Homeಕರ್ನಾಟಕಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

ಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

- Advertisement -
- Advertisement -

| ಆಕಾಶ್ ಕೆರೆಕಟ್ಟೆ |

ಈ ಸರ್ಕಾರ ಇರುತ್ತಾ ಅಥವಾ ಉರುಳುತ್ತಾ? ರಾಜೀನಾಮೆಗಳು ಸ್ವೀಕಾರ ಆಗ್ತಾವಾ ಅಥವಾ ಶಾಸಕರೇ ಅನರ್ಹರಾಗ್ತಾರಾ? ಅನ್ನೋ ಹೈಡ್ರಾಮಾಗಳ ನಡುವೆ ಗಮನಿಸಲೇಬೇಕಾದ ಇನ್ನೊಂದು ರಾಜಕೀಯ ವಿದ್ಯಮಾನ ನಡೆದಿದೆ. ಅದು ಜೆಡಿಎಸ್‍ಗೆ ನೂತನ ರಾಜ್ಯಾಧ್ಯಕ್ಷರ ಆಯ್ಕೆ. ವಿಶೇಷ ಅಂದ್ರೆ ಜೆಡಿಎಸ್ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದೊಂದನ್ನು ಹೊರತುಪಡಿಸಿದರೆ ಈ ಆಯ್ಕೆಯಲ್ಲಿ ಇನ್ನ್ಯಾವ ವಿಶೇಷವೂ ಇಲ್ಲ. ಯಾಕೆಂದರೆ ದೇವೇಗೌಡರ ಕುಟುಂಬದ ಹೊರತಾಗಿ ಜೆಡಿಎಸ್‍ಗೆ ಯಾರೇ ಅಧ್ಯಕ್ಷರಾದರು ಅವರು ಡಮ್ಮಿಯಾಗಿರಬೇಕಾಗುತ್ತೆ ಅನ್ನೋದನ್ನು ನಿರ್ಗಮಿತ `ಬಾಂಬೆಹಕ್ಕಿ’ ಎಚ್.ವಿಶ್ವನಾಥ್ ಸಾಬೀತು ಮಾಡಿಹೋಗಿದ್ದಾರೆ.

ಸಿದ್ರಾಮಯ್ಯನವರ ಹೊರತಾಗಿ ಅಧ್ಯಕ್ಷರಾದ ಗೌಡರ ಕುಟುಂಬೇತರ ವ್ಯಕ್ತಿಗಳಾದ ತಿಪ್ಪಣ್ಣ, ಮಿರಾಜುದ್ದೀನ್ ಪಟೇಲ್, ಕೃಷ್ಣಪ್ಪ ಇವರೆಲ್ಲ ಹೆಸರಿಗಷ್ಟೇ ಅಧ್ಯಕ್ಷರಾಗಿದ್ದರೆ ವಿನಾಃ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಯಾವ ಸ್ವತಂತ್ರವೂ ಅವರಿಗಿರಲಿಲ್ಲ. ರಾಜೀನಾಮೆ ಗೀಚಿ ಬಾಂಬೆ ಹೊಟೇಲ್ ಸೇರಿಕೊಂಡಿರುವ ಎಚ್.ವಿಶ್ವನಾಥ್ ಕೆ.ಆರ್.ನಗರದ ಪುರಸಭೆ ಎಲೆಕ್ಷನ್‍ಗೆ ತನಗೆ ಬೇಕಾದವರಿಗೆ ಟಿಕೇಟು ಕೊಡಿಸುವುದಕ್ಕೂ ಸಾಧ್ಯವಾಗಿರಲಿಲ್ಲ ಅಂದಮೇಲೆ `ಜೆಡಿಎಸ್ ಅಧ್ಯಕ್ಷ’ ಹುದ್ದೆ ಅದಿನ್ನೆಷ್ಟು ಗಟ್ಟಿಯದ್ದಾಗಿರಬೇಡ!

ಅಂಥಾ ಸ್ಥಾನಕ್ಕೆ ಈಗ ಎಚ್.ಕೆ.ಕುಮಾರಸ್ವಾಮಿಯನ್ನು ತಂದು ಕೂರಿಸಲಾಗಿದೆ. ನೋ ಡೌಟ್, ಇಂದಿನ ನಿದರ್ಶನಗಳಂತೆ ಅವರೂ ಡಮ್ಮಿ ಅಧ್ಯಕ್ಷರಾಗೇ ಕಾಲ ತಳ್ಳಬೇಕಾಗುತ್ತೆ. ಯಾಕೆಂದರೆ ಬರೋಬ್ಬರಿ ಐದು ಬಾರಿ ಶಾಸಕರಾಗಿರುವ ಸದ್ರಿ ಕುಮಾರಸ್ವಾಮಿ ಈ ಮೈತ್ರಿ ಸರ್ಕಾರದಲ್ಲಿ ತನಗೊಂದು ಮಂತ್ರಿ ಸ್ಥಾನ ಕೊಡಿ ಎಂದು ಕೇಳಿ ಗಿಟ್ಟಿಸಿಕೊಳ್ಳಲಾಗದಷ್ಟು ಮೆತ್ತೆ ಮನುಷ್ಯ. ಇಂಥಾ ವ್ಯಕ್ತಿ ಜೆಡಿಎಸ್ ಅಧ್ಯಕ್ಷಗಿರಿಗಿರುವ ಹಳೇ ಸಂಪ್ರದಾಯ ಮುರಿಯುವ ಯಾವ ಸಾಧ್ಯತೆಯೂ ಇಲ್ಲ. ರಾಜ್ಯ ರಾಜಕಾರಣದ ಮಾತು ಒತ್ತಟ್ಟಿಗಿರಲಿ ತವರು ಜಿಲ್ಲೆ ಹಾಸನದಲ್ಲೇ ಅವರ ಮಾತು ನಡೆಯೋದಿಲ್ಲ ಅನ್ನೋದನ್ನು ಜೆಡಿಎಸ್ ಕಾರ್ಯಕರ್ತರೇ ಮಾತಾಡಿ ಕೊಳ್ಳುತ್ತಿದ್ದಾರೆ. ಯಾಕೆಂದರೆ ಹಾಸನದ ಇಡೀ ರಾಜಕಾರಣವನ್ನು ಮುಷ್ಠಿಯಲ್ಲಿ ಹಿಡಿದು ಕೂತಿರೋದು ಎಚ್.ಡಿ.ರೇವಣ್ಣ. ಅವರ ಮುಂದೆ ಎಚ್.ಕೆ.ಕುಮಾರಸ್ವಾಮಿ ಗಟ್ಟಿಯಾಗಿ ದನಿಬಿಚ್ಚುವ ಧೈರ್ಯ ತೋರುವುದೇ ಡೌಟು.

ಹಾಸನದಲ್ಲಿ ತನ್ನ ಬಿಟ್ಟರೆ ಮತ್ತ್ಯಾವ ಶಕ್ತಿಕೇಂದ್ರಗಳೂ ಸೃಷ್ಟಿ ಆಗಬಾರದೆನ್ನುವ ಕಾರಣಕ್ಕೇ ರೇವಣ್ಣ, ಎಚ್‍ಕೆ ಕುಮಾರಸ್ವಾಮಿ ಮಂತ್ರಿಯಾಗುವುದಕ್ಕೆ ಅಡ್ಡಗಾಲು ಹಾಕಿದ್ದು ಎನ್ನಲಾಗುತ್ತಿದೆ. ಆರಂಭದಲ್ಲಿ ಕುಮಾರಸ್ವಾಮಿ ಹೆಸರು ಮಂತ್ರಿಯಾಗುವವರ ಯಾದಿಯಲ್ಲಿ ಕೇಳಿಬಂದದ್ದು ಸುಳ್ಳಲ್ಲ. ದಲಿತ ವ್ಯಕ್ತಿಗೆ ಮಂತ್ರಿಯಾಗುವ ಅವಕಾಶ ತಪ್ಪಿಸಿ, ಈಗ ಅದೇ ವ್ಯಕ್ತಿಗೆ ಅಧ್ಯಕ್ಷ ಪಟ್ಟ ಕಟ್ಟಿ ದಲಿತರ ಮೂಗಿಗೆ ತುಪ್ಪ ಸವರುವ ಯತ್ನವೂ ಇದರ ಹಿಂದಿದೆ. ಆದರೆ ಗೌಡರ ಹಟ್ಟಿಯ ಪಾರ್ಟಿಯ ಅಧ್ಯಕ್ಷಗಿರಿಯ ವಜನ್ನು ಎಂತದ್ದು ಎಂಬುದು ಗೊತ್ತಿರುವ ಸತ್ಯವಾಗಿರೋದ್ರಿಂದ ದಲಿತರ್ಯಾರು ಈ ಆಯ್ಕೆಯಿಂದ ಹಿಗ್ಗಿಲ್ಲ ಅನ್ನೋದು ವಾಸ್ತವ.

ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರಿಂದ ಆದ ಒಂದೇ ಲಾಭ ಅಂದ್ರೆ, ಜೆಡಿಎಸ್ ಶಾಸಕರು ತಾಜ್‍ವೆಸ್ಟ್‍ಎಂಡ್‍ನಿಂದ ದೇವನಹಳ್ಳಿ ರೆಸಾರ್ಟ್‍ಗೆ ಹೊರಡುವಾಗ ಮಾಧ್ಯಮಗಳ ಫೋಟೋಗ್ರಾಫರ್‍ಗಳಿಗೆ ಪ್ರಮುಖವಾಗಿ ಕಾಣಲೆಂದು ಅವರಿಗೆ ಬಸ್‍ನಲ್ಲಿ ಮುಂದಿನ ಸೀಟ್ ಸಿಕ್ಕಿದ್ದಷ್ಟೇ!

ಈ ಆಯ್ಕೆಯಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಪಕ್ಷದ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿಯನ್ನು ಆಯ್ಕೆ ಮಾಡಿರೋದು. ಅಂತೂ ದೇವೇಗೌಡರು ಕುಟುಂಬ ರಾಜಕಾರಣದ ಹಳಿ ಬಿಟ್ಟು ಪಕ್ಕಕ್ಕೆ ಸರಿಯಲಾರರು ಎಂಬುದು ಇದರಿಂದ ಸಾಬೀತಾಗಿದೆ. ಜೊತೆಗೆ ರೇವಣ್ಣನವರ ಮಗ ಪ್ರಜ್ವಲ್ ಗೆದ್ದು ಸಂಸದನಾದ ನಂತರ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ದಾಯಾದಿ ಅಸಮಾಧಾನವನ್ನು ಈ ರೀತಿ ಸರಿದೂಗಿಸಲಾಗಿದೆ. ಆದ್ರೆ ಒಂದಂತೂ ಸತ್ಯ, ಹಾಲಿ ಜೆಡಿಎಸ್ ಅಧ್ಯಕ್ಷ ಎಚ್ಕೆ ಕುಮಾರಸ್ವಾಮಿ ದೊಡ್ಡ ಗೌಡರು, ರೇವಣ್ಣ, ಕುಮಾರಣ್ಣನ ಎದುರು ಗಟ್ಟಿ ದನಿಯಾಗುವ ಮಾತಂತಿರಲಿ, ನಿಖಿಲ್ ಎದುರೂ ಗಡುಸಾಗಿ ಮಾತಾಡುವುದಕ್ಕೆ ಸಾಧ್ಯವಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...