HomeUncategorizedಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

- Advertisement -
- Advertisement -

ಯಾಹೂ |

ಸಿನಿಮಾ ರಂಗದಲ್ಲಿ ಮತ್ತು ರಾಜಕಾರಣದಲ್ಲಿ ಹಾಗೂ ಖಾಸಗೀ ಬದುಕಿನಲ್ಲಿ ವೈರಿಗಳೇ ಇಲ್ಲದಂತೆ ಬದುಕಿದ ಅಂಬರೀಶ್‍ಗೆ ಗ್ರಹಗತಿಗಳು ಮುನಿಸಿಕೊಂಡಿದ್ದವು ಎಂದು ಟಿ.ವಿ.ಯೊಳಗೆ ಸೇರಿಕೊಂಡಿರುವ ಪುರೋಹಿತ ಪಿಂಡಗಳು ವಾದಿಸತೊಡಗಿವೆಯಂತಲ್ಲಾ. ಈ ಪಿಂಡಗಳ ವಿಶೇಷವೆಂದರೆ, ತ್ರಿಕಾಲಜ್ಞಾನಿಗಳಂತಾಡುವ ಇವು ಯಾವುದೇ ಘಟನೆ ನಡೆಯುವ ಮುನ್ನ ಬಾಯಿ ಬಿಡುವುದಿಲ್ಲ. ವಿಷ್ಣು ತೀರಿಕೊಂಡ ನಂತರವೇ ಅವರಿಗೆ ನಾಗವಲ್ಲಿ ಕಾಟ ಅಮರಿಕೊಂಡಿತ್ತು ಎಂದು ವದರಿದವು. ಸಕ್ಕರೆ ಕಾಯಿಲೆ ದೆಸೆಯಿಂದ ಹೃದಯಾಘಾತಕ್ಕೆ ತುತ್ತಾದ ವಿಷ್ಣುಗೆ ನಾಗವಲ್ಲಿ ಕಾಟವಿತ್ತು, ಯಾಗ ಮಾಡಿಸಿದ್ದರೆ ಸರಿಹೋಗುತ್ತಿತ್ತು ಎನ್ನುವ ಈ ಪಿಂಡಗಳು ಈಗ ಅಂಬರೀಶ್ ಸಾವಿಗೂ ಪುರೋಹಿತಶಾಹಿ ತಂತ್ರವನ್ನೇ ಬಳಸತೊಡಗಿರುವುದು ಕಂಡು ದಿಗಿಲಾಗಿ ಜ್ಯೋತಿಷ್ಯ ಬ್ರಹ್ಮ ಪ್ರಕಾಶ ಮಣ್ಣುರಾಯರಿಗೆ ಫೋನ್ ಮಾಡಲಾಗಿ ರಿಂಗಾಯ್ತು,
ರಿಂಗ್‍ಟೋನ್: “ಹೋನ್ಹೀ ತೋ ಹೋನ್ಹೀ ಹೀ ಹೈ, ಅನ್ಹೋಹ್ಹೀ ನಹೀಂ ಭವತ್ಯೇವ ಭವತವ್ಯಂ….. ಹಲೋ ಯಾರು.”
“ಗುರುಗಳೇ ನಾನು ಪತ್ರಕರ್ತ”
“ಯಾವ ಪತ್ರಿಕೆ.”
“ನ್ಯಾಯಪಥ.”
“ನ್ಯಾಯಪಥ ಅಂದರೆ ಸತ್ಯದ ದಾರಿ.”
“ಹೌದು ಸ್ವಾಮಿ, ನಿಮ್ಮ ಫೋನಿನ ರಿಂಗ್‍ಟೋನ್ ಅರ್ಥ ಆಗಲಿಲ್ಲ.”
“ನಡೆಯಬೇಕಾದದ್ದು ನಡೆದೇ ನಡೆಯುತ್ತದೆ, ನಡೆಯಬೇಕಾದ ರೀತಿಯಲ್ಲೇ ನಡೆಯುತ್ತದೆ ಅಂತ ಅರ್ಥ.”
“ಹಾಗಿದ್ದರೆ ಜ್ಯೋತಿಷ್ಯದ ಅಗತ್ಯವೇನು.”
“ನೀವು ಆಸ್ತಿಕರೋ ನಾಸ್ತಿಕರೋ.”
“ಸದ್ಯಕ್ಕೆ ನಾಸ್ತಿಕ.”
“ಹಾಗಾದರೆ ನಿಮ್ಮೊಟ್ಟಿಗೆ ಮಾತನಾಡಿ ಪ್ರಯೋಜನ ಇಲ್ಲ.”
“ಹಾಗನ್ನಬೇಡಿ ಗುರುವೆ, ನಮ್ಮ ಅಂಬರೀಶಣ್ಣನ ಸಾವಿನ ಬಗ್ಗೆ ತಿಳಕೊಬೇಕು.”
“ನೋಡಿ, ಅಂಬರೀಶ್ ನಮ್ಮನ್ನು ಭೇಟಿಮಾಡಿ ನಾವು ಹೇಳಿದಂತೆ ಕೇಳಿದ್ದರೆ ಬದುಕುತ್ತಿದ್ದರು.”
“ಅದು ಹ್ಯೆಂಗೆ ಗುರುಗಳೇ.”
“ಒಂದು ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಮೃತ್ಯುಂಜಯ ಹೋಮ ಅಂದರೆ ಸಾವನ್ನ ಜಯಿಸುವ ಹೋಮ ಅಲ್ಲವೆ ಗುರು.”
“ಹೌದು.”
“ಈ ಮೃತ್ಯುಂಜಯ ಹೋಮ ಮಾಡಿಸಿದ್ರೆ ಎಷ್ಟು ದಿನ ಬದುಕಬಹುದು.”
“ನೋಡಿ, ನಮಗಿರುವ ಆಯಸ್ಸು ಬ್ರಹ್ಮನದಲ್ಲ ನಾವು ನಮ್ಮ ಆಯಸ್ಸನ್ನ ವೃದ್ಧಿಸಿಕೊಳ್ಳಬೇಕು. ಮರಣದಲ್ಲಿ ನೂರ ಒಂದು ಪ್ರಕಾರಗಳುಂಟು. ನೂರನ್ನ ಜಯಿಸಬಹುದು. ಒಂದನ್ನ ಮಾತ್ರ ಜಯಿಸಲಾಗುವುದಿಲ್ಲ.”
“ಅದ್ಯಾವುದು ಗುರುಗಳೇ.”
“ನಿಜವಾದ ಮರಣ!”
“ಈಗ ಅಂಬರೀಶ್‍ಗೆ ಸಂಭವಿಸಿದ್ದು ನಿಜವಾದ ಮರಣ ಅಲ್ಲವ.”
“ಇಲ್ಲ ಅವರದ್ದು ಭಾವೋದ್ವೇಗದ ಮರಣ. ಅದಕ್ಕಾಗಿ ನಾಗಾರಾಧನೆಯ ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಅದನ್ನ ಅವರಿಗೆ ಹೇಳಬೇಕಾಗಿತ್ತು.”
“ಅವರು ಬಂದು ಕೇಳಬಹುದಿತ್ತು, ನಾವು ಅವರ ಬಳಿಗೆ ಹೋಗುವುದಿಲ್ಲ.”
“ಅವರ ಜೀವ ಮುಖ್ಯ ಅಲ್ಲವೆ?”
“ಅದೌದು. ನಾವು ಸಂಸ್ಕಾರವಂತ ಜ್ಯೋತಿಷಿಗಳು. ಅವರಾಗಿ ಬಂದರೆ ಹೇಳ್ತೇವೆ.”
“ಅವುರಾಗಿ ಬಂದ್ರೆ ಹೇಳೋ ಅಂತವರು, ಈಗ ಟಿವಿಯೊಳಗಡೆ ಬಂದು ಯಾಕೇಳ್ತಿದೀರಿ”
“ನಾವು ಬಂದದ್ದಲ್ಲ ಟಿವಿಯವರು ಕರೆದದ್ದು.”
“ಬಂದು-ಬಳಗದೋರು ಕರೆದ್ರೆ ಹೊಗಬೇಕಾಗತ್ತೆ ಬಿಡಿ. ತಮ್ಮ ಪ್ರಕಾರ ಅಂಬರೀಶ್ ಜಾತಕ ಹೇಗಿತ್ತು ಗುರುಗಳೇ.”
“ಅಂಬರೀಶ್ ಜಾತಕದಲ್ಲಿ ಗುರುವಿನ ಬಲವಿತ್ತು. ಶನಿ ದೂರವಿದ್ದ. ಈಗ ಅವರ ಬಳಿ ಶನಿ ಸಂಚಾರ ಆರಂಭವಾಗಿತ್ತು. ಮೃತ್ಯುಂಜಯ ಹೋಮದಿಂದ ಶನಿಯನ್ನ ದೂರ ಮಾಡಬಹುದಿತ್ತು.”
“ಬ್ರಹ್ಮರ್ಷಿಗಳೇ ನಾಗನ ಆರಾಧನೆ ಯಾಕೆ ಮಾಡ್ತರೆ ಗೊತ್ತೆ.”
“ನಾಗದೋಷ ಪರಿಹಾರಕ್ಕೆ.”
“ಅದಲ್ಲ, ಹಾವುಗಳ ಪೈಕಿ ನಾಗರಹಾವಿಗೆ ವಿಷ ಇದೆ. ಅದು ಕಡುದ್ರೆ ಮನುಷ್ಯ ಸತ್ತೋಗ್ತನೆ. ಪೂಜೆ ಮಾಡಿದ್ರೆ ಅದು ಕಡಿಯಲ್ಲ ಅನ್ನೋ ಕಾರಣಕ್ಕೆ. ಅಂದ್ರೆ ಭಯ ಭಕ್ತಿ ಮೂಡಿಸುತ್ತೆ ಅಲ್ಲವಾ.”
“ಅದೌದು. ಭಯ ನಿವಾರಣೆ ನಮ್ಮ ಕೆಲಸ.”
“ನಿಮ್ಮ ಮೃತ್ಯುಂಜಯ ಹೋಮದಿಂದ ಅರ್ಭುದ ರೋಗ ನಿವಾರಿಸಬಹುದಾ?”
“ಹೌದು.”
“ಹಾಗಾದ್ರೆ ಅನಂತಕುಮಾರ್ ಅದರಲ್ಲೇ ಹೋದರಲ್ಲ. ಅವರ ಸಂಬಂಧಿಯಾದ ನೀನು ಆಗ ಕತ್ತೆ ಕಾಯ್ತಾಯಿದ್ದ?”
“ಯಾಕೆ ಹಾಗೆ ಕೆಟ್ಟ ಮಾತನ್ನಾಡುವುದು ನೀವು.”
“ಸಾರಿ, ಗೋವು ಕಾಯ್ತಾಯಿದ್ರ.”
“ನೋಡಿ ಇವರೆ, ನಿಮ್ಮಂತ ಅಸಂಸ್ಕೃತ ಅಹಂಕಾರಿಗಳನ್ನ ನಾವು ಸಹಿಸಿಕೊಂಡು ಉತ್ತರ ಕೊಡಬೇಕಾಗ್ತದೆ, ಅಂಬರೀಶರು ಭಾವೋದ್ವೇಗದ ವ್ಯಕ್ತಿ. ಆನೆ ನಡೆದದ್ದೇ ದಾರಿ ಅಂತ ಹೇಳುವ ಹಾಗೆ ಅವರು ಯಾರ ಮಾತನ್ನ ಕೇಳಲಿಲ್ಲ. ಕೇಳಿದ್ದರೆ ನಮ್ಮಲ್ಲಿ ಪರಿಹಾರವಿತ್ತು.”
“ಏನು ಪರಿಹಾರ ಹೇಳಿ.”
“ನೋಡಿ ಮನುಷ್ಯನ ಬಾಹ್ಯ ವರ್ತನೆಗೆ ಆಂತರ್ಯದ ಸಮಸ್ಯೆಗಳು ಕಾರಣ. ನಮ್ಮ ದೇಹದಲ್ಲಿ 72 ಸಾವಿರ ನಾಡಿಗಳಿವೆ. ಅವುಗಳ ಸಮತೋಲನ ಮುಖ್ಯ. ಅವುಗಳ ಏರುಪೇರಿನಿಂದ ಮನುಷ್ಯ ಕೀಳರಿಮೆಗೆ ತುತ್ತಾಗುವುದುಂಟು. ಆಗ ನಾವು ಆತ್ಮವಿಶ್ವಾಸ ಮೂಡಿಸುತ್ತೇವೆ.”
“ಯಾವ ತರ.”
“ನಮ್ಮ ಹೆಂಡತಿಗೆ ಒಂದಿಷ್ಟು ಉಬ್ಬು ಹಲ್ಲುಗಳಿದ್ದವು.”
“ಹಲ್ಲಿಗೇ ಮುತ್ತು ಕೊಡೋತರ.”
“ಹಾಗಂದುಕೊಳ್ಳಬಹುದು. ಆಗ ನಾನು ಆಕೆಗೆ ಆತ್ಮವಿಶ್ವಾಸ ತುಂಬಿದೆ. ನಿನ್ನ ಹಲ್ಲುಗಳ ಬಗ್ಗೆ ಕೀಳರಿಮೆ ಬೇಡ. ಮನೆಯ ಮೆಟ್ಟಿಲು ಕಲ್ಲುಗಳು, ಮನೆಯ ಹೊರಗಿರುತ್ತವೆ, ಒಳಗಲ್ಲ ಅಂತ ಹಾಸ್ಯ ಮಾಡಿ ಹೇಳಿದೆ. ಆಕೆಗೆ ಕೀಳರಿಮೆ ಹೋಯ್ತು. ನಮ್ಮ ಬದುಕು ಸರಾಗವಾಯ್ತು. ಹೀಗೆ ನಾವು ಮನುಷ್ಯನ ಆಂತರ್ಯದಲ್ಲಿನ ಕೀಳರಿಮೆ ಹೋಗಲಾಡಿಸಿಬಿಡ್ತೇವೆ.”
“ಇದಕ್ಕೂ ಅಂಬರೀಶ್ ವಿಷಯಕ್ಕೂ ಏನು ಸಂಬಂಧ.”
“ಸಂಬಂಧವುಂಟು, ಅಂಬರೀಶ್ರಲ್ಲಿದ್ದ ಭಾವೋದ್ವೇಗ ಕಡಿಮೆ ಮಾಡಿ, ಇನ್ನೂ ಬದುಕುವಂತೆ ಮಾಡ್ತಾಯಿದ್ದೆ.”
“ಮಿಸ್ಟರ್ ಬ್ರಹ್ಮ, ನಿಮ್ಮ ಜೋತಿಷ್ಯ ಪ್ರಧಾನವಾಗಿ ಹೊಟ್ಟೆ ಪಾಡಿಂದು, ಈ ದೇಶದ ಮುಗ್ಧ ಮನಸ್ಸುಗಳ ತಲೆಗೆ ಪುರಾಣ ತುಂಬಿ ದೇಶನೆ ಬಾಳೆಎಲೆ ಮಾಡಿಕೊಂಡು ಉಂಡ್ರಿ ಅಂತ ನಮ್ಮ ತೇಜಸ್ವಿ ಹೇಳತಿದ್ರು. ಏನಾದ್ರು ಮಾಡಿಕೊಂಡು ಹಾಳಾಗೋಗಿ. ಆದ್ರೆ ಅಂಬರೀಶ್ ವಿಷಯದಲ್ಲಿ ಪುರಾಣ ಶುರುಮಾಡಿದ್ರೆ ಸರಿಯಾಗಿ ಮಾಡಬೇಕಾಯ್ತದೆ.”
“ಯಂತ ಮಾಡ್ತಿರಿ.”
“ನಿನ್ನ ರಿಂಗ್‍ಟೋನಿದೆಯಲ್ಲ ಆ ತರ ನಡೆಯಬೇಕಾದ್ದು ನಡದೇ ನಡೆಯುತ್ತೆ. ನಡೆಯಬೇಕಾದ ರೀತಿಯಲ್ಲೇ ನಡೆಯುತ್ತೆ.”
“ನನ್ನನ್ನ ಬೆದರಿಸುತ್ತೀಯ, ಶಾಪ ಕೊಡ್ತೇನೆ.”
“ನಿನ್ನ ಶಾಪ ನನ್ನ ಕೂದಲಿಗೆ ಸಮ.”
“ಛೇ ಕೆಟ್ಟವನೆ.”
ಥೂತ್ತೇರಿ….!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....