Homeಕರ್ನಾಟಕದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಇತ್ತೀಚಗೆ ನಡೆದ ದಲಿತ ಯುವಕನ ಅಮಾನುಷ ಬೆತ್ತಲೆ ಮೆರವಣಿಗೆ ಪ್ರಕರಣ ವಿರೋಧಿಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಲು ಇದೇ ಜೂನ್ 18 ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಜಾಥ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಹಲವು ಮಂದಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಗುಂಡ್ಲುಪೇಟೆಯ ಪ್ರವಾಸಿ ಮಂದಿರದಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳ ವತಿಯಿಂದ ನಿನ್ನೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ಶನಿ ಮಹಾತ್ಮ ದೇವಸ್ಥಾನದಿಂದಲೇ ಬೃಹತ್ ಮೆರವಣಿಗೆ ಆರಂಭವಾಗಲಿದ್ದು, ಗುಂಡ್ಲುಪೇಟೆ ವರಗೆ ಕಾಲು ನಡಿಗೆ ಜಾಥಾ ಮತ್ತು ಗುಂಡ್ಲುಪೇಟೆ ಬಂದ್ ನಡೆಸಲು ಈ ಮೊದಲು ಎಲ್ಲರೂ ಒಕ್ಕೊರಲಿನಿಂದ ನಿರ್ಧರಿಸಿಲಾಗಿತ್ತು. ಆದರೆ 18ರಂದು ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಬಂದ್ ಹಿಂತೆಗೆದುಕೊಂಡು ದೊಡ್ಡ ಜಾಥ ಮತ್ತು ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಂತ್ರಸ್ತ ಪ್ರತಾಪ್ ರವರು ಐ.ಎ.ಎಸ್ ಪರೀಕ್ಷೆ ಬರೆಯಲು ಹೋಗಿ ತಡವಾದ ಕಾರಣಕ್ಕೆ ಖಿನ್ನನಾಗಿದ್ದಾನೆ. ಆನಂತರ ನಡೆಯಬಾರದ ಘಟನೆಗಳೆಲ್ಲಾ ನಡೆದು ಮನನೊಂದಿದ್ದಾನೆ. ಇಂತಹ ಸಂದರ್ಭದಲ್ಲಿ ನಾವು ಬಂದ್ ಮಾಡಿ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ಬರೆಯುವವರಿಗೆ ತೊಂದರೆ ಕೊಡಬಾರದೆಂದು ಬಂದ್ ಹಿಂತೆಗೆದುಕೊಂಡಿದ್ದೇವೆ. ಬದಲಿಗೆ ದೊಡ್ಡ ಜಾಥಾ ನಡೆಸಿ ಬಂತೇಜಿಗಳ ನೇತೃತ್ವದಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಇಷ್ಟೊಂದು ತಾರತಮ್ಯ ಮತ್ತು ಅವಮಾನ ಮಾಡುವ ಈ ಧರ್ಮ ನಮಗ ಬೇಡ ಎಂದು ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ.

ಸದರಿ ಘಟನೆಗೆ ಸಂಬಂಧಿಸಿದಂತೆ ನಾಡಿನೆಲ್ಲಾ ಪ್ರಗತಿಪರ ಸಂಘಟನೆಗಳು, ಪ್ರಜ್ಞಾವಂತರು, ದಲಿತ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆದಿವೆ. ಗುಂಡ್ಲುಪೇಟೆಯ ದಲಿತ ಸಂಘಟನೆಗಳು ಒಗ್ಗಟ್ಟಿನಿಂದ ದೂರು ದಾಖಲಿಸಿ ಎಲ್ಲಾ ಆರೋಪಿಗಳನ್ನೂ ಬಂಧಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. 
ಆದರೆ, ಅಷ್ಟಕ್ಕೇ ಸುಮ್ಮನಾದರೆ ಇದೊಂದು ಮಾಮೂಲಿ ಪ್ರಕರಣವಾಗಿ ಮರೆಯಾಗುತ್ತದೆ. ಜಾತಿವಾದಗಳಿಗೆ, ಧರ್ಮಾಂಧರಿಗೆ ಹಾಗೂ ಅಮಾನುಷವಾಗಿ ವರ್ತಿಸಿದ ಜನಗಳಿಗೆ ಹಾಗೂ ಜಡ್ಡುಹಿಡಿದ ವ್ಯವಸ್ಥೆಗೆ ಚುರುಕು ಮುಟ್ಟಿಸಿ ಆತ್ಮಸಾಕ್ಷಿ ಬಡಿದೆಬ್ಬಿಸಲು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ದಲಿತ ಹೋರಾಟಗಾರ ಡಾ. ಕೃಷ್ಣಮೂರ್ತಿ ಚಮರಂ ತಿಳಿಸಿದ್ದಾರೆ. 

ಕೃಷ್ಣಮೂರ್ತಿ ಚಮರಂ

ಈ ಹೋರಾಟ ಯಶಸ್ವಿಯಾಗಲು ಎಲ್ಲರ ಸಹಕಾರ ಭಾಗವಹಿಸುವಿಕೆ ಅಗತ್ಯ. ಆದ್ದರಿಂದ ನಾಡಿನೆಲ್ಲಾ ಪ್ರಜ್ಞಾವಂತ ಜನಪರ ಸಂಘಟನೆಗಳು ಎಂದಿನಂತೆ ಸ್ವಯಂಪ್ರೇರಿತವಾಗಿ ಗುಂಡ್ಲುಪೇಟೆಗೆ ಆಗಮಿಸಿ ಚಳವಳಿಗೆ ಬೆಂಬಲ ಸೂಚಿಸಿ, ಯಶಸ್ಸುಗೊಳಿಸಬೇಕೆಂದು ಚಮರಂ ರವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಹಿರಿಯ ಹೋರಾಟಗಾರರಾಗ ಹರಿಹರ ಆನಂದ ಸ್ವಾಮಿ, ಎಂ.ಬಿ.ಶ್ರೀನಿವಾಸ್. ಡಾ. ಕೃಷ್ಣಮೂರ್ತಿ ಚಮರಂ, ಡಾ.ಮಹದೇವ ಭರಣಿ, ಸಿ.ಎಂ.ಕೃಷ್ಣಮೂರ್ತಿ, ಯರಿಯೂರು ಸಿ.ರಾಜಣ್ಣ, ಸೋಮಯ್ಯ ಮಲೆಯೂರು, ಅಶೋಕ ಪುರಂ ಪುನೀತ್.ಕೆಂ.ಎಂ, ನಾಗರಾಜ್, ಕಂದಹಳ್ಳಿ ನಾರಾಯಣ, ಅಣಗಳ್ಳಿ ಬಸವರಾಜ್, ಚೋರನಹಳ್ಳಿ ಶಿವಣ್ಣ, ಮುರುಡಗಳ್ಳಿ ಮಹದೇವು, ಎಡದೊರೆ ಮಹದೇವ, ಆಲಗೂಡು ಚಂದ್ರಶೇಖರ್, ಪುಟ್ಟಸ್ವಾಮಿ, ಸುರೇಶ್ ಮೌರಿ, ಕಾಗಲವಾಡಿ ಶಿವಣ್ಣ, ರಾಮ ಸಮುದ್ರ ಮಹೇಶ, ಸುಭಾಷ್ ಮಾಡ್ರಹಳ್ಳಿ, ಆರ್.ಸೋಮಣ್ಣ,  ಹೊನ್ನೆಗೌಡನಹಳ್ಳಿ ನಾಗಯ್ಯ, ಹಂಗಳ ಪ್ರಸಾದ್, ಗಿರೀಶ್ ಲಕ್ಕೂರು, ಕಂದೆಗಾಲ ಎಂ ಶಿವಣ್ಣ, ಉಮೇಶ ಮಂಗಲ, ರಂಗಸ್ವಾಮಿ, ಮುಂತಾದ ಅನೇಕರು ಭಾಗವಹಿಸಿದ್ದರು ಬೆಂಬಲ ಸೂಚಿಸಿದ್ದಾರೆ.

ಮನುಷ್ಯತ್ವ ಮರೆತಿರುವುದೇ ಈ ಅಮಾನವೀಯ ಘಟನೆಗೆ ಕಾರಣ- ಚಮರಂ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ? ಆ ಕ್ರೂರ ಮನಸ್ಸುಗಳು ಈಗಲೂ ತಮ್ಮ ಘೋರ ತಪ್ಪನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ಆತ ಮಾನಸಿಕ ಅಸ್ವಸ್ಥ, ವಿಗ್ರಹ ಕದಿಯಲು ಬಂದಿದ್ದ, ನಾವೇ ಪಂಚೆ ಕೊಟ್ಟೆವು, ದಲಿತ ಅಂತ ಗೊತ್ತಿರಲಿಲ್ಲ ಎಂಬೆಲ್ಲಾ ಕಟ್ಟುಕಥೆಗಳನ್ನು ಕಟ್ಟಿ ತಾವು ಕೇಸಿನಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದ್ದಾರೆ. ಆತ ಯಾವ ಜಾತಿಯೇ ಆಗಿರಲಿ, ಆ ಯುವಕನ ಸ್ಥಿತಿಯಲ್ಲಿ ತಾವಿದ್ದರೆ ಹೀಗೆ ಮಾಡುತ್ತಿದ್ದೇವೆ ಎಂದು ಆ ಜಾತಿವಾದಿಗಳು ಯೋಚಿಸದಷ್ಟರ ಮಟ್ಟಿಗೆ ದುಷ್ಟರಾಗಿಬಿಟ್ಟಿದ್ದಾರೆ.

ಇನ್ನು ಪೊಲೀಸ್ ಇಲಾಖೆ ಯಥಾಪ್ರಕಾರ ನಿರ್ಲಕ್ಷ್ಯ ತೋರಿದೆ. ವಿಷಯ ತಿಳಿದರೂ ತುಂಬಾ ತಡವಾಗಿ ಪೊಲೀಸರು ಬಂದಿದ್ದು ಮಾತ್ರವಲ್ಲದೇ ಪೊಲೀಸ್ ವಾಹನ ಚಾಲಕ ಶ್ರೀನಿವಾಸ ಸಂತ್ರಸ್ಥ ಯುವಕನಿಗೆ ಒದ್ದಿರುವುದು ಏನನ್ನು ಸೂಚಿಸುತ್ತದೆ? ಇನ್ನು ಪ್ರಕರಣದ ಎಒನ್ ಆರೋಪಿ ಅರ್ಚಕ ಶಿವಪ್ಪ ಎಂಬುವವರ ಹೆಸರನ್ನು ಎಫ್.ಐ.ಆರ್ ನಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಸರ್ವಥಾ ಸರಿಯಲ್ಲ. ಈಗಾದಲ್ಲಿ ಇಂತಹ ಕ್ರೂರ ಆಚರಣೆಗಳು ಮರಕಳಿಸುವುದರಲ್ಲಿ ಸಂದೇಹವೇ ಇಲ್ಲ.

ದುಷ್ಕೃತ್ಯದ ಆರೋಪಿಗಳು

ಈಗ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಎ.ಎಸ್.ಐ ಮತ್ತು ವಾಹನ ಚಾಲಕ ಶ್ರೀನಿವಾಸನನ್ನು ಅಮಾನತು ಮಾಡಲಾಗಿದೆ. ಆದರೆ ಸಂತ್ರಸ್ತ ಪ್ರತಾಪ್ ಗೆ ಇಷ್ಟರಿಂದ ನ್ಯಾಯ ಸಿಗುವುದೇ? ತಪ್ಪಿತಸ್ಥರು ತಮ್ಮ ತಪ್ಪನ್ನು ಅರಿತು ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆಯೇ? ಇದು ಗುಂಡ್ಲುಪೇಟೆ ತಾಲ್ಲೂಕಿಗೆ ಮಾತ್ರವಲ್ಲ ಇಡೀ ಕರ್ನಾಟಕ, ದೇಶಕ್ಕೆ ಒಂದು ಸಂದೇಶ ನೀಡಬೇಕಿದೆ. ಜಾತಿವಾದಿಗಳಿಗೆ ಎಚ್ಚರಿಕೆ ನೀಡುವಂತೆ ಮಾಡಬೇಕಿದೆ. ಹಾಗಾಗಿ ಬಂದ್ ನಡೆಸಿ ಮುಂದಕ್ಕೂ ಕಾನೂನು ಮತ್ತು ಬೀದಿ ಹೋರಾಟವನ್ನು ಮುಂದುವರೆಸುತ್ತೇವೆಂದು ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಹಲವು ಕಡೆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆದಿವೆ. ಅವುಗಳ ಕೆಲ ಚಿತ್ರಗಳು ಇಲ್ಲವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...