Homeನ್ಯಾಯ ಪಥತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

ತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

- Advertisement -
- Advertisement -

| ಸಂಪಾದಕೀಯ |

ಕೇಂದ್ರ ಸರ್ಕಾರ ತಾನು ಆಡಳಿತ ನಡೆಸಿದ 5 ವರ್ಷಗಳಲ್ಲಿ ಸುಪ್ರೀಂ ಕೋರ್ಟ್, ಆರ್‍ಬಿಐ, ಸಿ.ಬಿ.ಐ, ದತ್ತಾಂಶ ಸಂಸ್ಥೆಗಳು ಸೇರಿದಂತೆ ಆಡಳಿತದ ಎಲ್ಲಾ ಸಾಂಸ್ಥಿಕ ಆಯಾಮಗಳನ್ನು ಹದಗೆಡಿಸಿರುವುದು ಪ್ರಜ್ಞಾವಂತರಿಗೆ ಗೊತ್ತೇ ಇದೆ. ಸರ್ಕಾರದ ಅನಧಿಕೃತ ಸಂಸ್ಥೆಗಳ ಮೂಲಕ ದೇಶದ ಜನ ಏನು ತಿನ್ನಬೇಕು, ಯಾವ ರೀತಿಯ ಬಟ್ಟೆ ಹಾಕಬೇಕು ಎನ್ನುವ ಫರ್ಮಾನು ಸಹ ಹೊರಡಿಸಲಾಯಿತು. ಈಗ ಅದೇ ಸರ್ಕಾರ ತನ್ನ ಕೊನೆಯ ದಿನಗಳಲ್ಲಿ ದೇಶದ ಮಕ್ಕಳು ಏನು ಕಲಿಯಬೇಕು ಏನು ಬಿಡಬೇಕು ಎಂದು ನಿರ್ಧರಿಸಲು ಮುಂದಾಗಿರುವುದು ಪ್ರಜಾಪ್ರಭುತ್ವ ಘೋರ ಅಣಕವಾಗಿದೆ.

ಭಾರತ ಬಹುತ್ವ ದೇಶ. ಈ ವೈವಿಧ್ಯತೆಯೇ ಅದರ ಜೀವಾಳ. ಈ ವೈವಿಧ್ಯತೆಯೂ ದೇಶದ ಎಲ್ಲಾ ರಂಗಗಳಲ್ಲೂ ಕಂಡಿಬಂದಿದ್ದು ಸಹಜವಾಗಿಯೇ ಮಕ್ಕಳ ಕಲಿಕೆಯಲ್ಲಿಯೂ ಸೇರಿಕೊಂಡಿದೆ. ಭಾರತದ ಪಠ್ಯಪುಸ್ತಕಗಳು ಸಮಗ್ರತೆಯಿಂದ ಕೂಡಿದ್ದು ಇಡೀ ದೇಶದ ಸಂಸ್ಕೃತಿ ಆಚಾರ ವಿಚಾರ ಜನಾಂಗಗಳ ಕುರಿತ ಮಾಹಿತಿಗಳನ್ನು ಒಳಗೊಂಡಿರಬೇಕೆನ್ನುವುದು ಸಂವಿಧಾನದ ಆಶಯ ಮಾತ್ರವಲ್ಲ ಮಕ್ಕಳ ಕಲಿಕೆಯ ದೃಷ್ಟಿಯಿಂದ, ಅವರ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವೆಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಾವಿನ್ನು ನಮ್ಮ ಪಠ್ಯಪುಸ್ತಕಗಳಲ್ಲಿ ಒಳಗೊಳ್ಳಬೇಕಿರುವ ಸಾವಿರಾರು ಅಂಶಗಳಿದ್ದರೂ ಆ ಕಡೆ ಹೆಜ್ಜೆ ಇಟ್ಟೆದ್ದೆವು. ಆದರೆ ಈ ಸರ್ಕಾರ ಅದರಿಂದ ಹಿಂದೆ ಬರುವ ಸೂಚನೆಗಳನ್ನು ನೀಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

ಮೂರು ದಿನ ಹಿಂದೆಯಷ್ಟೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವೇಡ್‍ಕರ್‍ ರವರ ನಿರ್ದೇಶನದ ಮೇರೆಗೆ ಮಕ್ಕಳ ಕಲಿಕೆಯ ಹೊರೆ ಕಡಿಮೆ ಮಾಡುವ ನೆಪಹೊಡ್ಡಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಭೇತಿ ಮಂಡಳಿಯು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಭಾರೀ ಬದಲಾವಣೆಗಳನ್ನು ತಂದಿದೆ. ಭಾರತ ಮತ್ತು ಸಮಕಾಲೀನ ಜಗತ್ತು-1 ಎಂಬ ಪಠ್ಯಪುಸ್ತಕದಲ್ಲಿ 70 ಪುಟಗಳನ್ನು ಕೈಬಿಟ್ಟಿದೆ. ಆದರೆ ಅದರಲ್ಲಿ ಕೇರಳದ ಟ್ರಾವೆಂಕೂರ್‍ನಲ್ಲಿ ಕೆಳ ಜಾತಿಯವರಾಗಿ ಪರಿಗಣಿಸುವ ನಾಡಾರ್ ಮಹಿಳೆಯರು ಎದೆಭಾಗವನ್ನು ಬಟ್ಟೆಯಿಂದ ಮುಚ್ಚಿಕೊಳ್ಳುವುದಕ್ಕಾಗಿ ನಡೆಸಿದ ಹೋರಾಟದ ಕಥನ ಸೇರಿದಂತೆ ಮಹತ್ವದ ಮೂರು ಪಾಠಗಳನ್ನು ತೆಗೆದಿರುವುದು ಕೇವಲ ಹೊರೆ ಕಡಿಮೆ ಮಾಡುವುದಕ್ಕಾಗಿ ಎಂದರೆ ನಂಬಲು ಸಾಧ್ಯವೇ?

ಮುಂದುವರಿದು ಇತಿಹಾಸ ಮತ್ತು ಕ್ರೀಡೆ ಎಂಬ ಅಧ್ಯಾಯದಲ್ಲಿ ಭಾರತದಲ್ಲಿ ಕ್ರಿಕೆಟ್ ಆಟವೆಂಬುದು ಕೆಲವೇ ಜಾತಿ, ಪ್ರದೇಶ ಮತ್ತು ಸಮುದಾಯದೊಂದಿಗೆ ಮಾತ್ರ ಬೆಸೆದುಕೊಂಡಿದೆ ಎಂಬುದರ ವಿಮರ್ಶಾತ್ಮಕ ಪಠ್ಯವನ್ನು ಸಹ ಕೈಬಿಡಲಾಗಿದೆ. ಹಾಗಯೇ ಗ್ರಾಮೀಣ ಜನರು ಮತ್ತು ರೈತರು ಎಂಬ ಅಧ್ಯಾಯದಡಿ ಬಂಡವಾಳಶಾಹಿ ಮತ್ತು ವಸಾಹತುಶಾಹಿ ಆಳ್ವಿಕೆಗಳು ಗ್ರಾಮೀಣ ಜನರ ಮೇಲೆ ಅದರಲ್ಲೂ ರೈತರ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಇದ್ದ ಅಧ್ಯಾಯವೂ ಹೊರೆಯ ಕಾರಣಕ್ಕೆ ಕಾಣೆಯಾಗಿದೆ. ಕೈಬಿಟ್ಟಿರುವ ಮೂರು ಪಠ್ಯಗಳು ಸಹ ದೇಶದ ತಳಸಮುದಾಯಗಳ ಕಥನವಾಗಿದ್ದು ಅವರಿಗಾಗುತ್ತಿರುವ ಅನ್ಯಾಯ ಮತ್ತು ಸಮಾಜವನ್ನು ವಿಮರ್ಶಾತ್ಮಕ ನೋಡಲು ಸಾಧ್ಯವಾಗುವಂತವೇ ಆಗಿರುವುದರಿಂದ ಇದು ಉದ್ದೇಶಪೂರ್ವಕ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ.

ಈ ಪ್ರಕ್ರಿಯೆ 2016ರಿಂದಲೂ ಚಾಲ್ತಿಯಲ್ಲಿದ್ದು ಈ ಪಠ್ಯಗಳ ಕುರಿತು ಪರೀಕ್ಷೆಗಳಲ್ಲಿ ಪ್ರಶ್ನೆ ಕೇಳಬಾರದೆಂದು ಆಗಲೇ ಸುತ್ತೋಲೆ ಹೊರಡಿಸಿತ್ತು. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡದೇ ಕೇವಲ ಇತಿಹಾಸ (ಸಾಮಾಜಿಕ ವಿಜ್ಞಾನ)ದ ಪಠ್ಯಪುಸ್ತಕಗಳಲ್ಲಿ ಮಾತ್ರ ಪಠ್ಯಗಳನ್ನು ಕಡಿತ ಮಾಡಿದೆ ಎಂದರೆ ಆಳುವ ಸರ್ಕಾರದ ಹುನ್ನಾರ ಅರ್ಥವಾಗದೇ ಇರುವುದಿಲ್ಲ. ಇದೇ ಸಂದರ್ಭದಲ್ಲಿ ಹೊರೆ ಕಡಿಮೆ ಮಾಡುವ ಉದ್ದೇಶ ಅಂತ ಬಾಯಲ್ಲಿ ಹೇಳುತ್ತಿದ್ದು ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಹಿಂದಿ ಕವನವನ್ನು ಇದೇ ಎನ್‍ಸಿಇಆರ್‍ಟಿ ಪಠ್ಯದಲ್ಲಿ ಸೇರ್ಪಡೆ ಮಾಡಿದೆ.

ಮಕ್ಕಳು ಏನನ್ನು ಕಲಿಯಬೇಕು, ಪಠ್ಯ ಯಾವುದಿರಬೇಕೆಂಬುದನ್ನು ಹಾಗೂ ಎಷ್ಟಿರಬೇಕೆಂಬುದನ್ನು ನಿರ್ಧರಿಸಬೇಕಿರುವುದು ಶಿಕ್ಷಣ ತಜ್ಞರು, ಮಕ್ಕಳ ತಜ್ಞರು. ಆಳುವ ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಮೂಗು ತೂರಿಸುವುದು ಪ್ರಜಾತಂತ್ರ ವಿರೋಧಿಯಾದುದು. ಆದರೆ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಂತೆಲ್ಲಾ ಶಿಕ್ಷಣದ ಕೇಸರಿಕರಣಕ್ಕೆ ನೇರವಾಗಿ ಕೈಹಾಕುತ್ತಾ ಎಳೆಯ ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪ್ರಯತ್ನ ಮಾಡುತ್ತಿವೆ. ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ತಮಗೆ ಮನಸ್ಸಿಗೆ ಬಂದುದ್ದನ್ನು ಪಠ್ಯಪುಸ್ತಕಗಳಲ್ಲಿ ತರಲು ಹೊರಟರೆ ಶಿಕ್ಷಣದ ಉದ್ದೇಶವೇ ಬೀದಿಪಾಲಾಗುತ್ತದೆ.

ಈ ಹಿಂದೆಯೂ 2009ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಬೇಕು ಎಂಬ ಸುತ್ತೋಲೆ ಹೊರಡಿಸಿತ್ತು. ಆಗ ಕರ್ನಾಟಕದ ಪ್ರಜ್ಞಾವಂತರಿಂದ ವ್ಯಾಪಕ ವಿರೋಧ ಬಂದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಿಲುವಿನಿಂದ ಹಿಂದೆ ಸರಿದಿತ್ತು. ತದನಂತರ ಸಂಸ್ಕøತ ಭಾಷೆಯನ್ನು ಕಡ್ಡಾಯ ಮಾಡುತ್ತೇವೆಂದು ಒಂದಷ್ಟು ದಿನ ಪ್ರಚಾರ ಮಾಡಿದರು. ಈಗ ವೇದ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತೇವೆಂದು ಗುಲ್ಲೆಬ್ಬಿಸುತ್ತಿದ್ದಾರೆ. ಇಡೀ ಪ್ರಪಂಚವೇ ಆಧುನಿಕ, ವೈಜ್ಞಾನಿಕ ಶಿಕ್ಷಣ ಪಡೆದು ಅಭಿವೃದ್ದಿ ಪಥದಲ್ಲಿ ಮುನ್ನುಗ್ಗುತ್ತಿದ್ದರೆ ಭಾರತ ಮಾತ್ರ ಮತಾಂಧರ ಕೈಗೆ ಸಿಕ್ಕಿ ಹಿಮ್ಮುಖವಾಗಿ ಚಲಿಸುವ ದುಸ್ಥಿಗೆ ತಲುಪಿದೆ.

ಶಿಕ್ಷಣದ ಮೂಲಭೂತ ಉದ್ದೇಶ ಮಾನವೀಯವಾದ, ಪ್ರಜಾತಾಂತ್ರಿಕವಾದ, ಎಲ್ಲಾ ಜನರೂ ಸಮಾನರಾದ, ಬಹು ವೈವಿಧ್ಯತೆಯನ್ನು ಗೌರವಿಸುವ, ಸೃಜನಶೀಲತೆ, ಜ್ಞಾನ ಹಾಗೂ ನೆಮ್ಮದಿಯನ್ನು ಹೆಚ್ಚಿಸುತ್ತಾ ಹೋಗುವ ಸಮಾಜವನ್ನು ನಿರ್ಮಿಸುವುದಾಗಿದೆ. ಅದರ ಈಡೇರಿಕೆಗೆ ಎಲ್ಲಾ ಜಾತಿ ಧರ್ಮದ ಮಕ್ಕಳು ಸಹ ಒಂದೇ ಶಾಲೆಯಲ್ಲಿ ಕಲಿಯುವ ಸಮಾನ ಶಾಲಾ ವ್ಯವಸ್ಥೆಯ ಅಗತ್ಯವಿದೆ. ಆಗ ಮಾತ್ರ ಭಾರತದ ಮಕ್ಕಳು ಯಾವುದೇ ಹೇರಿಕೆ ಇಲ್ಲದೇ ಮುಕ್ತವಾಗಿ ಕಲಿಯುವ ವಾತವರಣ ನಿರ್ಮಾಣವಾಗುತ್ತದೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಲಪಂಥೀಯ ಸರ್ಕಾರದ ಅರ್ಥಹೀನ ಕ್ರಮಗಳನ್ನು ವಿರೊಧಿಸುತ್ತಲೇ ಜನಪರ ಕಲಿಕಾ ವಿಧನಕ್ಕಾಗಿ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....