Homeರಾಜಕೀಯಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

ಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

- Advertisement -
- Advertisement -

ಮಾಚಯ್ಯ |

ಅಂತೂಇಂತೂ ಬ್ರಿಗೇಡ್ ಈಶ್ವರಪ್ಪ ಶಿವಮೊಗ್ಗ ಸಿಟಿಯಲ್ಲಿ ಗೆದ್ದು ನಿಟ್ಟುಸಿರು ಬಿಟ್ಟಿದ್ದಾರೆ. ಎತ್ತಿಂದೆತ್ತ ಲೆಕ್ಕ ಹಾಕಿದರೂ ಕಳೆದ ಸಲದ ಮೂರನೇ ಸ್ಥಾನ ಬಿಟ್ಟು ಮೇಲಕ್ಕೇಳುವ ಲಕ್ಷಣಗಳೇ ಈ ಚುನಾವಣೆಯ ಕೊನೆಯ ಕ್ಷಣದವರೆಗೆ ಈಶ್ವರಪ್ಪ ಮೊಗದಲ್ಲಿ ಕಾಣಿಸುತ್ತಿರಲಿಲ್ಲ. ತಾನು ಪಕ್ಷ ಬಿಟ್ಟು ಹೋಗಲು ಕಾರಣವಾಗಿದ್ದ, ವಾಪಾಸು ಬಂದಾಗಲೂ ರಾಯಣ್ಣ ಬ್ರಿಗೇಡ್ ಕಟ್ಟಿಕೊಂಡು ವಿಪರೀತ ಕಾಟ ಕೊಟ್ಟಿದ್ದ ಈಶ್ವರಪ್ಪರನ್ನು ಸೋಲಿಸಿ, ಅವರ ರಾಜಕೀಯ ಬದುಕಿಗೆ ಇತಿಶ್ರೀ ಹಾಡಲು ಸ್ವತಃ ಯಡ್ಯೂರಪ್ಪನವರೇ ಸಕಲ ಸನ್ನದ್ಧರಾಗಿದ್ದು ವಾಸ್ತವ. ಹಾಗೆ ನೋಡಿದರೆ ಈಶ್ವರಪ್ಪನಿಗೆ ಟಿಕೇಟು ಕೊಡೋದೇ ಯಡ್ಯೂರಪ್ಪನವರಿಗೆ ಇಷ್ಟವಿರಲಿಲ್ಲ. ಅದಕ್ಕೆಂದೇ ಕಳೆದ ಸಲದ ಕೆಜೆಪಿ ಹುರಿಯಾಳು ರುದ್ರೇಗೌಡರನ್ನು ಜಿಲ್ಲಾಧ್ಯಕ್ಷ ಮಾಡಿ, ಚುನಾವಣಾ ಮುಂಚೂಣಿಗೆ ತರುವ ಪ್ರಯತ್ನ ಮಾಡಿದ್ದೂ ಉಂಟು.

ಹೈಕಮಾಂಡ್ ಒತ್ತಡಕ್ಕೆ ಮಣಿದು ಟಿಕೇಟ್ ಕನ್ಫರ್ಮ್ ಮಾಡಿದ ಮೇಲೂ ಈಶ್ವರಪ್ಪರಿಗೆ ಸೋಲಿನ ರುಚಿ ತೋರಿಸಲು ಮಾಡಬೇಕಾದ ಮಸಲತ್ತುಗಳನ್ನೆಲ್ಲ ಯಡ್ಯೂರಪ್ಪ ಅಣಿ ಮಾಡಿಟ್ಟಿದ್ದರು. ಕೊನೇ ಕ್ಷಣದವರೆಗೆ ಕ್ಷೇತ್ರದೊಳಗೆ ಕಾಲಿಟ್ಟ ಎಂತವರಿಗೇ ಆದರೂ ಈಶ್ವರಪ್ಪನ ಮೂರನೇ ಸ್ಥಾನದ ದುರಂತ ಭವಿಷ್ಯ ಮುಖಕ್ಕೆ ರಾಚುತ್ತಿತ್ತು. ಅಂತದ್ದರಲ್ಲಿ ಬ್ರಾಹ್ಮಣ ಮತಗಳು ಗಣನೀಯ ಸಂಖ್ಯೆಯಲ್ಲಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅದೇ ಬ್ರಾಹ್ಮಣ ಸಮುದಾಯದ ಕೆ.ಬಿ.ಪ್ರಸನ್ನ ಕುಮಾರ್‍ರನ್ನು ಹಿಂದಿಕ್ಕಿ ಬರೋಬ್ಬರಿ ಐವತ್ತು ಸಾವಿರ ಲೀಡ್‍ನಲ್ಲಿ ಈಶ್ವರಪ್ಪ ಗೆಲುವಿನ ಪತಾಕೆ ಹಾರಿಸುತ್ತಾರೆಂದರೆ ಹೇಗೆ ಸಾಧ್ಯ ಅನ್ನೋದು ಜನರನ್ನು ಕಾಡುತ್ತಿದೆ.

ಒನ್ಸ್ ಎಗೇನ್, ಈಶ್ವರಪ್ಪನವರ ಈ ಗೆಲುವಿನ ಹಿಂದೆ ಕೆಲಸ ಮಾಡಿರೋದು ಅದೇ ಹೈಕಮಾಂಡ್! ಶತಾಯಗತಾಯ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರ ಇಡಬೇಕೆಂದು ನಿರ್ಧರಿಸಿಕೊಂಡಿದ್ದ ಬಿಜೆಪಿ ಹೈಕಮಾಂಡ್‍ಗೆ ಒಂದೊಂದು ಸೀಟೂ ಮುಖ್ಯವೆನ್ನುವುದು ಮನದಟ್ಟಾಗಿ ಹೋಗಿತ್ತು. ಅದಕ್ಕೋಸ್ಕರ ಆಂತರಿಕ ಕಚ್ಚಾಟದಿಂದ ಕೈತಪ್ಪಿ ಹೋಗಬಹುದಾಗಿರುವ ಕ್ಷೇತ್ರಗಳನ್ನು ಪಟ್ಟಿ ಮಾಡಿ ಸಂಬಂಧಪಟ್ಟವರ ತಲೆಮೇಲೆ ಮೊಟಕುವ ಪ್ರಯತ್ನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾದಾಗ ಆ ಪಟ್ಟಿಯಲ್ಲಿ ಮೊದಲು ಕಾಣಿಸಿಕೊಂಡಿದ್ದೇ ಈಶ್ವರಪ್ಪನವರ ತವರುಮನೆ. ಸ್ವತಃ ಯಡ್ಯೂರಪ್ಪನವರೇ ಈಶ್ವರಪ್ಪನನ್ನು ಮಣಿಸಲು ರಹಸ್ಯ ಸಿದ್ಧತೆ ಮಾಡಿಕೊಂಡಿರೋದನ್ನು ಖಾತ್ರಿಪಡಿಸಿಕೊಂಡ ಅಮಿತ್ ಶಾ, ಯಡ್ಯೂರಪ್ಪನನ್ನು ಕರೆದು `ನಿಮ್ಮ ಸಿಎಂ ಆಗೋ ಕನಸು ನನಸಾಗಬೇಕು ಅಂದ್ರೆ, ನೀವು ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲೇಬೇಕು. ಅಕಸ್ಮಾತ್ ಆಯಪ್ಪ ಸೋತರೆ, ಅದಕ್ಕೆ ನೀವೇ ಜವಾಬ್ಧಾರರಾಗ್ತೀರಿ. ಆಮೇಲಿನ ಬೆಳವಣಿಗೆಗಳಿಗೆ ನಾವು ಹೊಣೆಯಲ್ಲ’ ಅನ್ನೋ ಸಾಫ್ಟ್ ಎಚ್ಚರಿಕೆ ರವಾನಿಸಿದ್ದರು. ಆನಂತರವೇ ಯಡ್ಯೂರಪ್ಪ ತನ್ನೆಲ್ಲಾ ರಣತಂತ್ರಗಳನ್ನು ರಿವರ್ಸ್ ಮಾಡಿ, ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲು ದಾಳ ಉರುಳಿಸಿದ್ದು. ಲಿಂಗಾಯತ ಮತಗಳು ಸಾಲಿಡ್ಡಾಗಿ ಈಶ್ವರಪ್ಪನಿಗೆ ಒಲಿದು ಬರುವಂತೆ ಫರ್ಮಾನು ಹೊರಡಿಸಿದ್ದಲ್ಲದೇ, ಸ್ಥಳೀಯ ಆರೆಸ್ಸೆಸ್ ನಾಯಕರನ್ನು ಬಳಸಿಕೊಂಡು ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೇನೆ ಬ್ರಾಹ್ಮಣ ಸಮುದಾಯಕ್ಕೆ ಅನುಕೂಲ, ಹಾಗಾಗಿ ಜಾತ್ಯಸ್ಥ ಅಂತ ಪ್ರಸನ್ನ ಕುಮಾರ್‍ಗೆ ಓಟ್ ಹಾಕುವ ಬದಲು ಕಮಲದ ಚಿಹ್ನೆಗೆ ಮತ ಹಾಕುವಂತೆ ಅಂಡರ್ ಕರೆಂಟ್ ಹರಿಸಿದ್ದರು. ಅದು ಈಶ್ವರಪ್ಪನವರನ್ನು ಅನಾಮತ್ತು ಮೂರನೇ ಸ್ಥಾನದಿಂದ ಮೇಲಕ್ಕೇರಿಸಿ, ಐವತ್ತು ಸಾವಿರ ಲೀಡ್‍ಗಳಲ್ಲಿ ಗೆಲ್ಲಿಸಿದೆ.

ಅಂದಹಾಗೆ, ಗೆದ್ದರೂ ಪಕ್ಷದೊಳಗೆ ಈಶ್ವರಪ್ಪರನ್ನು ಈ ಋಣಭಾರ ಭರ್ಜರಿಯಾಗೇ ಮೆತ್ತಗಾಗಿಸಲಿದೆ. ಅಂತದ್ದೊಂದು ಸಣ್ಣ ಸ್ಯಾಂಪಲ್ ಕೂಡಾ ಈಗಾಗಲೇ ಘಟಿಸಿದೆ. ಫಲಿತಾಂಶ ಹೊರಬಿದ್ದು ಅಧಿಕಾರದ ಹೊಸ್ತಿಲಿಗೆ ಬಂದು ಅಂಡು ಸುಟ್ಟ ಬೆಕ್ಕಿನಂತಾಗಿದ್ದ ಬಿಜೆಪಿಯು ಪಕ್ಷೇತರರು, ಕಾಂಗ್ರೆಸ್-ಜೆಡಿಎಸ್ ಅತೃಪ್ತರಿಗೆ ಗಾಳ ಹಾಕುವ ಪ್ರಯತ್ನದಲ್ಲಿತ್ತು. ಆಗ ರಾಣೇಬೆನ್ನೂರಿನಿಂದ ಕೋಳಿವಾಡರನ್ನು ಮುಕ್ಕಿಸಿ ಬಂದ ಕೆಪಿಜೆಪಿಯ ಆರ್.ಶಂಕರ್‍ನನ್ನು ಬಿಜೆಪಿ ಸಂಪರ್ಕಿಸಿ ಕುದುರಿಸಿಕೊಂಡಿದ್ದುಂಟು. ಆತ ಜಾತಿಯಲ್ಲಿ ಕುರುಬನಾದ್ದರಿಂದ ಮತ್ತು ಈಶ್ವರಪ್ಪನ ಕಳ್ಳುಬಳ್ಳಿ ಸಂಬಂಧಿಕನೂ ಆದ್ದರಿಂದ ಆತನನ್ನು ನಿಭಾಯಿಸುವ ಹೊಣೆಯನ್ನು ಈಶ್ವರಪ್ಪನಿಗೇ ಹೈಕಮಾಂಡ್ ವಹಿಸಿತ್ತು. ಆದರೆ ಈಶ್ವರಪ್ಪ ಕೊಂಚ ಮೈಮರೆತಿದ್ದರಿಂದ ಬೆಳಿಗ್ಗೆ ಬಿಜೆಪಿ ಜೊತೆಗಿದ್ದ ಶಂಕರ್ ಸಂಜೆಯ ವೇಳೆಗಾಗಲೇ ಸಿದ್ದರಾಮಯ್ಯನವರ ಪಡಸಾಲೆಯಲ್ಲಿ ಮುಖ ತೋರಿಸಿ ಜೈ ಅಂದ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಹೈಕಮಾಂಡ್ ಪ್ರತಿನಿಧಿ ಪ್ರಕಾಶ್ ಜಾವ್ಡೇಕರ್, ಈಶ್ವರಪ್ಪನನ್ನು ಕರೆಸಿಕೊಂಡು `ಒಬ್ಬ ಎಮ್ಮೆಲ್ಲೆನ ನಿಮ್ಮ ಕೈಲಿ ನಿಭಾಯಿಸೋಕೆ ಆಗಲ್ವೇನ್ರೀ? ಇದಕ್ಕೋಸ್ಕರನೇನಾ ನಾವು ಯಡ್ಯೂರಪ್ಪಾಜಿಯ ಮನವೊಲಿಸಿ ನಿಮ್ಮನ್ನು ಗೆಲ್ಲಿಸಿಕೊಂಡದ್ದು. ನಿಮ್ಮ ಈ ಹೊಣೆಗೇಡಿತನದ ವಿರುದ್ಧ ಅಮಿತ್ ಶಾಜಿಗೆ ಕಂಪ್ಲೇಂಟ್ ಮಾಡ್ತೀನಿ’ ಅಂತ ಲೆಫ್ಟ್‍ರೈಟ್ ಕ್ಲಾಸ್ ತಗೊಂಡಿದ್ದರು. ಯಡ್ಯೂರಪ್ಪನವರ ಮರ್ಜಿಯಲ್ಲಿ ಗೆದ್ದಿರೋ ಈಶ್ವರಪ್ಪನೋರಿಗೆ ಭವಿಷ್ಯದಲ್ಲಿ ಇಂಥ ದೈನೇಸಿ ಬಹುಮಾನಗಳು ಸಾಕಷ್ಟು ಕಾದಿವೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...