಟ್ಟ ಕಟ್ಟಿ ದಲಿತರ ಮೂಗಿಗೆ ತುಪ್ಪ ಸವರುವ ಯತ್ನವೂ ಇದರ ಹಿಂದಿದೆ. ಆದರೆ ಗೌಡರ ಹಟ್ಟಿಯ ಪಾರ್ಟಿಯ ಅಧ್ಯಕ್ಷಗಿರಿಯ ವಜನ್ನು ಎಂತದ್ದು ಎಂಬುದು ಗೊತ್ತಿರುವ ಸತ್ಯವಾಗಿರೋದ್ರಿಂದ ದಲಿತರ್ಯಾರು ಈ ಆಯ್ಕೆಯಿಂದ ಹಿಗ್ಗಿಲ್ಲ ಅನ್ನೋದು ವಾಸ್ತವ.

ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರಿಂದ ಆದ ಒಂದೇ ಲಾಭ ಅಂದ್ರೆ, ಜೆಡಿಎಸ್ ಶಾಸಕರು ತಾಜ್‍ವೆಸ್ಟ್‍ಎಂಡ್‍ನಿಂದ ದೇವನಹಳ್ಳಿ ರೆಸಾರ್ಟ್‍ಗೆ ಹೊರಡುವಾಗ ಮಾಧ್ಯಮಗಳ ಫೋಟೋಗ್ರಾಫರ್‍ಗಳಿಗೆ ಪ್ರಮುಖವಾಗಿ ಕಾಣಲೆಂದು ಅವರಿಗೆ ಬಸ್‍ನಲ್ಲಿ ಮುಂದಿನ ಸೀಟ್ ಸಿಕ್ಕಿದ್ದಷ್ಟೇ!

ಈ ಆಯ್ಕೆಯಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಪಕ್ಷದ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿಯನ್ನು ಆಯ್ಕೆ ಮಾಡಿರೋದು. ಅಂತೂ ದೇವೇಗೌಡರು ಕುಟುಂಬ ರಾಜಕಾರಣದ ಹಳಿ ಬಿಟ್ಟು ಪಕ್ಕಕ್ಕೆ ಸರಿಯಲಾರರು ಎಂಬುದು ಇದರಿಂದ ಸಾಬೀತಾಗಿದೆ. ಜೊತೆಗೆ ರೇವಣ್ಣನವರ ಮಗ ಪ್ರಜ್ವಲ್ ಗೆದ್ದು ಸಂಸದನಾದ ನಂತರ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ದಾಯಾದಿ ಅಸಮಾಧಾನವನ್ನು ಈ ರೀತಿ ಸರಿದೂಗಿಸಲಾಗಿದೆ. ಆದ್ರೆ ಒಂದಂತೂ ಸತ್ಯ, ಹಾಲಿ ಜೆಡಿಎಸ್ ಅಧ್ಯಕ್ಷ ಎಚ್ಕೆ ಕುಮಾರಸ್ವಾಮಿ ದೊಡ್ಡ ಗೌಡರು, ರೇವಣ್ಣ, ಕುಮಾರಣ್ಣನ ಎದುರು ಗಟ್ಟಿ ದನಿಯಾಗುವ ಮಾತಂತಿರಲಿ, ನಿಖಿಲ್ ಎದುರೂ ಗಡುಸಾಗಿ ಮಾತಾಡುವುದಕ್ಕೆ ಸಾಧ್ಯವಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...