Homeಸಾಮಾಜಿಕಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

ಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

- Advertisement -
- Advertisement -

ನಕಲಿ ಜೋಯಿಸರ ಬುರುಡೆ ಶಾಸ್ತ್ರಗಳು ಹೇಗೆ, ಜನ್ಮದಿಂದ ಸುತ್ತಿಕೊಂಡು, ಹೆಸರಿನಿಂದ ಗಟ್ಟಿಗೊಂಡು, ಪಂಚಾಂಗಗಳೆಂಬ ಬಾಹುಗಳಿಂದ ಕಟ್ಟಿಹಾಕುತ್ತವೆಂಬುದನ್ನು ನೋಡಿದೆವು. ಕಳೆದ ಬಾರಿ ವಿವರಿಸಿದ ಹಲ್ಲಿ ಶಕುನ ಎಷ್ಟು ವ್ಯಾಪಕವಾಗಿದೆ ಎಂಬುದನ್ನು ಸೂಚಿಸಲು ಓದುಗರಾದ ಪುಷ್ಪಾ ಸುರೇಂದ್ರ ಅವರು ಕಾಂಚಿಪುರಂ ದೇವಾಲಯದ ಉದಾಹರಣೆ ಕೊಟ್ಟಿದ್ದಾರೆ. ಅಲ್ಲೊಂದು ಕಲ್ಲಿನ ಹಲ್ಲಿಯಿದೆಯಂತೆ. ಈ ಹಲ್ಲಿಪತನ ಫಲದಿಂದ ಭಯಗೊಂಡವರು ಬೇರೆಬೇರೆ ರಾಜ್ಯಗಳಿಂದ ಪರಿಹಾರಾರ್ಥ ಇಲ್ಲಿ ಬಂದು ಅದರ ಮೇಲೆ ಎಣ್ಣೆ ಸುರಿಯುತ್ತಾರಂತೆ! ಅಂದರೆ ಈ ಹಲ್ಲಿಯನ್ನೇ ಜನರ ಮೇಲೆಸೆದು ಬೆದರಿಸಿ ದೋಚುವ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿದ್ದೆ ಎಂದಾಯಿತು! ಅದಿರಲಿ, ನಾವೀಗ ಹುಟ್ಟಿನಿಂದ ನೇರವಾಗಿ ಸಾವಿಗೆ ಹೋಗಿ ಅಲ್ಲಾಗಿರುವ ಮಹಾನ್ ಆವಿಷ್ಕಾರಗಳನ್ನು ನೋಡೋಣ. ನಂತರ ವಿಸ್ತಾರವಾದ ಜೀವನಕ್ಕೆ ಬರೋಣ.
ಕೆಲ ವರ್ಷಗಳ ಹಿಂದೆ ನನ್ನ ದೊಡ್ಡಪ್ಪ ಮುಂಬಯಿಯಲ್ಲಿ ತೀರಿಕೊಂಡಾಗ ಅವರ ಮತ್ತು ಅದಕ್ಕೆ ಕೇವಲ ಒಂದು ವಾರ ಮೊದಲು ತೀರಿಕೊಂಡಿದ್ದ ಅವರ ಪತ್ನಿ- ದೊಡ್ಡಮ್ಮನ ಶವಸಂಸ್ಕಾರವನ್ನು ಅವರ ಗೆಳೆಯರು ವಿದ್ಯುತ್ ಚಿತೆಯಲ್ಲಿ ಯಾವುದೇ ಧಾರ್ಮಿಕ ಕ್ರಿಯಾಕರ್ಮ ಇಲ್ಲದೇ ಮಾಡಿದ್ದರು. ಅವರಿಗೆ ಮಕ್ಕಳಿರಲಿಲ್ಲ.
ನಾಸ್ತಿಕರಾಗಿದ್ದ ಅವರ ಪಿಂಡ ಪ್ರಧಾನವನ್ನೂ ಯಾರೂ ಮಾಡಿಲ್ಲ ಎಂದು ಬಹುವಾಗಿ ನೊಂದ ಮುಂಬಯಿಯಲ್ಲೇ ಇದ್ದ ಅವರ ತಂಗಿ, ಅಂದರೆ ನನ್ನ ಅತ್ತೆ ಪಿಂಡ ಬಿಡಲು ನನ್ನನ್ನು ಕರೆಸಿದರು. ಹಿಂದೂ ಆಚರಣೆಗಳ ಬಗ್ಗೆ ಅತೀವ ಶ್ರದ್ಧೆ ಇದ್ದ ಅತ್ತೆ ಮದುವೆಯಾದದ್ದು ಕ್ರೈಸ್ತರನ್ನು ಎಂದರೆ ನಿಮಗೆ ಆಶ್ಚರ್ಯ ಆಗಬಹುದು!
ದೊಡ್ಡಪ್ಪನ ಶಿಷ್ಯನೂ, ದೇವ-ಧರ್ಮ ನಿರ್ಲಿಪ್ತನೂ ಅದ ನಾನು, ಅವರ ಮನ ನೋಯಿಸಲು ಇಚ್ಛಿಸದೇ ಒಪ್ಪಿಕೊಂಡಿದ್ದೆ. ಮುಂಬಯಿಯಲ್ಲೇ ಕೆಲ ವರ್ಷ ಇದ್ದ ನನಗೆ ಜನ ನಿಭಿಡ ಮೆರೀನ್ ಲೈನ್ಸ್ನಲ್ಲಿ ಎತ್ತರವಾದ ಗೋಡೆಗಳ ಹಿಂದೆ ಅಷ್ಟೊಂದು ದೊಡ್ಡ ಸ್ಮಶಾನವಿದೆ ಎಂದು ಗೊತ್ತೇ ಇರಲಿಲ್ಲ. ಅದೊಂದು ಹಳ್ಳಿಯೇ ಅಗಿದ್ದು, ಬೇರೆ ಬೇರೆ ಜಾತಿಗಳವರು ನೂರಾರು ವರ್ಷಗಳ ಹಿಂದೆಯೇ ಕ್ರಿಯಾಕರ್ಮಗಳಿಗೆಂದು ಕಟ್ಟಿಸಿದ್ದ ದೊಡ್ಡ ದೊಡ್ಡ ಪುರಾತನ ಮನೆಗಳಿದ್ದವು. ಅಲ್ಲಿ ಅದಕ್ಕಾಗಿಯೇ ಹಲವಾರು ಅರ್ಚಕ ಕುಟುಂಬಗಳೂ ವಾಸಿಸುತ್ತಿದ್ದವು! ಅದೊಂದು ಬ್ರಾಹ್ಮಣ ಗ್ರಾಮವಾಗಿದ್ದು, ಇವೆಲ್ಲಾ ಬೇಕಾಬಿಟ್ಟಿ ಹಣ ಮಾಡುವ ಅಧಿಕೃತ ಏಜೆನ್ಸಿಗಳು!
ನನ್ನ ಸಂಬಂಧಿಯೊಬ್ಬರು ಕ್ರಿಯೆಗೆ ಕೂತುದರಿಂದ ನನಗೆ ಸಂಕಷ್ಟ ತಪ್ಪಿತು. ನಮಗೆ ಸಿಕ್ಕಿದ ಭಟ್ರು ಮಂತ್ರದ ಅರ್ಥ ಮಾತ್ರವಲ್ಲದೆ, ಆ ಪದ್ಧತಿ ಬಂದುದರ ಹಿನ್ನೆಲೆ, ಆಚರಣೆಯ ವೈದಿಕ ಅರ್ಥ, ಕಾಲಾನುಕ್ರಮದಲ್ಲಿ ಆದ ಬದಲಾವಣೆಗಳು ಎಲ್ಲವನ್ನೂ ವಿವರಿಸಿ ಹೇಳುತ್ತಿದ್ದರು. “ನಿಮಗೆ ಅರ್ಧವಾಗದೆ ನೀವಿದನ್ನು ಮಾಡಿ ಏನು ಪ್ರಯೋಜನ?” ಎಂಬ ಅವರ ಮಾತನ್ನು ಈಗಿನ ಸುಲಿಗೆಕೋರರಿಗೂ, ಅವರ ಬಕ್ರಾಗಳಿಗೂ ಕೇಳಬೇಕು!
ಹಿಂದೂ ಧರ್ಮ ಪ್ರಕಾರ ನನ್ನ ದಿವಂಗತ ದೊಡ್ಡಪ್ಪ ಮತ್ತು ದೊಡ್ಡಮ್ಮನಿಗೆ ಸ್ಥಾನಮಾನ ಬೇರೆ ಬೇರೆಯಾಗಿದ್ದುದರಿಂದ ಪಿತೃ ಪ್ರಧಾನ ಸಂಸ್ಕೃತಿಯಂತೆ ಗಂಡು-ಹೆಣ್ಣು ತಾರತಮ್ಯದ ಕ್ರಿಯೆಗಳು ನಡೆದವು. ಅದು ಯಾಕೆ ಇತ್ಯಾದಿಗಳನ್ನೂ ಅವರು ‘ವೇದಾಧಾರದಲ್ಲಿ’ ವಿವರಿಸಿದರು.
ಇದನ್ನು ಯಾಕೆ ಹೇಳಿದೆನೆಂದರೆ ಈಗ ನಿಮ್ಮನ್ನು ಹುಸಿಮಂತ್ರಗಳ ಭಯದ ಕತ್ತಲಲ್ಲಿಟ್ಟು ನೀವು ಬೆರಳು ತೋರಿಸದೆಯೇ ಹಸ್ತ ಮಾತ್ರವಲ್ಲ, ಇಡೀ ದೇಹವನ್ನೇ ನುಂಗುವ ಜೋಯಿಸರುಗಳು ಟಿವಿಗಳಲ್ಲೇ ವಕ್ಕರಿಸುತ್ತಿರುವಾಗ ಇಂತವರು ‘ನವಗ್ರಹ’ ಯೋಗದಂತೆ ತಾತಾ ಅಪರೂಪ!
ವಿಶೇಷವೆಂದರೆ ಸರಳವಾಗಿದ್ದ ಈ ವ್ಯಕ್ತಿ ‘ಶಾಸ್ತ್ರ’ದಲ್ಲಿ ಎಷ್ಟು ಹೇಳಿದೆಯೋ ಅಷ್ಟೇ- ಅಂದರೆ, ಪೈಸೆ, ಅಣೆ ಲೆಕ್ಕದಲ್ಲಿ ಚಿಲ್ಲರೆ ಹಣ ಮಾತ್ರ ಪಡೆಯುತ್ತಿದ್ದರು!
“ನಿಮ್ಮಲ್ಲಿ ಚಿಲ್ಲರೆ ಇರಲಿಕ್ಕಿಲ್ಲವಾದುದರಿಂದ ಅದನ್ನೂ ನಾನೇ ತಂದಿದ್ದೇನೆ” ಎಂದು ಜೋಳಿಗೆಯಿಂದ ಹಳೆಯ ನಾಣ್ಯಗಳನ್ನು ತೆಗೆದರು. “ನಿಮಗೆ ನಾನು ಸಾಲ ಕೊಡುತ್ತೇನೆ. ಅದನ್ನು ನೀವು ಶಾಸ್ತ್ರದಂತೆ ನನಗೆ ದಾನ ಮಾಡಬೇಕು. ನಂತರ ನನ್ನ ಸಾಲವನ್ನು ಒಟ್ಟಿಗೆ ತೀರಿಸಿ. ಶಾಸ್ತ್ರದ ಪ್ರಕಾರ ನೀವು ನನಗೆ ಗೋದಾನ ಮಾಡಬೇಕು. ಈಗ ಈ ನಗರದಲ್ಲಿ ಗೋವನ್ನು ಎಲ್ಲಿಂದ ತರುತ್ತೀರಿ? ನಾನೆಲ್ಲಿ ಸಾಕಲಿ? ಗೋವು ಇಲ್ಲದಿದ್ದಲ್ಲಿ ಶಾಸ್ತ್ರದಲ್ಲಿ ಚಿನ್ನದ ಪ್ರತಿಮೆ ದಾನ ಮಾಡಬಹುದೆಂದಿದೆ. ನಾನು ಅದನ್ನೂ ತಂದಿದ್ದೇನೆ” ಎಂದು ಜೋಳಿಗೆಯಿಂದ ಚಿನ್ನದ ಚಿಕ್ಕ ದನದ ಪ್ರತಿಮೆ ತೆಗೆದರು.
“ನಾನು ನಿಮಗೆ ಹಣ ಸಾಲಕೊಟ್ಟು ಇದನ್ನು ಮಾರುತ್ತೇನೆ. ಆ ಕಾಲದ ರೇಟು ಒಂದೂ ಕಾಲು ರೂಪಾಯಿ. ಹಣ ನಂತರ ಕೊಡಿ” ಎಂದು ಚಿನ್ನದ ದನವನ್ನು ಅತ್ತೆಗೆ ಮಾರಿದರು. ನಂತರ ಅದನ್ನೇ ದಾನವಾಗಿ ಪಡೆದರು ಎನ್ನಿ! ಮಾರಿದ ಹಣ ಬೇರೆ, ದಾನ ಲಾಭ ಪ್ರತ್ಯೇಕ! ಅದರೂ ಅವರು ದನದ ಪ್ರಸ್ತುತ ರೇಟು ಪಡೆಯಲಿಲ್ಲ! ಅದೇ ರೀತಿ ಜೋಳಿಗೆಯಿಂದ ಮಣ್ಣನ್ನು ತೆಗೆದು ತಾವೇ ಮಾರಿ, ಭೂದಾನವನ್ನೂ ಪಡೆದರು. ಎಲ್ಲವನ್ನೂ ಅಣೆ ಪೈ ಲೆಕ್ಕದಲ್ಲಿ ದಕ್ಷಿಣೆ ಪಡೆದರು. ನಾನು ಈ ವರ್ಚುವಲ್ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ ನೋಡಿ ಅಚ್ಚರಿಪಟ್ಟೆ.
ನನ್ನ ಅತ್ತೆಯವರಿಗಂತೂ ಖುಷಿಯಾಗಿ ಕೊನೆಗೆ ಉದಾರ ದಕ್ಷಿಣೆ ಕೊಟ್ಟ ರೂ, ಅವರು ಅದರಲ್ಲಿ ಈಗಿನ ಲೆಕ್ಕಾಚಾರ ಹಾಕಿ ಸ್ವಲ್ಪವನ್ನೇ ತೆಗೆದುಕೊಂಡರು! “ನಿಮಗಿದು ಈಗ ಕಡಿಮೆ ಕಾಣಬಹುದು. ಹಿಂದಿನ ಕಾಲದಲ್ಲಿ ಇದು ಭಾರೀ ದೊಡ್ಡ ಹಣ!” ಎಂದು ನೆನಪಿಸಿದರು ಬೇರೆ!!
ಇವೆಲ್ಲಾ ನಮಗೆ ಜೀವನದ ಅರ್ಥ ಮಾಡಿಸುವ ಸಾಂಕೇತಿಕ ಕ್ರಿಯೆಗಳು ಮಾತ್ರ ಅವುಗಳಿಗೆ ಪ್ರಸ್ತುತತೆ ಅರ್ಥ ಇಲ್ಲ. ಹಿಂದಿನವರ ಜೀವನಕ್ರಮ, ಅವರು ಕಂಡುಕೊಂಡ ಅರ್ಥವನ್ನು ನೆನಪಿಸುವುದು ಇವುಗಳ ಉದ್ದೇಶ ಎಂದೂ ವಿವರಿಸಿದರು.
ನಾನು ಒಂದು ಕಡೆ ಬೆರಗಾಗುತ್ತಾ, ಇನ್ನೊಂದು ಕಡೆ ಮನಸ್ಸಿನಲ್ಲೇ ನಗುತ್ತಾ ಇದ್ದೆ! ಯಾಕೆಂದರೆ, ಕ್ರಿಯೆ ನಡೆಯುತ್ತಿದ್ದಾಗ ನಾನು ಈ ರೀತಿಯ ಪಿಂಡ ಪ್ರಧಾನ ನಡೆಯುವ ಕೆಲವು ಕಡೆಗೆಲ್ಲ ಹೋಗಿ ಇಣುಕ್ಕಿದ್ದೆ! ಕಾಟಾಚಾರಕ್ಕೆ ಕ್ರಿಯೆಗಳು ಅವಸರವಸರದಲ್ಲಿ ನಡೆದು, ಕಂತೆ ಕಂತೆ ನೋಟುಗಳು ಕೈಬದಲಿಸುತ್ತಿದ್ದವು! ದಂಧೆ ಜೋರಾಗಿ ನಡೆಯುತ್ತಿತ್ತು.
ನಮಗೆ ಸಿಕ್ಕಂತಹ ಪ್ರಾಮಾಣಿಕ ಅರ್ಚಕನನ್ನು ನಾನು ಜನ್ಮದಲ್ಲಿ ನೋಡಿಲ್ಲ. ಸುಲಿಯುವವರೇ ಹೆಚ್ಚು!
ನನಗೆ ಸಂಸ್ಕೃತ ಅರೆಬರೆ ಅರ್ಥ ಅಗುವುದರಿಂದ ತಪ್ಪು ಮಂತ್ರ ಹೇಳಿದ್ದಕ್ಕೆ ಹಿಂದೆ ನಾನು ಒಂದಿಬ್ಬರು ಪರಿಚಯದ ಅರ್ಚಕರನ್ನು ಪ್ರಶ್ನಿಸಿದ್ದೆ! ನನ್ನ ವಿಷಯ ಗೊತ್ತಿದ್ದುದರಿಂದ ‘ನಮ್ಮದು ಬಾಯಿಪಾಠ ಮಾರಾಯ್ರೆ, ಎಲ್ಲರೆದುರು ಮರ್ಯಾದೆ ತೆಗೆಯಬೇಡಿ’ ಅಂದಿದ್ದರು!
ನಂಬಿಕೆ ಸಂಕೀರ್ಣವಾದ ವಿಷಯ. ನುಂಗುವಂತಿಲ್ಲ, ಉಗುಳುವಂತಿಲ್ಲ! ಅದಕ್ಕಾಗಿ ಸುಮ್ಮನಿದ್ದೆ! ಇಂತವರನ್ನು ನಾವು ದೇವರ ಕಮೀಷನ್ ಏಜೆಂಟರಾಗಿ ಒಪ್ಪಿಕೊಂಡು ಬಕ್ರಾಗಳಾಗುತ್ತಿದ್ದೇವೆ.
ಮೇಲೆ ಹೇಳಿದ ಅರ್ಚಕರಿಗೆ ವ್ಯತಿರಿಕ್ತವಾಗಿ ಈಗಿನ ವಂಚಕರು ಗೋದಾನ, ಭೂದಾನ, ಸುವರ್ಣ ದಾನ ಎಂದು ಅವರೇ ಮಾರಿ, ಅವರೇ ಪಡೆದು ಎಂತಹ ದರೋಡೆ ಮಾಡುತ್ತಿದ್ದಾರೆಂಬುದಕ್ಕೆ ಹಿನ್ನೆಲೆಯಾಗಿ ಈ ಘಟನೆಯನ್ನು ವಿವರಿಸಿದೆ. ಇವರಲ್ಲಿ ಕೆಲವರು ‘ಕನ್ಯಾದಾನ’ ಪಡೆಯಲು ಹೋಗಿ ಏಟುತಿಂದ, ಕೇಸು ಸುತ್ತಿಸಿಕೊಂಡ ಮಹಾನುಭಾವರೂ ಇದ್ದಾರೆಂಬುದನ್ನು ನೆನಪಿಸಿಕೊಳ್ಳಿ! ಸಾವಿನಂತಹ ದುಃಖದ ಘಟನೆಯಿಂದಲೂ ಹಿಂಡಲು ಎಂತಹಾ ಮಹಾ ಭಯಂಕರ ಆವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ಮುಂದೆ ನೋಡೋಣ. ಅದಕ್ಕಿದು ಪೀಠಿಕೆ ಅಷ್ಟೇ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...