Homeರಾಜಕೀಯಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

ಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

- Advertisement -
- Advertisement -

ಮಾಚಯ್ಯ |

ಅಂತೂಇಂತೂ ಬ್ರಿಗೇಡ್ ಈಶ್ವರಪ್ಪ ಶಿವಮೊಗ್ಗ ಸಿಟಿಯಲ್ಲಿ ಗೆದ್ದು ನಿಟ್ಟುಸಿರು ಬಿಟ್ಟಿದ್ದಾರೆ. ಎತ್ತಿಂದೆತ್ತ ಲೆಕ್ಕ ಹಾಕಿದರೂ ಕಳೆದ ಸಲದ ಮೂರನೇ ಸ್ಥಾನ ಬಿಟ್ಟು ಮೇಲಕ್ಕೇಳುವ ಲಕ್ಷಣಗಳೇ ಈ ಚುನಾವಣೆಯ ಕೊನೆಯ ಕ್ಷಣದವರೆಗೆ ಈಶ್ವರಪ್ಪ ಮೊಗದಲ್ಲಿ ಕಾಣಿಸುತ್ತಿರಲಿಲ್ಲ. ತಾನು ಪಕ್ಷ ಬಿಟ್ಟು ಹೋಗಲು ಕಾರಣವಾಗಿದ್ದ, ವಾಪಾಸು ಬಂದಾಗಲೂ ರಾಯಣ್ಣ ಬ್ರಿಗೇಡ್ ಕಟ್ಟಿಕೊಂಡು ವಿಪರೀತ ಕಾಟ ಕೊಟ್ಟಿದ್ದ ಈಶ್ವರಪ್ಪರನ್ನು ಸೋಲಿಸಿ, ಅವರ ರಾಜಕೀಯ ಬದುಕಿಗೆ ಇತಿಶ್ರೀ ಹಾಡಲು ಸ್ವತಃ ಯಡ್ಯೂರಪ್ಪನವರೇ ಸಕಲ ಸನ್ನದ್ಧರಾಗಿದ್ದು ವಾಸ್ತವ. ಹಾಗೆ ನೋಡಿದರೆ ಈಶ್ವರಪ್ಪನಿಗೆ ಟಿಕೇಟು ಕೊಡೋದೇ ಯಡ್ಯೂರಪ್ಪನವರಿಗೆ ಇಷ್ಟವಿರಲಿಲ್ಲ. ಅದಕ್ಕೆಂದೇ ಕಳೆದ ಸಲದ ಕೆಜೆಪಿ ಹುರಿಯಾಳು ರುದ್ರೇಗೌಡರನ್ನು ಜಿಲ್ಲಾಧ್ಯಕ್ಷ ಮಾಡಿ, ಚುನಾವಣಾ ಮುಂಚೂಣಿಗೆ ತರುವ ಪ್ರಯತ್ನ ಮಾಡಿದ್ದೂ ಉಂಟು.

ಹೈಕಮಾಂಡ್ ಒತ್ತಡಕ್ಕೆ ಮಣಿದು ಟಿಕೇಟ್ ಕನ್ಫರ್ಮ್ ಮಾಡಿದ ಮೇಲೂ ಈಶ್ವರಪ್ಪರಿಗೆ ಸೋಲಿನ ರುಚಿ ತೋರಿಸಲು ಮಾಡಬೇಕಾದ ಮಸಲತ್ತುಗಳನ್ನೆಲ್ಲ ಯಡ್ಯೂರಪ್ಪ ಅಣಿ ಮಾಡಿಟ್ಟಿದ್ದರು. ಕೊನೇ ಕ್ಷಣದವರೆಗೆ ಕ್ಷೇತ್ರದೊಳಗೆ ಕಾಲಿಟ್ಟ ಎಂತವರಿಗೇ ಆದರೂ ಈಶ್ವರಪ್ಪನ ಮೂರನೇ ಸ್ಥಾನದ ದುರಂತ ಭವಿಷ್ಯ ಮುಖಕ್ಕೆ ರಾಚುತ್ತಿತ್ತು. ಅಂತದ್ದರಲ್ಲಿ ಬ್ರಾಹ್ಮಣ ಮತಗಳು ಗಣನೀಯ ಸಂಖ್ಯೆಯಲ್ಲಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅದೇ ಬ್ರಾಹ್ಮಣ ಸಮುದಾಯದ ಕೆ.ಬಿ.ಪ್ರಸನ್ನ ಕುಮಾರ್‍ರನ್ನು ಹಿಂದಿಕ್ಕಿ ಬರೋಬ್ಬರಿ ಐವತ್ತು ಸಾವಿರ ಲೀಡ್‍ನಲ್ಲಿ ಈಶ್ವರಪ್ಪ ಗೆಲುವಿನ ಪತಾಕೆ ಹಾರಿಸುತ್ತಾರೆಂದರೆ ಹೇಗೆ ಸಾಧ್ಯ ಅನ್ನೋದು ಜನರನ್ನು ಕಾಡುತ್ತಿದೆ.

ಒನ್ಸ್ ಎಗೇನ್, ಈಶ್ವರಪ್ಪನವರ ಈ ಗೆಲುವಿನ ಹಿಂದೆ ಕೆಲಸ ಮಾಡಿರೋದು ಅದೇ ಹೈಕಮಾಂಡ್! ಶತಾಯಗತಾಯ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರ ಇಡಬೇಕೆಂದು ನಿರ್ಧರಿಸಿಕೊಂಡಿದ್ದ ಬಿಜೆಪಿ ಹೈಕಮಾಂಡ್‍ಗೆ ಒಂದೊಂದು ಸೀಟೂ ಮುಖ್ಯವೆನ್ನುವುದು ಮನದಟ್ಟಾಗಿ ಹೋಗಿತ್ತು. ಅದಕ್ಕೋಸ್ಕರ ಆಂತರಿಕ ಕಚ್ಚಾಟದಿಂದ ಕೈತಪ್ಪಿ ಹೋಗಬಹುದಾಗಿರುವ ಕ್ಷೇತ್ರಗಳನ್ನು ಪಟ್ಟಿ ಮಾಡಿ ಸಂಬಂಧಪಟ್ಟವರ ತಲೆಮೇಲೆ ಮೊಟಕುವ ಪ್ರಯತ್ನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾದಾಗ ಆ ಪಟ್ಟಿಯಲ್ಲಿ ಮೊದಲು ಕಾಣಿಸಿಕೊಂಡಿದ್ದೇ ಈಶ್ವರಪ್ಪನವರ ತವರುಮನೆ. ಸ್ವತಃ ಯಡ್ಯೂರಪ್ಪನವರೇ ಈಶ್ವರಪ್ಪನನ್ನು ಮಣಿಸಲು ರಹಸ್ಯ ಸಿದ್ಧತೆ ಮಾಡಿಕೊಂಡಿರೋದನ್ನು ಖಾತ್ರಿಪಡಿಸಿಕೊಂಡ ಅಮಿತ್ ಶಾ, ಯಡ್ಯೂರಪ್ಪನನ್ನು ಕರೆದು `ನಿಮ್ಮ ಸಿಎಂ ಆಗೋ ಕನಸು ನನಸಾಗಬೇಕು ಅಂದ್ರೆ, ನೀವು ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲೇಬೇಕು. ಅಕಸ್ಮಾತ್ ಆಯಪ್ಪ ಸೋತರೆ, ಅದಕ್ಕೆ ನೀವೇ ಜವಾಬ್ಧಾರರಾಗ್ತೀರಿ. ಆಮೇಲಿನ ಬೆಳವಣಿಗೆಗಳಿಗೆ ನಾವು ಹೊಣೆಯಲ್ಲ’ ಅನ್ನೋ ಸಾಫ್ಟ್ ಎಚ್ಚರಿಕೆ ರವಾನಿಸಿದ್ದರು. ಆನಂತರವೇ ಯಡ್ಯೂರಪ್ಪ ತನ್ನೆಲ್ಲಾ ರಣತಂತ್ರಗಳನ್ನು ರಿವರ್ಸ್ ಮಾಡಿ, ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲು ದಾಳ ಉರುಳಿಸಿದ್ದು. ಲಿಂಗಾಯತ ಮತಗಳು ಸಾಲಿಡ್ಡಾಗಿ ಈಶ್ವರಪ್ಪನಿಗೆ ಒಲಿದು ಬರುವಂತೆ ಫರ್ಮಾನು ಹೊರಡಿಸಿದ್ದಲ್ಲದೇ, ಸ್ಥಳೀಯ ಆರೆಸ್ಸೆಸ್ ನಾಯಕರನ್ನು ಬಳಸಿಕೊಂಡು ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೇನೆ ಬ್ರಾಹ್ಮಣ ಸಮುದಾಯಕ್ಕೆ ಅನುಕೂಲ, ಹಾಗಾಗಿ ಜಾತ್ಯಸ್ಥ ಅಂತ ಪ್ರಸನ್ನ ಕುಮಾರ್‍ಗೆ ಓಟ್ ಹಾಕುವ ಬದಲು ಕಮಲದ ಚಿಹ್ನೆಗೆ ಮತ ಹಾಕುವಂತೆ ಅಂಡರ್ ಕರೆಂಟ್ ಹರಿಸಿದ್ದರು. ಅದು ಈಶ್ವರಪ್ಪನವರನ್ನು ಅನಾಮತ್ತು ಮೂರನೇ ಸ್ಥಾನದಿಂದ ಮೇಲಕ್ಕೇರಿಸಿ, ಐವತ್ತು ಸಾವಿರ ಲೀಡ್‍ಗಳಲ್ಲಿ ಗೆಲ್ಲಿಸಿದೆ.

ಅಂದಹಾಗೆ, ಗೆದ್ದರೂ ಪಕ್ಷದೊಳಗೆ ಈಶ್ವರಪ್ಪರನ್ನು ಈ ಋಣಭಾರ ಭರ್ಜರಿಯಾಗೇ ಮೆತ್ತಗಾಗಿಸಲಿದೆ. ಅಂತದ್ದೊಂದು ಸಣ್ಣ ಸ್ಯಾಂಪಲ್ ಕೂಡಾ ಈಗಾಗಲೇ ಘಟಿಸಿದೆ. ಫಲಿತಾಂಶ ಹೊರಬಿದ್ದು ಅಧಿಕಾರದ ಹೊಸ್ತಿಲಿಗೆ ಬಂದು ಅಂಡು ಸುಟ್ಟ ಬೆಕ್ಕಿನಂತಾಗಿದ್ದ ಬಿಜೆಪಿಯು ಪಕ್ಷೇತರರು, ಕಾಂಗ್ರೆಸ್-ಜೆಡಿಎಸ್ ಅತೃಪ್ತರಿಗೆ ಗಾಳ ಹಾಕುವ ಪ್ರಯತ್ನದಲ್ಲಿತ್ತು. ಆಗ ರಾಣೇಬೆನ್ನೂರಿನಿಂದ ಕೋಳಿವಾಡರನ್ನು ಮುಕ್ಕಿಸಿ ಬಂದ ಕೆಪಿಜೆಪಿಯ ಆರ್.ಶಂಕರ್‍ನನ್ನು ಬಿಜೆಪಿ ಸಂಪರ್ಕಿಸಿ ಕುದುರಿಸಿಕೊಂಡಿದ್ದುಂಟು. ಆತ ಜಾತಿಯಲ್ಲಿ ಕುರುಬನಾದ್ದರಿಂದ ಮತ್ತು ಈಶ್ವರಪ್ಪನ ಕಳ್ಳುಬಳ್ಳಿ ಸಂಬಂಧಿಕನೂ ಆದ್ದರಿಂದ ಆತನನ್ನು ನಿಭಾಯಿಸುವ ಹೊಣೆಯನ್ನು ಈಶ್ವರಪ್ಪನಿಗೇ ಹೈಕಮಾಂಡ್ ವಹಿಸಿತ್ತು. ಆದರೆ ಈಶ್ವರಪ್ಪ ಕೊಂಚ ಮೈಮರೆತಿದ್ದರಿಂದ ಬೆಳಿಗ್ಗೆ ಬಿಜೆಪಿ ಜೊತೆಗಿದ್ದ ಶಂಕರ್ ಸಂಜೆಯ ವೇಳೆಗಾಗಲೇ ಸಿದ್ದರಾಮಯ್ಯನವರ ಪಡಸಾಲೆಯಲ್ಲಿ ಮುಖ ತೋರಿಸಿ ಜೈ ಅಂದ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಹೈಕಮಾಂಡ್ ಪ್ರತಿನಿಧಿ ಪ್ರಕಾಶ್ ಜಾವ್ಡೇಕರ್, ಈಶ್ವರಪ್ಪನನ್ನು ಕರೆಸಿಕೊಂಡು `ಒಬ್ಬ ಎಮ್ಮೆಲ್ಲೆನ ನಿಮ್ಮ ಕೈಲಿ ನಿಭಾಯಿಸೋಕೆ ಆಗಲ್ವೇನ್ರೀ? ಇದಕ್ಕೋಸ್ಕರನೇನಾ ನಾವು ಯಡ್ಯೂರಪ್ಪಾಜಿಯ ಮನವೊಲಿಸಿ ನಿಮ್ಮನ್ನು ಗೆಲ್ಲಿಸಿಕೊಂಡದ್ದು. ನಿಮ್ಮ ಈ ಹೊಣೆಗೇಡಿತನದ ವಿರುದ್ಧ ಅಮಿತ್ ಶಾಜಿಗೆ ಕಂಪ್ಲೇಂಟ್ ಮಾಡ್ತೀನಿ’ ಅಂತ ಲೆಫ್ಟ್‍ರೈಟ್ ಕ್ಲಾಸ್ ತಗೊಂಡಿದ್ದರು. ಯಡ್ಯೂರಪ್ಪನವರ ಮರ್ಜಿಯಲ್ಲಿ ಗೆದ್ದಿರೋ ಈಶ್ವರಪ್ಪನೋರಿಗೆ ಭವಿಷ್ಯದಲ್ಲಿ ಇಂಥ ದೈನೇಸಿ ಬಹುಮಾನಗಳು ಸಾಕಷ್ಟು ಕಾದಿವೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...