Homeಕರ್ನಾಟಕಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

ಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

- Advertisement -
- Advertisement -

| ಆಕಾಶ್ ಕೆರೆಕಟ್ಟೆ |

ಈ ಸರ್ಕಾರ ಇರುತ್ತಾ ಅಥವಾ ಉರುಳುತ್ತಾ? ರಾಜೀನಾಮೆಗಳು ಸ್ವೀಕಾರ ಆಗ್ತಾವಾ ಅಥವಾ ಶಾಸಕರೇ ಅನರ್ಹರಾಗ್ತಾರಾ? ಅನ್ನೋ ಹೈಡ್ರಾಮಾಗಳ ನಡುವೆ ಗಮನಿಸಲೇಬೇಕಾದ ಇನ್ನೊಂದು ರಾಜಕೀಯ ವಿದ್ಯಮಾನ ನಡೆದಿದೆ. ಅದು ಜೆಡಿಎಸ್‍ಗೆ ನೂತನ ರಾಜ್ಯಾಧ್ಯಕ್ಷರ ಆಯ್ಕೆ. ವಿಶೇಷ ಅಂದ್ರೆ ಜೆಡಿಎಸ್ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದೊಂದನ್ನು ಹೊರತುಪಡಿಸಿದರೆ ಈ ಆಯ್ಕೆಯಲ್ಲಿ ಇನ್ನ್ಯಾವ ವಿಶೇಷವೂ ಇಲ್ಲ. ಯಾಕೆಂದರೆ ದೇವೇಗೌಡರ ಕುಟುಂಬದ ಹೊರತಾಗಿ ಜೆಡಿಎಸ್‍ಗೆ ಯಾರೇ ಅಧ್ಯಕ್ಷರಾದರು ಅವರು ಡಮ್ಮಿಯಾಗಿರಬೇಕಾಗುತ್ತೆ ಅನ್ನೋದನ್ನು ನಿರ್ಗಮಿತ `ಬಾಂಬೆಹಕ್ಕಿ’ ಎಚ್.ವಿಶ್ವನಾಥ್ ಸಾಬೀತು ಮಾಡಿಹೋಗಿದ್ದಾರೆ.

ಸಿದ್ರಾಮಯ್ಯನವರ ಹೊರತಾಗಿ ಅಧ್ಯಕ್ಷರಾದ ಗೌಡರ ಕುಟುಂಬೇತರ ವ್ಯಕ್ತಿಗಳಾದ ತಿಪ್ಪಣ್ಣ, ಮಿರಾಜುದ್ದೀನ್ ಪಟೇಲ್, ಕೃಷ್ಣಪ್ಪ ಇವರೆಲ್ಲ ಹೆಸರಿಗಷ್ಟೇ ಅಧ್ಯಕ್ಷರಾಗಿದ್ದರೆ ವಿನಾಃ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಯಾವ ಸ್ವತಂತ್ರವೂ ಅವರಿಗಿರಲಿಲ್ಲ. ರಾಜೀನಾಮೆ ಗೀಚಿ ಬಾಂಬೆ ಹೊಟೇಲ್ ಸೇರಿಕೊಂಡಿರುವ ಎಚ್.ವಿಶ್ವನಾಥ್ ಕೆ.ಆರ್.ನಗರದ ಪುರಸಭೆ ಎಲೆಕ್ಷನ್‍ಗೆ ತನಗೆ ಬೇಕಾದವರಿಗೆ ಟಿಕೇಟು ಕೊಡಿಸುವುದಕ್ಕೂ ಸಾಧ್ಯವಾಗಿರಲಿಲ್ಲ ಅಂದಮೇಲೆ `ಜೆಡಿಎಸ್ ಅಧ್ಯಕ್ಷ’ ಹುದ್ದೆ ಅದಿನ್ನೆಷ್ಟು ಗಟ್ಟಿಯದ್ದಾಗಿರಬೇಡ!

ಅಂಥಾ ಸ್ಥಾನಕ್ಕೆ ಈಗ ಎಚ್.ಕೆ.ಕುಮಾರಸ್ವಾಮಿಯನ್ನು ತಂದು ಕೂರಿಸಲಾಗಿದೆ. ನೋ ಡೌಟ್, ಇಂದಿನ ನಿದರ್ಶನಗಳಂತೆ ಅವರೂ ಡಮ್ಮಿ ಅಧ್ಯಕ್ಷರಾಗೇ ಕಾಲ ತಳ್ಳಬೇಕಾಗುತ್ತೆ. ಯಾಕೆಂದರೆ ಬರೋಬ್ಬರಿ ಐದು ಬಾರಿ ಶಾಸಕರಾಗಿರುವ ಸದ್ರಿ ಕುಮಾರಸ್ವಾಮಿ ಈ ಮೈತ್ರಿ ಸರ್ಕಾರದಲ್ಲಿ ತನಗೊಂದು ಮಂತ್ರಿ ಸ್ಥಾನ ಕೊಡಿ ಎಂದು ಕೇಳಿ ಗಿಟ್ಟಿಸಿಕೊಳ್ಳಲಾಗದಷ್ಟು ಮೆತ್ತೆ ಮನುಷ್ಯ. ಇಂಥಾ ವ್ಯಕ್ತಿ ಜೆಡಿಎಸ್ ಅಧ್ಯಕ್ಷಗಿರಿಗಿರುವ ಹಳೇ ಸಂಪ್ರದಾಯ ಮುರಿಯುವ ಯಾವ ಸಾಧ್ಯತೆಯೂ ಇಲ್ಲ. ರಾಜ್ಯ ರಾಜಕಾರಣದ ಮಾತು ಒತ್ತಟ್ಟಿಗಿರಲಿ ತವರು ಜಿಲ್ಲೆ ಹಾಸನದಲ್ಲೇ ಅವರ ಮಾತು ನಡೆಯೋದಿಲ್ಲ ಅನ್ನೋದನ್ನು ಜೆಡಿಎಸ್ ಕಾರ್ಯಕರ್ತರೇ ಮಾತಾಡಿ ಕೊಳ್ಳುತ್ತಿದ್ದಾರೆ. ಯಾಕೆಂದರೆ ಹಾಸನದ ಇಡೀ ರಾಜಕಾರಣವನ್ನು ಮುಷ್ಠಿಯಲ್ಲಿ ಹಿಡಿದು ಕೂತಿರೋದು ಎಚ್.ಡಿ.ರೇವಣ್ಣ. ಅವರ ಮುಂದೆ ಎಚ್.ಕೆ.ಕುಮಾರಸ್ವಾಮಿ ಗಟ್ಟಿಯಾಗಿ ದನಿಬಿಚ್ಚುವ ಧೈರ್ಯ ತೋರುವುದೇ ಡೌಟು.

ಹಾಸನದಲ್ಲಿ ತನ್ನ ಬಿಟ್ಟರೆ ಮತ್ತ್ಯಾವ ಶಕ್ತಿಕೇಂದ್ರಗಳೂ ಸೃಷ್ಟಿ ಆಗಬಾರದೆನ್ನುವ ಕಾರಣಕ್ಕೇ ರೇವಣ್ಣ, ಎಚ್‍ಕೆ ಕುಮಾರಸ್ವಾಮಿ ಮಂತ್ರಿಯಾಗುವುದಕ್ಕೆ ಅಡ್ಡಗಾಲು ಹಾಕಿದ್ದು ಎನ್ನಲಾಗುತ್ತಿದೆ. ಆರಂಭದಲ್ಲಿ ಕುಮಾರಸ್ವಾಮಿ ಹೆಸರು ಮಂತ್ರಿಯಾಗುವವರ ಯಾದಿಯಲ್ಲಿ ಕೇಳಿಬಂದದ್ದು ಸುಳ್ಳಲ್ಲ. ದಲಿತ ವ್ಯಕ್ತಿಗೆ ಮಂತ್ರಿಯಾಗುವ ಅವಕಾಶ ತಪ್ಪಿಸಿ, ಈಗ ಅದೇ ವ್ಯಕ್ತಿಗೆ ಅಧ್ಯಕ್ಷ ಪಟ್ಟ ಕಟ್ಟಿ ದಲಿತರ ಮೂಗಿಗೆ ತುಪ್ಪ ಸವರುವ ಯತ್ನವೂ ಇದರ ಹಿಂದಿದೆ. ಆದರೆ ಗೌಡರ ಹಟ್ಟಿಯ ಪಾರ್ಟಿಯ ಅಧ್ಯಕ್ಷಗಿರಿಯ ವಜನ್ನು ಎಂತದ್ದು ಎಂಬುದು ಗೊತ್ತಿರುವ ಸತ್ಯವಾಗಿರೋದ್ರಿಂದ ದಲಿತರ್ಯಾರು ಈ ಆಯ್ಕೆಯಿಂದ ಹಿಗ್ಗಿಲ್ಲ ಅನ್ನೋದು ವಾಸ್ತವ.

ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರಿಂದ ಆದ ಒಂದೇ ಲಾಭ ಅಂದ್ರೆ, ಜೆಡಿಎಸ್ ಶಾಸಕರು ತಾಜ್‍ವೆಸ್ಟ್‍ಎಂಡ್‍ನಿಂದ ದೇವನಹಳ್ಳಿ ರೆಸಾರ್ಟ್‍ಗೆ ಹೊರಡುವಾಗ ಮಾಧ್ಯಮಗಳ ಫೋಟೋಗ್ರಾಫರ್‍ಗಳಿಗೆ ಪ್ರಮುಖವಾಗಿ ಕಾಣಲೆಂದು ಅವರಿಗೆ ಬಸ್‍ನಲ್ಲಿ ಮುಂದಿನ ಸೀಟ್ ಸಿಕ್ಕಿದ್ದಷ್ಟೇ!

ಈ ಆಯ್ಕೆಯಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಪಕ್ಷದ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿಯನ್ನು ಆಯ್ಕೆ ಮಾಡಿರೋದು. ಅಂತೂ ದೇವೇಗೌಡರು ಕುಟುಂಬ ರಾಜಕಾರಣದ ಹಳಿ ಬಿಟ್ಟು ಪಕ್ಕಕ್ಕೆ ಸರಿಯಲಾರರು ಎಂಬುದು ಇದರಿಂದ ಸಾಬೀತಾಗಿದೆ. ಜೊತೆಗೆ ರೇವಣ್ಣನವರ ಮಗ ಪ್ರಜ್ವಲ್ ಗೆದ್ದು ಸಂಸದನಾದ ನಂತರ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ದಾಯಾದಿ ಅಸಮಾಧಾನವನ್ನು ಈ ರೀತಿ ಸರಿದೂಗಿಸಲಾಗಿದೆ. ಆದ್ರೆ ಒಂದಂತೂ ಸತ್ಯ, ಹಾಲಿ ಜೆಡಿಎಸ್ ಅಧ್ಯಕ್ಷ ಎಚ್ಕೆ ಕುಮಾರಸ್ವಾಮಿ ದೊಡ್ಡ ಗೌಡರು, ರೇವಣ್ಣ, ಕುಮಾರಣ್ಣನ ಎದುರು ಗಟ್ಟಿ ದನಿಯಾಗುವ ಮಾತಂತಿರಲಿ, ನಿಖಿಲ್ ಎದುರೂ ಗಡುಸಾಗಿ ಮಾತಾಡುವುದಕ್ಕೆ ಸಾಧ್ಯವಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...