Homeಮುಖಪುಟತಂದೆಯಾಗಿ ಅವರು ತನ್ನ ಜವಾಬ್ದಾರಿ ನಿರ್ವಹಿಸಿಲ್ಲ; ಪಂಜಾಬ್ ಸಿಎಂ ಪುತ್ರಿ ಗಂಭೀರ ಆರೋಪ

ತಂದೆಯಾಗಿ ಅವರು ತನ್ನ ಜವಾಬ್ದಾರಿ ನಿರ್ವಹಿಸಿಲ್ಲ; ಪಂಜಾಬ್ ಸಿಎಂ ಪುತ್ರಿ ಗಂಭೀರ ಆರೋಪ

- Advertisement -
- Advertisement -

ತನ್ನ ಸ್ವಂತ ಮಕ್ಕಳ ಜವಾಬ್ದಾರಿಯನ್ನು ಹೊರಲಾಗದ ವ್ಯಕ್ತಿಯು ಪಂಜಾಬ್ ಜನರ ಜವಾಬ್ದಾರಿಯನ್ನು ಹೇಗೆ ಹೊರಲು ಸಾಧ್ಯ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿರುದ್ಧ ಆಕ್ರೋಶ ಹೊರಹಾಕಿರುವ ಪುತ್ರಿ ಸೀರತ್ ಮಾನ್, ‘ಅವರು ತಮ್ಮ ತಾಯಿಯನ್ನು ಮಾನಸಿಕ ಮತ್ತು ದೈಹಿಕವಾಗಿ ನಿಂದಿಸಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಭಗವಂತ್ ಮಾನ್ ಅವರು ಅವರ ಮಾಜಿ ಪತ್ನಿಯಾದ ನನ್ನ ತಾಯಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಸಾಲದ್ದಕ್ಕೆ ನನ್ನನ್ನು ಮತ್ತು ಸಹೋದರನನ್ನು ನಿರ್ಲಕ್ಷಿಸಿದ್ದಾರೆ. ನನ್ನ ತಮ್ಮನನ್ನು ಸಿಎಂ ನಿವಾಸದಿಂದ ರಾತ್ರೋರಾತ್ರಿ ಹೊರಹಾಕಿದ್ದಾರೆ ಎಂದು ಸಾಲು ಸಾಲು ಆರೋಪ ಮಾಡಿದ್ದಾರೆ.

ಈ ಕುರಿತು ವೀಡಿಯೊ ಬಿಡುಗಡೆ ಮಾಡಿರುವ ಸೀರತ್, ‘ನಾನು ಸೀರತ್ ಕೌರ್ ಮಾನ್. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮಗಳು. ನಾನು ಅವರನ್ನು ಮಿಸ್ಟರ್ ಮಾನ್ ಎಂದೇ ಕರೆಯುತ್ತೇನೆ. ಸಿಎಂ ಸಾಬ್ ಅವರು ಬಹಳ ಹಿಂದೆಯೇ ತಂದೆ ಎಂದು ಕರೆಸಿಕೊಳ್ಳುವ ಹಕ್ಕನ್ನು ಕಳೆದುಕೊಂಡಿದ್ದಾರೆ. ನಾನು ಈ ವಿಡಿಯೋ ಮಾಡುತ್ತಿರುವುದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ’ ಎಂದು ಅವರು ಹೇಳಿದ್ದಾರೆ.

‘ನಮ್ಮ ಕಥೆಯೂ ಜಗತ್ತಿನ ಮುಂದೆ ಬರಲಿ ಎಂಬುದಷ್ಟೇ ಈ ವಿಡಿಯೋ ಮಾಡುತ್ತಿರುವ ಹಿಂದಿನ ಕಾರಣ. ಇವತ್ತಿನವರೆಗೂ ಜನ ಕೇಳಿದ್ದೆಲ್ಲವೂ ಸಿಎಂ ಸಾಬ್ ಅವರು ಹೇಳಿದ್ದು ಮಾತ್ರ. ನಾವು ಜಗತ್ತಿನ ಮುಂದೆ ಹೇಳಿ, ಎದುರಿಸಬೇಕಾಗಿದ್ದ ಸಂಗತಿಗಳೆಲ್ಲವೂ ಇದೆ. ಆದರೆ, ನಾವು ಅದನ್ನೆಲ್ಲಾ ವಿವರಿಸಲು ಸಾಧ್ಯವಿಲ್ಲ. ಇಂದಿನವರೆಗೂ, ನನ್ನ ತಾಯಿ ಮೌನವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಅವರ ಮಕ್ಕಳಾಗಿ ನಾವು ಮಾತನಾಡಲಿಲ್ಲವೆಂದರೆ ನಮ್ಮ ಮೌನವನ್ನು ದೌರ್ಬಲ್ಯವೆಂದು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ’ ಎಂದಿದ್ದಾರೆ.

‘ಇಷ್ಟು ದಿನದ ನಮ್ಮ ಮೌನದಿಂದಲೇ ಅವರು ಈ ಸ್ಥಾನದಲ್ಲಿ (ಸಿಎಂ) ಕುಳಿತಿದ್ದಾರೆ ಎಂದು ಅವರಿಗೆ ತಿಳಿದಿಲ್ಲ. ತನ್ನ ತಂದೆ ನನ್ನ (23 ವರ್ಷ) ಮತ್ತು ತನ್ನ ಕಿರಿಯ ಸಹೋದರನ (19) ಜವಾಬ್ದಾರಿ ನಿಭಾಯಿಸಿಲ್ಲ. ಕಳೆದ ವರ್ಷ ಸಹೋದರ ಮಾನ್ ಅವರನ್ನು ಭೇಟಿಯಾಗಲು ಎರಡು ಬಾರಿ ಪ್ರಯತ್ನ ನಡೆಸಿದ್ದರು. ಆದರೆ, ಅಲ್ಲಿದ್ದವರು ಸಿಎಂ ಮನೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಹಲವು ಪ್ರಯತ್ನಗಳ ನಂತರ ಅವನನ್ನು ಒಳಗೆ ಬಿಡಲು ಅನುಮತಿಸಲಾಯಿತು. ಆದರೆ, ರಾತ್ರಿಯಲ್ಲಿ ಅಲ್ಲಿ ಉಳಿಯಲು ಅವಕಾಶವಿಲ್ಲ ಎಂಬ ನೆಪದಲ್ಲಿ ಅವನನ್ನು ನಂತರ ಹೊರಹೋಗುವಂತೆ ಹೇಳಲಾಯಿತು’ ಎಂದು ಹೇಳಿದ್ದಾರೆ.

‘ತನ್ನ ಸ್ವಂತ ಮಕ್ಕಳ ಜವಾಬ್ದಾರಿಯನ್ನು ಹೊರಲಾಗದ ವ್ಯಕ್ತಿ, ಪಂಜಾಬ್ ಜನರ ಜವಾಬ್ದಾರಿಯನ್ನು ಹೇಗೆ ಹೊರಲು ಸಾಧ್ಯ’ ಎಂದು ಸೀರತ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು: ಕೇಂದ್ರದ ನಿರ್ಧಾರ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...