Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....