Homeಚಳವಳಿಜೈ ಹಿಂದ್ ಹೇಳುವಂತೆ ಒತ್ತಾಯಿಸಿದ ಹುಡುಗಿಗೆ ಕನ್ಹಯ್ಯ ಕುಮಾರ್ ಕೊಟ್ಟ ಸೊಗಸಾದ ಉತ್ತರ

ಜೈ ಹಿಂದ್ ಹೇಳುವಂತೆ ಒತ್ತಾಯಿಸಿದ ಹುಡುಗಿಗೆ ಕನ್ಹಯ್ಯ ಕುಮಾರ್ ಕೊಟ್ಟ ಸೊಗಸಾದ ಉತ್ತರ

- Advertisement -
- Advertisement -

ಯುವತಿಯ ಪ್ರಶ್ನೆಯ ಸಾರಾಂಶ: ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ನೀವು ಒಮ್ಮೆಯಾದರೂ ಜೈ ಹಿಂದ್, ಜೈ ಹೇಳಿಬಿಡಿ. ನೀವೇಕೆ ಏಕರಾಷ್ಟ್ರದ ವಿರುದ್ಧ ಇದ್ದೀರಿ, ಅದನ್ನೂ ವಿವರಿಸಿ.

ಕನ್ಹಯ್ಯ ಕುಮಾರ್ ನೀಡಿದ ಉತ್ತರ

ನೀವು ಏಕದ ಕುರಿತು ಹೇಳುತ್ತಿದ್ದೀರಿ. ಏಕೆ ‘ಏಕೈಕ’ವನ್ನು ಪ್ರಚಾರ ಮಾಡೋದಿಲ್ಲ, ಅದನ್ನೇಕೆ ಒಪ್ಪಿಕೊಳ್ಳೋದಿಲ್ಲ ಅಂತ ಕೇಳ್ತಿದ್ದೀರಿ. ಆದರೆ ನಾನೇನು ಮಾಡಲಿ? ನಾನು ಹುಟ್ಟಿದ್ದು ಇಬ್ಬರ ಸಂಯೋಗದಿಂದ. ನನ್ನ ಅಪ್ಪ ಮತ್ತು ಅಮ್ಮ ಇಬ್ಬರು ಮದುವೆಯಾಗಿದ್ದರಿಂದ ನಾನು ಹುಟ್ಟಿದೆ. ಯಾರೋ ಒಬ್ಬರಿಂದ ನಾನು ಹುಟ್ಟುವುದು ಅಸಾಧ್ಯವಿತ್ತು. ಅಲ್ಲಿ ಅಪ್ಪ ಮತ್ತು ಅಮ್ಮ ಇಬ್ಬರಿದ್ದರು.

ನೀವು ಏಕರಾಷ್ಟ್ರದ ಪರಿಕಲ್ಪನೆಯನ್ನು ನಾನೇಕೆ ಬೆಂಬಲಿಸೋದಿಲ್ಲ ಅಂತ ಕೇಳ್ತಿದ್ದೀರಿ. ರಾಷ್ಟ್ರ ಯಾವತ್ತಿಗೂ ಒಂದೇ. ಭಾರತ ಇರುವುದು ಒಂದೇ, ಇದರಲ್ಲಿ ಸಂದೇಹವಿಲ್ಲ. ಆದರೆ, ಈ ಏಕಭಾರತವನ್ನು ಪ್ರತಿನಿಧಿಸುವ ಒಂದು ಸಂವಿಧಾನ ಏನಿದೆ, ಅದರಲ್ಲಿ 300ಕ್ಕಿಂತ ಹೆಚ್ಚು ವಿಧಿಗಳಿವೆ. ಮತ್ತು ನೀವು ಹೇಳುತ್ತಿರುವ ಏಕರಾಷ್ಟ್ರವನ್ನು ಪ್ರತಿನಿಧಿಸಲು ಇರುವ ಒಂದು ಸಂಸತ್ತು ಏನಿದೆ, ಅದರಲ್ಲೂ ಎರಡು ಸದನಗಳಿವೆ- ಲೋಕಸಭೆ ಮತ್ತು ರಾಜ್ಯಸಭೆ. ಮತ್ತು ಅದಕ್ಕೆ ಚುನಾಯಿತರಾಗಿ ಹೋಗುವುದು ಯಾರೋ ಒಬ್ಬರಲ್ಲ, ಪೂರಾ 545 ಸದಸ್ಯರು!

ಆದ್ದರಿಂದ ನಾವು ಪ್ರತಿಪಾದಿಸುವ ಏಕತೆ ಏನಿದೆ, ಅದು ವಿವಿಧತೆಯನ್ನು ಪ್ರತಿನಿಧಿಸುವಂಥದ್ದು. ಅಲ್ಲಿ ವೈವಿಧ್ಯತೆ ಇದೆ. ನೀವು ಜೈ ಶ್ರೀರಾಮ್ ಘೋಷಣೆ ಕುರಿತು ಹೇಳಿದಿರಿ. ನೀವು ಖಂಡಿತವಾಗಿ ಘೋಷಣೆ ಹಾಕಿ, ಅದು ನಿಮ್ಮ ಸ್ವಾತಂತ್ರ್ಯ. ನೀವು ಜೈ ಶ್ರೀರಾಮ್ ಬೇಕಾದರೂ ಅನ್ನಿ, ಜೈ ಹನುಮಾನ್ ಬೇಕಾದರೂ ಅನ್ನಿ. ನಿಮಗೆ ಬೇಕಾದ ಘೋಷಣೆ ಕೂಗುವ ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ನೀಡಿದೆ. ಆದ್ದರಿಂದ ನಾನು ನಿಮ್ಮಲ್ಲಿ ಆಗ್ರಹಿಸುತ್ತೇನೆ, ನಿಮಗೆ ನಿಮ್ಮ ಘೋಷಣೆ ಕೂಗುವ ಸ್ವಾತಂತ್ರ್ಯ ನೀಡಿರುವ ಸಂವಿಧಾನಕ್ಕೂ ಒಮ್ಮೆ ಜೈಕಾರ ಹಾಕಿಬಿಡಿ.

ಇನ್ನು, ನಾನು ಜೈಶ್ರೀರಾಮ್ ಘೋಷಣೆ ಕೂಗುವ ಬಗ್ಗೆ,… ನಾನು ಹುಟ್ಟಿದ್ದೇ ಮಿಥಿಲೆಯಲ್ಲಿ. ನನ್ನ ಊರು ಬೇಗುಸರಾಯ್ ಮಿಥಿಲಾ ಪ್ರಾಂತ್ಯಕ್ಕೆ ಸೇರುತ್ತದೆ. ನಿಮಗೆ ಗೊತ್ತಿರಬಹುದು, ಮಿಥಿಲೆ ಶ್ರೀರಾಮನ ಮಾವನ ಮನೆ. ನಮ್ಮ ಊರಲ್ಲಿ ಪ್ರತಿವರ್ಷ ಸೀತಾ ರಾಮರ ವಿವಾಹ ಮಹೋತ್ಸವ ನಡೆಸುತ್ತಾರೆ. ಅಯೋಧ್ಯೆಯಿಂದ ತರುಣರು ರಾಮನ ವೇಷದಲ್ಲಿ ನಮ್ಮ ಊರಿಗೆ ಮೆರವಣಿಗೆ ಬರುತ್ತಾರೆ. ನಾವು ಹೆಣ್ಣಿನ ಕಡೆಯವರು. ಅವರು ಗಂಡಿನ ಕಡೆಯವರು. ನಮ್ಮ ಪ್ರಾಂತ್ಯದಲ್ಲಿ ಬೀಗರನ್ನು ಬೈಗುಳದ ಮೂಲಕ ಸ್ವಾಗತಿಸುವ ಪದ್ಧತಿ ಇದೆ. ನಾವು ರಾಮನನ್ನು ನಿಂದಿಸುತ್ತಾ ಸ್ವಾಗತ ಕೋರುತ್ತೇವೆ. ರಾಮನನ್ನು ಹಾಸ್ಯ ಮಾಡುತ್ತೇವೆ. ಇದು ನಮ್ಮಲ್ಲಿ ಪಾರಂಪರಿಕವಾಗಿ ನಡೆದು ಬಂದ ರೂಢಿ. ಇದು ನಮ್ಮ ನೆಲದ ಸಂಸ್ಕೃತಿ.

ಅದೂ ಅಲ್ಲದೆ ನಾನು ಹುಟ್ಟಿ ಬೆಳೆದ ಸಂಸ್ಕೃತಿಯಲ್ಲಿ ಯಾವ ದೇವರನ್ನೂ ಏಕವಾಗಿ ಸ್ಮರಿಸುವುದಿಲ್ಲ. ರಾಮನನ್ನು ಸೀತಾರಾಮ ಎಂದೂ ಕೃಷ್ಣನನ್ನು ರಾಧಾಕೃಷ್ಣ ಎಂದೂ ಜೋಡಿಯಾಗಿ ಸ್ಮರಿಸುತ್ತಾರೆ, ಪೂಜಿಸುತ್ತಾರೆ. ಇದು ನಾನು ಬೆಳೆದ ನೆಲದ ಪರಂಪರೆ. ನನ್ನ ಪರಿಸರದ ಸಂಸ್ಕೃತಿ.

ನೀವೇನಾದರೂ ಪಿಎಚ್ಡಿ ಮಾಡುವುದಾದರೆ, ಈ ದೇಶದಲ್ಲಿ ಎಷ್ಟು ರಾಮಾಯಣಗಳಿವೆಯೋ ಅವುಗಳ ಮೇಲೆ ಸಂಶೋಧನೆ ಮಾಡಿ. ನನಗೆ ತಿಳಿದಿರುವಂತೆ ಈ ದೇಶದಲ್ಲಿ ಮುನ್ನೂರಕ್ಕೂ ಹೆಚ್ಚು ರಾಮಾಯಣಗಳಿವೆ.

ನಾನೊಮ್ಮೆ ಹಿಮಾಚಲಕ್ಕೆ ಹೋಗಿದ್ದೆ. ಅಲ್ಲಿ ತ್ರಿಲೋಕನಾಥ ಮಂದಿರವಿದೆ. ನೀವು ಈ ದೇಶವನ್ನು ಸುತ್ತಾಡಬೇಕು. ಆಗ ನಿಮಗೆ ಈ ದೇಶದ ನಿಜ ಸೌಂದರ್ಯ ತಿಳಿಯುತ್ತದೆ. ನಮ್ಮ ದೇಶದ ಅಗಾಧತೆ ಎದುರು ನಾವೆಷ್ಟು ತುಚ್ಛರು ಅನ್ನುವುದು ಅರ್ಥವಾಗುತ್ತದೆ.

ಈ ತ್ರಿಲೋಕನಾಥ ಮಂದಿರದಲ್ಲಿ ಭಗವಾನ್ ಬುದ್ಧನ ಮೂರ್ತಿ ಇದೆ. ಅದರ ತಲೆಮೇಲೆ ಶಿವನ ಮೂರ್ತಿನ್ನು ಇರಿಸಲಾಗಿದೆ. ಈ ಮಂದಿರಕ್ಕೆ ಮೊದಲು ಹಿಂದೂ ಸಾಧು ಬರುತ್ತಾರೆ. ಪ್ರಾರ್ಥನೆ ನಡೆಸುತ್ತಾರೆ. ಅದಾದ ನಂತರ ಬೌದ್ಧ ಬಿಕ್ಖು ಬರುತ್ತಾರೆ, ಅಲ್ಲಿ ಪ್ರದಕ್ಷಿಣೆ ನಮಸ್ಕಾರ ಹಾಕುತ್ತಾರೆ. ಇದು ಈ ದೇಶದ ವೈಶಿಷ್ಟ್ಯ. ಇದು ಹಿಂದೂಸ್ಥಾನದ ವೈಶಿಷ್ಟ್ಯ.

ಲಾಹೋರ್ ಜಿಲ್ಲೆಯಲ್ಲಿ ಒಂದು ರಾಮಾಯಣ ಪ್ರಚಲಿತದಲ್ಲಿದೆ. ಅದು ಲಾಹೋಲಿ ಭಾಷೆಯಲ್ಲಿದೆ. ಆ ರಾಮಾಯಣದಲ್ಲಿ ರಾವಣ ಸೀತೆಯನ್ನು ಅಪಹರಿಸುವುದಿಲ್ಲ, ಬದಲಿಗೆ, ಸೀತೆ ರಾವಣನ ಮಗಳು! ಮತ್ತು ರಾಮ ಸೀತೆಯನ್ನು ಪ್ರೇಮಿಸಿ ಮದುವೆಯಾಗುತ್ತಾನೆ. ಈ ಕಾರಣದಿಂದ ರಾಮ ರಾವಣರ ಯುದ್ಧ ನಡೆಯುತ್ತದೆ. ಇದು ಲಾಹೋಲಿ ರಾಮಾಯಣ ಹೇಳುವ ಕಥೆ. ಇದು ಹಿಂದೂಸ್ಥಾನದ ವೈಶಿಷ್ಟ್ಯ.

ಇಂಥವನ್ನೆಲ್ಲ ಯಾರು, ಯಾಕಾಗಿ ನಿಮ್ಮ ತಲೆಯೊಳಗೆ ತುಂಬಿದ್ದಾರೋ ನನಗೆ ಗೊತ್ತಿಲ್ಲ. ಈ ದೇಶದಲ್ಲಿ ಜನಿಸುವುದೇ ಒಂದು ಗೌರವದ ವಿಷಯ. ನೀವು ಹಿಮಾಚಲಕ್ಕೆ ಹೋದರೆ ನಿಮಗೆ ಸ್ವಿಟ್ಜರ್ಲೆಂಡಿಗೆ ಹೋದ ಅನುಭವವಾಗುತ್ತದೆ. ಗೋವಾ ಅಥವಾ ಮಂಗಳೂರು ಸಮುದ್ರ ತೀರಕ್ಕೆ ಬಂದರೆ, ಮಿಯಾಮಿ ಬೀಚ್’ನಲ್ಲಿ ಮಲಗಿರುವ ಅನುಭವವಾಗುತ್ತದೆ. ಈ ದೇಶದ ಮೈದಾನಗಳಲ್ಲಿ ಅಲೆದಾಡಿದರೆ, ಅವು ಅಮೆರಿಕಾದ ಹಸಿರುಮೈದಾನಗಳಿಗಿಂತ ಎಷ್ಟು ಅಗಾಧವಾಗಿದೆ ಅನ್ನೋದು ತಿಳಿಯುತ್ತದೆ. ಆದರೂ ಒಟ್ಟಾರೆಯಾಗಿ ಇದು ಒಂದು ದೇಶ. ಇದು ನಮ್ಮ ದೇಶ.

ನಿಮ್ಮ ದೇಶ ನಿಮ್ಮದು. ನಿಮ್ಮ ತಾಯಿ ನಿಮ್ಮವಳು. ನೀವು ನಿಮ್ಮ ತಾಯಿಯನ್ನು ಪ್ರೀತಿಸುವುದು ನಿಮ್ಮ ಖಾಸಗಿ ವಿಷಯ. ಹಾಗಂತ ಯಾರಾದರೂ ಯಾವುದೇ ಬಣ್ಣದ ಬಾವುಟ ಹಿಡಿದು ಬಂದು, ಜೈ ಶ್ರೀ ರಾಮ್ ಎಂದೋ ಇಂಕ್ವಿಲಾಬ್ ಜಿಂದಾಬಾದ್ ಎಂದೋ ಘೋಷಣೆ ಕೂಗುತ್ತಾ ಬಂದು, “ನೀನು ನಿನ್ನ ತಾಯಿಯನ್ನು ಪ್ರೀತಿಸುವುದೇ ನಿಜವಾದರೆ, ಹೇಗೆ ಪ್ರೀತಿಸುತ್ತೀಯ ತೋರಿಸು” ಅಂದರೆ, ಆಗ ನಿಮ್ಮ ಉತ್ತರ ಏನಿರುತ್ತದೆ?

ಈ ದೇಶ ನನ್ನದು. ನಾನು ಈ ದೇಶವನ್ನು ಪ್ರೀತಿಸುತ್ತೇನೆ. ನನಗೆ ಪ್ರೀತಿ ಪ್ರದರ್ಶನದ ವಸ್ತುವಲ್ಲ. ನಾನು ಅದನ್ನು ನನ್ನ ಎದೆಯಲ್ಲಿ ಹೊತ್ತು ತಿರುಗುತ್ತೇನೆ.

ಅನುವಾದ: ಚೇತನಾ ತೀರ್ಥಹಳ್ಳಿ

(ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ನಿನ್ನೆ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ನಂತರ ಸಂವಾದದಲ್ಲಿ ಹುಡುಗಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರ ಇದು.)

ಇದನ್ನು ಓದಿ: ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Kannaiakumar ninge ramayana bagge knowledge kadime badalagi estu ugra sangatanegalive yarara jothe sambanda itkondidiya ottareyagi deshadrohada kelasagalella gothu ninge

  2. I am new to this web site. Please give me some time to go through your other posts. I assure you that I am fully with you in full solidarity. With warm regards and best wishes, Narasimhan

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...