Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ...

ಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ…

- Advertisement -
- Advertisement -

ಯಾಹೂ |

ಮೋಹನ್‌ರಾಂ ಎಂಬ ತಿಕ್ಕಲು ಬ್ರಾಹ್ಮಣ ಲಂಕೇಶರಿಂದ ಉಗಿಸಿಕೊಂಡು ಹೋದ 36 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡಿದ್ದಾನಂತಲ್ಲಾ. ಅಂದರೆ ಲಂಕೇಶ್ ಎಷ್ಟರ ಮಟ್ಟಿಗೆ ಉಗಿದಿರಬಹುದೆಂದು ವೇದ್ಯವಾಗುತ್ತದೆ. ಇಂತವನನ್ನು ನೋಡಿಯೇ ಏನೋ ದೇವನೂರು ಒಂದು ಕತೆ ಬರೆದಿದ್ದರು. ಮೋಹನ ಶಾಸ್ತ್ರಿ ಎಂಬ ಗುಮಾಸ್ತನಿದ್ದ. ಅವನ ಬಾಸು ಲಂಕೇಗೌಡ. ಈ ಲಂಕೇಗೌಡ ಗುಮಾಸ್ತನಿಗೆ ಕೆಟ್ಟದಾಗಿ ಬೈಯ್ಯುತ್ತಿದ್ದ. ಇದರಿಂದ ಸೇಡಿಗೆ ತುತ್ತಾದ ಮೋಹನಶಾಸ್ತ್ರಿ ಲಂಕೇಗೌಡನ ಸರ‍್ವಿಸ್ ರಿಜಿಸ್ಟರಿನಲ್ಲಿ ಗೌಡನ ಆಕಾರ ಬರೆದು ಮುಂದಿನ ಎರಡು ಹಲ್ಲಿಲ್ಲ ಎಂದು ಬರೆದು ನಿವೃತ್ತನಾಗಿದ್ದನಂತೆ. ಲಂಕೇಗೌಡ ನಿವೃತ್ತನಾಗುವಾಗ ಅನಿವಾರ್ಯವಾಗಿ ಎರಡಲ್ಲು ಕೀಳಿಸಿಕೊಂಡು ಪಿಂಚನಿ ಪಡೆದನಂತೆ. ನಮ್ಮ ನಡುವಿನ ಪುರೋಹಿತಶಾಹಿಗಳ ಪಿಂಡಗಳು ಆಂತರ್ಯದಲ್ಲಿ ಹೊಂದಿರುವ ಹಗೆ ಎಂತದ್ದು ಎಂಬುದನ್ನು ಹೇಳಲು ದೇವನೂರು ಈ ಕತೆಯನ್ನು ಪಂಚಮದಲ್ಲಿ ಬರೆದಿದ್ದರು. ಮೂವತ್ತಾರು ವರ್ಷಗಳ ನಂತರ ಲಂಕೇಶರ ಹಲ್ಲು ಎಣಿಸಿರುವ ಸದರಿ ಮೋಹನ್ ರಾಂ ಎಂಬುವನ ಬಗ್ಗೆ ಲಂಕೇಶ್ ಹೇಳಿದ್ದೇನೆಂದರೆ, ‘ಆತ ಸುಳ್ಳು ಬರೆಯುತ್ತಾನೆ, ಈಗತಾನೆ ಬಾಂಬೆಯಿಂದ ಬಂದೆ. ಅಮಿತಾ ಬಚ್ಚನ್ ಇಂಟ್ರೂ ಮಾಡಿದೆ ಎಂದು ಮನೆಯಲ್ಲಿ ಕುಳಿತು ಬರೆದು ತಂದಿದ್ದ ಅದಕ್ಕೆ ಓಡಿಸಿದೆ’ ಎಂದು ಹೇಳಿದ್ದರಲ್ಲಾ, ಥೂತ್ತೇರಿ.

* * * *

ಎಂದಿನಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಣೆಗೊಂಡಿವೆ. ಸಮ್ಮಿಶ್ರ ಸರಕಾರವೊಂದು ನೇಮಿಸಿದ್ದ ಆಯ್ಕೆ ಸಮಿತಿಯ ಸದರಿ ವಿದ್ವಾಂಸರು ಆಯ್ಕೆ ಮಾಡಿದ ಪ್ರತಿಭಾವಂತರ ಬಗ್ಗೆ ಚಕಾರವೆತ್ತದ ಜಯಮಾಲ ಹಾಗು ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೇನು ಅನುಮೋದನೆಯ ಸೀಲು ಒತ್ತಿ ಪತ್ರಿಕೆಗಳಿಗೆ ಬಿಡುಗಡೆ ಮಡಬೇಕೆನ್ನುವಷ್ಟರಲ್ಲಿ ಸದರಿ ಪಟ್ಟಿಯನ್ನು ಕಿತ್ತುಕೊಂಡ ಡಿ.ಕೆ.ಶಿವಕುಮಾರ್ ಎಂಬ ಕರ್ನಾಟಕ ರಾಜಕಾರಣದ ಸಮಸ್ಯೆ, ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಂದ್ರೆ ಬರೀ ಸಾಹಿತಿಗಳು, ಜನಪದ ಕಲಾವಿದರಿಗಷ್ಟೇ ಕೊಡಬಾರ್ದು ಕಂಡ್ರೀ. ರಾಜಕಾರಣಿಗಳು, ನಮಗೆ ಪಾಠ ಹೇಳಿದ ಮೇಷ್ಟ್ರು, ನಮ್ಮ ಪರ ವಾದ ಮಾಡೋ ಲಾಯರ್‌ಗಳು, ರಸ್ತೆ ಮಾಡೋರು, ಮನೆಕಟ್ಟೋರನ್ನೂ ಪರಿಗಣಿಸಬೇಕು’ ಎಂದು ರಾಜ್ಯೋತ್ಸವ ಪಟ್ಟಿಯೊಳಕ್ಕೆ ತನ್ನ ಅಭಿರುಚಿಯನ್ನ ಸೇರಿಸಿದರಂತಲ್ಲಾ. ಆಗ ಮುಖ್ಯಮಂತ್ರಿಯಾಗಿ ಯಾರನ್ನು ಸೇರಿಸಲಾಗದ ಕುಮಾರಸ್ವಾಮಿ ಅನಿವಾರ್ಯವಾಗಿ ಡಿ.ಕೆ.ಸಿ. ಅಭಿರುಚಿಯನ್ನು ಮನ್ನಿಸಿದರಂತಲ್ಲಾ, ಥೂತ್ತೇರಿ.

* * * *

ಈ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ತಮ್ಮ ಮಹತ್ವ ಕಳೆದುಕೊಂಡಿದ್ದು ಬಂಗಾರಪ್ಪನ ಕಾಲದಲ್ಲಂತಲ್ಲಾ. ಹಿಂದುಳಿದ ವರ್ಗದ ನಾಯಕರಾದ ಬಂ ಸಾಮಾಜಿಕ ನ್ಯಾಯವನ್ನು ರಾಜ್ಯೋತ್ಸವ ಪ್ರಶಸ್ತಿ ಮುಖಾಂತರ ಸರಿಮಾಡಲು ಹೋಗಿ ಪ್ರಶಸ್ತಿ ಹಂಚಿದ ಪರಿಗೆ ಬೆದರಿದ ಪತ್ರಕರ್ತರು ಇದೇನು ಸಾರ್ ಅನರ್ಹರಿಗೆಲ್ಲಾ ಪ್ರಶಸ್ತಿ ಕೊಟ್ಟರಲ್ಲ ಎಂದಾಗ ಅರ್ಹರಿಗೆ ಮುಂದಿನ ಬಾರಿ ಕೊಡೋಣ ಬಿಡಿ ಎಂದರು. ಅರ್ಹರ‍್ಯಾರು, ಅವರು ಪಡೆದ ಸವಲತ್ತುಗಳೇನು ಎಂಬುದು ’ಬಂ’ಗೆ ಗೊತ್ತಿತ್ತು. ಆ ನಂತರ ಬಂದ ಬಿ.ಜೆ.ಪಿ ಸರಕಾರದಲ್ಲಿ ಬಿಸಿಬೇಳೆ ಬಾತು ಮಾಡುವವರಿಗೆಲ್ಲಾ ಪ್ರಶಸ್ತಿಗಳು ಸಿಕ್ಕವು. ಒಂದೆರಡು ಕನ್ನಡ ರಾಜ್ಯೋತ್ಸವ ಮಾಡಿದವನಿಗೂ ಈಶ್ವರಪ್ಪ ಪ್ರಶಸ್ತಿ ಕೊಡಿಸಿದರೆ, ನಾನು ಈಶ್ವರಪ್ಪನಿಗೇನು ಕಡಿಮೆ ಎಂದು ಭಾವಿಸಿದ ಯಡೂರಪ್ಪನ ಮಗಳು ಮಾತುಮಾತಿಗು ತನ್ನನ್ನು ನಗಿಸುತ್ತಿದ್ದ ಹುಡುಗನಿಗೂ ಒಂದು ರಾಜ್ಯೋತ್ಸವ ಪ್ರಶಸ್ತಿ ಕೊಡಿಸಿದಳು. ಅದೇ ತರಹ ಈಗೊಂದು ಪ್ರಶಸ್ತಿ ವ್ಯರ್ಥವಾಗಿ ಹೋಯ್ತು. ಪ್ರತಿಭಾವಂತರೊಬ್ಬರ ಕೈಯಿಂದ ಪ್ರಶಸ್ತಿ ಕಿತ್ತುಕೊಂಡ ಡಿ.ಕೆ.ಶಿ ಅದನ್ನ ಮಾರ್ಗರೇಟ್ ಆಳ್ವರಿಗೆ ಕೊಟ್ಟಿದ್ದಾರೆ. ಈ ಮಾಜಿ ರಾಜ್ಯಪಾಲೆ ನಿರಾಕರಿಸಬಹುದಿತ್ತು. ಎಲ್ಲರ ಬಳಿ ಘನತೆವೆತ್ತ ಗುಣ ಸುಳಿಯುವುದು ಕಡಿಮೆಯಂತಲ್ಲಾ, ಥೂತ್ತೇರಿ.

* * * *

ರಾಜ್ಯೋತ್ಸವ ಪ್ರಶಸ್ತಿ ವಿಷಯ ಬಿತ್ತರಿಸುವಲ್ಲಿ ಕೆಲವು ಪತ್ರಿಕೆಗಳು ಹರಾಜಾಗಿ ಹೋದವಂತಲ್ಲಾ ಉದಾಹರಣೆ ಕೊಡುವುದಾದರೆ, ಪ್ರಶಸ್ತಿಯ ಆಯ್ಕೆ ಸಮಿತಿಯೇ ರಚನೆಯಾಗಿಲ್ಲ ಎಂದು ಅವು ಕರೆಯುತ್ತಿದ್ದಾಗ ಆಯ್ಕೆ ಸಮಿತಿ ಕಲಾಗ್ರಾಮದಲ್ಲಿ ಆಯ್ಕೆಯಲ್ಲಿ ನಿರತವಾಗಿತ್ತು. ಎರಡೂ ಪಕ್ಷದ ಒತ್ತಡದಲ್ಲಿ ಕುಮಾರಸ್ವಾಮಿ ನಲುಗಿ ಹೋಗಿದ್ದಾರೆ ಎಂದು ಬರೆಯುತ್ತಿದ್ದಾಗ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿದ್ದರು.

ಪ್ರಶಸ್ತಿ ಕೊಡುವ ಹಿಂದಿನ ದಿನ ಆಯ್ಕೆ ನಡೆಸಿ ಮರುದಿನ ವಿತರಿಸಲಾಗುವುದೆಂದು ಪತ್ರಿಕೆಗಳು ಬರೆಯುವಾಗ ಎರಡು ವಾರಗಳ ಆಯ್ಕೆ ಪರಿಶ್ರಮದಿಂದ ಮುಕ್ತವಾದ ಆಯ್ಕೆ ಸಮಿತಿ ಕುಮಾರಸ್ವಾಮಿಗೆ ತಮ್ಮ ವರದಿಕೊಟ್ಟಿತ್ತು. ಹೀಗೆ ಮನಸ್ಸಿಗೆ ಬಂದ ವರದಿ ಬರೆಯುತ್ತಿದ್ದ ಪತ್ರಿಕೆಗಳನ್ನು ಕಂಡು ನಗುವುದರ ಬದಲು ನಗಿಸಲಾಗುತ್ತಿತ್ತು. ಏಕೆಂದರೆ ಏನೊಂದೂ ಪರಿಶೀಲಿಸದೆ ಕುಳಿತಲ್ಲೇ ಒಂದು ಊಹಾತ್ಮಕ ವರದಿ ಬರೆದು ಕೊಡುವುದರಿಂದ ಅನಾಹುತಗಳು ಜರುಗುವ ಸಂಭವವಿರುತ್ತದೆ. ಪಬ್ಲಿಕ್ ಟಿವಿಯ ಕಡ್ಡಿ ರಂಗ ಚಿಕ್ಕಮಗಳೂರು ಡಿ.ವೈ.ಎಸ್.ಪಿ ವಿಷಯದಲ್ಲಿಯೂ ಹೀಗೆಯೇ ಸುಳ್ಳು ಸುದ್ದಿ ಬಿತ್ತರಿಸಿದ್ದ. ಅವರ ಆತ್ಮಹತ್ಯೆಗೆ ಕಾರಣನಾದವರು ನಮ್ಮ ಕಣ್ಣು ಮುಂದಿರುವುದರಿಂದ ಪತ್ರಕರ್ತರು ಆದಷ್ಟೂ ಕಣ್ಣು ಕಿವಿ ತೊಳೆಯುವುದೊಳ್ಳೆಯದಂತಲ್ಲಾ, ಥೂತ್ತೇರಿ.

* * * *

ಪ್ರಶಸ್ತಿಗಳ ಬಗ್ಗೆ ಮನಸ್ಸಿಗೆ ಬಂದ ಸುಳ್ಳು ಸುದ್ದಿ ಬರೆದ ಪತ್ರಿಕೆಗಳು ಆ ನಂತರ ತಮ್ಮ ಜವಾಬ್ದಾರಿಯ ಕಡೆ ಗಮನಹರಿಸಲಿಲ್ಲವಂತಲ್ಲಾ. ಆಯ್ಕೆಯಾದ ೬೩ ಜನರಲ್ಲಿನ ವೈವಿಧ್ಯಮಯ ಪ್ರತಿಭೆ ಬೆರಗು ಹುಟ್ಟಿಸುವಂತಿತ್ತು. ತಮ್ಮ ಕ್ಷೌರದ ಅಂಗಡಿಯಲ್ಲೇ ಸಮಾಜವಾದದ ಚಳುವಳಿ ರೂಪಿಸಿದ ರಾಚಪ್ಪ ಹಡಪದ. ಇವರನ್ನು ನೋಡಿ ಮಾತನಾಡಿಸಲು ತೇಜಸ್ವಿ ಸ್ಕೂಟರಿನಲ್ಲೇ ಹೋಗಿದ್ದರಂತೆ. ಇನ್ನು ಕೈಗೆ ಕಾಸು ಸಿಕ್ಕ ಕೂಡಲೇ ಕೆರೆ, ಚೆಕ್ ಡ್ಯಾಂ ಕಟ್ಟುವ ಕಲ್ಮನೆ ಕಾಮೇಗೌಡ, ಆ ಕಾಲಕ್ಕೆ ಕ್ರಾಂತಿ ಮಾಡಿದ ಅಮ್ಮೆಂಬಳ ಆನಂದ, ಜನಪದ ನಿಧಿ ಗುಲ್ಬರ್ಗದ ಶಂಕ್ರಮ್ಮ ಇಂತಹ ಇತಿಹಾಸಗಳನ್ನ ಕೆದಕಿದರೆ ಸಾಕು, ಸಾರ್ಥಕ ಬದುಕೊಂದು ನಮ್ಮ ಮುಂದೆ ತೆರೆದುಕೊಳ್ಳುತ್ತದೆ. ಹೊಸ ತಲೆಮಾರಿಗೆ ಇವರ ಬದುಕು ಸ್ಪೂರ್ತಿ ನೀಡಬಲ್ಲದು. ಇವರ ಪ್ರತಿಭೆ ಪ್ರಭಾವ ಬೀರಬಹುದು. ಇದಾವುದನ್ನು ಗ್ರಹಿಸದೆ ಕೇವಲ ಅವರ ಹೆಸರುಗಳನ್ನಷ್ಟೇ ಪ್ರಕಟಿಸಿ ಕೈತೊಳೆದುಕೊಂಡ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಸತ್ತು ಎಷ್ಟೋ ವರ್ಷಗಳಾಗಿವೆಯಂತಲ್ಲಾ. ವಿಶೇಷವೆಂದರೆ, ಸಾಂಸ್ಕೃತಿಕವಾಗಿ ಸತ್ತಂತಿರುವ ಈ ಮಾಧ್ಯಮಗಳ ವಿಷಯದಲ್ಲಿ ಜನರೂ ಕೂಡ ನಿರ್ಲಕ್ಷ್ಯದಿಂದಿದ್ದಾರಂತಲ್ಲಾ, ಥೂತ್ತೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...