Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ...

ಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ…

- Advertisement -
- Advertisement -

ಯಾಹೂ |

ಮೋಹನ್‌ರಾಂ ಎಂಬ ತಿಕ್ಕಲು ಬ್ರಾಹ್ಮಣ ಲಂಕೇಶರಿಂದ ಉಗಿಸಿಕೊಂಡು ಹೋದ 36 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡಿದ್ದಾನಂತಲ್ಲಾ. ಅಂದರೆ ಲಂಕೇಶ್ ಎಷ್ಟರ ಮಟ್ಟಿಗೆ ಉಗಿದಿರಬಹುದೆಂದು ವೇದ್ಯವಾಗುತ್ತದೆ. ಇಂತವನನ್ನು ನೋಡಿಯೇ ಏನೋ ದೇವನೂರು ಒಂದು ಕತೆ ಬರೆದಿದ್ದರು. ಮೋಹನ ಶಾಸ್ತ್ರಿ ಎಂಬ ಗುಮಾಸ್ತನಿದ್ದ. ಅವನ ಬಾಸು ಲಂಕೇಗೌಡ. ಈ ಲಂಕೇಗೌಡ ಗುಮಾಸ್ತನಿಗೆ ಕೆಟ್ಟದಾಗಿ ಬೈಯ್ಯುತ್ತಿದ್ದ. ಇದರಿಂದ ಸೇಡಿಗೆ ತುತ್ತಾದ ಮೋಹನಶಾಸ್ತ್ರಿ ಲಂಕೇಗೌಡನ ಸರ‍್ವಿಸ್ ರಿಜಿಸ್ಟರಿನಲ್ಲಿ ಗೌಡನ ಆಕಾರ ಬರೆದು ಮುಂದಿನ ಎರಡು ಹಲ್ಲಿಲ್ಲ ಎಂದು ಬರೆದು ನಿವೃತ್ತನಾಗಿದ್ದನಂತೆ. ಲಂಕೇಗೌಡ ನಿವೃತ್ತನಾಗುವಾಗ ಅನಿವಾರ್ಯವಾಗಿ ಎರಡಲ್ಲು ಕೀಳಿಸಿಕೊಂಡು ಪಿಂಚನಿ ಪಡೆದನಂತೆ. ನಮ್ಮ ನಡುವಿನ ಪುರೋಹಿತಶಾಹಿಗಳ ಪಿಂಡಗಳು ಆಂತರ್ಯದಲ್ಲಿ ಹೊಂದಿರುವ ಹಗೆ ಎಂತದ್ದು ಎಂಬುದನ್ನು ಹೇಳಲು ದೇವನೂರು ಈ ಕತೆಯನ್ನು ಪಂಚಮದಲ್ಲಿ ಬರೆದಿದ್ದರು. ಮೂವತ್ತಾರು ವರ್ಷಗಳ ನಂತರ ಲಂಕೇಶರ ಹಲ್ಲು ಎಣಿಸಿರುವ ಸದರಿ ಮೋಹನ್ ರಾಂ ಎಂಬುವನ ಬಗ್ಗೆ ಲಂಕೇಶ್ ಹೇಳಿದ್ದೇನೆಂದರೆ, ‘ಆತ ಸುಳ್ಳು ಬರೆಯುತ್ತಾನೆ, ಈಗತಾನೆ ಬಾಂಬೆಯಿಂದ ಬಂದೆ. ಅಮಿತಾ ಬಚ್ಚನ್ ಇಂಟ್ರೂ ಮಾಡಿದೆ ಎಂದು ಮನೆಯಲ್ಲಿ ಕುಳಿತು ಬರೆದು ತಂದಿದ್ದ ಅದಕ್ಕೆ ಓಡಿಸಿದೆ’ ಎಂದು ಹೇಳಿದ್ದರಲ್ಲಾ, ಥೂತ್ತೇರಿ.

* * * *

ಎಂದಿನಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಣೆಗೊಂಡಿವೆ. ಸಮ್ಮಿಶ್ರ ಸರಕಾರವೊಂದು ನೇಮಿಸಿದ್ದ ಆಯ್ಕೆ ಸಮಿತಿಯ ಸದರಿ ವಿದ್ವಾಂಸರು ಆಯ್ಕೆ ಮಾಡಿದ ಪ್ರತಿಭಾವಂತರ ಬಗ್ಗೆ ಚಕಾರವೆತ್ತದ ಜಯಮಾಲ ಹಾಗು ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೇನು ಅನುಮೋದನೆಯ ಸೀಲು ಒತ್ತಿ ಪತ್ರಿಕೆಗಳಿಗೆ ಬಿಡುಗಡೆ ಮಡಬೇಕೆನ್ನುವಷ್ಟರಲ್ಲಿ ಸದರಿ ಪಟ್ಟಿಯನ್ನು ಕಿತ್ತುಕೊಂಡ ಡಿ.ಕೆ.ಶಿವಕುಮಾರ್ ಎಂಬ ಕರ್ನಾಟಕ ರಾಜಕಾರಣದ ಸಮಸ್ಯೆ, ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಂದ್ರೆ ಬರೀ ಸಾಹಿತಿಗಳು, ಜನಪದ ಕಲಾವಿದರಿಗಷ್ಟೇ ಕೊಡಬಾರ್ದು ಕಂಡ್ರೀ. ರಾಜಕಾರಣಿಗಳು, ನಮಗೆ ಪಾಠ ಹೇಳಿದ ಮೇಷ್ಟ್ರು, ನಮ್ಮ ಪರ ವಾದ ಮಾಡೋ ಲಾಯರ್‌ಗಳು, ರಸ್ತೆ ಮಾಡೋರು, ಮನೆಕಟ್ಟೋರನ್ನೂ ಪರಿಗಣಿಸಬೇಕು’ ಎಂದು ರಾಜ್ಯೋತ್ಸವ ಪಟ್ಟಿಯೊಳಕ್ಕೆ ತನ್ನ ಅಭಿರುಚಿಯನ್ನ ಸೇರಿಸಿದರಂತಲ್ಲಾ. ಆಗ ಮುಖ್ಯಮಂತ್ರಿಯಾಗಿ ಯಾರನ್ನು ಸೇರಿಸಲಾಗದ ಕುಮಾರಸ್ವಾಮಿ ಅನಿವಾರ್ಯವಾಗಿ ಡಿ.ಕೆ.ಸಿ. ಅಭಿರುಚಿಯನ್ನು ಮನ್ನಿಸಿದರಂತಲ್ಲಾ, ಥೂತ್ತೇರಿ.

* * * *

ಈ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ತಮ್ಮ ಮಹತ್ವ ಕಳೆದುಕೊಂಡಿದ್ದು ಬಂಗಾರಪ್ಪನ ಕಾಲದಲ್ಲಂತಲ್ಲಾ. ಹಿಂದುಳಿದ ವರ್ಗದ ನಾಯಕರಾದ ಬಂ ಸಾಮಾಜಿಕ ನ್ಯಾಯವನ್ನು ರಾಜ್ಯೋತ್ಸವ ಪ್ರಶಸ್ತಿ ಮುಖಾಂತರ ಸರಿಮಾಡಲು ಹೋಗಿ ಪ್ರಶಸ್ತಿ ಹಂಚಿದ ಪರಿಗೆ ಬೆದರಿದ ಪತ್ರಕರ್ತರು ಇದೇನು ಸಾರ್ ಅನರ್ಹರಿಗೆಲ್ಲಾ ಪ್ರಶಸ್ತಿ ಕೊಟ್ಟರಲ್ಲ ಎಂದಾಗ ಅರ್ಹರಿಗೆ ಮುಂದಿನ ಬಾರಿ ಕೊಡೋಣ ಬಿಡಿ ಎಂದರು. ಅರ್ಹರ‍್ಯಾರು, ಅವರು ಪಡೆದ ಸವಲತ್ತುಗಳೇನು ಎಂಬುದು ’ಬಂ’ಗೆ ಗೊತ್ತಿತ್ತು. ಆ ನಂತರ ಬಂದ ಬಿ.ಜೆ.ಪಿ ಸರಕಾರದಲ್ಲಿ ಬಿಸಿಬೇಳೆ ಬಾತು ಮಾಡುವವರಿಗೆಲ್ಲಾ ಪ್ರಶಸ್ತಿಗಳು ಸಿಕ್ಕವು. ಒಂದೆರಡು ಕನ್ನಡ ರಾಜ್ಯೋತ್ಸವ ಮಾಡಿದವನಿಗೂ ಈಶ್ವರಪ್ಪ ಪ್ರಶಸ್ತಿ ಕೊಡಿಸಿದರೆ, ನಾನು ಈಶ್ವರಪ್ಪನಿಗೇನು ಕಡಿಮೆ ಎಂದು ಭಾವಿಸಿದ ಯಡೂರಪ್ಪನ ಮಗಳು ಮಾತುಮಾತಿಗು ತನ್ನನ್ನು ನಗಿಸುತ್ತಿದ್ದ ಹುಡುಗನಿಗೂ ಒಂದು ರಾಜ್ಯೋತ್ಸವ ಪ್ರಶಸ್ತಿ ಕೊಡಿಸಿದಳು. ಅದೇ ತರಹ ಈಗೊಂದು ಪ್ರಶಸ್ತಿ ವ್ಯರ್ಥವಾಗಿ ಹೋಯ್ತು. ಪ್ರತಿಭಾವಂತರೊಬ್ಬರ ಕೈಯಿಂದ ಪ್ರಶಸ್ತಿ ಕಿತ್ತುಕೊಂಡ ಡಿ.ಕೆ.ಶಿ ಅದನ್ನ ಮಾರ್ಗರೇಟ್ ಆಳ್ವರಿಗೆ ಕೊಟ್ಟಿದ್ದಾರೆ. ಈ ಮಾಜಿ ರಾಜ್ಯಪಾಲೆ ನಿರಾಕರಿಸಬಹುದಿತ್ತು. ಎಲ್ಲರ ಬಳಿ ಘನತೆವೆತ್ತ ಗುಣ ಸುಳಿಯುವುದು ಕಡಿಮೆಯಂತಲ್ಲಾ, ಥೂತ್ತೇರಿ.

* * * *

ರಾಜ್ಯೋತ್ಸವ ಪ್ರಶಸ್ತಿ ವಿಷಯ ಬಿತ್ತರಿಸುವಲ್ಲಿ ಕೆಲವು ಪತ್ರಿಕೆಗಳು ಹರಾಜಾಗಿ ಹೋದವಂತಲ್ಲಾ ಉದಾಹರಣೆ ಕೊಡುವುದಾದರೆ, ಪ್ರಶಸ್ತಿಯ ಆಯ್ಕೆ ಸಮಿತಿಯೇ ರಚನೆಯಾಗಿಲ್ಲ ಎಂದು ಅವು ಕರೆಯುತ್ತಿದ್ದಾಗ ಆಯ್ಕೆ ಸಮಿತಿ ಕಲಾಗ್ರಾಮದಲ್ಲಿ ಆಯ್ಕೆಯಲ್ಲಿ ನಿರತವಾಗಿತ್ತು. ಎರಡೂ ಪಕ್ಷದ ಒತ್ತಡದಲ್ಲಿ ಕುಮಾರಸ್ವಾಮಿ ನಲುಗಿ ಹೋಗಿದ್ದಾರೆ ಎಂದು ಬರೆಯುತ್ತಿದ್ದಾಗ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿದ್ದರು.

ಪ್ರಶಸ್ತಿ ಕೊಡುವ ಹಿಂದಿನ ದಿನ ಆಯ್ಕೆ ನಡೆಸಿ ಮರುದಿನ ವಿತರಿಸಲಾಗುವುದೆಂದು ಪತ್ರಿಕೆಗಳು ಬರೆಯುವಾಗ ಎರಡು ವಾರಗಳ ಆಯ್ಕೆ ಪರಿಶ್ರಮದಿಂದ ಮುಕ್ತವಾದ ಆಯ್ಕೆ ಸಮಿತಿ ಕುಮಾರಸ್ವಾಮಿಗೆ ತಮ್ಮ ವರದಿಕೊಟ್ಟಿತ್ತು. ಹೀಗೆ ಮನಸ್ಸಿಗೆ ಬಂದ ವರದಿ ಬರೆಯುತ್ತಿದ್ದ ಪತ್ರಿಕೆಗಳನ್ನು ಕಂಡು ನಗುವುದರ ಬದಲು ನಗಿಸಲಾಗುತ್ತಿತ್ತು. ಏಕೆಂದರೆ ಏನೊಂದೂ ಪರಿಶೀಲಿಸದೆ ಕುಳಿತಲ್ಲೇ ಒಂದು ಊಹಾತ್ಮಕ ವರದಿ ಬರೆದು ಕೊಡುವುದರಿಂದ ಅನಾಹುತಗಳು ಜರುಗುವ ಸಂಭವವಿರುತ್ತದೆ. ಪಬ್ಲಿಕ್ ಟಿವಿಯ ಕಡ್ಡಿ ರಂಗ ಚಿಕ್ಕಮಗಳೂರು ಡಿ.ವೈ.ಎಸ್.ಪಿ ವಿಷಯದಲ್ಲಿಯೂ ಹೀಗೆಯೇ ಸುಳ್ಳು ಸುದ್ದಿ ಬಿತ್ತರಿಸಿದ್ದ. ಅವರ ಆತ್ಮಹತ್ಯೆಗೆ ಕಾರಣನಾದವರು ನಮ್ಮ ಕಣ್ಣು ಮುಂದಿರುವುದರಿಂದ ಪತ್ರಕರ್ತರು ಆದಷ್ಟೂ ಕಣ್ಣು ಕಿವಿ ತೊಳೆಯುವುದೊಳ್ಳೆಯದಂತಲ್ಲಾ, ಥೂತ್ತೇರಿ.

* * * *

ಪ್ರಶಸ್ತಿಗಳ ಬಗ್ಗೆ ಮನಸ್ಸಿಗೆ ಬಂದ ಸುಳ್ಳು ಸುದ್ದಿ ಬರೆದ ಪತ್ರಿಕೆಗಳು ಆ ನಂತರ ತಮ್ಮ ಜವಾಬ್ದಾರಿಯ ಕಡೆ ಗಮನಹರಿಸಲಿಲ್ಲವಂತಲ್ಲಾ. ಆಯ್ಕೆಯಾದ ೬೩ ಜನರಲ್ಲಿನ ವೈವಿಧ್ಯಮಯ ಪ್ರತಿಭೆ ಬೆರಗು ಹುಟ್ಟಿಸುವಂತಿತ್ತು. ತಮ್ಮ ಕ್ಷೌರದ ಅಂಗಡಿಯಲ್ಲೇ ಸಮಾಜವಾದದ ಚಳುವಳಿ ರೂಪಿಸಿದ ರಾಚಪ್ಪ ಹಡಪದ. ಇವರನ್ನು ನೋಡಿ ಮಾತನಾಡಿಸಲು ತೇಜಸ್ವಿ ಸ್ಕೂಟರಿನಲ್ಲೇ ಹೋಗಿದ್ದರಂತೆ. ಇನ್ನು ಕೈಗೆ ಕಾಸು ಸಿಕ್ಕ ಕೂಡಲೇ ಕೆರೆ, ಚೆಕ್ ಡ್ಯಾಂ ಕಟ್ಟುವ ಕಲ್ಮನೆ ಕಾಮೇಗೌಡ, ಆ ಕಾಲಕ್ಕೆ ಕ್ರಾಂತಿ ಮಾಡಿದ ಅಮ್ಮೆಂಬಳ ಆನಂದ, ಜನಪದ ನಿಧಿ ಗುಲ್ಬರ್ಗದ ಶಂಕ್ರಮ್ಮ ಇಂತಹ ಇತಿಹಾಸಗಳನ್ನ ಕೆದಕಿದರೆ ಸಾಕು, ಸಾರ್ಥಕ ಬದುಕೊಂದು ನಮ್ಮ ಮುಂದೆ ತೆರೆದುಕೊಳ್ಳುತ್ತದೆ. ಹೊಸ ತಲೆಮಾರಿಗೆ ಇವರ ಬದುಕು ಸ್ಪೂರ್ತಿ ನೀಡಬಲ್ಲದು. ಇವರ ಪ್ರತಿಭೆ ಪ್ರಭಾವ ಬೀರಬಹುದು. ಇದಾವುದನ್ನು ಗ್ರಹಿಸದೆ ಕೇವಲ ಅವರ ಹೆಸರುಗಳನ್ನಷ್ಟೇ ಪ್ರಕಟಿಸಿ ಕೈತೊಳೆದುಕೊಂಡ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಸತ್ತು ಎಷ್ಟೋ ವರ್ಷಗಳಾಗಿವೆಯಂತಲ್ಲಾ. ವಿಶೇಷವೆಂದರೆ, ಸಾಂಸ್ಕೃತಿಕವಾಗಿ ಸತ್ತಂತಿರುವ ಈ ಮಾಧ್ಯಮಗಳ ವಿಷಯದಲ್ಲಿ ಜನರೂ ಕೂಡ ನಿರ್ಲಕ್ಷ್ಯದಿಂದಿದ್ದಾರಂತಲ್ಲಾ, ಥೂತ್ತೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...