Homeಅಂಕಣಗಳುಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

ಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

ಟೆಂಜಿನ್ ಅಪರೂಪದ ಹೋರಾಟಗಾರ. ಈತ ಕನ್ನಡಿಗರ ಗಮನವನ್ನು ಸೆಳೆದಿದ್ದು 2005ರಲ್ಲಿ. ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‍ಸಿ)ಗೆ ಚೀನಾದ ಪ್ರಧಾನಿ ವೆನ್ ಜಿಯಾಬೊ ಬರಲಿದ್ದರು

- Advertisement -
- Advertisement -

| ಗೌರಿ ಲಂಕೇಶ್ |

ಈಗ ಎಲ್ಲಿನೋಡಿದರಲ್ಲಿ ಚುನಾವಣಾ ಬಗ್ಗೆಯೇ ಚರ್ಚೆ, ಬಾಜಿ, ಲೆಕ್ಕಾಚಾರ ಇತ್ಯಾದಿಗಳು. ಟಿವಿ ಚಾನೆಲ್‍ಗಳಲ್ಲಿ, ದಿನ ಪತ್ರಿಕೆಗಳಲ್ಲಿ, ಅಷ್ಟೇ ಏಕೆ ಈ ನಿಮ್ಮ ಪತ್ರಿಕೆಯ ಹಲವಾರು ಪುಟಗಳಲ್ಲೂ ಚುನಾವಣೆಗಳ ಬಗೆಗಿನ ವರದಿಗಳೇ ತುಂಬಿವೆ. ಆದ್ದರಿಂದ ನನಗೂ, ನಿಮಗೂ ಒಂದು ಪುಟ್ಟ ಬ್ರೇಕ್ ಸಿಗಲೆಂದು ಚುನಾವಣಾ ಹೊರತಾಗಿರುವ ವಿಷಯದ ಬಗ್ಗೆ ಬರೆಯಬೇಕೆನಿಸುತ್ತದೆ. ಇದಕ್ಕೆ ಪ್ರೇರಣೆ ನೀಡಿದ್ದು ಟಿಬೆಟ್‍ನ ಕವಿ ಮತ್ತು ಹೋರಾಟಗಾರ ಟೆಂಜಿನ್ ಟ್ಸಂಡು ಅವರು ಇತ್ತೀಚೆಗೆ ಬರೆದಿರುವ ಲೇಖನ.

ಟೆಂಜಿನ್ ಅಪರೂಪದ ಹೋರಾಟಗಾರ. ಈತ ಕನ್ನಡಿಗರ ಗಮನವನ್ನು ಸೆಳೆದಿದ್ದು 2005ರಲ್ಲಿ. ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‍ಸಿ)ಗೆ ಚೀನಾದ ಪ್ರಧಾನಿ ವೆನ್ ಜಿಯಾಬೊ ಬರಲಿದ್ದರು. ಅವರ ಭೇಟಿಯನ್ನು ವಿರೋಧಿಸಿ ಕರ್ನಾಟಕದಲ್ಲಿರುವ ಟಿಬೆಟಿಯನ್ನರು ಹಲವು ಪ್ರತಿಭಟನೆಗಳನ್ನು ಮಾಡಿದ್ದರು. ಆದರೆ ಈ ಟೆಂಜಿನ್ ಅವರೆಲ್ಲರಿಗಿಂತ ಹಲವು ಹೆಜ್ಜೆ ಮುಂದೆ ಹೋಗಿದ್ದರು. ಒಂದೆರಡು ದಿನಗಳ ಹಿಂದೆಯೇ ಐಐಎಸ್‍ಸಿಯ ಮುಖ್ಯ ಕಟ್ಟಡದಲ್ಲಿ ಅವಿತುಕೊಂಡ ಟೆಂಜಿನ್ ಚೀನಾದ ಜಿಯಾಬೋ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆಯೇ ಕಟ್ಟಡದ ಮೇಲುಗಡೆ ಪ್ರತ್ಯಕ್ಷವಾಗಿ ಜಿಯಾಬೋ ಅವರ ತಲೆಯ ಮೇಲೆ ಟಿಬೆಟ್‍ನ ಧ್ವಜವನ್ನು ಹಾರಿಸಿದರಲ್ಲದೆ, ಅವರ ವಿರುದ್ಧ ಘೋಷಣೆಗಳನ್ನೂ ಕೂಗಿದರು. ಟಿಂಜನ್ ಅವರ ಉದ್ದೇಶ ಚೀನಾದ ಪ್ರಧಾನಿ ಮೇಲೆ ಭಯೋತ್ಪಾದಕ ಕೃತ್ಯವನ್ನು ಎಸಗುವುದಾಗಿರಲಿಲ್ಲ. ಬದಲಾಗಿ ತನ್ನ ಟಿಬೆಟ್ ಸಮಾಜದ ಮೇಲೆ ಚೀನಾ ಎಸಗುತ್ತಿರುವ ಭಯೋತ್ಪಾದಕ ಕೃತ್ಯಗಳತ್ತ ಜಗತ್ತಿನ ಗಮನವನ್ನು ಸೆಳೆಯುವುದಾಗಿತ್ತು.

ಟೆಂಜಿನ್ ಅವರ ಈ ಅಪರೂಪದ ಪ್ರತಿಭಟನೆಯಿಂದಾಗಿ ಭಾರತದ ಭದ್ರತಾ ಪಡೆ ವ್ಯವಸ್ಥೆಗೆ ಮುಜುಗರವಾಗಿತ್ತಲ್ಲದೆ, ಚೀನಾಕ್ಕೆ ಮುಖಭಂಗವಾಗಿತ್ತು. ಟೆಂಜಿನ್ ಅವರ ವಿರುದ್ಧ ಹಲವಾರು ಕಾನೂನು ಕ್ರಮಗಳನ್ನು ಜರುಗಿಸಿದ ಭಾರತದ ಸರ್ಕಾರ ಅವಮಾನಗೊಂಡಿದ್ದ ಚೀನಾವನ್ನು ಸಂತೈಸಲು ಆ ದೇಶದ ಸರ್ಕಾರದ ಮುಂದೆ ಡೊಗ್ಗು ಸಲಾಮು ಹೊಡೆದಿತ್ತು.

2006ರಲ್ಲಿ ಚೀನಾದ ಅಧ್ಯಕ್ಷ ಹು ಜಿಂಟಾವೊ ಭಾರತಕ್ಕೆ ಭೇಟಿ ನೀಡಿದಾಗ ಚೀನಾದ ಸರ್ಕಾರದ ಅಪೇಕ್ಷೆಯಂತೆ ಟಿಂಜನ್ ಅವರ ಚಲನವಲನಗಳನ್ನು 14 ದಿನಗಳ ಕಾಲ ಧರ್ಮಶಾಲಾ ಪ್ರದೇಶಕ್ಕೆ ಸೀಮಿತಗೊಳಿಸಿ ಅವರ ಮೇಲೆ ಕಟ್ಟೆಚ್ಚರ ಇಡಲಾಗಿತ್ತು.

ಚೀನಾದ ಸಾಂಸ್ಕೃತಿಕ ಕ್ರಾಂತಿ ಅಂತ್ಯಗೊಂಡು ಆ ದೇಶ ಮಾವೋನ ಹಿಡಿತಕ್ಕೆ ಸಿಕ್ಕ ನಂತರ ಆತ ಟಿಬೆಟ್‍ಅನ್ನು ಚೀನಾದ ವಶಕ್ಕೆ ತೆಗೆದುಕೊಳ್ಳಲು ಯತ್ನಿಸಲಾರಂಭಿಸಿದ. ಆಗ ಟಿಬೆಟ್ ಜನರ ನೆರವಿಗೆ ಮುಂದಾಗಿದ್ದು ಅಮೆರಿಕಾದ ಸಿಐಎ ಮತ್ತು ಭಾರತದ ಸರ್ಕಾರ. ಇದರಿಂದಾಗಿ ಟಿಬೆಟ್ ಸೈನ್ಯ ರೂಪಗೊಂಡಿತ್ತಾದರೂ ಚೀನಾದ ದಬ್ಬಾಳಿಕೆ ನಿಲ್ಲಲಿಲ್ಲ. ಆಗ ಟಿಬೆಟ್ ಜನ ದಂಗೆ ಎದ್ದರು. ಇದಕ್ಕೆ ಪ್ರತಿಯಾಗಿ ಟಿಬೆಟಿಯನ್ನರ ಪರಮಗುರು ದಲೈ ಲಾಮರನ್ನೇ ಮುಗಿಸಲು ಚೀನಾ ಸಂಚು ರೂಪಿಸಿತು. ಆಗ ಅನಿವಾರ್ಯವಾಗಿ ದಲೈಲಾಮಾ ಅವರು ಭಾರತಕ್ಕೆ ಓಡಿಬಂದು ಇಲ್ಲಿ ರಕ್ಷಣೆ ಪಡೆಯಬೇಕಾಯಿತು. ಹೀಗೆ ದಲೈಲಾಮಾ ತಪ್ಪಿಸಿಕೊಂಡ ನಂತರ ಟಿಬೆಟ್ ಮೇಲೆ ಚೀನಾ ತನ್ನ ಕ್ರೌರ್ಯವನ್ನು ಹೆಚ್ಚಿಸಿ ಲಕ್ಷಾಂತರ ಜನರನ್ನು ಕೊಂದು ಹಾಕಿತು.

ದಲೈಲಾಮಾರೊಂದಿಗೆ ಸಾವಿರಾರು ಟಿಬೆಟಿಯನ್ನರು ಭಾರತದಲ್ಲಿ ವಾಸಿಸಲಾರಂಭಿಸಿದರು. ಮಾತ್ರವಲ್ಲ, ಅವರಲ್ಲಿ ನೂರಾರು ಜನ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ಕೂಲಿಗಳಾಗಿ ದುಡಿಯಲಾರಂಭಿಸಿದರು. ಹಾಗೆ ದುಡಿಯುತ್ತಾ, ಟೆಂಟ್‍ನಲ್ಲಿ ವಾಸಿಸುತ್ತಿದ್ದ ದಂಪತಿಗಳಿಗೆ ಒಂದು ದಿನ ರಸ್ತೆಬದಿಯಲ್ಲಿ ಜನಿಸಿದ ಕವಿಯೇ ಈ ಟೆಂಜಿನ್‍ಟ್ಸಂಡು.

ಚೆನೈನಲ್ಲಿರುವ ಲಯೋಲಾ ಕಾಲೇಜಿನಿಂದ ಪದವಿ, ಮುಂಬೈನಲ್ಲಿ ಸ್ನಾತಕೋತ್ತರ ಪದವಿ ಪಡೆದ ಟೆಂಜಿನ್ ಶೇಕ್ಸ್‍ಪಿಯರ್‍ನೊಂದಿಗೆ ಕನ್ನಡದ ಎ.ಕೆ.ರಾಮಾನುಜನ್ ಅವರನ್ನು ಅನುಸರಿಸುತ್ತ ಕವಿಯಾಗಿ ರೂಪುಗೊಂಡರು. ಜೊತೆಗೆ ಟಿಬೆಟ್‍ನ ಸ್ವಾತಂತ್ರ್ಯದ ಕಿಚ್ಚನ್ನೂ ತಮ್ಮ ಎದೆಯಲ್ಲಿ ಹೊತ್ತಿಸಿಕೊಂಡರು. ಆತನೇ ಹೇಳುವಂತೆ “ಟಿಬೆಟ್‍ನಲ್ಲಿ ಕ್ರಾಂತಿಯನ್ನು ಪ್ರಾರಂಭಿಸಲು ಅಲ್ಲಿಗೆ ಹೋದೆ. ಆದರೆ ಕೆಲದಿನಗಳಲ್ಲೇ ಈ ರೋಮಾಂಚಕ ಬಂಡಾಯಗಾರರನ್ನು ಬಂಧಿಸಿ, ಹೊಡೆದು, ಲಾಸಾದಲ್ಲಿನ ಜೈಲಿಗೆ ದೂಡಿದರು. ಜೈಲಿನಲ್ಲಿ ಜೊತೆಗಿದ್ದ ಬಂಧಿಯೊಬ್ಬ ‘ಸ್ವತಂತ್ರ ಟಿಬೆಟ್‍ಗಾಗಿ ನಿನ್ನ ಎದೆ ಬೆಂಕಿ ಹತ್ತಿ ಉರಿದರೂ ಅದರ ಹೊಗೆ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸು’ ಎಂದು ಉಪದೇಶ ನೀಡಿದ. ಆದರೆ ಭಗತ್‍ಸಿಂಗ್‍ನ ಅಭಿಮಾನಿಯಾದ ಈ ಅನನುಭವಿ ಕ್ರಾಂತಿಕಾರಿ ಅಷ್ಟೊತ್ತಿಗಾಗಲೇ ತಾನು ಟಿಬೆಟ್‍ಅನ್ನು ಬಿಡುಗಡೆಗೊಳಿಸಲು ಬಂದಿರುವುದಾಗಿ ಕೊಚ್ಚಿಕೊಂಡಿದ್ದ.”

ಟಿಬೆಟ್ ಮೇಲೆ ಚೀನಾ ದಾಳಿ ಮಾಡಿ ಅಲ್ಲಿನ ಜನರನ್ನು ತನ್ನ ಸರ್ವಾಧಿಕಾರಿ ಧೋರಣೆಗೆ ಗುರಿ ಮಾಡಿ ಈಗ್ಗೆ ಐವತ್ತು ವರ್ಷಗಳಾಗಿವೆ. ಈ ಐದು ದಶಕಗಳಲ್ಲಿ ಟಿಬೆಟ್‍ನಲ್ಲಿರುವ ಆರು ಮಿಲಿಯನ್ ಜನರು ಮತ್ತು ಗಡಿಪಾರಾಗಿ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಇಂದು ಬದುಕುತ್ತಿರುವ ಲಕ್ಷಾಂತರ ಟಿಬೆಟಿಯನ್ನರು ಹಂಬಲಿಸುತ್ತಿರುವುದು ತಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ. ಸ್ವಾಭಿಮಾನದ ಬದುಕಿಗಾಗಿ. ಬೌದ್ಧ ಧರ್ಮೀಯರಾದ ಟಿಬೆಟಿಯನ್ನರು ತಮ್ಮ ಕನಸನ್ನು ನನಸಾಗಿಸಲು ಅನುಸರಿಸುತ್ತಿರುವುದು ಅಹಿಂಸಾತ್ಮಕ ಹಾದಿಯನ್ನು. ಆದರೆ ಆ ಹಾದಿ ಎಷ್ಟು ಕಷ್ಟಕರವಾಗಿದೆ ಎಂಬುದನ್ನು ಟೆಂಜಿನ್ ಅವರ ಈ ಪದ್ಯ ಬಿಂಬಿಸುತ್ತದೆ.

ನನ್ನ ಅಪ್ಪ ಸತ್ತ
ತನ್ನ ಮನೆ, ತನ್ನ ಹಳ್ಳಿ
ತನ್ನ ದೇಶಕ್ಕಾಗಿ ಹೋರಾಡುತ್ತಾ.
ಆದರೆ ನಾವು ಬೌದ್ಧರು.
ಜನ ಹೇಳುತ್ತಾರೆ ನಾವು
ಶಾಂತರಾಗಿರಬೇಕೆಂದು,
ಅಹಿಂಸಾವಾದಿಗಳಾಗಿರಬೇಕೆಂದು.
ಆದ್ದರಿಂದ ನಾನು ನನ್ನ ವೈರಿಗಳನ್ನು
ಕ್ಷಮಿಸಿದೆ.
ಹಲವೊಮ್ಮೆ ಅನ್ನಿಸುತ್ತೆ,
ಹಾಗೆ ಕ್ಷಮಿಸುವ ಮೂಲಕ
ನಾನು ನನ್ನ ತಂದೆಗೆ
ದ್ರೋಹ ಬಗೆದೆನೆಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...