Homeಮುಖಪುಟತಂದೆಯಾಗಿ ಅವರು ತನ್ನ ಜವಾಬ್ದಾರಿ ನಿರ್ವಹಿಸಿಲ್ಲ; ಪಂಜಾಬ್ ಸಿಎಂ ಪುತ್ರಿ ಗಂಭೀರ ಆರೋಪ

ತಂದೆಯಾಗಿ ಅವರು ತನ್ನ ಜವಾಬ್ದಾರಿ ನಿರ್ವಹಿಸಿಲ್ಲ; ಪಂಜಾಬ್ ಸಿಎಂ ಪುತ್ರಿ ಗಂಭೀರ ಆರೋಪ

- Advertisement -
- Advertisement -

ತನ್ನ ಸ್ವಂತ ಮಕ್ಕಳ ಜವಾಬ್ದಾರಿಯನ್ನು ಹೊರಲಾಗದ ವ್ಯಕ್ತಿಯು ಪಂಜಾಬ್ ಜನರ ಜವಾಬ್ದಾರಿಯನ್ನು ಹೇಗೆ ಹೊರಲು ಸಾಧ್ಯ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿರುದ್ಧ ಆಕ್ರೋಶ ಹೊರಹಾಕಿರುವ ಪುತ್ರಿ ಸೀರತ್ ಮಾನ್, ‘ಅವರು ತಮ್ಮ ತಾಯಿಯನ್ನು ಮಾನಸಿಕ ಮತ್ತು ದೈಹಿಕವಾಗಿ ನಿಂದಿಸಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಭಗವಂತ್ ಮಾನ್ ಅವರು ಅವರ ಮಾಜಿ ಪತ್ನಿಯಾದ ನನ್ನ ತಾಯಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಸಾಲದ್ದಕ್ಕೆ ನನ್ನನ್ನು ಮತ್ತು ಸಹೋದರನನ್ನು ನಿರ್ಲಕ್ಷಿಸಿದ್ದಾರೆ. ನನ್ನ ತಮ್ಮನನ್ನು ಸಿಎಂ ನಿವಾಸದಿಂದ ರಾತ್ರೋರಾತ್ರಿ ಹೊರಹಾಕಿದ್ದಾರೆ ಎಂದು ಸಾಲು ಸಾಲು ಆರೋಪ ಮಾಡಿದ್ದಾರೆ.

ಈ ಕುರಿತು ವೀಡಿಯೊ ಬಿಡುಗಡೆ ಮಾಡಿರುವ ಸೀರತ್, ‘ನಾನು ಸೀರತ್ ಕೌರ್ ಮಾನ್. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮಗಳು. ನಾನು ಅವರನ್ನು ಮಿಸ್ಟರ್ ಮಾನ್ ಎಂದೇ ಕರೆಯುತ್ತೇನೆ. ಸಿಎಂ ಸಾಬ್ ಅವರು ಬಹಳ ಹಿಂದೆಯೇ ತಂದೆ ಎಂದು ಕರೆಸಿಕೊಳ್ಳುವ ಹಕ್ಕನ್ನು ಕಳೆದುಕೊಂಡಿದ್ದಾರೆ. ನಾನು ಈ ವಿಡಿಯೋ ಮಾಡುತ್ತಿರುವುದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ’ ಎಂದು ಅವರು ಹೇಳಿದ್ದಾರೆ.

‘ನಮ್ಮ ಕಥೆಯೂ ಜಗತ್ತಿನ ಮುಂದೆ ಬರಲಿ ಎಂಬುದಷ್ಟೇ ಈ ವಿಡಿಯೋ ಮಾಡುತ್ತಿರುವ ಹಿಂದಿನ ಕಾರಣ. ಇವತ್ತಿನವರೆಗೂ ಜನ ಕೇಳಿದ್ದೆಲ್ಲವೂ ಸಿಎಂ ಸಾಬ್ ಅವರು ಹೇಳಿದ್ದು ಮಾತ್ರ. ನಾವು ಜಗತ್ತಿನ ಮುಂದೆ ಹೇಳಿ, ಎದುರಿಸಬೇಕಾಗಿದ್ದ ಸಂಗತಿಗಳೆಲ್ಲವೂ ಇದೆ. ಆದರೆ, ನಾವು ಅದನ್ನೆಲ್ಲಾ ವಿವರಿಸಲು ಸಾಧ್ಯವಿಲ್ಲ. ಇಂದಿನವರೆಗೂ, ನನ್ನ ತಾಯಿ ಮೌನವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಅವರ ಮಕ್ಕಳಾಗಿ ನಾವು ಮಾತನಾಡಲಿಲ್ಲವೆಂದರೆ ನಮ್ಮ ಮೌನವನ್ನು ದೌರ್ಬಲ್ಯವೆಂದು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ’ ಎಂದಿದ್ದಾರೆ.

‘ಇಷ್ಟು ದಿನದ ನಮ್ಮ ಮೌನದಿಂದಲೇ ಅವರು ಈ ಸ್ಥಾನದಲ್ಲಿ (ಸಿಎಂ) ಕುಳಿತಿದ್ದಾರೆ ಎಂದು ಅವರಿಗೆ ತಿಳಿದಿಲ್ಲ. ತನ್ನ ತಂದೆ ನನ್ನ (23 ವರ್ಷ) ಮತ್ತು ತನ್ನ ಕಿರಿಯ ಸಹೋದರನ (19) ಜವಾಬ್ದಾರಿ ನಿಭಾಯಿಸಿಲ್ಲ. ಕಳೆದ ವರ್ಷ ಸಹೋದರ ಮಾನ್ ಅವರನ್ನು ಭೇಟಿಯಾಗಲು ಎರಡು ಬಾರಿ ಪ್ರಯತ್ನ ನಡೆಸಿದ್ದರು. ಆದರೆ, ಅಲ್ಲಿದ್ದವರು ಸಿಎಂ ಮನೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಹಲವು ಪ್ರಯತ್ನಗಳ ನಂತರ ಅವನನ್ನು ಒಳಗೆ ಬಿಡಲು ಅನುಮತಿಸಲಾಯಿತು. ಆದರೆ, ರಾತ್ರಿಯಲ್ಲಿ ಅಲ್ಲಿ ಉಳಿಯಲು ಅವಕಾಶವಿಲ್ಲ ಎಂಬ ನೆಪದಲ್ಲಿ ಅವನನ್ನು ನಂತರ ಹೊರಹೋಗುವಂತೆ ಹೇಳಲಾಯಿತು’ ಎಂದು ಹೇಳಿದ್ದಾರೆ.

‘ತನ್ನ ಸ್ವಂತ ಮಕ್ಕಳ ಜವಾಬ್ದಾರಿಯನ್ನು ಹೊರಲಾಗದ ವ್ಯಕ್ತಿ, ಪಂಜಾಬ್ ಜನರ ಜವಾಬ್ದಾರಿಯನ್ನು ಹೇಗೆ ಹೊರಲು ಸಾಧ್ಯ’ ಎಂದು ಸೀರತ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು: ಕೇಂದ್ರದ ನಿರ್ಧಾರ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...