Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣದ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...