Homeಅಂಕಣಗಳುಯುಗಧರ್ಮ | ಯೋಗೇಂದ್ರ ಯಾದವ್ಡಿಸೆಂಬರ್ 11ರ ಫಲಿತಾಂಶವು 2019ರ ಮೇಲೆ ಏನು ಪರಿಣಾಮ ಬೀರಲಿದೆ?

ಡಿಸೆಂಬರ್ 11ರ ಫಲಿತಾಂಶವು 2019ರ ಮೇಲೆ ಏನು ಪರಿಣಾಮ ಬೀರಲಿದೆ?

- Advertisement -
- Advertisement -

ಪ್ರೊ. ಯೋಗೇಂದ್ರ ಯಾದವ್ |

ಒಂದೆಡೆ ಶಾಲೆಗಳಲ್ಲಿ ಪ್ರೀ-ಬೋರ್ಡ್ ಪರೀಕ್ಷೆಗಳ ತಯಾರಿ ನಡೆದಿದ್ದರೆ, ಇನ್ನೊಂದೆಡೆ ಮೋದಿ ಸರಕಾರವೂ ಐದು ರಾಜ್ಯಗಳಲ್ಲಿಯ ವಿಧಾನಸಭೆ ಚುನಾವಣೆಗಳಲ್ಲಿ ತನ್ನ ಪ್ರಿಬರ‍್ಡ್ ಪರೀಕ್ಷೆಗೆ ಅಣಿಯಾಗಿದೆ. ಡಿಸೆಂಬರ್ 11ರಂದು ಈ ಪರೀಕ್ಷೆಗಳ ಫಲಿತಾಂಶ ಪ್ರಕಟವಾದಾಗ, ನಮಗೆ 2019ರ ಚುನಾವಣೆಯ ಫಲಿತಾಂಶದ ಒಂದು ಝಲಕ್ ಕಾಣಿಸುವುದಂತೂ ಖಂಡಿತ. ಇಲ್ಲಿಯವರೆಗೆ ನಮಗೆ ಕಾಣಿಸಿರುವಷ್ಟು ಮುನ್ನೋಟದಿಂದ ಬಿಜೆಪಿ ವಿಚಲಿತವಾಗಿರುವುದು ಸ್ವಾಭಾವಿಕವೆನಿಸುತ್ತಿದೆ.

ಈ ಚುನಾವಣೆಗಳನ್ನು ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದು ಕೆಲವರು ಕರೆಯಲಾರಂಭಿಸಿದ್ದಾರೆ; ಅದೇಕೋ ತಿಳಿಯದು. ಪ್ರತೀ ವಿಧಾನಸಭೆ ಚುನಾವಣೆಯನ್ನು ಕೇಂದ್ರ ಸರಕಾರದ ಮೇಲೆ ರೆಫರೆಂಡಮ್ ಎಂದು ಘೋಷಿಸಲಾಗುತ್ತಿದೆ. ನಾನು ವೈಯಕ್ತಿಕವಾಗಿ ಪ್ರೀ-ಬರ‍್ಡ್ ಎಂದು ಕರೆಯಲು ಇಷ್ಟಪಡುತ್ತೇನೆ. ಅಂತಿಮ ಪರೀಕ್ಷೆಗೆ ಮುಂಚಿನ ಈ ಚಿಕ್ಕ ಪರೀಕ್ಷೆಯಲ್ಲಿ ಮಾಡಿದ ತಯಾರಿಯ ವಿಶ್ಲೇಷಣೆ ಮಾಡಲಾಗುವ, ದೌರ್ಬಲ್ಯಗಳನ್ನು ಪತ್ತೆ ಹಚ್ಚುವ, ಕೊನೆಯಲ್ಲಿ ಎಷ್ಟು ಅಂಕಗಳನ್ನು ಪಡೆಯಬಹುದು ಎನ್ನುವ ಅಂದಾಜು ಹಾಕಲಾಗುವ ಪ್ರಿ ಬೋರ್ಡ್ ಪರೀಕ್ಷೆಗಳು. ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಗಳೂ ಇಂತಹ ಪರೀಕ್ಷೆಯೇ ಆಗಿವೆ. ಇವುಗಳ ಸೋಲು ಗೆಲುವುಗಳಿಂದ 2019ರ ಚುನಾವಣೆಯಲ್ಲಿ ನೇರಾನೇರ ಪರಿಣಾಮವಾಗಲಿದೆ. ಆದರೆ ಈ ಚುನಾವಣೆಯ ಒಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಲೋಕಸಭೆಯ ಚುನಾವಣೆಯ ಒಂದು ಜಾಡು ಸಿಗಬಹುದಾಗಿದೆ.

ಒಂದುವೇಳೆ ಈ ಚುನಾವಣೆಗಳನ್ನು ಲೋಕಸಭೆ ಚುನಾವಣೆಗಳ ದೃಷ್ಟಿಯಲ್ಲಿ ನೋಡಬೇಕಾದರೆ ಮೊದಲು ಮಿಝೋರಾಂ ಮತ್ತು ತೆಲಂಗಾಣ ರಾಜ್ಯಗಳನ್ನು ಮರೆತುಬಿಡಬೇಕಿದೆ. ಮಿಝೋರಾಂ ಎಷ್ಟು ವಿಶಿಷ್ಟ ರಾಜ್ಯವೆಂದರೆ ಮಿಕ್ಕ ದೇಶ ಬಿಡಿ, ಅದರಿಂದ ಈಶಾನ್ಯ ಭಾರತದ ರಾಜಕೀಯದ ಅಂದಾಜನ್ನೂ ಹಾಕಲಾಗುವುದಿಲ್ಲ. ತೆಲಂಗಾಣದಲ್ಲಿ ಸ್ವತಂತ್ರ ರಾಜ್ಯ ಆದ ನಂತರದ ಮೊದಲ ಚುನಾವಣೆಯಿದು. ನಿಸ್ಸಂದೇಹವಾಗಿಯೂ ಇದೊಂದು ಐತಿಹಾಸಿಕ ಚುನಾವಣೆ. ಆದರೆ ತೆಲಂಗಾಣದ ವಿಶಿಷ್ಟ ಪರಿಸ್ಥಿತಿಯೊಂದಿಗೆ ತಳುಕುಹಾಕಿಕೊಂಡ ಚುನಾವಣೆ ಇದಾಗಿದೆ. ಇದರ ಒಲವಿನಿಂದ ಪಕ್ಕದ ಆಂಧ್ರಪ್ರದೇಶದ ರಾಜಕೀಯದ ಒಳನೋಟವೂ ಕಾಣಸಿಗುವುದಿಲ್ಲ. ರಾಜ್ಯದ 17 ಸೀಟುಗಳು ಯಾರ ತೆಕ್ಕೆಗೆ ಬೀಳಬಹುದು ಎನ್ನುವ ಅಂದಾಜನ್ನು ಮಾತ್ರ ನಾವು ಹಾಕಬಹುದು. ಆದರೆ ಇಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಗೆಲ್ಲಲು ಅಥವಾ ಸೋಲಲು ಹೆಚ್ಚೇನಿಲ್ಲ. ಟಿಡಿಪಿ ಮತ್ತು ತೆಲಂಗಾಣ ಜನ ಸಮಿತಿಯೊಂದಿಗೆ ತನ್ನ ಮೈತ್ರಿಯನ್ನು ಕಾಂಗ್ರೆಸ್ ಚುನಾವಣೆಯ ಯುದ್ಧದಲ್ಲಿ ನಿಭಾಯಿಸಬಲ್ಲದೇ ಅಥವಾ ಇಲ್ಲವೇ ಎನ್ನುವುದನ್ನು ಮಾತ್ರ ನೋಡಬಹುದು,

ಲೋಕಸಭೆ ಚುನಾವಣೆಯ ದೃಷ್ಟಿಯಲ್ಲಿ ಈ ಸಲ ಎಲ್ಲಕ್ಕಿಂತ ಮಹತ್ವಪೂರ್ಣ ಚುನಾವಣೆಗಳು ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಢದಲ್ಲಿ ನಡೆಯಲಿವೆ. ಈ ಮೂರು ರಾಜ್ಯಗಳಲ್ಲಿ ಒಟ್ಟು 65 ಸೀಟುಗಳಿವೆ. ಕಳೆದ ಬಾರಿ ಬಿಜೆಪಿ ಈ 65 ರಲ್ಲಿ 62 ಸೀಟುಗಳಲ್ಲಿ ಜಯಶಾಲಿಯಾಗಿತ್ತು. ಈ ರಾಜ್ಯಗಳಲ್ಲಿ ತನ್ನ ಗರಿಷ್ಠ ಸೀಟುಗಳನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಈ ಮೂರು ರಾಜ್ಯಗಳ ಫಲಿತಾಂಶದಿಂದ 2014ರಲ್ಲಿ ಹಿಂದಿ ಬೆಲ್ಟಿನಲ್ಲಿ ಬೀಸಿದ್ದ ಮೋದಿ ಅಲೆ ಇನ್ನೂ ಹಾಗೇ ಇದೆಯೋ ಅಥವಾ ಇಲ್ಲವೋ ಎನ್ನುವ ಸೂಚನೆಯೂ ಸಿಗಲಿದೆ.

ಸದ್ಯಕ್ಕಂತೂ ಅಲೆಯು ಹಿಂದೆ ಇದ್ದ ಪ್ರಮಾಣದಲ್ಲಿ ಇದ್ದ ಹಾಗೆ ಕಾಣುತ್ತಿಲ್ಲ. ಇಲ್ಲಿಯವರೆಗೆ ಕೆಲವು ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟವಾಗಿವೆ. ಚುನಾವಣೆಯ ಫಲಿತಾಂಶಗಳ ಕುರಿತ ಭವಿಷ್ಯವಾಣಿಯನ್ನು ಅನೇಕರು ನುಡಿದಿದ್ದಾರೆ. ಆದರೆ ಕಳೆದ ಕೆಲಸಮಯದಲ್ಲಿ ಈ ಭವಿಷ್ಯವಾಣಿಗಳ ಗುಣಮಟ್ಟ ಎಷ್ಟು ಕುಸಿದಿದೆಯೆಂದರೆ ಇವುಗಳ ಆಧಾರದ ಮೇಲೆ ಏನು ಹೇಳಲೂ ಭಯವಾಗುತ್ತಿದೆ. ಆದರೆ ನೀವು ಚುನಾವಣಾಪೂರ್ವ ಭವಿಷ್ಯವಾಣಿಗಳನ್ನು ಬಿಟ್ಟು ನೋಡಿದಾಗ ಈ ಎಲ್ಲಾ ಸರ್ವೆಗಳಿಂದ ಗಾಳಿ ಯಾವ ದಿಕ್ಕಿನಲ್ಲಿ ಬೀಸುತ್ತಿದೆ, ಜನತೆಯ ಮನದಲ್ಲಿ ಏನಿದೆ ಎನ್ನುವುದನ್ನು ಖಂಡಿತವಾಗಿಯೂ ಪತ್ತೆಹಚ್ಚಬಹುದು.

ರಾಜಸ್ಥಾನದಲ್ಲಿ ಪ್ರತಿಯೊಂದು ಸರ್ವೇ, ಪ್ರತಿಯೊಬ್ಬ ರಾಜಕೀಯ ವಿಶ್ಲೇಷಕ ಹಾಗೂ ಪ್ರತಿಯೊಬ್ಬ ರಸ್ತೆಬದಿ ವ್ಯಾಪಾರಿ ಹೇಳುತ್ತಿರುವುದು ಒಂದೇ. ಬಿಜೆಪಿ ಸೋಲುತ್ತೆ ಹಾಗೂ ಅತ್ಯಂತ ಕೆಟ್ಟ ರೀತಿಯಲ್ಲಿ ಸೋಲುತ್ತೆ. 2013ರ ಚುನಾವಣೆಗೆ ಮುಂಚೆ ಅಶೋಕ್ ಗೆಹ್ಲಾಟ್ ಅವರ ಸರಕಾರ ಎಷ್ಟು ಅಪ್ರಿಯವಾಗಿತ್ತೋ, ವಸುಂಧರಾ ರಾಜೆ ಸರಕಾರವೂ ಅಷ್ಟೇ ಅಪ್ರಿಯವಾಗಿದೆ. ಕೇವಲ 33% ಜನರು ಬಿಜೆಪಿ ಸರಕಾರಕ್ಕೆ ಇನ್ನೊಂದು ಅವಕಾಶ ನೀಡಬೇಕು ಎಂದು ಆಶಿಸಿದರೆ, 44% ಜನರು ಈ ಪಕ್ಷ ಅಧಿಕಾರದಿಂದ ಕೆಳಗಿಳಿಯಬೇಕು ಎನ್ನುತ್ತಿದ್ದಾರೆ. ರಾಜಸ್ಥಾನದಲ್ಲಿ ಇರುವ ಪ್ರಶ್ನೆ ಒಂದೇ, ಬಿಜೆಪಿಯ ಸೋಲಿನ ಅಂತರ ಎಷ್ಟು ಎನ್ನುವುದು. ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸೋತನಂತರ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ತನ್ನ ಕೆಲವು ಸೀಟುಗಳನ್ನು ಉಳಿಸಿಕೊಳ್ಳಲಾಗುವುದೇ? 1999ರಲ್ಲಿ ಆದ ಲೋಕಸಭೆ ಚುನಾವಣೆಯನ್ನು ಬಿಟ್ಟರೆ, ಮಿಕ್ಕೆಲ್ಲಾ ಚುನಾವಣೆಗಳಲ್ಲೂ ವಿಧಾನಸಭೆ ಚುನಾವಣೆಗಳಲ್ಲಿ ಗೆದ್ದವರೇ ಲೋಕಸಭೆ ಚುನಾವಣೆಗಳಲ್ಲಿ ಹೆಚ್ಚಿನ ಸೀಟುಗಳನ್ನು ಗೆದ್ದಿದ್ದಾರೆ.

ಮಧ್ಯಪ್ರದೇಶದಲ್ಲಿ ಮಾತ್ರ ಬೇರೆ ಬೇರೆ ಸರ್ವೇಗಳು ಬೇರೆ ಬೇರೆ ರೀತಿಯಲ್ಲಿ ಭವಿಷ್ಯವಾಣಿ ನುಡಿದಿವೆ. ಆದರೆ ಎರಡು ವಿಷಯಗಳಲ್ಲಿ ಎಲ್ಲಾ ಸರ್ವೇಗಳು ಸಹಮತವನ್ನು ಹೊಂದಿವೆ: ಸ್ಪರ್ಧೆ ತೀವ್ರವಾಗಿದೆ ಹಾಗೂ ಮುಂಚೆಗಿಂತ ಹೋಲಿಕೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸರಕಾರದ ಜನಪ್ರಿಯತೆ ಬಹಳಷ್ಟು ಕುಸಿದಿದೆ. 2103ರ ಚುನಾವಣಾಪೂರ್ವದಲ್ಲಿ ಸಿಎಸ್‌ಡಿಎಸ್ ಸರ್ವೇ ಮಾಡಿದಾಗ 53% ಜನರು ಬಿಜೆಪಿ ಮತ್ತೇ ಸರಕಾರ ಸ್ಥಾಪಿಸಲಿ ಎಂದು ಬಯಸಿದ್ದರು ಹಾಗೂ ಕೇವಲ 20% ಜನರು ಬಿಜೆಪಿ ಸರಕಾರ ಹೋಗಬೇಕು ಎಂದು ಬಯಸಿದ್ದರು. ಆದರೆ ಈ ಸಲ ಅಕ್ಟೋಬರ್ ತಿಂಗಳಲ್ಲಿ 45% ಜನರು ಬಿಜೆಪಿ ಸರಕಾರ ಮರಳಿಬರಲೆಂದು ಆಶಿಸಿದರೆ 43% ಜನರು ಬಿಜೆಪಿ ಸರಕಾರವನ್ನು ತೆಗೆದುಹಾಕುವ ಮೂಡಿನಲ್ಲಿದ್ದಾರೆ. ಸಿಎಸ್‌ಡಿಎಸ್ ಸರ್ವೇಯಲ್ಲಿ ಬಿಜೆಪಿ ಮುಂದಿದ್ದರೂ ಗ್ರಾಮೀಣ ಭಾಗಗಳಲ್ಲಿ ಕಾಂಗ್ರೆಸ್‌ಗಿಂತ ಹಿಂದಿದೆ. ನಗರಪ್ರದೇಶಗಳಲ್ಲಿ ದೊಡ್ಡ ಗೆಲುವನ್ನು ಮತ್ತೆ ಸಾಧಿಸಿದರೂ ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಬಿದ್ದರೆ ಬಹುಮತದ ಸಂಖ್ಯೆಯನ್ನು ದಾಟಲಾಗುವುದಿಲ್ಲ. ಏನೇ ಆದರೂ 2014ರಲ್ಲಿ 29ರಲ್ಲಿ 27 ಸೀಟುಗಳನ್ನು ಗೆದ್ದ ತನ್ನ ದಾಖಲೆಯನ್ನಂತೂ ಮತ್ತೊಮ್ಮೆ ಸಾಧಿಸಲಾಗದು.

ಛತ್ತೀಸಗಢದಲ್ಲಿ ಕೆಲವು ಸರ್ವೇಗಳು ಬಿಜೆಪಿಯ ದೊಡ್ಡ ಗೆಲುವಿನ ಬಗ್ಗೆ ಮಾತನಾಡಿದರೆ ಇನ್ನೂ ಕೆಲವು ಸಣ್ಣ ಸೋಲಿನ ಬಗ್ಗೆ ಹೇಳುತ್ತಿವೆ. ಕಳೆದ ಎರಡು ವಿಧಾನಸಭೆಯ ಚುನಾವಣೆಗಳಲ್ಲಿ ಬಿಜೆಪಿ ಸೋಲಿನಿಂದ ಕೂದಲೆಳೆಯಲ್ಲಿ ಪಾರಾಗಿತ್ತು. ಈ ಸಲ ಎರಡೂ ರೀತಿಯ ಸರ್ವೇಗಳು ಒಪ್ಪಿಕೊಳ್ಳುವುದೇನೆಂದರೆ, ಕಳೆದ ಬಾರಿಯ ಹೋಲಿಕೆಯಲ್ಲಿ ಈ ಬಾರಿ ರಮಣ್‌ಸಿಂಗ್ ಸರಕಾರದ ಜನಪ್ರಿಯತೆ ಕಡಿಮೆಯಾಗಿದೆ. ಎಲ್ಲರೂ ಒಪ್ಪಿಕೊಳ್ಳುತ್ತಿರುವ ಇನ್ನೊಂದು ಮಾತೆಂದರೆ, ಒಂದು ವೇಳೆ ಬಿಜೆಪಿ ಗೆದ್ದಲ್ಲಿ ಅದರ ಶ್ರೇಯ ಅಜಿತ್ ಜೋಗಿ ಹಾಗೂ ಬಸಪ ಮಧ್ಯದ ಮೈತ್ರಿಯಿಂದ ಕಾಂಗ್ರೆಸ್‌ಗೆ ಆಗಲಿರುವ ನಷ್ಟಕ್ಕೇ ಸಲ್ಲುತ್ತದೆ. ಒಂದು ವೇಳೆ ಹೀಗಾದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ 10 ಸೀಟುಗಳನ್ನು ಹೇಗೆ ಉಳಿಸಿಕೊಳ್ಳಬಲ್ಲದು?

ಈ ಚುನಾವಣೆಗಳನ್ನು ಪ್ರೀ-ಬೋರ್ಡ್ ಎಂದು ಕರೆಯುವುದರಲ್ಲಿ ಒಂದು ತೊಂದರೆಯಿದೆ. ಪ್ರೀ-ಬೋರ್ಡ್ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ನಿಜವಾದ ಪರೀಕ್ಷೆಯಲ್ಲಿ ಸೇರಿಸುವುದಿಲ್ಲ. ಆದರೆ ಐದು ರಾಜ್ಯಗಳ ಚುನಾವಣೆಗಳು ಲೋಕಸಭೆ ಚುನಾವಣೆಯ ಮೇಲೆ ನೇರವಾದ ಪರಿಣಾಮ ಬೀರಲಿವೆ. ಒಂದು ವೇಳೆ ಬಿಜೆಪಿ ಮೂರೂ ರಾಜ್ಯಗಳಲ್ಲಿ ಜಯಶಾಲಿಯಾದಲ್ಲಿ ಖಂಡಿತವಾಗಿಯೂ ಲೋಕಸಭೆ ಚುನಾವಣೆಯನ್ನೆದುರಿಸಲು ಬಿಜೆಪಿಯ ಆತ್ಮವಿಶ್ವಾಸ ಹಾಗೂ ದೇಶಾದ್ಯಂತ ಗಾಳಿ ಬೀಸಲು ಬೇಕಾದ ಕ್ಷಮತೆಯಲ್ಲಿ ವೃದ್ಧಿಯಾಗುವುದು. ಆದರೆ ಒಂದುವೇಳೆ ಬಿಜೆಪಿ ರಾಜಸ್ಥಾನದೊಂದಿಗೆ ಇತರೆ ರಾಜ್ಯಗಳಲ್ಲಿ ಸೋಲನ್ನಪ್ಪಿದರೆ ಅಥವಾ ಕಷ್ಟಪಟ್ಟು ಗೆದ್ದರೂ, ಅದರಿಂದ ದೇಶಾದ್ಯಂತ ರಾಜಕೀಯ ವಾತಾವರಣ ಬದಲಾಯಿಸುವುದು. ಪ್ರತಿಪಕ್ಷಗಳ ಕಾರ್ಯಕರ್ತರ ಉತ್ಸಾಹ ಹೆಚ್ಚುವುದು. ದೊಡ್ಡ ಉದ್ಯೋಗಪತಿಗಳು ಈಗ ಬಿಜೆಪಿ ಬಿಟ್ಟು ಬೇರಾವುದೇ ಪಕ್ಷಕ್ಕೆ ಹಣ ನೀಡುವುದಕ್ಕೆ ಹಿಂಜರಿಯುತ್ತಿದ್ದಾರೆ. ಆದರೆ ಬಿಜೆಪಿ ಸೋತಲ್ಲಿ ಅವರು ನಿರ್ಭಯವಾಗಿ ತಮ್ಮ ಹಣದ ಚೀಲ ಬಿಚ್ಚುವುದರಲ್ಲಿ ಸಂದೇಹವಿಲ್ಲ. ಎಲ್ಲಕ್ಕಿಂತ ಮುಖ್ಯ ವಿಷಯವೇನೆಂದರೆ ಮಾಧ್ಯಮಗಳ ಒಲವೂ ಬದಲಾಗಲಿದೆ. ಇಂದು ಬಿಜೆಪಿಯ ಸನ್ನೆಗನುಗುಣವಾಗಿ ಕುಣಿಯುತ್ತಿರುವ ಮಾಧ್ಯಮಗಳು ತನ್ನ ಕುಣಿತದ ಹೆಜ್ಜೆಗಳನ್ನು ಬದಲಿಸುವುದು ಅನಿವಾರ್ಯವಾಗಲಿದೆ. ಮೋದಿ ಸರಕಾರದ ಸತ್ಯ ಸಾಮಾನ್ಯ ಜನರಿಗೆ ತಲುಪಲು ಶುರುವಾಗುವುದು. ಹೀಗೆ ಆದಲ್ಲಿ 2019ರ ಚುನಾವಣೆಯ ಸಮೀಕರಣದಲ್ಲಿ ತೀವ್ರವಾದ/ಚಮತ್ಕಾರಕವಾದ ಬದಲಾವಣೆಗಳು ಬರಬಹುದು.

ಅನುವಾದ: ಡಾ.ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....