Homeಅಂಕಣಗಳುಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ‘ಅಟ್ಯಾಕ್ ಹನ್ಮಂತ’. ಇದೀಗ ದೊಡ್ ಸುದ್ದಿಗಳು.
ಪರದೇಶಿ ದುಡ್ಡಿಗೆ ಆಸೆಪಟ್ಟು ಬ್ಲೂಜೆಪಿ ಮಾಡ್ತು ಎಡವಟ್ಟು: ಕಾನೂನಿಗೆ ತಂದ್ರು ತಿದ್ದುಪಡಿ, ಕೋರ್ಟ್ ಇಡ್ತು ದೊಡ್ಡ ಧಡಿ.
ಪೊಲಿಟಿಕಲ್ ಪಾರ್ಟಿಗಳು ವಿದೇಶದಿಂದ ಯಾವುದೇ ಬಗೆಯ ದೇಣಿಗೆ ಪಡೆಯುವುದು ಅಪರಾಧ ಎಂದಿದ್ದ ಹಿಂದಿನ ಕಾನೂನನ್ನು ಬದಲಾಯಿಸಿ, ದೇಶದೊಳಗಿನ ಪಕ್ಷಗಳು ಯಾವ ದೇಶದ ಶ್ರೀಮಂತರಿಂದ ಬೇಕಾದರೂ ಕೋಟಿಗಟ್ಟಲೆ ತಿರುಪೆ ಎತ್ತಬಹುದು ಎಂದು ತಿದ್ದುಪಡಿ ಮಾಡಿಕೊಂಡಿದ್ದ ಬ್ಲೂಜೆಪಿ ಪಕ್ಷದ ಮುಖಕ್ಕೆ ಖಡಕ್ ನೊಟೀಸ್ ಕಳಿಸಿರುವ ದೆಹಲಿ ಹೈಕೋರ್ಟ್, ಇಷ್ಟ ಬಂದಂತೆ ಕಾನೂನನ್ನು ಬದಲಿಸಲು, ಕೋರ್ಟ್‍ನ ತೀರ್ಪುಗಳನ್ನು ತಿರುಚಲು ಕಾನೂನು ನಿಮ್ಮಪ್ಪನ ಮನೆಯ ಆಸ್ತಿಯಲ್ಲ ಎಂದು ಕ್ಯಾಕರಿಸಿ ಉಗಿದಿದೆ. ಅಕ್ರಮವಾಗಿ ಅಘೋಷಿತ ಮೂಲಗಳಿಂದ ಪಕ್ಷಕ್ಕೆ ದೇಣಿಗೆ ಪಡೆದು ಜೇಬು ತುಂಬಿಸಿಕೊಂಡಿದ್ದ ಕಮಲ ಪಕ್ಷ ಕಾನೂನಿನ ಕುಣಿಕೆಗೆ ಸಿಲುಕಿ ಮುಖ ಕೆತ್ತಿಸಿಕೊಳ್ಳುವ ಸಂದರ್ಭ ಎದುರಾಗಿದೆ. ಕೈ ಪಕ್ಷ ಕೂಡ ಈ ದಂಧೆಯಲ್ಲಿ ಕಮಲ ಪಕ್ಷಕ್ಕೆ ಸಾಥ್ ಕೊಟ್ಟಿರುವುದೂ ಕೂಡ ಜಗಜ್ಜಾಹೀರಾಗಿದೆ. ಕಾನೂನು ಕುಣಿಕೆಯಿಂದ ಬಚಾವಾಗಲು ಎಫ್.ಸಿ.ಆರ್.ಎ ಕಾಯ್ದೆಗೇ ತಿದ್ದುಪಡಿ ತಂದು ಎಸ್ಕೇಪ್ ರೂಟ್ ಹುಡುಕಿದ್ದ ಊಸರವಳ್ಳಿ ಪಕ್ಷ ಈಗ ಹೆಗ್ಗಣ ಹಿಡಿಯಲು ಇಟ್ಟಿದ್ದ ಇಕ್ಕಳದೊಳಗೆ ಮುಖ ಸಿಗಿಸಿಕೊಂಡು ತಪ್ಪಿಸಿಕೊಳ್ಳಲಾರದೆ ಕುಯ್ಯೋ ಮರ್ರೋ ಎಂದು ನರಳಾಡುತ್ತಿರುವುದು ದೇಶದ ಜನತೆಗೆ ಸಂತಸವುಂಟು ಮಾಡಿದೆ.

*****

ಲಾಚಾರ್ ಸಾಹಿತಿ ‘ಬೊಯ್ರಪ್ಪ’ನ ‘ಮಕ್ಕನ್ ಮಾರ್’ ಅವಾಂತರ: ಈ ಸಲ ಗ್ಯಾರಂಟಿ ವಕ್ಕರಿಸುತ್ತಂತೆ ಜ್ಞಾನಪೀಠಕ್ಕೇ ಗಂಡಾಂತರ
ದೇಶದ ಅತ್ಯುನ್ನತ ಪ್ರಶಸ್ತಿಗಳು ಘೋಷಣೆಯಾಗಲು ಒಂದೆರಡು ತಿಂಗಳು ಇರುವಂತೆಯೇ ಗರ್ಭಧರಿಸಿದ ಬೆಕ್ಕಿನಂತೆ ಕಯೋವ್, ಮಿಯೋವ್ ಎಂದು ಎದ್ದು ಕೂರುವ ಕುಖ್ಯಾತ ಸಾಹಿತಿ ‘ಬೊಯ್ರಪ್ಪ’ನವರು ಪ್ರತೀವರ್ಷದಂತೆ ಈ ವರ್ಷವೂ ತಮ್ಮ ಮನೆಯಿಂದ ಹೊರಗೆ ಬಂದು ನರಳಾಡಲು ಶುರು ಮಾಡಿದ್ದಾರೆ. ದೇಶವನ್ನು ಅಭಿವೃದ್ಧಿಪಡಿಸಲು ಪಕೋಡೇಂದ್ರ ಫಕೀರಪ್ಪನಿಗೆ 5 ವರ್ಷಗಳು ಜುಜುಬಿ, ಕನಿಷ್ಟಪಕ್ಷ ಎರಡು ಶತಮಾನವಾದರೂ ಪಕೋಡಯ್ಯನು ದೇಶದ ಪ್ರಧಾನಿಯಾದರೆ ದೇಶ ಉದ್ದಾರವಾಗುತ್ತದೆ ಎಂಬ ಸುಸ್ಸು ಸ್ಟೇಟ್‍ಮೆಂಟನ್ನು ಮನೆಯೆದುರಿನ ಲೈಟುಕಂಬಕ್ಕೆ ಕಾಲೆತ್ತಿ ಹುಯ್ದು ವಾಪಸ್ ಮನೆಯೊಳಗೆ ಬುಡುಬುಡನೆ ಓಡಿಹೋಗಿ ಹೊಟ್ಟೆ ಮಕಾಡೆ ಮಲಗಿಬಿಟ್ಟರೆಂದು ನಂಬಲರ್ಹ ಗಾಳಿಸುದ್ದಿಗಳು ತಿಳಿಸಿವೆ.

*****

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಮುಸುಡಿಗೆ ಬಿತ್ತು ಕೋರ್ಟ್ ತಪರಾಕಿ: ಕೇಜ್ರಿವಾಲ್ ಎದುರು ಮಕಾಡೆಬಿದ್ದ ಬ್ಲೂಜೆಪಿ ಬಾಯಿಗೆ ಆನೆಪಟಾಕಿ.
ದೆಹಲಿಯಲ್ಲಿ ಕೇಜ್ರಿವಾಲ್ ಕೈಲಿ ಸಮಾ ಇಕ್ಕಿಸಿಕೊಂಡು ಚರಂಡಿಪಾಲಾಗಿದ್ದ ದ್ವೇಷಭಕ್ತ ಬ್ಲೂಜೆಪಿಗಳು ಮರ್ಮಸ್ಥಳಕ್ಕೆ ಬಿದ್ದ ಸುತ್ತಿಗೆ ಏಟಿಗೂ ಜಗ್ಗದೆ ಕೇಜ್ರಿವಾಲ್ ತಲೆಯ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಗಢವಗೂಬೆಯೊಂದನ್ನು ಕೂರಿಸಿ ಬ್ಯಾಕ್‍ಡೋರ್ ಪಾಲಿಟಿಕ್ಸಿಗೆ ಇಳಿದಿದ್ದರು. ಈ ಬಗ್ಗೆ ಸುಪ್ರೀಂಕೋರ್ಟಿಗೆ ಕೇಸು ಜಡಾಯಿಸಿದ್ದ ಕೇಜ್ರಿವಾಲ್ ಈ ವನ್ಯಜೀವಿ ಗಢವಗೂಬೆಯನ್ನು ಯಾವುದಾದರೂ ಅಭಯಾರಣ್ಯಕ್ಕೆ ಎಸೆಯಬೇಕೆಂದು ಹೋರಾಟ ನಡೆಸುತ್ತಿದ್ದರು. ಈ ಕೇಸಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ‘ಲೆಫ್ಟಿನೆಂಟ್ ಗೌರ್ನರ್’ ಎಂಬ ಹುದ್ದೆಯೇ ಮೂರುಕಾಸಿನದ್ದು, ಅದಕ್ಕೆ ಯಾರೂ ಬೆಲೆ ಕೊಡುವ ಅಗತ್ಯವಿಲ್ಲ, ಬ್ಲೂಜೆಪಿಯ ಈ ಲಡಕಾಸಿ ಗೌರ್ನರ್ ಜನಪ್ರತಿನಿಧಿಗಳ ಅಧಿಕಾರದಲ್ಲಿ ಮೂಗುತೂರಿಸದೆ ಸರ್ವಾಂಗಗಳನ್ನೂ ಮುಚ್ಚಿಕೊಂಡು ತೆಪ್ಪಗಿರಬೇಕೆಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಕೇಜ್ರಿವಾಲ್ ಕೈ ಮೇಲಾಗಿ, ಬ್ಲೂಜೆಪಿಯ ವಯೋವೃದ್ಧ ಪಾಖಂಡಿಗಳು ತಾವು ಬಿದ್ದಿದ್ದ ಚರಂಡಿಯೊಳಗಿಂದ ಎದ್ದುಬರಲು ಯತ್ನಿಸುತ್ತಿರುವಾಗಲೇ ಮತ್ತೊಂದು ಮ್ಯಾನ್‍ಹೋಲ್ ಒಳಕ್ಕೆ ತಲೆಕೆಳಗಾಗಿ ಬಿದ್ದಂತಾಗಿದೆಯೆಂಬ ವಿಶ್ಲೇಷಣೆ ಹೊರಬಿದ್ದಿದೆ. ಈ ಕಿತಾಪತಿ ಪಿತೂರಿಯಲ್ಲಿ ಕೈ ಪಕ್ಷದ ಹಾಸ್ಯನಟರೂ ಸೇರಿಕೊಂಡು ಕೇಜ್ರಿವಾಲರನ್ನು ಈ ಸಲ ಕೆಡವಲು ನಡೆಸುತ್ತಿದ್ದ ಸಂಚು ಈ ಮೂಲಕ ವಿಫಲವಾಗಿದ್ದು, ಸದ್ಯಕ್ಕೆ ರಾಜಧಾನಿಯ ಗೋಶಾಲೆಯಲ್ಲಿ ಹಿಂಡಿಬೂಸಾ ಮೆಲ್ಲುತ್ತ ಪೊಗದಸ್ತಾಗಿದ್ದ ಕೈ ಪಕ್ಷದ ದೆಹಲಿ ನಾಯಕರು ಈ ಕೋರ್ಟ್ ತೀರ್ಪು ಕೇಳಿದ ಕೂಡಲೇ ಅಂಬಾ ಎಂದು ಅರಚಿ, ನಾಲಿಗೆ ಹೊರಚಾಚಿ ಮೂರ್ಛೆ ಹೋಗಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*****

ಕ್ಯಾನ್ಸರ್‍ಗೆ ದನದ ಮೂತ್ರದಲ್ಲಿ ಔಷಧಿ ಕಂಡುಹಿಡಿದ್ರು ಗುಜರಾತಿಗರು: ಫ್ರಥಮ ದರ್ಜೆ ಮುಠ್ಠಾಳರ ಸಂಶೋಧನೆಯಾಯ್ತು ಜಗಜ್ಜಾಹೀರು
‘ಆಧುನಿಕ ವೈದ್ಯಶಾಸ್ತ್ರ’ ಅಂದರೆ ಕೇಜಿಗೆಷ್ಟು, ಅದು ನೋಡಲಿಕ್ಕೆ ಕರ್ರಗಿರುತ್ತೋ ಬೆಳ್ಳಗಿರುತ್ತೋ ಎಂದು ಕೇಳುವ ಪ್ರಥಮದರ್ಜೆ ಮುಠ್ಠಾಳರ ಗುಜರಾತಿನ ಪಡೆಯೊಂದು, ದನದ ಮೂತ್ರದಲ್ಲಿ ಕ್ಯಾನ್ಸರ್‍ಗೆ ಔಷಧಿ ಇದೆಯೆಂಬ ಎದೆಯೊಡೆಯುವ ಹಾಸ್ಯಾಸ್ಪದ ಸಂಶೋಧನೆಯನ್ನು ಮಾಡಿ ಮುಗಿಸಿದ್ದಾರೆ. ಗುಜರಾತಿನ ಜುನಾಗಢ್ ಯೂನಿವರ್ಸಿಟಿಯ ಪ್ರಾಧ್ಯಾಪಕರು ಈ ಕಿಸಲಗೇಡಿ ಕ್ರಿಸ್ತಪೂರ್ವ ಕಾಲದ ತಾಳೆಗರಿ ಸಂಶೋಧನೆ ನಡೆಸಿದ್ದಾರೆ. ಈ ಸುದ್ದಿ ತಿಳಿದ ವಿದೇಶದ ಯೂನಿವರ್ಸಿಟಿಗಳು ಈ ನಾಲ್ಕನೇ ದರ್ಜೆ ಸಂಶೋಧನೆ ನಡೆಸಿದ ಆದಿಮಾನವರು ಶಿಲಾಯುಗ ಕಾಲದಿಂದ 21ನೇ ಶತಮಾನಕ್ಕೆ ಟೈಂಟ್ರಾವೆಲ್ ಮಾಡಿಕೊಂಡು ಬಂದದ್ದಾದರೂ ಹೇಗೆ ಎಂಬ ಬಗ್ಗೆ ಸಂಶೋಧನೆ ನಡೆಸಲು ಅನುಮತಿ ಕೋರಿ ದ್ವೇಷಭಕ್ತರ ಸರ್ಕಾರದ ಅನುಮತಿ ಕೋರಿದ್ದಾರಂತೆ. ಈ ಅರ್ಜಿಯನ್ನು ಓದಿದ ಸನ್ಮಾನ್ಯ ಕೌಡಂಗ್‍ಪ್ರಿಯ ಪಕೋಡೇಂದ್ರ ಅವರು ಆ ಸಂಶೋಧನೆಗಿಂತಲೂ ಮುಂಚೆ ತನ್ನ ತಲೆಯನ್ನೇ ಮೊದಲು ಆಪರೇಷನ್ ಮಾಡಿ ಒಳಗಿರುವುದು ಮಾಂಸಮಜ್ಜೆಯಿಂದಾದ ಮಿದುಳೋ, ಇಲ್ಲಾ.. ದನದ ಸೆಗಣಿಯಿಂದ ತಯಾರಾದ ಮಿದುಳೋ ಎಂದು ಪತ್ತೆ ಮಾಡಿಕೊಡಲು ವಿದೇಶಿ ಸಂಶೋಧಕರನ್ನು ಅಂಗಲಾಚಿದ್ದಾರಂತೆ.

*****

ಹೊಲದಲ್ಲಿ ನಿಂತು ಮಂತ್ರ ಹೇಳಿದ್ರೆ ಬೆಳೆ ಬರುತ್ತಂತೆ
ಗೋವಾ ಬ್ಲೂಜೆಪಿ ಸಚಿವನ ತಲೆಕೆಟ್ಟ ಅಂತೆಕಂತೆ
ರೈತರ ಹೊಲದಲ್ಲಿ ಸರಿಯಾಗಿ ಬೆಳೆ ಬರದೇ ಇದ್ರೆ ರೈತರು ಹೊಲದಲ್ಲಿ ನಿಂತು “ಓಂ ರುಂ ಜುಂ ಸ್ವಾಹಾ, ಓಂ ರುಂ ಜುಂ ಸ್ವಾಹಾ” ಎಂದು ಮಂತ್ರ ಪಠಿಸಿದರೆ ಬೆಳೆ ಚೆನ್ನಾಗಿ ಬರುತ್ತದೆಂದು ಗೋವಾದ ಬ್ಲೂಜೆಪಿ ಪಕ್ಷದ ಕೃಷಿಸಚಿವ ಹೊಸ ಸಂಶೋಧನೆ ಮಾಡಿದ್ದಾನೆ. ಹೀಗೆ ಮಂತ್ರ ಪಠಿಸುವಾಗ ಹಿಂದಿನಿಂದ ಯಾವುದಾದರೂ ಕೊಳಕುಮಂಡಲದ ಹಾವು ಬಂದು ತೊಡೆಗೆ ಕಡಿದರೆ ಓಡಿ ಹೋಗುವುದೋ, ಕಚ್ಚಿಸಿಕೊಂಡು ಅಲ್ಲೇ ನಿಂತು “ಓಂ ರುಂ ಜುಂ ಸ್ವಾಹಾ” ಮಂತ್ರ ಪಠಿಸುವುದೋ ಎಂದು ವದರಿಗಾರರು ಕೇಳಿದ ಪ್ರಶ್ನೆಗೆ ಸಚಿವರು ಕೆಂಡಾಮಂಡಲರಾಗಿ ಕೈಲಿ ಹಿಡಿದಿದ್ದ ಮೈಕನ್ನೇ ಕಚಪಚನೆ ಅಗಿದು ‘ಪ್ಯಾಕಪ್’ ಎಂದು ಕಿರುಚಿ ಓಡಿಹೋದರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಎಲ್ಲ ಬಿಟ್ಟು ಈ ಬ್ಲೂಜೆಪಿಯವರಿಗೇ ಈ ಕಜ್ಜಿ ಐಡಿಯಾಗಳು ಹೇಗೆ ಬರುತ್ತವೆ? ಯಾವ ಫ್ಯಾಕ್ಟರಿಯಲ್ಲಿ ಇವರ ಮೆದುಳುಗಳನ್ನು ಪ್ರೊಡಕ್ಷನ್ ಮಾಡಲಾಗುತ್ತದೆ ಎಂದು ಕಕ್ಕಾಬಿಕ್ಕಿಯಾಗಿರುವ ಕೃಷಿ ವಿಜ್ಞಾನಿಗಳು ಸದರಿ ಬ್ಲೂಜೆಪಿ ಕೃಷಿ ಸಚಿವನನ್ನು ಗುಂಪುಗಲಭೆಯಲ್ಲಿ ಹೊಡೆದು ರೈತರ ಹೊಲಗಳಿಂದ ಒದ್ದೋಡಿಸಲು ತಯಾರಾಗಿದ್ದಾರೆಂದು ವರದಿಯಾಗಿದೆ. ಈ ಮನೆಹಾಳು ಐಡಿಯಾ ಮಾಡಿದ ಕೃಷಿಸಚಿವನ ಎಬಡೇಶಿ ಹೇಳಿಕೆಯ ದೆಸೆಯಿಂದ ಕಂಗಾಲಾಗಿರುವ ಗೋವಾದ ರೈತರು, ಹಂದಿ ಆಹಾರವನ್ನು ಪ್ಯಾಕ್ ಮಾಡಿ ವಿದೇಶಗಳಿಗೆ ಸಾಗಿಸುವ ಹಡಗಿನಲ್ಲಿ ಈ ಸಚಿವನನ್ನು ಹಾಕಿ ಯಾವುದಾದರೂ ಆಫ್ರಿಕನ್ ದೇಶಕ್ಕೆ ಆದಷ್ಟು ಬೇಗ ರಫ್ತು ಮಾಡಬೇಕೆಂದು ಒಕ್ಕೊರಲಿನಿಂದ ಸರ್ಕಾರವನ್ನು ಇನ್ನೂ ಆಗ್ರಹಿಸಿಲ್ಲದಿರುವುದು ಆಶ್ಚರ್ಯ ಹುಟ್ಟಿಸಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನಷ್ಟು ಮತ್ತಷ್ಟು ಆಘಾತ ಹುಟ್ಟಿಸುವ ವಾರ್ತೆಗಳಿಗಾಗಿ ಮುಂದಿನವಾರ ಸಿಗೋಣ. ಧನ್ಯವಾದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...