Homeಕರ್ನಾಟಕಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

ಜೆಡಿಎಸ್ ಹೊಸ ಅಧ್ಯಕ್ಷರದ್ದೂ ಡಮ್ಮಿ ಕಾಯಕವಾ?

- Advertisement -
- Advertisement -

| ಆಕಾಶ್ ಕೆರೆಕಟ್ಟೆ |

ಈ ಸರ್ಕಾರ ಇರುತ್ತಾ ಅಥವಾ ಉರುಳುತ್ತಾ? ರಾಜೀನಾಮೆಗಳು ಸ್ವೀಕಾರ ಆಗ್ತಾವಾ ಅಥವಾ ಶಾಸಕರೇ ಅನರ್ಹರಾಗ್ತಾರಾ? ಅನ್ನೋ ಹೈಡ್ರಾಮಾಗಳ ನಡುವೆ ಗಮನಿಸಲೇಬೇಕಾದ ಇನ್ನೊಂದು ರಾಜಕೀಯ ವಿದ್ಯಮಾನ ನಡೆದಿದೆ. ಅದು ಜೆಡಿಎಸ್‍ಗೆ ನೂತನ ರಾಜ್ಯಾಧ್ಯಕ್ಷರ ಆಯ್ಕೆ. ವಿಶೇಷ ಅಂದ್ರೆ ಜೆಡಿಎಸ್ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದೊಂದನ್ನು ಹೊರತುಪಡಿಸಿದರೆ ಈ ಆಯ್ಕೆಯಲ್ಲಿ ಇನ್ನ್ಯಾವ ವಿಶೇಷವೂ ಇಲ್ಲ. ಯಾಕೆಂದರೆ ದೇವೇಗೌಡರ ಕುಟುಂಬದ ಹೊರತಾಗಿ ಜೆಡಿಎಸ್‍ಗೆ ಯಾರೇ ಅಧ್ಯಕ್ಷರಾದರು ಅವರು ಡಮ್ಮಿಯಾಗಿರಬೇಕಾಗುತ್ತೆ ಅನ್ನೋದನ್ನು ನಿರ್ಗಮಿತ `ಬಾಂಬೆಹಕ್ಕಿ’ ಎಚ್.ವಿಶ್ವನಾಥ್ ಸಾಬೀತು ಮಾಡಿಹೋಗಿದ್ದಾರೆ.

ಸಿದ್ರಾಮಯ್ಯನವರ ಹೊರತಾಗಿ ಅಧ್ಯಕ್ಷರಾದ ಗೌಡರ ಕುಟುಂಬೇತರ ವ್ಯಕ್ತಿಗಳಾದ ತಿಪ್ಪಣ್ಣ, ಮಿರಾಜುದ್ದೀನ್ ಪಟೇಲ್, ಕೃಷ್ಣಪ್ಪ ಇವರೆಲ್ಲ ಹೆಸರಿಗಷ್ಟೇ ಅಧ್ಯಕ್ಷರಾಗಿದ್ದರೆ ವಿನಾಃ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಯಾವ ಸ್ವತಂತ್ರವೂ ಅವರಿಗಿರಲಿಲ್ಲ. ರಾಜೀನಾಮೆ ಗೀಚಿ ಬಾಂಬೆ ಹೊಟೇಲ್ ಸೇರಿಕೊಂಡಿರುವ ಎಚ್.ವಿಶ್ವನಾಥ್ ಕೆ.ಆರ್.ನಗರದ ಪುರಸಭೆ ಎಲೆಕ್ಷನ್‍ಗೆ ತನಗೆ ಬೇಕಾದವರಿಗೆ ಟಿಕೇಟು ಕೊಡಿಸುವುದಕ್ಕೂ ಸಾಧ್ಯವಾಗಿರಲಿಲ್ಲ ಅಂದಮೇಲೆ `ಜೆಡಿಎಸ್ ಅಧ್ಯಕ್ಷ’ ಹುದ್ದೆ ಅದಿನ್ನೆಷ್ಟು ಗಟ್ಟಿಯದ್ದಾಗಿರಬೇಡ!

ಅಂಥಾ ಸ್ಥಾನಕ್ಕೆ ಈಗ ಎಚ್.ಕೆ.ಕುಮಾರಸ್ವಾಮಿಯನ್ನು ತಂದು ಕೂರಿಸಲಾಗಿದೆ. ನೋ ಡೌಟ್, ಇಂದಿನ ನಿದರ್ಶನಗಳಂತೆ ಅವರೂ ಡಮ್ಮಿ ಅಧ್ಯಕ್ಷರಾಗೇ ಕಾಲ ತಳ್ಳಬೇಕಾಗುತ್ತೆ. ಯಾಕೆಂದರೆ ಬರೋಬ್ಬರಿ ಐದು ಬಾರಿ ಶಾಸಕರಾಗಿರುವ ಸದ್ರಿ ಕುಮಾರಸ್ವಾಮಿ ಈ ಮೈತ್ರಿ ಸರ್ಕಾರದಲ್ಲಿ ತನಗೊಂದು ಮಂತ್ರಿ ಸ್ಥಾನ ಕೊಡಿ ಎಂದು ಕೇಳಿ ಗಿಟ್ಟಿಸಿಕೊಳ್ಳಲಾಗದಷ್ಟು ಮೆತ್ತೆ ಮನುಷ್ಯ. ಇಂಥಾ ವ್ಯಕ್ತಿ ಜೆಡಿಎಸ್ ಅಧ್ಯಕ್ಷಗಿರಿಗಿರುವ ಹಳೇ ಸಂಪ್ರದಾಯ ಮುರಿಯುವ ಯಾವ ಸಾಧ್ಯತೆಯೂ ಇಲ್ಲ. ರಾಜ್ಯ ರಾಜಕಾರಣದ ಮಾತು ಒತ್ತಟ್ಟಿಗಿರಲಿ ತವರು ಜಿಲ್ಲೆ ಹಾಸನದಲ್ಲೇ ಅವರ ಮಾತು ನಡೆಯೋದಿಲ್ಲ ಅನ್ನೋದನ್ನು ಜೆಡಿಎಸ್ ಕಾರ್ಯಕರ್ತರೇ ಮಾತಾಡಿ ಕೊಳ್ಳುತ್ತಿದ್ದಾರೆ. ಯಾಕೆಂದರೆ ಹಾಸನದ ಇಡೀ ರಾಜಕಾರಣವನ್ನು ಮುಷ್ಠಿಯಲ್ಲಿ ಹಿಡಿದು ಕೂತಿರೋದು ಎಚ್.ಡಿ.ರೇವಣ್ಣ. ಅವರ ಮುಂದೆ ಎಚ್.ಕೆ.ಕುಮಾರಸ್ವಾಮಿ ಗಟ್ಟಿಯಾಗಿ ದನಿಬಿಚ್ಚುವ ಧೈರ್ಯ ತೋರುವುದೇ ಡೌಟು.

ಹಾಸನದಲ್ಲಿ ತನ್ನ ಬಿಟ್ಟರೆ ಮತ್ತ್ಯಾವ ಶಕ್ತಿಕೇಂದ್ರಗಳೂ ಸೃಷ್ಟಿ ಆಗಬಾರದೆನ್ನುವ ಕಾರಣಕ್ಕೇ ರೇವಣ್ಣ, ಎಚ್‍ಕೆ ಕುಮಾರಸ್ವಾಮಿ ಮಂತ್ರಿಯಾಗುವುದಕ್ಕೆ ಅಡ್ಡಗಾಲು ಹಾಕಿದ್ದು ಎನ್ನಲಾಗುತ್ತಿದೆ. ಆರಂಭದಲ್ಲಿ ಕುಮಾರಸ್ವಾಮಿ ಹೆಸರು ಮಂತ್ರಿಯಾಗುವವರ ಯಾದಿಯಲ್ಲಿ ಕೇಳಿಬಂದದ್ದು ಸುಳ್ಳಲ್ಲ. ದಲಿತ ವ್ಯಕ್ತಿಗೆ ಮಂತ್ರಿಯಾಗುವ ಅವಕಾಶ ತಪ್ಪಿಸಿ, ಈಗ ಅದೇ ವ್ಯಕ್ತಿಗೆ ಅಧ್ಯಕ್ಷ ಪಟ್ಟ ಕಟ್ಟಿ ದಲಿತರ ಮೂಗಿಗೆ ತುಪ್ಪ ಸವರುವ ಯತ್ನವೂ ಇದರ ಹಿಂದಿದೆ. ಆದರೆ ಗೌಡರ ಹಟ್ಟಿಯ ಪಾರ್ಟಿಯ ಅಧ್ಯಕ್ಷಗಿರಿಯ ವಜನ್ನು ಎಂತದ್ದು ಎಂಬುದು ಗೊತ್ತಿರುವ ಸತ್ಯವಾಗಿರೋದ್ರಿಂದ ದಲಿತರ್ಯಾರು ಈ ಆಯ್ಕೆಯಿಂದ ಹಿಗ್ಗಿಲ್ಲ ಅನ್ನೋದು ವಾಸ್ತವ.

ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರಿಂದ ಆದ ಒಂದೇ ಲಾಭ ಅಂದ್ರೆ, ಜೆಡಿಎಸ್ ಶಾಸಕರು ತಾಜ್‍ವೆಸ್ಟ್‍ಎಂಡ್‍ನಿಂದ ದೇವನಹಳ್ಳಿ ರೆಸಾರ್ಟ್‍ಗೆ ಹೊರಡುವಾಗ ಮಾಧ್ಯಮಗಳ ಫೋಟೋಗ್ರಾಫರ್‍ಗಳಿಗೆ ಪ್ರಮುಖವಾಗಿ ಕಾಣಲೆಂದು ಅವರಿಗೆ ಬಸ್‍ನಲ್ಲಿ ಮುಂದಿನ ಸೀಟ್ ಸಿಕ್ಕಿದ್ದಷ್ಟೇ!

ಈ ಆಯ್ಕೆಯಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಪಕ್ಷದ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿಯನ್ನು ಆಯ್ಕೆ ಮಾಡಿರೋದು. ಅಂತೂ ದೇವೇಗೌಡರು ಕುಟುಂಬ ರಾಜಕಾರಣದ ಹಳಿ ಬಿಟ್ಟು ಪಕ್ಕಕ್ಕೆ ಸರಿಯಲಾರರು ಎಂಬುದು ಇದರಿಂದ ಸಾಬೀತಾಗಿದೆ. ಜೊತೆಗೆ ರೇವಣ್ಣನವರ ಮಗ ಪ್ರಜ್ವಲ್ ಗೆದ್ದು ಸಂಸದನಾದ ನಂತರ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ದಾಯಾದಿ ಅಸಮಾಧಾನವನ್ನು ಈ ರೀತಿ ಸರಿದೂಗಿಸಲಾಗಿದೆ. ಆದ್ರೆ ಒಂದಂತೂ ಸತ್ಯ, ಹಾಲಿ ಜೆಡಿಎಸ್ ಅಧ್ಯಕ್ಷ ಎಚ್ಕೆ ಕುಮಾರಸ್ವಾಮಿ ದೊಡ್ಡ ಗೌಡರು, ರೇವಣ್ಣ, ಕುಮಾರಣ್ಣನ ಎದುರು ಗಟ್ಟಿ ದನಿಯಾಗುವ ಮಾತಂತಿರಲಿ, ನಿಖಿಲ್ ಎದುರೂ ಗಡುಸಾಗಿ ಮಾತಾಡುವುದಕ್ಕೆ ಸಾಧ್ಯವಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...