Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...