Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...