HomeUncategorizedಥೂತ್ತೇರಿ : ಈಟು ದಿನ ಎಲ್ಲಿ ಮಲಗಿದ್ದ್ಯೆವ್ವಾ?

ಥೂತ್ತೇರಿ : ಈಟು ದಿನ ಎಲ್ಲಿ ಮಲಗಿದ್ದ್ಯೆವ್ವಾ?

- Advertisement -
- Advertisement -

ಯಾಹೂ |

ನಮ್ಮ ಸಾಣೆಹಳ್ಳಿ ರಂಗಭೂಮಿ ದೇಶದಲ್ಲೇ ಹೆಸರುವಾಸಿಯಾದ ರಂಗ ಪ್ರದೇಶ. ಏಕೆಂದರೆ, ಅಲ್ಲಿನ ಜಗದ್ಗುರುವಾದ ಪಂಡಿತಾರಾಧ್ಯರು ತಮ್ಮ ವಂಶವನ್ನು ನಾಟಕದ ಚಟುವಟಿಕೆಗೆ ಮೀಸಲಾಗಿರಿಸಿದ್ದಾರೆ. ಇಂತಹ ಸಾಹಸವನ್ನು ಯಾರೂ ಮಾಡಿಲ್ಲ. ಹೆಗ್ಗೋಡನ್ನು ಬಿಟ್ಟರೆ ರಾಜ್ಯಾದ್ಯಂತ ರಂಗಸಂಚಾರ ಆರಂಭಿಸಿದ ಸಾಣೆಹಳ್ಳಿ ಮಠ, ಹೆಗ್ಗೋಡನ್ನು ಸೈಡಿಗೆ ಸರಿಸಿದ್ದು ಈಗ ಇತಿಹಾಸ. ಏಕೆಂದರೆ ಹೆಗ್ಗೋಡು ಬರುಬರುತ್ತಾ ಹೆಗ್ಗೋಳಾಗಿ ಕಾಟಾಚಾರಕ್ಕೆ ತಿರುಗಾಟ ಶುರುವಿಟ್ಟುಕೊಂಡಾಗ ನಮ್ಮ ಪ್ರೇಕ್ಷಕರು ಅತ್ತ ತಾತ್ಸಾರ ತೋರಿದ್ದು, ಇದಕ್ಕೆ ಉತ್ತರವಾಗಿ ಹೆಗ್ಗೋಡಿನ ಹವ್ಯಕರು ಆಪ್ತರಂಗಭೂಮಿ ಮಾಡಿಕೊಂಡು ತಾವೇ ಎಂಟತ್ತು ಜನ ಸುತ್ತ ಕುಳಿತು ಎಲೆಯಡಿಕೆ ಜಗಿದು ನಾಟಕ ಅಂತ ನೋಡಿದ್ದು ಈಗ ಇತಿಹಾಸ. ಇದಕ್ಕೆ ಉತ್ತರವೆಂಬಂತೆ ಸಾಣೆಹಳ್ಳಿಯ ರಂಗಭೂಮಿ, ಏಕಕಾಲಕ್ಕೆ ನಾಲ್ಕೈದು ಸಾವಿರ ಜನ ಒಮ್ಮೆಲೆ ನಾಟಕ ನೋಡುವಂತೆ ಮಾಡಿದ್ದು, ಆಡಿದ್ದೂ ಒಂದು ದಾಖಲೆ. ಇಂತಿರುವಾಗ ಈಚೆಗೆ ನಾಟಕೋತ್ಸವ ಮಾಡಿದ ಸಾಣೆಹಳ್ಳಿ ಶ್ರೀಗಳು ಉತ್ಸವಕ್ಕೆ ಕರೆಸಿದ ಗೆಸ್ಟುಗಳ ಲಿಸ್ಟು ನೋಡಿದಾಗ ಬಿಜೆಪಿ ಲೀಡರ್‌ಗಳ ಪರಿಷೆಯೇ ನೆರೆದಂತಿತ್ತಲ್ಲಾ! ಈ ಬಗ್ಗೆ ಪೂರ್ವಗ್ರಹಪೀಡಿತ ಪ್ರಶ್ನೆ ಕೇಳಿದಾಗ, ಸಾಣೆಹಳ್ಳಿ ಅಂಗಳದಿಂದ ಬಂದ ಉತ್ತರ ದಂಗುಬಡಿಸುವಂತಿತ್ತು. ಜಾತ್ಯತೀತ ಮನೋಭಾವ, ಭಾರತೀಯ ಸಹಿಷ್ಣು ಚಿಂತನೆಯ ಸಾರ, ಸರ್ವಜನಾಂಗದ ಶಾಂತಿಯ ತೋಟದಲ್ಲಿ ತಾವೂ ಒಂದು ಗಿಡವಾಗಿ, ಮರವಾಗಿ, ಕಡೆಗೆ ಹುಲ್ಲಾಗುವ ಜ್ಞಾನ ಬೇಕಿರುವುದು ಈ ಬಿಜೆಪಿಯ ಜನಕ್ಕೆ. ಅದಕ್ಕೆ ಸಾಣೆಹಳ್ಳಿ ಗುರುಗಳು ಬಿಜೆಪಿಯ ಹೆಚ್ಚು ಜನರನ್ನ ಕರೆಸಿದ್ದಾರಂತಲ್ಲಾ, ಥೂತ್ತೇರಿ!

* * * *

ಸಾಣೆಹಳ್ಳಿಯ ರಂಗಭೂಮಿಗೆ ಉಪಮುಖ್ಯಮಂತ್ರಿ ಪರಮೇಶ್ವರರೂ ಬಂದಿದ್ದರು. ಅಪರೂಪದ ಜೀವಿಯಾದ ಪರಮೇಶ್ವರರ ಭೋಜನವನ್ನು ಜೀವರಕ್ಷಕರಾದ ವೈದ್ಯರು ಕಡ್ಡಿಯಲ್ಲಿ ಕೆದಕಿ, ಪರೀಕ್ಷಿಸಿ ಪರಮೇಶ್ವರ್‌ಗೆ ತಿನ್ನಿಸಬಹುದೆಂದು ಪರವಾನಗಿ ಕೊಟ್ಟದ್ದು ಜಗದ್ಗುರುಗಳ ಕೋಪಾಗ್ನಿಗೆ ಕಾರಣವಾಯ್ತಂತಲ್ಲಾ. ಸಾವಿರಾರು ಜನ ಪ್ರಸಾದ ಸ್ವೀಕರಿಸುವ ಜಾಗಕ್ಕೆ ಬಂದು ಅತಿಥಿಯೊಬ್ಬನ ಭೋಜನಕ್ಕೆ ಕಡ್ಡಿ ಎಟ್ಟಿ ಪರಿಶೀಲಿಸುವುದು ಎಷ್ಟು ಸರಿ. ಸಾವಿರಾರು ಜನರ ಪ್ರಾಣ ಮುಖ್ಯವೋ ಅಥವಾ ಒಬ್ಬನ ಪ್ರಾಣ ಮುಖ್ಯವೋ. ಒಂದು ಜೀವ ಹೋದರೆ ನಷ್ಟವೇನು ಎಂದರಂತಲ್ಲಾ. ಶ್ರೀಗಳು ತಮ್ಮ ನಿಷ್ಠುರ ಮಾತಿನ ಸಾಣೆಯನ್ನು ಹರಿತಗೊಳಿಸಿಕೊಳ್ಳಲು ಆಡಿದ ಮಾತು, ನಾಡಿನ ಪರಮ ಶಿಷ್ಯರನ್ನು ಕೆಣಕಿದೆಯಂತಲ್ಲಾ. ಪರಮೇಶ್ವರರ ಜೀವದ ಬಗ್ಗೆ ಹೀಗೆ ಹಗುರವಾಗಿ ಮಾತಾಡಿರುವ ಶ್ರೀಗಳು ಎಡೂರಪ್ಪನ ಹೀಗೆ ಮಾತಾಡಬಲ್ಲರೆ, ಇಲ್ಲ ಸಿದ್ದರಾಮಯ್ಯನ ಬಗ್ಗೆ ಹೀಗೆ ಹೇಳಬಲ್ಲರೆ. ಅಗ್ಗವಾಗಿ ಸಿಕ್ಕಿದ ನಮ್ಮ ಪರಮಣ್ಣನಿಗೆ ಹೀಗಂದಿರುವುದು ಸರಿಯಲ್ಲ ಎಂದು ಸಣ್ಣದಾಗಿ ಗೊಣಗಿದರಲ್ಲಾ. ನಮ್ಮ ಪರಮಣ್ಣನ ಜೀವ ಸದ್ಯಕ್ಕೆ ಅಮೂಲ್ಯವಾದುದೇ ಸರಿ. ಇಷ್ಟು ವರ್ಷಗಳ ನಂತರ ಮುಖ್ಯಮಂತ್ರಿ ಪದವಿ ಸನಿಹಕ್ಕೆ ತೆವಳಿದ್ದಾರೆ. ಅದೂ ಶಿಕ್ಷಣ ಸಂಸ್ಥೆ ಮಾಡಿಕೊಂಡು ಶಾಮನೂರರ ತಮ್ಮನಂತಾದ ಕಾರಣಕ್ಕೆ. ದೇವೇಗೌಡರ ಮಗ ಎಂಬ ಕಾರಣಕ್ಕೆ ಅನಾಯಾಸವಾಗಿ ಎರಡು ಬಾರಿ ಮುಖ್ಯಮಂತ್ರಿಯಾದ ಕುಮಾರಣ್ಣನವರಿಗೆ ಹೋಲಿಸಿದರೆ ಪರಮಣ್ಣನ ಜೀವ ಬಹು ಬೆಲೆಯದ್ದು ಎಂದು ಡಿಎಸ್‌ಎಸ್ ವೈರಿ ವೆಂಕಟಸ್ವಾಮಿಯ ವ್ಯಾಖ್ಯಾನವಾಗಿದೆಯಲ್ಲಾ, ಥೂತ್ತೇರಿ!

* * * *

ನಾವು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲದ ಸಮಸ್ಯೆಯನ್ನು ಚಿಟಕಿ ಹೊಡೆದಂತೆ ಬಗೆಹರಿಸುತ್ತೇನೆಂದು ಅಧಿಕಾರಕ್ಕೆ ಬಂದ ಕುಮಾರಣ್ಣನನ್ನು ಬೆಳಗಾವಿಯ ಕಬ್ಬಿನ ಬೆಳೆ ರೈತರು ಗಾಣಕ್ಕೆ ಹಾಕಿ ಹರೆಯತೊಡಗಿದ್ದಾರಂತಲ್ಲಾ. ಇದಕ್ಕೆ ಕಾರಣ ಕುಮಾರಣ್ಣನ ನುಡಿಮುತ್ತುಗಳೇ ಹೊರತು ರೈತರಲ್ಲಾ ಎಂಬುದು ರೈತ ಸಂಘದ ದೂರಾಗಿದೆಯಲ್ಲಾ. ಬೆಳಗಾವಿ ಕಡೆ ರೈತರು ಕಬ್ಬು ಬೆಳೆಗಾರರು ಕಬ್ಬು ಬೆಳೆಯಷ್ಟು ರಗಳೆ ಬೆಳೆಯಲ್ಲ. ನೆಟ್ಟು, ನೀರು ಗೊಬ್ಬರ ಕೊಟ್ಟರಾಯ್ತು ಕಟಾವಿಗೆ ಬರುವವರೆಗೆ ಬೆಳಗಾವಿಯಲ್ಲಿ ಅಡ್ಡಾಡಬಹುದು ಅಥವಾ ಆರಾಮವಾಗಿರಬಹುದು. ಇದನ್ನು ಗ್ರಹಿಸಿಯೋ ಏನೋ ಕುಮಾರಣ್ಣ ರೈತ ಮಹಿಳೆಯೊಬ್ಬರಿಗೆ `ಯಾವುದೋ ಕಂಪನಿಯಿಂದ ಬರಬೇಕಾದ ಸಾಲಕ್ಕೆ ನನ್ನನ್ನು ದೂರುವ ನೀನು ಇಷ್ಟು ದಿನ ಎಲ್ಲಿ ಮಲಗಿದ್ದೆವ್ವ’ ಎಂದು ಬುಟ್ಟಿದ್ದಾರಲ್ಲಾ. ಈ ಸಮಯದಲ್ಲಿ ಲಂಕೇಶರ ಹಾಡಾದ ‘ಎಲ್ಲಿದ್ದೆ ಇಲ್ಲಿತಂಕ ಎಲ್ಲಿಂದ ಬಂದ್ಯವ್ವ’ ಎಂಬ ಹಾಡು ನೆನಪಾಗುವುದರ ಜೊತೆಗೆ ಮುಖ್ಯಮಂತ್ರಿಯಾದವನು ಮಾತನ್ನು ಬಂಗಾರದಂತೆ ತೂಗಿ ಆಡಬೇಕು, ಎಲ್ಲಿ ಮಲಗಿದ್ದೆ ಎಂದರೆ ಏನರ್ಥ, ನಿನ್ನಂತೆ ಎಲ್ಲೆಲ್ಲೋ ಮಲಗಿ ಉಪಸಂಸಾರ ಮಾಡಿಕೊಂಡಿಲ್ಲ, ನನ್ನ ಜಮೀನಿನಲ್ಲಿ ಕಬ್ಬು ಬೆಳೆದು, ಅ ಬೆಳೆಯೊಳಗೆ ಮಲಗಿದ್ದೆ, ಇಂತಹ ಮಾತನಾಡುವ ನೀನು ಮುಖ್ಯಮಂತ್ರಿಯಾಗಲು ನಾಲಾಯಕ್ ಎಂದು ಬೆಳಗಾವಿಯ ಭೂದೇವಿ ಅಬ್ಬರಿಸಿದ್ದಾಳಲ್ಲ. ಬೆಳಗಾವಿ ಅಧಿವೇಶನದ ವೇಳೆ ರೈತರನ್ನು ಎತ್ತಿಕಟ್ಟಿ ಸಿದ್ದುಗೆ ಸಮಸ್ಯೆಯೊಡ್ಡಿದ್ದ ಕುಮಾರಣ್ಣನ ಕತೆಯೀಗ ಮಾಡಿದ್ದುಣ್ಣೋ ಮಾರಾಯನಂತಾಯ್ತಲ್ಲಾ, ಥೂತ್ತೇರಿ!

* * * *

ಮೀಟು ಪ್ರಖರಣಗಳ ಕಾವು ಕಡಿಮೆಯಗುತ್ತಿರುವ ಈ ಹೊತ್ತಿನಲ್ಲಿ, ಡಾಬಸ್‌ಪೇಟೆಯ ಕನ್ನಡದ ಪ್ರಖರ ವಿಮರ್ಶಕರು ಎಚ್ಚೆತ್ತುಕೊಂಡು ಮೀಟೂ ಕಡೆ ಬ್ಯಾಟರಿ ಹಚ್ಚಿ ನೋಡ ತೊಡಗಿದ್ದಾರಂತಲ್ಲಾ. ವಯೋಮಾನದ ಕಾರಣಕ್ಕೆ ಮೀಟು ಪ್ರಕರಣ ಮಬ್ಬಾಗಿ ಕಂಡದ್ದರಿಂದಲೋ ಏನೋ, ಸಿಟ್ಟಾಗಿರುವ ವಿಮರ್ಶಕರು ಮೀಟುಗೆ ತುತ್ತಾದ ನಟಿ ಇಷ್ಟು ದಿನ ಎಲ್ಲಿದ್ದಳು? ಆ ಸಮಯದಲ್ಲೇಕೆ ಸುಮ್ಮನಿದ್ದಳು? ಕೇಳಿದಕೂಡಲೆ ಅಂಗಾತ ಮಲಗಲು ಆಕೆಯೇನು ಹಳ್ಳಿಯವಳೆ? ಪ್ರತಿಷ್ಠಿತ ಶಿಕ್ಷಿತ ಸಮಾಜದವಳಾದ ಆಕೆ ಸುಮ್ಮನಿದ್ದುದ್ದೇಕೆ? ಅಮೆರಿಕಾದಿಂದ ಆಮದಾದ ಆ ಮೀಟುವನ್ನು ಇಲ್ಲಿ ಒಪ್ಪಲು ಸಾಧ್ಯವೆ? ಇತ್ಯಾದಿ ಪ್ರಶ್ನಿಸಿ ನಟಿಯ ನಡವಳಿಕೆ ಮೇಲೆ ಹರಿಹಾಯ್ದಿದ್ದಾರಂತಲ್ಲಾ. ಹರಿತವಾದ ಆಯುಧ ಹೊಂದಿರುವ ಸದರಿ ವಿಮರ್ಶಕರು. ಯಾರ ಮೇಲಾದರೂ ಹರಿಹಾಯಲೇಬೇಕಾಗುತ್ತದೆ. ವಿಮರ್ಶಕರ ಈ ಮಾನದಂಡವಿಡಿದು ಮಾತನಾಡುವುದಾದರೆ ನಮ್ಮ ರಾಮಚಂದ್ರಾಪುರ ಮಠದ ಕೆಂದು ಹೋರಿ ಇನ್ನು ಕಡಸುಗಳ ಮೇಲೆ ಹಾರುತ್ತ ಹಾಯಾಗಿರುತ್ತಿತ್ತು. ವಿಮರ್ಶಕರೇ ಹೇಳುವಂತೆ ನಮ್ಮ ಸಂಸ್ಕೃತಿಯೇ ನಮ್ಮ ಕಾಮವನ್ನು ನಿಯಂತ್ರಿಸುವುದಾಗಿದ್ದರೆ, ರಾಘವ ರೂಢಿಸಿಕೊಂಡ ಸಂಸ್ಕೃತಿ ಯಾವುದು. ಹೆಂಡತಿಯಿಂದ ಸುಕ್ಷೇಮ ದೂರ ಕಾಪಾಡಿಕೊಂಡು ಬದುಕುವ ಸಾಹಿತಿಗಳ ಸಮಸ್ಯೆ ಸಾರ್ವತ್ರಿಕವಾಗಲು ಸಾಧ್ಯವಿಲ್ಲವಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....