Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....