Homeಮುಖಪುಟದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

ದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಇತ್ತೀಚೆಗೆ ನಟ ದರ್ಶನ್ ಸಿಎಂ ಸಿದ್ರಾಮಯ್ಯ ಪರ ಪ್ರಚಾರ ಮಾಡಲು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋದಾಗ ಒಂದಷ್ಟು ಜೆಡಿಎಸ್ ಕಾರ್ಯಕರ್ತರ ದಂಡು ದರ್ಶನ್‍ಗೆ ಧಿಕ್ಕಾರ ಕೂಗಿತ್ತು, ಹಾಗೆ ಧಿಕ್ಕಾರ ಕೂಗಲು ಆ ಪ್ರತಿಭಟನಾಕಾರರ ಬಳಿ ಇದ್ದದ್ದು ಎರಡು ಆಪಾದನೆಗಳು. ಮೊದಲನೆಯದ್ದು, ಎಲ್ಲಾ ಪಕ್ಷದಲ್ಲೂ ದರ್ಶನ್ ಅಭಿಮಾನಿಗಳು ಇರೋದ್ರಿಂದ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಬಾರದು. ಎರಡನೆಯದ್ದು, ಕಾವೇರಿ ವಿವಾದದಲ್ಲಿ ದರ್ಶನ್ ಏನೂ ಮಾಡದಿರುವುದರಿಂದ ಆತನಿಗೆ ಮತ ಕೇಳುವ ಹಕ್ಕಿಲ್ಲ!

ಒನ್ಸ್ ಎಗೇನ್, ಇವೆರಡೂ ಕಾರಣಗಳು ಜಸ್ಟ್ ನೆಪವಷ್ಟೇ. ಇವುಗಳ ಹಿಂದೆ ಇರೋದು ಮತ್ತದೇ ಪೊಲಿಟಿಕ್ಸ್, ಅದರಲ್ಲೂ ಜೆಡಿಎಸ್‍ನ ಜಾತಿ ಪೊಲಿಟಿಕ್ಸ್! ಮೊದಲನೇ ಕಾರಣವನ್ನೇ ತೆಗೆದುಕೊಳ್ಳೋಣ. ದರ್ಶನ್‍ಗಿರುವ ಪಕ್ಷಾತೀತ ಅಭಿಮಾನಿಗಳ ಕಾಳಜಿಯಿಂದ ಈ ಮಾತು ಹೇಳುವುದೇ ಆಗಿದ್ದರೆ, ಒಂದು ತಟಸ್ಥ ಅಭಿಮಾನಿ ಸಮೂಹವಾಗಿ ಅಂತಹ ಪ್ರತಿರೋಧವನ್ನು ಹೊರಹಾಕಬೇಕಿತ್ತು. ಅದನ್ನು ಬಿಟ್ಟು ಜೆಡಿಎಸ್ ಅನ್ನೊ ಒಂದು ಪೊಲಿಟಿಕಲ್ ಪಾರ್ಟಿಯ ಬ್ಯಾನರ್‍ನಡಿ, ಆ ಪಕ್ಷದ ಕಾರ್ಯಕರ್ತರಾಗಿ ಎದುರಾಳಿ ಪಕ್ಷದ ಪ್ರಚಾರ ಮಾಡಬೇಡ ಎಂದು ಅಭಿಮಾನವನ್ನು ಮುಂದೆ ಮಾಡೋದೇ ಒಂದರ್ಥದಲ್ಲಿ ಸಾಂಸ್ಕೃತಿಕ ಬೆದರಿಕೆ ಹಾಕಿದಂತೆ.

ಇನ್ನು ಎರಡನೇ ಕಾರಣವೂ ಅಷ್ಟೇ ಸವಕಲು. ಕಾವೇರಿ ವಿವಾದದಲ್ಲಿ ಏನನ್ನಾದರು ಮಾಡಲು ಪಾಪ ದರ್ಶನ್ ಚುನಾಯಿತ ಜನಪ್ರತಿನಿಧಿಯೇನಲ್ಲ. ಒಬ್ಬ ಕಲಾವಿದನಾಗಿ, ತನ್ನ ಕಲಾಬಳಗದ ಜೊತೆಗೂಡಿ ಯಾವ ಪ್ರತಿಭಟನೆಯನ್ನು ದಾಖಲಿಸಬೇಕಿತ್ತೊ ಅದನ್ನು ದರ್ಶನ್ ಮಾಡಿದ್ದಾರೆ. ಅದಕ್ಕಿಂತ ಹೆಚ್ಚಿನದನ್ನು ಆತನಿಂದ ನಿರೀಕ್ಷಿಸಲಿಕ್ಕಾಗದು. ಈಗ ಆತನ ಪ್ರಚಾರಕ್ಕೆ ಆ ನೆಪವಿಟ್ಟುಕೊಂಡು ಅಡ್ಡಿಪಡಿಸೋದು ರಾಜಕಾರಣವಲ್ಲದೆ ಮತ್ತೇನೂ ಅಲ್ಲ.

ಅಭಿಮಾನವನ್ನು ಅಡ್ಡವಿಟ್ಟುಕೊಂಡು ದರ್ಶನ್ ಪ್ರಚಾರಕ್ಕೆ ಅಡ್ಡಿಪಡಿಸೋ ದರ್ದು ಜೆಡಿಎಸ್‍ಗೆ ಏನಿತ್ತು ಅಂತ ಕೆದಕಲು ಶುರು ಮಾಡಿದರೆ ಚಾಮುಂಡೇಶ್ವರಿ ಕ್ಷೇತ್ರದ ಜಾತಿ ಚುನಾವಣೆಯ ರಂಗು ತೆರೆದುಕೊಳ್ಳುತ್ತೆ. ದೇವೇಗೌಡರ ಕುಟುಂಬದ ವೈಯಕ್ತಿಕ ಸಿಟ್ಟಿಗೆ ತುತ್ತಾಗಿರುವ ಸಿದ್ರಾಮಯ್ಯರನ್ನು ಸೋಲಿಸಲು ಚಾಮುಂಡೇಶ್ವರಿಯಲ್ಲಿ ಭರ್ಜರಿ ಜಾತಿ ರಣತಂತ್ರವನ್ನೇ ಹೆಣೆಯಲಾಗಿದೆ. ಸಿದ್ರಾಮಯ್ಯ ರನ್ನು ಒಕ್ಕಲಿಗರ ವಿರೋಧಿಯಂತೆ ಬಿಂಬಿಸಿ ಕ್ಷೇತ್ರದಲ್ಲಿರುವ ಒಕ್ಕಲಿಗರ ನಡುವೆ ಒಂದು ಬಗೆಯ ಕಡುಕೆಟ್ಟ ಉನ್ಮತ್ತ ಒಗ್ಗಟ್ಟನ್ನು ಹುಟ್ಟಿಸಲಾಗಿದೆ. ಹೀಗೆ ಜಾತಿ ರಾಜಕಾರಣವನ್ನು ರೊಚ್ಚಿಗೆಬ್ಬಿಸದಿದ್ದರೆ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯರನ್ನು ಮಣಿಸೋದು ಕಷ್ಟ ಅನ್ನೋದು ಜೆಡಿಎಸ್ ಅಭ್ಯರ್ಥಿ ಜಿ,ಟಿ,ದೇವೇಗೌಡರಿಗೆ ಸ್ಪಷ್ಟವಾಗಿತ್ತು. ಯಾಕೆಂದರೆ 2006ರ ಉಪಚುನಾವಣೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಪಾರ್ಟಿಗಳು ಜಂಟಿಯಾಗಿ ಸಿದ್ರಾಮಯ್ಯರನ್ನು ಸೋಲಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಿರಲಿಲ್ಲ. ಆ ಮಟ್ಟಕ್ಕೆ ಸಿದ್ರಾಮಯ್ಯ ಚಾಮುಂಡೇಶ್ವರಿಯಲ್ಲಿ ತಮ್ಮದೇ ಮತಬ್ಯಾಂಕ್ ಹೊಂದಿದ್ದಾರೆ. ಅಂತದ್ದರಲ್ಲಿ ಈಗ ಸಿಎಂ ಆಗಿರುವ ಅವರನ್ನು ಅಲ್ಲಿ ಸೋಲಿಸೋದು ಅಂದ್ರೆ ಸುಮ್ನೇ ಮಾತಾ?

ಅದೇ ಕಾರಣಕ್ಕೆ ಒಕ್ಕಲಿಗ ಜಾತಿ ಕೆಮಿಸ್ಟ್ರಿಯನ್ನೇ ಜೆಡಿಎಸ್ ಅಲ್ಲಿ ವಿಪರೀತ ನಂಬಿ ಕೂತಿದೆ. ದರ್ಶನ್ ಬಂದು ಪ್ರಚಾರ ಮಾಡಿದರೆ ಒಕ್ಕಲಿಗರ ಜಾತಿ ಮತಗಳ ಈ ಕಟ್ಟು ಮುಕ್ಕಾಗಿ ಬಿಡುತ್ತೆ ಎಂಬ ಆತಂಕ ಜೆಡಿಎಸ್ ಅಭ್ಯರ್ಥಿಗೆ ಶುರುವಾಗಿದ್ದೇ ಈ ಪ್ರತಿಭಟನೆ ಹಿಂದಿರುವ ಅಸಲೀ ಕಾರಣ. ಹಳೇ ಮೈಸೂರು ಪ್ರಾಂತ್ಯದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಒಕ್ಕಲಿಗರಿಗೆ, ಅದರಲ್ಲೂ ಒಕ್ಕಲಿಗ ಸಮುದಾಯದ ಯುವಜನರಿಗೆ ದರ್ಶನ್ ಎಂದರೆ ಐಕಾನ್ ಇದ್ದಂತೆ. ಆತ ಒಮ್ಮೆ ಕೈಬೀಸಿದರೆ ಅಭಿಮಾನದ ಹುಚ್ಚು ಹೊಳೆಯಲ್ಲಿ ಅವರೆಲ್ಲಿ ಕೊಚ್ಚಿ ಹೋಗುತ್ತಾರೋ ಎಂಬ ಆತಂಕ ಆ ಪ್ರತಿಭಟನೆಯನ್ನು ಆಯೋಜಿಸಿದೆ.

ವಿಪರ್ಯಾಸವೆಂದರೆ, ನಟ ದರ್ಶನ್ ಒಕ್ಕಲಿಗ ಸಮುದಾಯದವರೇ ಅಲ್ಲ. ಆತ ಬಲಿಜ ಜಾತಿಯವ. ಆದಾಗ್ಯೂ ಒಕ್ಕಲಿಗರ ಸಾಂಸ್ಕøತಿಕ ಐಕಾನ್‍ನಂತಿರುವ ಅಂಬರೀಷ್‍ರ ಸಿನಿ ಹೀರೊ ವ್ಯಾಕ್ಯೂಮನ್ನು ತುಂಬಿದ ಬದಲೀ ನಟನಾಗಿ ದರ್ಶನ್ ತನ್ನನ್ನು ತಾನು ಬಿಂಬಿಸಿಕೊಂಡರೆ, ಅದಕ್ಕೆ ತಕ್ಕಂತೆ ದರ್ಶನ್‍ರ ಸಿನಿ ಪಯಣದ ಮೊದಲ ದಿನದಿಂದ ಇಲ್ಲಿಯವರೆಗೂ ಅಂಬರೀಶ್ ಆತನ ಗಾಡಫಾದರ್‍ನಂತೇ ವರ್ತಿಸಿದ್ದಾರೆ. ಹಾಗಾಗಿ ಒಕ್ಕಲಿಗ ಸಿನಿ ಪ್ರಿಯರು ಅಂಬರೀಷ್ ಮೇಲಿಟ್ಟಿದ್ದ ಅಷ್ಟೂ ಅಭಿಮಾನವನ್ನು ದರ್ಶನ್‍ಗೂ ಹರಿಸಿದ್ದಾರೆ. ಯಾವ ಮಟ್ಟಕ್ಕೆಂದರೆ, ದರ್ಶನ್‍ರನ್ನು ಒಕ್ಕಲಿಗ ಅಂತಲೇ ಸುಮಾರಷ್ಟು ಮಂದಿ ಭ್ರಮಿಸುವಷ್ಟರ ಮಟ್ಟಿಗೆ ಗೊಂದಲ ಗೂಡುಕಟ್ಟಿದೆ. ಇದೇ ಗೊಂದಲ ಎಲ್ಲಿ ತಮ್ಮ ಜಾತಿ ರಾಜಕಾರಣವನ್ನು ದಿಕ್ಕೆಡಿಸಿಬಿಡುತ್ತೋ ಎಂಬ ಭಯ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಪಾಳಯವನ್ನು ಕಾಡಿದೆ. ಅದರ ಫಲವಾಗಿಯೇ ಅಭಿಮಾನ, ಕಾವೇರಿ ವಿವಾದಗಳನ್ನು ಮುಂದಿಟ್ಟುಕೊಂಡು ದರ್ಶನ್‍ಗೆ ಧಿಕ್ಕಾರದ ಕೂಗು ಹುಟ್ಟಿಕೊಂಡಿದೆ.

ಈ ಸಿನಿ ಮಂದಿ ಪ್ರಸ್ತುತ ರಾಜಕೀಯದ ಅರಿವು ಇಲ್ಲದೆ, ಸೈದ್ಧಾಂತಿಕ ಬದ್ಧತೆ ಇಲ್ಲದೆ ಹತ್ತು ಹಲವು ಮರ್ಜಿಗಳಿಗೆ ಕಟ್ಟುಬಿದ್ದು ಬಣ್ಣದ ಬೊಂಬೆಯಂತೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸೋದು ಎಷ್ಟು ಅಸಮಂಜಸವೋ, ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಅಭಿಮಾನವನ್ನು ನೆಪ ಮಾಡಿಕೊಂಡು ಅದೇ ಸಿನಿ ಮಂದಿಯ ಚುನಾವಣಾ ಪ್ರಚಾರಕ್ಕೆ ಅಡ್ಡಿ ಮಾಡೋದು ಕೂಡಾ ಅಷ್ಟೇ ಅಸಂಬದ್ಧ ರಾಜಕಾರಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...